Homeಕರ್ನಾಟಕನಾಡಧ್ವಜ ಹಾರಿಸದೆ ದ್ರೋಹವೆಸಗಿವರಿಗೆ ಕನ್ನಡಿಗರ ಕ್ಷಮೆ ಇಲ್ಲ: ’#ನಮ್ಮಧ್ವಜ_ನಮ್ಮಹೆಮ್ಮೆ’ ಟ್ರೆಂಡ್

ನಾಡಧ್ವಜ ಹಾರಿಸದೆ ದ್ರೋಹವೆಸಗಿವರಿಗೆ ಕನ್ನಡಿಗರ ಕ್ಷಮೆ ಇಲ್ಲ: ’#ನಮ್ಮಧ್ವಜ_ನಮ್ಮಹೆಮ್ಮೆ’ ಟ್ರೆಂಡ್

ನಿಮ್ಮ ಅಸ್ಮಿತೆಯನ್ನು ಕಳೆದುಕೊಳ್ಳದೆ ದೇಶವನ್ನು ಪ್ರೀತಿಸಬಹುದು, ನೋಡ್ರೀ ಹುಸಿ ದೇಶ ಭಕ್ತರೆ" ಎಂದು ಅಮೆರಿಕ ಸಂಯುಕ್ತ ಸಂಸ್ಥಾನದ ರಾಜ್ಯಗಳು ಪ್ರತ್ಯೇಕ ಧ್ವಜ ಹೊಂದಿರುವ ಚಿತ್ರವನ್ನು ರೀಟ್ವೀಟ್ ಮಾಡಲಾಗಿದೆ.

- Advertisement -
- Advertisement -

ಕನ್ನಡ ರಾಜ್ಯೋತ್ಸವದಂದು ಜಿಲ್ಲಾ ಕೇಂದ್ರಗಳಲ್ಲಿ ಕನ್ನಡ ಧ್ವಜ ಹಾರಿಸದೇ ಕೇವಲ ರಾಷ್ಟ್ರಧ್ವಜ ಮಾತ್ರ ಹಾರಿಸಿದ ರಾಜ್ಯ ಸರ್ಕಾರದ ಕ್ರಮಕ್ಕೆ ವಿರೋಧ ವ್ಯಕ್ತಪಡಿಸಿರುವ ಕನ್ನಡಿಗರು, ಟ್ವಿಟರ್‌‌ನಲ್ಲಿ ಬಿಜೆಪಿ ಸರ್ಕಾರದ ವಿರುದ್ದ “#ನಮ್ಮಧ್ವಜ_ನಮ್ಮಹೆಮ್ಮೆ” ಹ್ಯಾಶ್‌ಟ್ಯಾಗ್‌ ಮೂಲಕ ಟ್ರೆಂಡ್ ಮಾಡಿದ್ದಾರೆ.

ಕರವೇ ಕರೆ ನೀಡಿದ್ದ ಟ್ವಿಟರ್ ಅಭಿಯಾನಕ್ಕೆ ಸಾವಿರಾರು ಕನ್ನಡಿಗರು ದನಿಗೂಡಿಸಿದ್ದು, ಕರ್ನಾಟಕ ಟ್ರೆಂಡಿಂಗ್‌ನಲ್ಲಿ #ನಮ್ಮಧ್ವಜ_ನಮ್ಮಹೆಮ್ಮೆ ಹ್ಯಾಷ್‌ಟ್ಯಾಗ್ ನಂಬರ್ ಒನ್ ಸ್ಥಾನದಲ್ಲಿದ್ದು, ಆಲ್ ಇಂಡಿಯಾ ಮಟ್ಟದಲ್ಲಿ 29ನೇ ಸ್ಥಾನ ಪಡೆದಿದೆ. ಒಂದು ಗಂಟೆಯ ಅವಧಿಯಲ್ಲಿಯೇ 5,000 ಹೆಚ್ಚು ಟ್ವೀಟ್‌ಗಳು ದಾಖಲಾಗಿವೆ.

ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ನಾರಾಯಣ ಗೌಡ್ರು, “ಕನ್ನಡ ಧ್ವಜಾರೋಹಣ ಮಾಡದ ಕರ್ನಾಟಕ‌ ಸರ್ಕಾರದ ಮಂತ್ರಿಗಳಿಗೆ ಧಿಕ್ಕಾರ. ಕನ್ನಡವೆಂಬುದು ನಮ್ಮ ಗುರುತು, ನಮ್ಮ ಜೀವ, ನಮ್ಮ ಉಸಿರು, ನಮ್ಮ ಬದುಕು. ಕನ್ನಡ ಬೇಡ‌ ಎನ್ನುವವರು ಕರ್ನಾಟಕಕ್ಕೂ ಬೇಡ. ಕನ್ನಡ ಧ್ವಜಕ್ಕೆ ಅಪಮಾನಿಸಿದವರು ಕನ್ನಡ ದ್ರೋಹಿಗಳು. ಈ ಪ್ರಮಾದಕ್ಕೆ ಕಾರಣರಾದ ಸರ್ಕಾರದ‌ ಮುಖ್ಯ ಕಾರ್ಯದರ್ಶಿ ವಜಾಗೊಳಿಸಿ” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ರಾಜ್ಯೋತ್ಸವದಂದು ಕನ್ನಡ ಧ್ವಜ ಹಾರಿಸದ ಸರ್ಕಾರದ ನಡೆಗೆ ಕನ್ನಡಿಗರ ಆಕ್ರೋಶ: ಟ್ವಿಟರ್ ಆಂದೋಲನಕ್ಕೆ ಕರೆ

ಕರ್ನಾಟಕ ರಕ್ಷಣಾ ವೇದಿಕೆ ಸರಣಿ ಟ್ವೀಟ್ ಮಾಡಿದ್ದು, ಸರ್ಕಾರದ ವಿರುದ್ದ ತೀವ್ರ ಅಸಮಧಾನ ವ್ಯಕ್ತಪಡಿದೆ. “ಕನ್ನಡ ಬಾವುಟ ನಮ್ಮೆಲ್ಲರ ಸ್ವಾಭಿಮಾನದ ಪ್ರತೀಕ. ಅದನ್ನು ನಾಡಜನರೆಲ್ಲರೂ ಅಭಿಮಾನಪೂರ್ವಕವಾಗಿ ಒಪ್ಪಿಕೊಂಡು ಆದರಿಸಿದ್ದಾರೆ. ಕರ್ನಾಟಕವನ್ನು ಆಳಿದ ಎಲ್ಲ ಸರ್ಕಾರಗಳೂ ಕನ್ನಡ ಧ್ವಜಾರೋಹಣ ನಡೆಸುತ್ತ ಕನ್ನಡಿಗರ ಭಾವನೆಗಳ‌ನ್ನು ಗೌರವಿಸಿದೆ. ಬಿಜೆಪಿ ಸರ್ಕಾರದ ಮಂತ್ರಿಗಳು ಈ ಪರಂಪರೆಯ‌ನ್ನು ನಾಶಪಡಿಸಲು ಯತ್ನಿಸುತ್ತಿದ್ದಾರೆ” ಎಂದು ಕಿಡಿಕಾರಿದೆ.

ಕನ್ನಡ ಪರ ಹೋರಾಟಗಾರ ರೂಪೇಶ್ ರಾಜಣ್ಣ ಕೂಡಾ ಸರಣಿ ಟ್ವೀಟ್ ಮಾಡಿದ್ದಾರೆ. “ಹಿಂದಿ ಹೇರಿಕೆ ತಡೆಯಿರಿ ಅಂದ್ರೆ ಅದಕ್ಕೆ ತಾಕತ್ ಇಲ್ಲಾ. ಬ್ಯಾಂಕ್ ಪರೀಕ್ಷೆಗಳನ್ನು ಕನ್ನಡದಲ್ಲಿ ತನ್ನಿ ಅಂದ್ರೆ ಅದಕ್ಕೆ ತಾಕತ್ ಇಲ್ಲಾ. ಕನ್ನಡ ವಿರೋಧಿ ನೀತಿ ಅನುಸರಿಸುವ ಎಂಇಎಸ್ ವಿರುದ್ಧ ಕ್ರಮ ತಗೊಂಡಿಲ್ಲ. ಕನ್ನಡಿಗರಿಗೆ ಉದ್ಯೋಗ ಕಾನೂನು ಮಾಡಲು ಶಕ್ತಿ ಇಲ್ಲ. ಆದ್ರೆ ನಾಡ ಧ್ವಜ ಹಾರಿಸದೆ ದ್ರೋಹ ಎಸಗಿದ ನಿಮಗೆ ಕನ್ನಡಿಗರ ಕ್ಷಮೆ ಇಲ್ಲ” ಎಂದು ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.

ಇದನ್ನೂ ಓದಿ: ’ಕನ್ನಡ ಕಂಕಣ ದಿನ’; ಕರ್ನಾಟಕ ರಣಧೀರ ಪಡೆಯಿಂದ ವಿಭಿನ್ನ ರಾಜ್ಯೋತ್ಸವ!

ಜಯತೀರ್ಥ ನಾಡಗೌಡ ಅವರು, “ಜರ್ಮನಿಯಲ್ಲಿ 88 ಲಕ್ಷ ಜನಸಂಖ್ಯೆಯಿದೆ. ಅಲ್ಲಿನ ರಾಜ್ಯಗಳಿಗೆ ತನ್ನದೆ ಆದ ಧ್ವಜವಿದ್ದ ಹೊರತೂ ಅಲ್ಲಿ ಯಾವುದೇ ಸಮಸ್ಯೆಯಿಲ್ಲ. ಆದರೆ ಕರ್ನಾಟಕ ಸರ್ಕಾರಕ್ಕೆ ಮಾತ್ರ ಯಾಕೆ ಸಮಸ್ಯೆ” ಎಂದು ಪ್ರಶ್ನಿಸಿದ್ದಾರೆ.

ಭರತ್. ಪಿ ಅವರು, “ಸಿ.ಟಿ. ರವಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಅವಮಾನ, ಮುಖ್ಯಮಂತ್ರಿಗಳೇ ಈ ವ್ಯಕ್ತಿಯನ್ನು ಮೊದಲು ಕಿತ್ತುಹಾಕಿ” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಕನ್ನಡ ಏಕೀಕರಣದಿಂದಲೂ ಕನ್ನಡ ಭಾಷೆಯ ಏಳ್ಗೆಗಾಗಿ, ಬಸವ ತತ್ವಕ್ಕಾಗಿ ಶ್ರಮಿಸುತ್ತಿರುವ ಭಾಲ್ಕಿ ಮಠ

ಮಂಜು ಎನ್ನುವವರು, “ನಿಮ್ಮ ಅಸ್ಮಿತೆಯನ್ನು ಕಳೆದುಕೊಳ್ಳದೆ ದೇಶವನ್ನು ಪ್ರೀತಿಸಬಹುದು, ನೋಡ್ರೀ ಹುಸಿ ದೇಶ ಭಕ್ತರೆ” ಎಂದು ಅಮೆರಿಕ ಸಂಯುಕ್ತ ಸಂಸ್ಥಾನದ ರಾಜ್ಯಗಳು ಪ್ರತ್ಯೇಕ ಧ್ವಜ ಹೊಂದಿರುವ ಚಿತ್ರವನ್ನು ರೀಟ್ವೀಟ್ ಮಾಡಿ ಉದಾಹರಣೆ ಸಮೇತ ಪೋಸ್ಟ್ ಮಾಡಿದ್ದಾರೆ.

ವಿಷ್ಣು, ಕನ್ನಡ ರಾಜ್ಯೋತ್ಸವದ ದಿನ ಕನ್ನಡ ಧ್ವಜವನ್ನು ಆರೋಹಣ ಮಾಡದವರಿಗೆ ನಾಚಿಕೆಯಾಗಬೇಕು ಎಂದು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಕನ್ನಡಕ್ಕೆ ಕನ್ನಡದ್ದೆ ಊಟ ಉಂಟಾ? ಡಾ. ಕೆ.ಸಿ ರಘು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...