Homeಕರ್ನಾಟಕ’ಕನ್ನಡ ಕಾಯಕ ವರ್ಷ’: ಲಾಂಛನ ಬಿಡುಗಡೆ ಮಾಡಿದ ಟಿ.ಎಸ್. ನಾಗಾಭರಣ

’ಕನ್ನಡ ಕಾಯಕ ವರ್ಷ’: ಲಾಂಛನ ಬಿಡುಗಡೆ ಮಾಡಿದ ಟಿ.ಎಸ್. ನಾಗಾಭರಣ

ಸುಲಭವಾಗಿ ಕನ್ನಡ ಕಲಿಯುವಂತಾಗಲು ಆರಂಭಿಕ ಕ್ರಮವಾಗಿ ಇ-ಕನ್ನಡ ಕಲಿಕಾ ಅಕಾಡೆಮಿ ಪೋರ್ಟಲ್ ಆರಂಭಿಸಲಾಗಿದೆ.

- Advertisement -
- Advertisement -

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಘೋಷಿಸಿರುವ “ಕನ್ನಡ ಕಾಯಕ ವರ್ಷಾಚರಣೆ-2020ʼʼ ಯ ಲಾಂಛನವನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಟಿ.ಎಸ್.ನಾಗಾಭರಣ ವಿಧಾನಸೌಧದಲ್ಲಿ ಇಂದು ಬಿಡುಗಡೆಗೊಳಿಸಿದರು.

ಲಾಂಛನ  ಬಿಡುಗಡೆ ಮಾಡುವ ಮೂಲಕ ಕನ್ನಡ ಕಾಯಕ ವರ್ಷ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ನಾಗಾಭರಣ, ಕಾರ್ಯಕ್ರಮವನ್ನು ಒಂದು ವರ್ಷಪೂರ್ತಿ ಅರ್ಥಪೂಣವಾಗಿ ಆಚರಿಸಲು ಹಲವು ಪ್ರತ್ಯೇಕ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮ ಯಶಸ್ವಿಯಾಗಲು ಎಲ್ಲರ ಸಹಭಾಗಿತ್ವ ಬಹಳ ಮುಖ್ಯ ಎಂದರು.

ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆಯಾಗಿದ್ದು, ಮತ್ತಷ್ಟು ಸಮೃದ್ಧವಾಗಿ ವಿಸ್ತಾರಗೊಳಿಸಲು ಕನ್ನಡವನ್ನು ವಿವಿಧ ವಯೋಮಾನದ, ವಿವಿಧ ರಂಗಗಳ ಜನರು ಸುಲಭವಾಗಿ ಕಲಿಯುವಂತಾಗಲು ಆರಂಭಿಕ ಕ್ರಮವಾಗಿ ಇ-ಕನ್ನಡ ಕಲಿಕಾ ಅಕಾಡೆಮಿ ಪೋರ್ಟಲ್ ಒಂದನ್ನು ಆರಂಭಿಸಲಾಗಿದೆ. ಇಲ್ಲಿ ಕನ್ನಡ ಕಲಿಕೆ, ಜ್ಞಾನ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಎಲ್ಲಾ ಮಾಹಿತಿಗಳನ್ನೂ ಕಾಲಕಾಲಕ್ಕೆ ಸಂಗ್ರಹಿಸಿ ಪ್ರಕಟಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ಕನ್ನಡದಲ್ಲಿ ಬ್ಯಾಂಕಿಂಗ್ ಪರೀಕ್ಷೆ: ಮಾತು ತಪ್ಪಿದ ಕೇಂದ್ರ ಸರ್ಕಾರ – ಟಿ.ಎಸ್.ನಾಗಾಭರಣ

