Homeಕರ್ನಾಟಕಕನ್ನಡ ಬಾವುಟ ಬೇಡವೆಂದ ಸಚಿವ ಸಿ.ಟಿ ರವಿಗೆ ನೆಟ್ಟಿಗರಿಂದ ಫುಲ್ ಕ್ಲಾಸ್..

ಕನ್ನಡ ಬಾವುಟ ಬೇಡವೆಂದ ಸಚಿವ ಸಿ.ಟಿ ರವಿಗೆ ನೆಟ್ಟಿಗರಿಂದ ಫುಲ್ ಕ್ಲಾಸ್..

- Advertisement -
- Advertisement -

ದೇಶಕ್ಕೊಂದು ಧ್ವಜವಿರುವಾಗ ಕನ್ನಡ ಧ್ವಜ ಬೇಕಿಲ್ಲ ಎಂದು ಹೇಳಿಕೆ ನೀಡುವ ಮೂಲಕ ವಿವಾದ ಸೃಷ್ಟಿಸಿರುವ ಸಚಿವ ಸಿಟಿ ರವಿಗೆ ನೆಟ್ಟಿಗರು ಸಾಮಾಜಿಕ ಜಾಲತಾಣದಲ್ಲಿ ಫುಲ್ ಕ್ಲಾಸ್ ಕೊಟ್ಟಿದ್ದಾರೆ. ಯಾರು ಯಾರು ಏನೇನು ಹೇಳಿದ್ದಾರೆ ನೋಡಿ.

“ಚೀಟಿ ರವಿಯವರೆ, ದೇಶಕ್ಕೊಂದೆ ಧ್ವಜ ಅಂದಿದ್ದೀರಿ, ಬಟ್ ತ್ರಿವರ್ಣ ಧ್ವಜವೋ ಭಗವಾ ದ್ದಜವೋ ಕರೆಕ್ಟಾಗಿ ಹೇಳಿ… ತ್ರಿವರ್ಣ ಧ್ವಜವಾದರೆ ಭಗವಾಧ್ವಜಗಳನ್ನು ಯಾರೂ ಬಳಸೋ ಹಾಗಿಲ್ಲ ಎನ್ನಿ, ಭಗವಾ ಧ್ವಜ ಆಗಿದ್ದರೆ ತ್ರಿವರ್ಣ ಧ್ವಜ ನಮಗೆ ಬೇಡ ಎನ್ನಿ… ಈ ಬಗ್ಗೆ ಸ್ಪಷ್ಟ ನಿಲುವು ಹೇಳಲು ತಾಕತ್ತಿಲ್ಲದಿದ್ದರೆ ತೆಪ್ಪಗಿರಿ. ನಮ್ಮ ಕನ್ನಡ ಧ್ವಜದ ಉಸಾಬರಿ ನಿಮಗೆ ಬೇಡ. ಕನ್ನಡಿಗರುಂಟು ಅವರ ಕನ್ನಡ ಧ್ವಜ ಉಂಟು. ಮೊದಲು “ಕನ್ನಡ ಸಂಸ್ಕೃತಿ” ಮಂತ್ರಿಗಿರಿಗೆ ರಾಜೀನಾಮೆ ಕೊಟ್ಟು ಕೆಳಗಿಳೀರಿ… ಕನ್ನಡ ಸಂಸ್ಕೃತಿ, ಕನ್ನಡತನವನ್ನ ಗೌರವಿಸಲಾಗದ ನಿಮ್ಮಂತ ನಾಲಾಯಕ್ ಗಳಿಂದ ಕನ್ನಡ ಮಾತೆ ಪಡೆದುಕೊಳ್ಳೋದಕ್ಕಿಂದ ಕಳೆದುಕೊಳ್ಳೋದೇ ಹೆಚ್ಚು..ನಡೀರಿ ಆಚೆ..” ಎಂದು ಹರ್ಷಕುಮಾರ್ ಕುಗ್ವೆ ಕಿಡಿಕಾರಿದ್ದಾರೆ.

