Homeಕರ್ನಾಟಕನಾಡಧ್ವಜ ಹಾರಿಸದೆ ದ್ರೋಹವೆಸಗಿವರಿಗೆ ಕನ್ನಡಿಗರ ಕ್ಷಮೆ ಇಲ್ಲ: ’#ನಮ್ಮಧ್ವಜ_ನಮ್ಮಹೆಮ್ಮೆ’ ಟ್ರೆಂಡ್

ನಾಡಧ್ವಜ ಹಾರಿಸದೆ ದ್ರೋಹವೆಸಗಿವರಿಗೆ ಕನ್ನಡಿಗರ ಕ್ಷಮೆ ಇಲ್ಲ: ’#ನಮ್ಮಧ್ವಜ_ನಮ್ಮಹೆಮ್ಮೆ’ ಟ್ರೆಂಡ್

ನಿಮ್ಮ ಅಸ್ಮಿತೆಯನ್ನು ಕಳೆದುಕೊಳ್ಳದೆ ದೇಶವನ್ನು ಪ್ರೀತಿಸಬಹುದು, ನೋಡ್ರೀ ಹುಸಿ ದೇಶ ಭಕ್ತರೆ" ಎಂದು ಅಮೆರಿಕ ಸಂಯುಕ್ತ ಸಂಸ್ಥಾನದ ರಾಜ್ಯಗಳು ಪ್ರತ್ಯೇಕ ಧ್ವಜ ಹೊಂದಿರುವ ಚಿತ್ರವನ್ನು ರೀಟ್ವೀಟ್ ಮಾಡಲಾಗಿದೆ.

- Advertisement -
- Advertisement -

ಕನ್ನಡ ರಾಜ್ಯೋತ್ಸವದಂದು ಜಿಲ್ಲಾ ಕೇಂದ್ರಗಳಲ್ಲಿ ಕನ್ನಡ ಧ್ವಜ ಹಾರಿಸದೇ ಕೇವಲ ರಾಷ್ಟ್ರಧ್ವಜ ಮಾತ್ರ ಹಾರಿಸಿದ ರಾಜ್ಯ ಸರ್ಕಾರದ ಕ್ರಮಕ್ಕೆ ವಿರೋಧ ವ್ಯಕ್ತಪಡಿಸಿರುವ ಕನ್ನಡಿಗರು, ಟ್ವಿಟರ್‌‌ನಲ್ಲಿ ಬಿಜೆಪಿ ಸರ್ಕಾರದ ವಿರುದ್ದ “#ನಮ್ಮಧ್ವಜ_ನಮ್ಮಹೆಮ್ಮೆ” ಹ್ಯಾಶ್‌ಟ್ಯಾಗ್‌ ಮೂಲಕ ಟ್ರೆಂಡ್ ಮಾಡಿದ್ದಾರೆ.

ಕರವೇ ಕರೆ ನೀಡಿದ್ದ ಟ್ವಿಟರ್ ಅಭಿಯಾನಕ್ಕೆ ಸಾವಿರಾರು ಕನ್ನಡಿಗರು ದನಿಗೂಡಿಸಿದ್ದು, ಕರ್ನಾಟಕ ಟ್ರೆಂಡಿಂಗ್‌ನಲ್ಲಿ #ನಮ್ಮಧ್ವಜ_ನಮ್ಮಹೆಮ್ಮೆ ಹ್ಯಾಷ್‌ಟ್ಯಾಗ್ ನಂಬರ್ ಒನ್ ಸ್ಥಾನದಲ್ಲಿದ್ದು, ಆಲ್ ಇಂಡಿಯಾ ಮಟ್ಟದಲ್ಲಿ 29ನೇ ಸ್ಥಾನ ಪಡೆದಿದೆ. ಒಂದು ಗಂಟೆಯ ಅವಧಿಯಲ್ಲಿಯೇ 5,000 ಹೆಚ್ಚು ಟ್ವೀಟ್‌ಗಳು ದಾಖಲಾಗಿವೆ.

ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ನಾರಾಯಣ ಗೌಡ್ರು, “ಕನ್ನಡ ಧ್ವಜಾರೋಹಣ ಮಾಡದ ಕರ್ನಾಟಕ‌ ಸರ್ಕಾರದ ಮಂತ್ರಿಗಳಿಗೆ ಧಿಕ್ಕಾರ. ಕನ್ನಡವೆಂಬುದು ನಮ್ಮ ಗುರುತು, ನಮ್ಮ ಜೀವ, ನಮ್ಮ ಉಸಿರು, ನಮ್ಮ ಬದುಕು. ಕನ್ನಡ ಬೇಡ‌ ಎನ್ನುವವರು ಕರ್ನಾಟಕಕ್ಕೂ ಬೇಡ. ಕನ್ನಡ ಧ್ವಜಕ್ಕೆ ಅಪಮಾನಿಸಿದವರು ಕನ್ನಡ ದ್ರೋಹಿಗಳು. ಈ ಪ್ರಮಾದಕ್ಕೆ ಕಾರಣರಾದ ಸರ್ಕಾರದ‌ ಮುಖ್ಯ ಕಾರ್ಯದರ್ಶಿ ವಜಾಗೊಳಿಸಿ” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ರಾಜ್ಯೋತ್ಸವದಂದು ಕನ್ನಡ ಧ್ವಜ ಹಾರಿಸದ ಸರ್ಕಾರದ ನಡೆಗೆ ಕನ್ನಡಿಗರ ಆಕ್ರೋಶ: ಟ್ವಿಟರ್ ಆಂದೋಲನಕ್ಕೆ ಕರೆ

ಕರ್ನಾಟಕ ರಕ್ಷಣಾ ವೇದಿಕೆ ಸರಣಿ ಟ್ವೀಟ್ ಮಾಡಿದ್ದು, ಸರ್ಕಾರದ ವಿರುದ್ದ ತೀವ್ರ ಅಸಮಧಾನ ವ್ಯಕ್ತಪಡಿದೆ. “ಕನ್ನಡ ಬಾವುಟ ನಮ್ಮೆಲ್ಲರ ಸ್ವಾಭಿಮಾನದ ಪ್ರತೀಕ. ಅದನ್ನು ನಾಡಜನರೆಲ್ಲರೂ ಅಭಿಮಾನಪೂರ್ವಕವಾಗಿ ಒಪ್ಪಿಕೊಂಡು ಆದರಿಸಿದ್ದಾರೆ. ಕರ್ನಾಟಕವನ್ನು ಆಳಿದ ಎಲ್ಲ ಸರ್ಕಾರಗಳೂ ಕನ್ನಡ ಧ್ವಜಾರೋಹಣ ನಡೆಸುತ್ತ ಕನ್ನಡಿಗರ ಭಾವನೆಗಳ‌ನ್ನು ಗೌರವಿಸಿದೆ. ಬಿಜೆಪಿ ಸರ್ಕಾರದ ಮಂತ್ರಿಗಳು ಈ ಪರಂಪರೆಯ‌ನ್ನು ನಾಶಪಡಿಸಲು ಯತ್ನಿಸುತ್ತಿದ್ದಾರೆ” ಎಂದು ಕಿಡಿಕಾರಿದೆ.

ಕನ್ನಡ ಪರ ಹೋರಾಟಗಾರ ರೂಪೇಶ್ ರಾಜಣ್ಣ ಕೂಡಾ ಸರಣಿ ಟ್ವೀಟ್ ಮಾಡಿದ್ದಾರೆ. “ಹಿಂದಿ ಹೇರಿಕೆ ತಡೆಯಿರಿ ಅಂದ್ರೆ ಅದಕ್ಕೆ ತಾಕತ್ ಇಲ್ಲಾ. ಬ್ಯಾಂಕ್ ಪರೀಕ್ಷೆಗಳನ್ನು ಕನ್ನಡದಲ್ಲಿ ತನ್ನಿ ಅಂದ್ರೆ ಅದಕ್ಕೆ ತಾಕತ್ ಇಲ್ಲಾ. ಕನ್ನಡ ವಿರೋಧಿ ನೀತಿ ಅನುಸರಿಸುವ ಎಂಇಎಸ್ ವಿರುದ್ಧ ಕ್ರಮ ತಗೊಂಡಿಲ್ಲ. ಕನ್ನಡಿಗರಿಗೆ ಉದ್ಯೋಗ ಕಾನೂನು ಮಾಡಲು ಶಕ್ತಿ ಇಲ್ಲ. ಆದ್ರೆ ನಾಡ ಧ್ವಜ ಹಾರಿಸದೆ ದ್ರೋಹ ಎಸಗಿದ ನಿಮಗೆ ಕನ್ನಡಿಗರ ಕ್ಷಮೆ ಇಲ್ಲ” ಎಂದು ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.

ಇದನ್ನೂ ಓದಿ: ’ಕನ್ನಡ ಕಂಕಣ ದಿನ’; ಕರ್ನಾಟಕ ರಣಧೀರ ಪಡೆಯಿಂದ ವಿಭಿನ್ನ ರಾಜ್ಯೋತ್ಸವ!

ಜಯತೀರ್ಥ ನಾಡಗೌಡ ಅವರು, “ಜರ್ಮನಿಯಲ್ಲಿ 88 ಲಕ್ಷ ಜನಸಂಖ್ಯೆಯಿದೆ. ಅಲ್ಲಿನ ರಾಜ್ಯಗಳಿಗೆ ತನ್ನದೆ ಆದ ಧ್ವಜವಿದ್ದ ಹೊರತೂ ಅಲ್ಲಿ ಯಾವುದೇ ಸಮಸ್ಯೆಯಿಲ್ಲ. ಆದರೆ ಕರ್ನಾಟಕ ಸರ್ಕಾರಕ್ಕೆ ಮಾತ್ರ ಯಾಕೆ ಸಮಸ್ಯೆ” ಎಂದು ಪ್ರಶ್ನಿಸಿದ್ದಾರೆ.

ಭರತ್. ಪಿ ಅವರು, “ಸಿ.ಟಿ. ರವಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಅವಮಾನ, ಮುಖ್ಯಮಂತ್ರಿಗಳೇ ಈ ವ್ಯಕ್ತಿಯನ್ನು ಮೊದಲು ಕಿತ್ತುಹಾಕಿ” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಕನ್ನಡ ಏಕೀಕರಣದಿಂದಲೂ ಕನ್ನಡ ಭಾಷೆಯ ಏಳ್ಗೆಗಾಗಿ, ಬಸವ ತತ್ವಕ್ಕಾಗಿ ಶ್ರಮಿಸುತ್ತಿರುವ ಭಾಲ್ಕಿ ಮಠ

ಮಂಜು ಎನ್ನುವವರು, “ನಿಮ್ಮ ಅಸ್ಮಿತೆಯನ್ನು ಕಳೆದುಕೊಳ್ಳದೆ ದೇಶವನ್ನು ಪ್ರೀತಿಸಬಹುದು, ನೋಡ್ರೀ ಹುಸಿ ದೇಶ ಭಕ್ತರೆ” ಎಂದು ಅಮೆರಿಕ ಸಂಯುಕ್ತ ಸಂಸ್ಥಾನದ ರಾಜ್ಯಗಳು ಪ್ರತ್ಯೇಕ ಧ್ವಜ ಹೊಂದಿರುವ ಚಿತ್ರವನ್ನು ರೀಟ್ವೀಟ್ ಮಾಡಿ ಉದಾಹರಣೆ ಸಮೇತ ಪೋಸ್ಟ್ ಮಾಡಿದ್ದಾರೆ.

ವಿಷ್ಣು, ಕನ್ನಡ ರಾಜ್ಯೋತ್ಸವದ ದಿನ ಕನ್ನಡ ಧ್ವಜವನ್ನು ಆರೋಹಣ ಮಾಡದವರಿಗೆ ನಾಚಿಕೆಯಾಗಬೇಕು ಎಂದು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಕನ್ನಡಕ್ಕೆ ಕನ್ನಡದ್ದೆ ಊಟ ಉಂಟಾ? ಡಾ. ಕೆ.ಸಿ ರಘು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...