Homeಕರ್ನಾಟಕಕನ್ನಡವೆಂದರೆ ನಮ್ಮ ದೇವ ಭಾಷೆ; ‘ಅಪ್ಪು’ ನೆನೆದು ಎಚ್‌ಡಿಕೆ ಸರಣಿ ಟ್ವೀಟ್‌

ಕನ್ನಡವೆಂದರೆ ನಮ್ಮ ದೇವ ಭಾಷೆ; ‘ಅಪ್ಪು’ ನೆನೆದು ಎಚ್‌ಡಿಕೆ ಸರಣಿ ಟ್ವೀಟ್‌

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್‌ ಮಾಡಿ ಕನ್ನಡ ರಾಜ್ಯೋತ್ಸವದ ಶುಭಕೋರಿದ್ದಾರೆ.

- Advertisement -
- Advertisement -

ನಮ್ಮನ್ನು ಅಗಲಿದ ನಟ ಪುನೀತ್‌ ರಾಜ್‌ಕುಮಾರ್‌ ಅವರನ್ನು ಸ್ಮರಿಸಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರು ಕನ್ನಡ ರಾಜ್ಯೋತ್ಸವದ ಶುಭಕೋರಿದ್ದಾರೆ.

ಸರಣಿ ಟ್ವೀಟ್‌ ಮೂಲಕ ರಾಜ್ಯೋತ್ಸವದ ಶುಭಕೋರಿರುವ ಅವರು, “ಕನ್ನಡಿಗರ ಮನೆ-ಮನದಲ್ಲೂ ಕನ್ನಡ ಬೆಳಗುತ್ತಿದೆ, ನಿಜ. ಆದರೆ, ನಮ್ಮ ಕಣ್ಮಣಿಯಾಗಿದ್ದ ಅಕ್ಕರೆಯ ಅಪ್ಪು, ಅಣ್ಣಾವ್ರ ಮುದ್ದಿನ ಕುಡಿ ಪುನೀತ್‌ ರಾಜಕುಮಾರ್‌ ಅವರು ಕನ್ನಡ ಹಬ್ಬಕ್ಕೆ ಮುನ್ನ ನಮನ್ನಗಲಿದ್ದಾರೆ. ನಮ್ಮೊಳಗೆ ಕನ್ನಡ ದೀಪವನ್ನು ಬೆಳಗುತ್ತಲೇ ಕಳೆದುಹೋದ ಯುವರತ್ನನ ಆದರ್ಶಗಳಿಗೆ ಅಗ್ರಪೀಠ ಹಾಕಿ ನಮಿಸೋಣ. ಆ ಮೂಲಕ ಪುನೀತರಾಗೋಣ” ಎಂದಿದ್ದಾರೆ.

ಜಗತ್ತಿನ ಸಮಸ್ತ ಕನ್ನಡಿಗರಿಗೆ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ನಮ್ಮೆಲ್ಲರ ತನು ಕನ್ನಡ, ಮನ ಕನ್ನಡ, ನುಡಿ ಕನ್ನಡವಾಗಲಿ. ಉಸಿರಿನ ಪ್ರತಿ ಕಣಕಣದಲ್ಲೂ ಕನ್ನಡವಿರಲಿ. ನಮ್ಮ ಆಶಯವೇ ಇದಾಗಿರಲಿ ಎಂದು ತಿಳಿಸಿದ್ದಾರೆ.

1,500 ವರ್ಷಗಳಿಗೂ ಹೆಚ್ಚು ಘನ ಇತಿಹಾಸವುಳ್ಳ ಕನ್ನಡ, ಶಾಸ್ತ್ರೀಯ ಸ್ಥಾನ ಅಲಂಕರಿಸಿದ ಅಭಿಜಾತ ಕನ್ನಡ, ಅಷ್ಟ ಜ್ಞಾನಪೀಠಗಳ ಮೇರುಗನ್ನಡ, ನಮ್ಮ ಬದುಕು-ಬಾಳ್ವೆಯ ತಾಯ್ಗನ್ನಡ. ಕನ್ನಡವೆಂದರೆ ಬರೀ ಭಾಷೆಯಲ್ಲ, ನಮ್ಮ ಪಾಲಿನ ದೇವಭಾಷೆ. ನಮ್ಮ ಮನಸು-ಕನಸುಗಳನ್ನು ಅರಳಿಸಿ ಭವಿಷ್ಯದ ರೆಕ್ಕೆಕೊಟ್ಟು ಹಾರಲು ಶಕ್ತಿ ತುಂಬುವ ಜೀವಭಾಷೆ ಎಂದು ಬಣ್ಣಿಸಿದ್ದಾರೆ.