ಕೆಂಚನೂರು ಎನ್ ಶಂಕರರವರು ಫೇಸ್ ಬುಕ್ ನಲ್ಲಿ “C T ರವಿ ಮತ್ತು ಅವರ ಪಕ್ಷ ಹುಟ್ಟುವ ಮೊದಲೇ ಈ ಬಾವುಟ ಕನ್ನಡ ಮತ್ತು ಕರ್ನಾಟಕದ ಗುರುತಾಗಿ ಇತ್ತು ಮುಂದೆಯೂ ಇರಲಿದೆ. ಇದರಲ್ಲಿ ಯಾವ ಅನುಮಾನವೂ ಇಲ್ಲ”. ಎಂದು ಬರೆದಿದ್ದಾರೆ.

“ಕರ್ನಾಟಕಕ್ಕೆ ಪ್ರತ್ಯೇಕ ನಾಡದ್ವಜ ಅಗತ್ಯವಿಲ್ಲ ಎಂದ ಬಿಜೆಪಿ ಪುಡಾರಿ ಚೀಟಿ ರವಿ
ನಿನ್ನ ಮೋದಿ ನಾಗಾಲ್ಯಾಂಡಿಗೆ ಪ್ರತ್ಯೇಕ ದ್ವಜ, ಪ್ರತ್ಯೇಕ ಸ್ಥಾನಮಾನ ಕೊಟ್ಟಿದ್ದೇತಕೆ? ಎಂದು ವಿನಯ್ ಕಸ್ವೆ ಪ್ರಶ್ನಿಸಿದ್ದಾರೆ.

ಎಂ.ಆರ್ ಕೃಷ್ಣರವರು ಕನ್ನಡ ಬಾವುಟ ನಮ್ಮ ಆಸ್ಮಿತೆ. ಹಿಂದಿ ಗುಲಾಮಿಗಳು ಮತ್ತು ಕನ್ನಡದ್ರೋಹಿಗಳ ವಿರುದ್ಧ ಕಸ್ತೂರಿ ಕನ್ನಡಿಗರ ಹೋರಾಟ ನಿತ್ಯ ನಿರಂತರ ಎಂದು ತಿಳಿಸಿದ್ದಾರೆ.

ಕರ್ನಾಟಕ ರಾಷ್ಟ್ರ ಸಮಿತಿಯ ಅಧ್ಯಕ್ಷರಾದ ರವಿ ಕೃಷ್ಣಾರೆಡ್ಡಿಯವರು ಈ ಕುರಿತು ವಿವರವಾಗಿ ಬರೆದಿದ್ದಾರೆ.
ಕರ್ನಾಟಕ ರಾಜ್ಯಕ್ಕೆ ತನ್ನದೇ ಆದ ಸ್ವತಂತ್ರ ಲಾಂಛನವಿದೆ. ಈಗ ಸ್ವತಂತ್ರ ಧ್ವಜವನ್ನು ಹೊಂದುವ ಸಮಯ.

ಭಾರತ ಗಣರಾಜ್ಯವು ಒಕ್ಕೂಟ ವ್ಯವಸ್ಥೆಯ ದೇಶ (Federal, albeit a quasi). ಒಕ್ಕೂಟ ವ್ಯವಸ್ಥೆಯಲ್ಲಿ ಹಲವು ವಿಚಾರಗಳಲ್ಲಿ ಸ್ವತಂತ್ರ ಅಸ್ತಿತ್ವ ಮತ್ತು ಆಡಳಿತವ್ಯಾಪ್ತಿ ಇರುವ ರಾಜ್ಯಗಳಿರುತ್ತವೆ. ಆ ರಾಜ್ಯಗಳಿಗೆ ತಮ್ಮದೇ ಆದ ಲಾಂಛನ ಮತ್ತು ಧ್ವಜಗಳಿರುತ್ತವೆ. ಹಾಗೆಯೇ ಆಯಾ ರಾಜ್ಯಗಳ ಹಿತಾಸಕ್ತಿಯನ್ನು ಕಾಪಾಡಿಕೊಳ್ಳುವ ಕೆಲವು ಸ್ವತಂತ್ರ ಕಾಯ್ದೆ, ಕಾನೂನುಗಳೂ.

