Homeಕರ್ನಾಟಕ’ಕನ್ನಡ ಕಾಯಕ ವರ್ಷ’: ಲಾಂಛನ ಬಿಡುಗಡೆ ಮಾಡಿದ ಟಿ.ಎಸ್. ನಾಗಾಭರಣ

’ಕನ್ನಡ ಕಾಯಕ ವರ್ಷ’: ಲಾಂಛನ ಬಿಡುಗಡೆ ಮಾಡಿದ ಟಿ.ಎಸ್. ನಾಗಾಭರಣ

ಸುಲಭವಾಗಿ ಕನ್ನಡ ಕಲಿಯುವಂತಾಗಲು ಆರಂಭಿಕ ಕ್ರಮವಾಗಿ ಇ-ಕನ್ನಡ ಕಲಿಕಾ ಅಕಾಡೆಮಿ ಪೋರ್ಟಲ್ ಆರಂಭಿಸಲಾಗಿದೆ.

- Advertisement -
- Advertisement -

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಘೋಷಿಸಿರುವ “ಕನ್ನಡ ಕಾಯಕ ವರ್ಷಾಚರಣೆ-2020ʼʼ ಯ ಲಾಂಛನವನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಟಿ.ಎಸ್.ನಾಗಾಭರಣ ವಿಧಾನಸೌಧದಲ್ಲಿ ಇಂದು ಬಿಡುಗಡೆಗೊಳಿಸಿದರು.

ಲಾಂಛನ  ಬಿಡುಗಡೆ ಮಾಡುವ ಮೂಲಕ ಕನ್ನಡ ಕಾಯಕ ವರ್ಷ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ನಾಗಾಭರಣ, ಕಾರ್ಯಕ್ರಮವನ್ನು ಒಂದು ವರ್ಷಪೂರ್ತಿ ಅರ್ಥಪೂಣವಾಗಿ ಆಚರಿಸಲು ಹಲವು ಪ್ರತ್ಯೇಕ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮ ಯಶಸ್ವಿಯಾಗಲು ಎಲ್ಲರ ಸಹಭಾಗಿತ್ವ ಬಹಳ ಮುಖ್ಯ ಎಂದರು.

ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆಯಾಗಿದ್ದು, ಮತ್ತಷ್ಟು ಸಮೃದ್ಧವಾಗಿ ವಿಸ್ತಾರಗೊಳಿಸಲು ಕನ್ನಡವನ್ನು ವಿವಿಧ ವಯೋಮಾನದ, ವಿವಿಧ ರಂಗಗಳ ಜನರು ಸುಲಭವಾಗಿ ಕಲಿಯುವಂತಾಗಲು ಆರಂಭಿಕ ಕ್ರಮವಾಗಿ ಇ-ಕನ್ನಡ ಕಲಿಕಾ ಅಕಾಡೆಮಿ ಪೋರ್ಟಲ್ ಒಂದನ್ನು ಆರಂಭಿಸಲಾಗಿದೆ. ಇಲ್ಲಿ ಕನ್ನಡ ಕಲಿಕೆ, ಜ್ಞಾನ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಎಲ್ಲಾ ಮಾಹಿತಿಗಳನ್ನೂ ಕಾಲಕಾಲಕ್ಕೆ ಸಂಗ್ರಹಿಸಿ ಪ್ರಕಟಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ಕನ್ನಡದಲ್ಲಿ ಬ್ಯಾಂಕಿಂಗ್ ಪರೀಕ್ಷೆ: ಮಾತು ತಪ್ಪಿದ ಕೇಂದ್ರ ಸರ್ಕಾರ – ಟಿ.ಎಸ್.ನಾಗಾಭರಣ