ಭೂಮಂಡಲ ಇರುವಷ್ಟು ದಿನ ಕನ್ನಡವಿರುತ್ತದೆ. ಕನ್ನಡ ಇರುವಷ್ಟು ದಿನ ಅಪ್ಪು ಇರುತ್ತಾರೆ. ಈ ವರ್ಷ ಕನ್ನಡದ ಹಬ್ಬವನ್ನು ಪುನೀತ್‌ ರಾಜಕುಮಾರ್‌ ಅವರಿಗೆ ಅರ್ಪಿಸುತ್ತಾ, ಮತ್ತೊಮ್ಮೆ ಎಲ್ಲರಿಗೂ ರಾಜ್ಯೋತ್ಸವದ ಶುಭಾಶಯಗಳನ್ನು ಕೋರುತ್ತೇನೆ ಎಂದಿದ್ದಾರೆ.

ಸಿಎಂ ಬೊಮ್ಮಾಯಿ ಶುಭಾಶಯ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಟ್ವೀಟ್‌ ಮಾಡಿ ಶುಭಕೋರಿದ್ದು, “ನಾಡಿನ ಸಮಸ್ತ ಜನತೆಗೆ 66ನೇ ಕನ್ನಡ ರಾಜ್ಯೋತ್ಸವದ ಹೃತ್ಪೂರ್ವಕ ಶುಭಕಾಮನೆಗಳು. ನಾಡಿನ ಏಕತೆ, ಸ್ವಾಭಿಮಾನ, ಸಾಮರಸ್ಯ, ಸಹಬಾಳ್ವೆಯ ಸಂಕೇತವಾದ ರಾಜ್ಯೋತ್ಸವ ಪ್ರತಿಯೊಬ್ಬ ಕನ್ನಡಿಗನ ಹೆಮ್ಮೆಯ ಆಚರಣೆ. ನಮ್ಮ ಕನ್ನಡದ ಅಸ್ಮಿತೆ ಸದಾ ಜಾಗೃತವಾಗಿರಲಿ, ಕನ್ನಡತನದ ಅಭಿಮಾನ ನಿರಂತರವಾಗಿರಲಿ” ಎಂದು ಆಶಿಸಿದ್ದಾರೆ.

ಸಿದ್ದರಾಮಯ್ಯ ಟ್ವೀಟ್‌

“ಕನ್ನಡ, ಕನ್ನಡಿಗ ಮತ್ತು ಕರ್ನಾಟಕವನ್ನು ಒಳಗೊಂಡ ಒಟ್ಟು ಕನ್ನಡತನದ ಬದುಕು ಹಸನಾಗಿಸುವ ಗುರಿ ನಮ್ಮದಾಗಿರಲಿ. ಕನ್ನಡವನ್ನು ಉಳಿಸೋಣ, ಬೆಳೆಸೋಣ. ರಾಜ್ಯದ ಸಮಸ್ತ ಕನ್ನಡ ಮನಸ್ಸುಗಳಿಗೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು” ಎಂದು ಮಾಜಿ ಮುಖ್ಯಮಂತ್ರಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಟ್ವೀಟ್‌ ಮಾಡಿ ಶುಭಕೋರಿದ್ದಾರೆ.


ಇದನ್ನೂ ಓದಿರಿ: ಅಪ್ಪು ಒಡನಾಟದ ನೆನಪುಗಳನ್ನು ಹಂಚಿಕೊಂಡ ಮಿಲನ ಸಿನಿಮಾ ನಟಿ ಪಾರ್ವತಿ ತಿರುವೊತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಚಾ ಶಿ ಜಯಕುಮಾರ್ ಕೃಷ್ಣರಾಜಪೇಟೆ ಮಂಡ್ಯ ಜಿಲ್ಲೆ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...