ಯಾವುದೋ ಕಾರಣಕ್ಕೆ ಇಲ್ಲಿಯವರೆಗೂ ನಮ್ಮ ರಾಜ್ಯ ಸ್ವಂತ ಧ್ವಜವನ್ನು ರೂಪಿಸಿಕೊಂಡಿರಲಿಲ್ಲ ಎಂದಮಾತ್ರಕ್ಕೆ ಅದು ಮುಂದೆಂದೂ ಇರಬಾರದು ಎಂದಿಲ್ಲ.

ಈ ಹಿನ್ನೆಲೆಯಲ್ಲಿ ಕನ್ನಡಿಗರ ಮತ್ತು ಕರ್ನಾಟಕದ ಪ್ರಜೆಗಳ ಜನಾಭಿಪ್ರಾಯವನ್ನು ಗೌರವಿಸಿ ಈ ಕೂಡಲೇ ಕರ್ನಾಟಕ ರಾಜ್ಯ ಸರ್ಕಾರವು ಸ್ವತಂತ್ರ ಧ್ವಜವನ್ನು ಹೊಂದುವ ನಿಟ್ಟಿನಲ್ಲಿ ಕಾನೂನು ಪ್ರಕ್ರಿಯೆಗೆ ಮುಂದಾಗಬೇಕು ಎಂದು “ಕರ್ನಾಟಕ ರಾಷ್ಟ್ರ ಸಮಿತಿ” ಪಕ್ಷವು ಮುಖ್ಯಮಂತ್ರಿಗಳನ್ನು ಆಗ್ರಹಿಸುತ್ತದೆ. ರಾಜ್ಯದ “ಕನ್ನಡ ಮತ್ತು ಸಂಸ್ಕೃತಿ” ಇಲಾಖೆಯ ಸಚಿವರಾದ ಸಿ.ಟಿ.ರವಿಯವರು ಈ ಪ್ರಕ್ರಿಯೆಗೆ ಪೂರಕವಾಗಿ ತಮ್ಮ ಇಲಾಖೆಯ ವತಿಯಿಂದ ಯಾವುದೆಲ್ಲಾ ಕಾನೂನು ಮತ್ತು ಆಡಳಿತ ಪ್ರಕ್ರಿಯೆಗಳನ್ನು ಮಾಡಬೇಕಿದೆಯೋ ಅದನ್ನು ಶ್ರದ್ಧಾಭಕ್ತಿಯಿಂದ ಹಾಗೂ ಕರ್ತವ್ಯನಿಷ್ಠೆಯಿಂದ ನಿರ್ವಹಿಸಬೇಕೆಂದು ನಾವು ಅವರನ್ನು ಒತ್ತಾಯಿಸುತ್ತೇವೆ. ಇದಕ್ಕೆ ವ್ಯತಿರಿಕ್ತವಾಗಿ ನಡೆದುಕೊಂಡರೆ ಅದು ‘ಕರ್ನಾಟಕ ವಿರೋಧಿ ಕೃತ್ಯ’ ಎಂದು ಎಚ್ಚರಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

Mr. ಸಿ.ಟಿ ರವಿ ಕನ್ನಡ ಬಾವುಟ ಹಾರಿಸಿದ್ದೇನೆ ಅದ್ ಯಾವಾ ಕೇಸ್ ಹಾಕೀಸ್ತೀಯೋ ಹಾಕ್ಸು. ನನ್ನ ಕನ್ನಡ ಭಾಷೆಗೆ ಪ್ರತ್ಯೇಕ ನಾಡಧ್ವಜ ಹೊಂದುವುದು ರಾಷ್ಟ್ರದ್ರೋಹವಾದರೆ ನಾನು ರಾಷ್ಟ ದ್ರೋಹಿಯಾಗಲು ಸಿದ್ದ….. ಎಂದು ಕನ್ನಡ ರಣಧೀರ ಪಡೆಯ ಹರೀಶ್ ಕುಮಾರ್ ಬಿ ಸವಾಲು ಹಾಕಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...