ರಾಜ್ಯ, ದೇಶ ಮತ್ತು ವಿದೇಶದಲ್ಲಿ ನೆಲೆಸಿರುವ ಕನ್ನಡಿಗರಿಗೆ ಸರ್ಕಾರಿ ಮತ್ತು ಖಾಸಗಿ ವಲಯದಲ್ಲಿ ಉದ್ಯೋಗ ಪಡೆಯಲು ಸಹಕಾರಿಯಾಗಲು ಹಾಗೂ ಅವರಿಗೆ ಉನ್ನತ ಶಿಕ್ಷಣದಲ್ಲಿ ಅವಕಾಶ ಸಿಗುವ ನಿಟ್ಟಿನಲ್ಲಿ “ಕನ್ನಡ ಭಾಷಾ ಕೌಶಲ್ಯ ಆನ್‌ಲೈನ್ ಪರೀಕ್ಷೆ” ವ್ಯವಸ್ಥೆಯನ್ನು ರೂಪಿಸಲಾಗಿದೆ ಎಂದರು

ಕನ್ನಡದಲ್ಲಿ ಇ-ಮೇಲ್ ವಿಳಾಸಗಳನ್ನು ರಚಿಸಿಕೊಳ್ಳಲು ಕೆಲ ದಿನಗಳಷ್ಟೇ ಕಾಯಬೇಕಿದೆ ಎಂಬ ಅಂಶವನ್ನು ನಾಗಾಭರಣ ತಿಳಿಸಿದ್ದಾರೆ. ’ಕರ್ನಾಟಕ.ಭಾರತ(ಕರ್ನಾಟಕ[ಡಾಟ್]ಭಾರತ) ಎಂಬ ಯು.ಆರ್‌.ಎಲ್ ಭಾರತ ಸರ್ಕಾರದ ನ್ಯಾಶನಲ್ ಇಂಟರ್ನೆಟ್ ಎಕ್ಸ್ಚೇಂಜ್ ಆಫ್ ಇಂಡಿಯಾವು ಕರ್ನಾಟಕ ಸರ್ಕಾರದ ಬಳಕೆಗಾಗಿ ಮೀಸಲಿಟ್ಟಿದೆ.  ಇ–ಆಡಳಿತ ಇಲಾಖೆಯ ಮೂಲಕ ನೋಂದಣಿ ಪ್ರಕ್ರಿಯೆ ನಡೆಯುತ್ತಿದೆ. ಇದು ಜಾರಿಯಾದಲ್ಲಿ ಇ-ಮೇಲ್‌ ವಿಳಾಸಗಳನ್ನು ಕನ್ನಡದಲ್ಲಿಯೇ ರಚಿಸಿಕೊಳ್ಳಬಹುದಾಗಿದೆ, ಆ ಮೂಲಕ ಜಗತ್ತಿನಾದ್ಯಂತ ಕನ್ನಡದ ಕಂಪನ್ನು ಪಸರಿಸಲು ಸಹಕಾರಿಯಾಗಲಿದೆ’ ಎಂದು ವಿವರಿಸಿದರು.

ಕನ್ನಡ ಲಿಪಿಯಲ್ಲೇ ಉಚಿತ ಇ-ಮೇಲ್ ಸೇವೆಯನ್ನು ಎಲ್ಲ ಕನ್ನಡಿಗರಿಗೆ  ನೀಡುವ ಸದುದ್ದೇಶದಿಂದ ಕರ್ನಾಟಕ ಸರ್ಕಾರವು ಈಗಿರುವ “.ಭಾರತ್“ (ಡಾಟ್ ಭಾರತ್) ಸೇವೆಯನ್ನು ಬಳಸಿಕೊಂಡು ರಾಜ್ಯ ಸರ್ಕಾರದ ಎಲ್ಲ ಜಾಲತಾಣ (ವೆಬ್ಸೈಟ್)ಗಳನ್ನು ಕನ್ನಡಕ್ಕೆ ಬದಲಾಯಿಸಿದರೆ ಕನ್ನಡದಲ್ಲೇ ಇ-ಮೈಲ್ ಸೇವೆಯನ್ನೂ ನೀಡಬಹುದು (ಉದಾಹರಣೆಗೆ ಮುಖ್ಯಮಂತ್ರಿ@ಕರ್ನಾಟಕ.ಭಾರತ) ಎಂದರು.