ರಾಜ್ಯ, ದೇಶ ಮತ್ತು ವಿದೇಶದಲ್ಲಿ ನೆಲೆಸಿರುವ ಕನ್ನಡಿಗರಿಗೆ ಸರ್ಕಾರಿ ಮತ್ತು ಖಾಸಗಿ ವಲಯದಲ್ಲಿ ಉದ್ಯೋಗ ಪಡೆಯಲು ಸಹಕಾರಿಯಾಗಲು ಹಾಗೂ ಅವರಿಗೆ ಉನ್ನತ ಶಿಕ್ಷಣದಲ್ಲಿ ಅವಕಾಶ ಸಿಗುವ ನಿಟ್ಟಿನಲ್ಲಿ “ಕನ್ನಡ ಭಾಷಾ ಕೌಶಲ್ಯ ಆನ್‌ಲೈನ್ ಪರೀಕ್ಷೆ” ವ್ಯವಸ್ಥೆಯನ್ನು ರೂಪಿಸಲಾಗಿದೆ ಎಂದರು

ಕನ್ನಡದಲ್ಲಿ ಇ-ಮೇಲ್ ವಿಳಾಸಗಳನ್ನು ರಚಿಸಿಕೊಳ್ಳಲು ಕೆಲ ದಿನಗಳಷ್ಟೇ ಕಾಯಬೇಕಿದೆ ಎಂಬ ಅಂಶವನ್ನು ನಾಗಾಭರಣ ತಿಳಿಸಿದ್ದಾರೆ. ’ಕರ್ನಾಟಕ.ಭಾರತ(ಕರ್ನಾಟಕ[ಡಾಟ್]ಭಾರತ) ಎಂಬ ಯು.ಆರ್‌.ಎಲ್ ಭಾರತ ಸರ್ಕಾರದ ನ್ಯಾಶನಲ್ ಇಂಟರ್ನೆಟ್ ಎಕ್ಸ್ಚೇಂಜ್ ಆಫ್ ಇಂಡಿಯಾವು ಕರ್ನಾಟಕ ಸರ್ಕಾರದ ಬಳಕೆಗಾಗಿ ಮೀಸಲಿಟ್ಟಿದೆ.  ಇ–ಆಡಳಿತ ಇಲಾಖೆಯ ಮೂಲಕ ನೋಂದಣಿ ಪ್ರಕ್ರಿಯೆ ನಡೆಯುತ್ತಿದೆ. ಇದು ಜಾರಿಯಾದಲ್ಲಿ ಇ-ಮೇಲ್‌ ವಿಳಾಸಗಳನ್ನು ಕನ್ನಡದಲ್ಲಿಯೇ ರಚಿಸಿಕೊಳ್ಳಬಹುದಾಗಿದೆ, ಆ ಮೂಲಕ ಜಗತ್ತಿನಾದ್ಯಂತ ಕನ್ನಡದ ಕಂಪನ್ನು ಪಸರಿಸಲು ಸಹಕಾರಿಯಾಗಲಿದೆ’ ಎಂದು ವಿವರಿಸಿದರು.

ಕನ್ನಡ ಲಿಪಿಯಲ್ಲೇ ಉಚಿತ ಇ-ಮೇಲ್ ಸೇವೆಯನ್ನು ಎಲ್ಲ ಕನ್ನಡಿಗರಿಗೆ  ನೀಡುವ ಸದುದ್ದೇಶದಿಂದ ಕರ್ನಾಟಕ ಸರ್ಕಾರವು ಈಗಿರುವ “.ಭಾರತ್“ (ಡಾಟ್ ಭಾರತ್) ಸೇವೆಯನ್ನು ಬಳಸಿಕೊಂಡು ರಾಜ್ಯ ಸರ್ಕಾರದ ಎಲ್ಲ ಜಾಲತಾಣ (ವೆಬ್ಸೈಟ್)ಗಳನ್ನು ಕನ್ನಡಕ್ಕೆ ಬದಲಾಯಿಸಿದರೆ ಕನ್ನಡದಲ್ಲೇ ಇ-ಮೈಲ್ ಸೇವೆಯನ್ನೂ ನೀಡಬಹುದು (ಉದಾಹರಣೆಗೆ ಮುಖ್ಯಮಂತ್ರಿ@ಕರ್ನಾಟಕ.ಭಾರತ) ಎಂದರು.

ಒಟ್ಟಾರೆ ಕನ್ನಡ ಭಾಷೆಯನ್ನು ರಾಜ್ಯದಲ್ಲಿ ಮಾತ್ರವಲ್ಲದೇ ಜಾಲತಾಣಗಳ ಹೆಸರುಗಳನ್ನು ಕನ್ನಡದಲ್ಲೇ ಬಳಸಲು ಅವಕಾಶ ಒದಗಿಸಿ, ಆ ಮೂಲಕ ಕನ್ನಡ ಭಾಷೆಯನ್ನು ಜಗತ್ತಿನಾದ್ಯಂತ ಪಸರಿಸಬಹುದು ಎಂದಿದ್ದಾರೆ.

ಇನ್ನೂ, ರಾಜ್ಯ ಸರ್ಕಾರದ ವ್ಯಾಪ್ತಿಯಲ್ಲಿರುವ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಜಾಲತಾಣಗಳಲ್ಲಿ ಸಂಪೂರ್ಣವಾಗಿ ಕನ್ನಡವನ್ನು ಬಳಸುವ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳಿಗೂ ಮುಖ್ಯ ಕಾರ್ಯದರ್ಶಿಗಳು ಆದೇಶ ಹೊರಡಿಸಲಿದ್ದು, “ಕನ್ನಡ ಕಾಯಕ ವರ್ಷ”ದಲ್ಲಿ ಕಟ್ಟುನಿಟ್ಟಾದ ಕ್ರಮಗಳನ್ನು ಕೈಗೊಳ್ಳುವುದಾಗಿ ಪ್ರಾಧಿಕಾರ ಅಧ್ಯಕ್ಷ ನಾಗಭರಣ ತಿಳಿಸಿದ್ದಾರೆ.

ಟಿ.ಎಸ್.ನಾಗಾಭರಣ

ಇದರ ಜೊತೆಗೆ ಕನ್ನಡ ಕಾಯಕ ವರ್ಷಾಚರಣೆಯಲ್ಲಿ ನಾಗರಿಕರು, ಖಾಸಗಿ ಸಂಸ್ಥೆಗಳು, ಸರ್ಕಾರಿ ಇಲಾಖೆಗಳು, ಸಂಘಸಂಸ್ಥೆಗಳನ್ನು ಒಳಗೊಳ್ಳಲು ಯೋಜನೆ ರೂಪಿಸಲಾಗುತ್ತದೆ. ಪ್ರಾಯೋಗಿಕವಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದಲೇ ಕರ್ನಾಟಕ ನಾಡಿನ ಚರಿತ್ರೆ ಮತ್ತು ಸಂಸ್ಕೃತಿಯನ್ನು ಬಿಂಬಿಸುವ ಕಿರುಹೊತ್ತಿಗೆಗಳನ್ನು ಪ್ರಕಟಿಸಲಾಗುವುದು. “ಹಾಡಬನ್ನಿ-ನೋಡಬನ್ನಿʼʼ ಕಾರ್ಯಕ್ರಮದ ಮೂಲಕ 10 ಕಿರುಚಿತ್ರ ಮತ್ತು ಹಾಡುಗಳಿಗೆ ವರ್ಷಾಂತ್ಯಕ್ಕೆ ಪ್ರಶಸ್ತಿಯನ್ನು ನೀಡಲಾಗುವುದು. ವಿವಿಧ ಗಣ್ಯರಿಂದ ನಾಡಿನ ಮಕ್ಕಳಿಗೆ “ಉದ್ಯೋಗ ಪೂರ್ವ ಯೂಟ್ಯೂಬ್ ತರಬೇತಿ” ಹಮ್ಮಿಕೊಳ್ಳಲಾಗುವುದು ಎಂದರು.


ಇದನ್ನೂ ಓದಿ:ಮೆಟ್ರೋದಲ್ಲಿ ಹಿಂದಿ ತೆಗೆಯಿರಿ, ಇಲ್ಲ ಎಲ್ಲಾ ