Homeಕರ್ನಾಟಕನಾಡಧ್ವಜ ಹಾರಿಸದೆ ದ್ರೋಹವೆಸಗಿವರಿಗೆ ಕನ್ನಡಿಗರ ಕ್ಷಮೆ ಇಲ್ಲ: ’#ನಮ್ಮಧ್ವಜ_ನಮ್ಮಹೆಮ್ಮೆ’ ಟ್ರೆಂಡ್

ನಾಡಧ್ವಜ ಹಾರಿಸದೆ ದ್ರೋಹವೆಸಗಿವರಿಗೆ ಕನ್ನಡಿಗರ ಕ್ಷಮೆ ಇಲ್ಲ: ’#ನಮ್ಮಧ್ವಜ_ನಮ್ಮಹೆಮ್ಮೆ’ ಟ್ರೆಂಡ್

ನಿಮ್ಮ ಅಸ್ಮಿತೆಯನ್ನು ಕಳೆದುಕೊಳ್ಳದೆ ದೇಶವನ್ನು ಪ್ರೀತಿಸಬಹುದು, ನೋಡ್ರೀ ಹುಸಿ ದೇಶ ಭಕ್ತರೆ" ಎಂದು ಅಮೆರಿಕ ಸಂಯುಕ್ತ ಸಂಸ್ಥಾನದ ರಾಜ್ಯಗಳು ಪ್ರತ್ಯೇಕ ಧ್ವಜ ಹೊಂದಿರುವ ಚಿತ್ರವನ್ನು ರೀಟ್ವೀಟ್ ಮಾಡಲಾಗಿದೆ.

- Advertisement -
- Advertisement -

ಕನ್ನಡ ರಾಜ್ಯೋತ್ಸವದಂದು ಜಿಲ್ಲಾ ಕೇಂದ್ರಗಳಲ್ಲಿ ಕನ್ನಡ ಧ್ವಜ ಹಾರಿಸದೇ ಕೇವಲ ರಾಷ್ಟ್ರಧ್ವಜ ಮಾತ್ರ ಹಾರಿಸಿದ ರಾಜ್ಯ ಸರ್ಕಾರದ ಕ್ರಮಕ್ಕೆ ವಿರೋಧ ವ್ಯಕ್ತಪಡಿಸಿರುವ ಕನ್ನಡಿಗರು, ಟ್ವಿಟರ್‌‌ನಲ್ಲಿ ಬಿಜೆಪಿ ಸರ್ಕಾರದ ವಿರುದ್ದ “#ನಮ್ಮಧ್ವಜ_ನಮ್ಮಹೆಮ್ಮೆ” ಹ್ಯಾಶ್‌ಟ್ಯಾಗ್‌ ಮೂಲಕ ಟ್ರೆಂಡ್ ಮಾಡಿದ್ದಾರೆ.

ಕರವೇ ಕರೆ ನೀಡಿದ್ದ ಟ್ವಿಟರ್ ಅಭಿಯಾನಕ್ಕೆ ಸಾವಿರಾರು ಕನ್ನಡಿಗರು ದನಿಗೂಡಿಸಿದ್ದು, ಕರ್ನಾಟಕ ಟ್ರೆಂಡಿಂಗ್‌ನಲ್ಲಿ #ನಮ್ಮಧ್ವಜ_ನಮ್ಮಹೆಮ್ಮೆ ಹ್ಯಾಷ್‌ಟ್ಯಾಗ್ ನಂಬರ್ ಒನ್ ಸ್ಥಾನದಲ್ಲಿದ್ದು, ಆಲ್ ಇಂಡಿಯಾ ಮಟ್ಟದಲ್ಲಿ 29ನೇ ಸ್ಥಾನ ಪಡೆದಿದೆ. ಒಂದು ಗಂಟೆಯ ಅವಧಿಯಲ್ಲಿಯೇ 5,000 ಹೆಚ್ಚು ಟ್ವೀಟ್‌ಗಳು ದಾಖಲಾಗಿವೆ.

ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ನಾರಾಯಣ ಗೌಡ್ರು, “ಕನ್ನಡ ಧ್ವಜಾರೋಹಣ ಮಾಡದ ಕರ್ನಾಟಕ‌ ಸರ್ಕಾರದ ಮಂತ್ರಿಗಳಿಗೆ ಧಿಕ್ಕಾರ. ಕನ್ನಡವೆಂಬುದು ನಮ್ಮ ಗುರುತು, ನಮ್ಮ ಜೀವ, ನಮ್ಮ ಉಸಿರು, ನಮ್ಮ ಬದುಕು. ಕನ್ನಡ ಬೇಡ‌ ಎನ್ನುವವರು ಕರ್ನಾಟಕಕ್ಕೂ ಬೇಡ. ಕನ್ನಡ ಧ್ವಜಕ್ಕೆ ಅಪಮಾನಿಸಿದವರು ಕನ್ನಡ ದ್ರೋಹಿಗಳು. ಈ ಪ್ರಮಾದಕ್ಕೆ ಕಾರಣರಾದ ಸರ್ಕಾರದ‌ ಮುಖ್ಯ ಕಾರ್ಯದರ್ಶಿ ವಜಾಗೊಳಿಸಿ” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ರಾಜ್ಯೋತ್ಸವದಂದು ಕನ್ನಡ ಧ್ವಜ ಹಾರಿಸದ ಸರ್ಕಾರದ ನಡೆಗೆ ಕನ್ನಡಿಗರ ಆಕ್ರೋಶ: ಟ್ವಿಟರ್ ಆಂದೋಲನಕ್ಕೆ ಕರೆ

ಕರ್ನಾಟಕ ರಕ್ಷಣಾ ವೇದಿಕೆ ಸರಣಿ ಟ್ವೀಟ್ ಮಾಡಿದ್ದು, ಸರ್ಕಾರದ ವಿರುದ್ದ ತೀವ್ರ ಅಸಮಧಾನ ವ್ಯಕ್ತಪಡಿದೆ. “ಕನ್ನಡ ಬಾವುಟ ನಮ್ಮೆಲ್ಲರ ಸ್ವಾಭಿಮಾನದ ಪ್ರತೀಕ. ಅದನ್ನು ನಾಡಜನರೆಲ್ಲರೂ ಅಭಿಮಾನಪೂರ್ವಕವಾಗಿ ಒಪ್ಪಿಕೊಂಡು ಆದರಿಸಿದ್ದಾರೆ. ಕರ್ನಾಟಕವನ್ನು ಆಳಿದ ಎಲ್ಲ ಸರ್ಕಾರಗಳೂ ಕನ್ನಡ ಧ್ವಜಾರೋಹಣ ನಡೆಸುತ್ತ ಕನ್ನಡಿಗರ ಭಾವನೆಗಳ‌ನ್ನು ಗೌರವಿಸಿದೆ. ಬಿಜೆಪಿ ಸರ್ಕಾರದ ಮಂತ್ರಿಗಳು ಈ ಪರಂಪರೆಯ‌ನ್ನು ನಾಶಪಡಿಸಲು ಯತ್ನಿಸುತ್ತಿದ್ದಾರೆ” ಎಂದು ಕಿಡಿಕಾರಿದೆ.

ಕನ್ನಡ ಪರ ಹೋರಾಟಗಾರ ರೂಪೇಶ್ ರಾಜಣ್ಣ ಕೂಡಾ ಸರಣಿ ಟ್ವೀಟ್ ಮಾಡಿದ್ದಾರೆ. “ಹಿಂದಿ ಹೇರಿಕೆ ತಡೆಯಿರಿ ಅಂದ್ರೆ ಅದಕ್ಕೆ ತಾಕತ್ ಇಲ್ಲಾ. ಬ್ಯಾಂಕ್ ಪರೀಕ್ಷೆಗಳನ್ನು ಕನ್ನಡದಲ್ಲಿ ತನ್ನಿ ಅಂದ್ರೆ ಅದಕ್ಕೆ ತಾಕತ್ ಇಲ್ಲಾ. ಕನ್ನಡ ವಿರೋಧಿ ನೀತಿ ಅನುಸರಿಸುವ ಎಂಇಎಸ್ ವಿರುದ್ಧ ಕ್ರಮ ತಗೊಂಡಿಲ್ಲ. ಕನ್ನಡಿಗರಿಗೆ ಉದ್ಯೋಗ ಕಾನೂನು ಮಾಡಲು ಶಕ್ತಿ ಇಲ್ಲ. ಆದ್ರೆ ನಾಡ ಧ್ವಜ ಹಾರಿಸದೆ ದ್ರೋಹ ಎಸಗಿದ ನಿಮಗೆ ಕನ್ನಡಿಗರ ಕ್ಷಮೆ ಇಲ್ಲ” ಎಂದು ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.