ಒಟ್ಟಾರೆ ಕನ್ನಡ ಭಾಷೆಯನ್ನು ರಾಜ್ಯದಲ್ಲಿ ಮಾತ್ರವಲ್ಲದೇ ಜಾಲತಾಣಗಳ ಹೆಸರುಗಳನ್ನು ಕನ್ನಡದಲ್ಲೇ ಬಳಸಲು ಅವಕಾಶ ಒದಗಿಸಿ, ಆ ಮೂಲಕ ಕನ್ನಡ ಭಾಷೆಯನ್ನು ಜಗತ್ತಿನಾದ್ಯಂತ ಪಸರಿಸಬಹುದು ಎಂದಿದ್ದಾರೆ.

ಇನ್ನೂ, ರಾಜ್ಯ ಸರ್ಕಾರದ ವ್ಯಾಪ್ತಿಯಲ್ಲಿರುವ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಜಾಲತಾಣಗಳಲ್ಲಿ ಸಂಪೂರ್ಣವಾಗಿ ಕನ್ನಡವನ್ನು ಬಳಸುವ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳಿಗೂ ಮುಖ್ಯ ಕಾರ್ಯದರ್ಶಿಗಳು ಆದೇಶ ಹೊರಡಿಸಲಿದ್ದು, “ಕನ್ನಡ ಕಾಯಕ ವರ್ಷ”ದಲ್ಲಿ ಕಟ್ಟುನಿಟ್ಟಾದ ಕ್ರಮಗಳನ್ನು ಕೈಗೊಳ್ಳುವುದಾಗಿ ಪ್ರಾಧಿಕಾರ ಅಧ್ಯಕ್ಷ ನಾಗಭರಣ ತಿಳಿಸಿದ್ದಾರೆ.

ಟಿ.ಎಸ್.ನಾಗಾಭರಣ

ಇದರ ಜೊತೆಗೆ ಕನ್ನಡ ಕಾಯಕ ವರ್ಷಾಚರಣೆಯಲ್ಲಿ ನಾಗರಿಕರು, ಖಾಸಗಿ ಸಂಸ್ಥೆಗಳು, ಸರ್ಕಾರಿ ಇಲಾಖೆಗಳು, ಸಂಘಸಂಸ್ಥೆಗಳನ್ನು ಒಳಗೊಳ್ಳಲು ಯೋಜನೆ ರೂಪಿಸಲಾಗುತ್ತದೆ. ಪ್ರಾಯೋಗಿಕವಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದಲೇ ಕರ್ನಾಟಕ ನಾಡಿನ ಚರಿತ್ರೆ ಮತ್ತು ಸಂಸ್ಕೃತಿಯನ್ನು ಬಿಂಬಿಸುವ ಕಿರುಹೊತ್ತಿಗೆಗಳನ್ನು ಪ್ರಕಟಿಸಲಾಗುವುದು. “ಹಾಡಬನ್ನಿ-ನೋಡಬನ್ನಿʼʼ ಕಾರ್ಯಕ್ರಮದ ಮೂಲಕ 10 ಕಿರುಚಿತ್ರ ಮತ್ತು ಹಾಡುಗಳಿಗೆ ವರ್ಷಾಂತ್ಯಕ್ಕೆ ಪ್ರಶಸ್ತಿಯನ್ನು ನೀಡಲಾಗುವುದು. ವಿವಿಧ ಗಣ್ಯರಿಂದ ನಾಡಿನ ಮಕ್ಕಳಿಗೆ “ಉದ್ಯೋಗ ಪೂರ್ವ ಯೂಟ್ಯೂಬ್ ತರಬೇತಿ” ಹಮ್ಮಿಕೊಳ್ಳಲಾಗುವುದು ಎಂದರು.


ಇದನ್ನೂ ಓದಿ:ಮೆಟ್ರೋದಲ್ಲಿ ಹಿಂದಿ ತೆಗೆಯಿರಿ, ಇಲ್ಲ ಎಲ್ಲಾ ಅಧಿಕೃತ 22 ಭಾಷೆಗಳನ್ನು ಬಳಸಿ: ಟಿ.ಎಸ್.ನಾಗಾಭರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...