ಇದನ್ನೂ ಓದಿ: ’ಕನ್ನಡ ಕಂಕಣ ದಿನ’; ಕರ್ನಾಟಕ ರಣಧೀರ ಪಡೆಯಿಂದ ವಿಭಿನ್ನ ರಾಜ್ಯೋತ್ಸವ!

ಜಯತೀರ್ಥ ನಾಡಗೌಡ ಅವರು, “ಜರ್ಮನಿಯಲ್ಲಿ 88 ಲಕ್ಷ ಜನಸಂಖ್ಯೆಯಿದೆ. ಅಲ್ಲಿನ ರಾಜ್ಯಗಳಿಗೆ ತನ್ನದೆ ಆದ ಧ್ವಜವಿದ್ದ ಹೊರತೂ ಅಲ್ಲಿ ಯಾವುದೇ ಸಮಸ್ಯೆಯಿಲ್ಲ. ಆದರೆ ಕರ್ನಾಟಕ ಸರ್ಕಾರಕ್ಕೆ ಮಾತ್ರ ಯಾಕೆ ಸಮಸ್ಯೆ” ಎಂದು ಪ್ರಶ್ನಿಸಿದ್ದಾರೆ.

ಭರತ್. ಪಿ ಅವರು, “ಸಿ.ಟಿ. ರವಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಅವಮಾನ, ಮುಖ್ಯಮಂತ್ರಿಗಳೇ ಈ ವ್ಯಕ್ತಿಯನ್ನು ಮೊದಲು ಕಿತ್ತುಹಾಕಿ” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಕನ್ನಡ ಏಕೀಕರಣದಿಂದಲೂ ಕನ್ನಡ ಭಾಷೆಯ ಏಳ್ಗೆಗಾಗಿ, ಬಸವ ತತ್ವಕ್ಕಾಗಿ ಶ್ರಮಿಸುತ್ತಿರುವ ಭಾಲ್ಕಿ ಮಠ

ಮಂಜು ಎನ್ನುವವರು, “ನಿಮ್ಮ ಅಸ್ಮಿತೆಯನ್ನು ಕಳೆದುಕೊಳ್ಳದೆ ದೇಶವನ್ನು ಪ್ರೀತಿಸಬಹುದು, ನೋಡ್ರೀ ಹುಸಿ ದೇಶ ಭಕ್ತರೆ” ಎಂದು ಅಮೆರಿಕ ಸಂಯುಕ್ತ ಸಂಸ್ಥಾನದ ರಾಜ್ಯಗಳು ಪ್ರತ್ಯೇಕ ಧ್ವಜ ಹೊಂದಿರುವ ಚಿತ್ರವನ್ನು ರೀಟ್ವೀಟ್ ಮಾಡಿ ಉದಾಹರಣೆ ಸಮೇತ ಪೋಸ್ಟ್ ಮಾಡಿದ್ದಾರೆ.

ವಿಷ್ಣು, ಕನ್ನಡ ರಾಜ್ಯೋತ್ಸವದ ದಿನ ಕನ್ನಡ ಧ್ವಜವನ್ನು ಆರೋಹಣ ಮಾಡದವರಿಗೆ ನಾಚಿಕೆಯಾಗಬೇಕು ಎಂದು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಕನ್ನಡಕ್ಕೆ ಕನ್ನಡದ್ದೆ ಊಟ ಉಂಟಾ? ಡಾ. ಕೆ.ಸಿ ರಘು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...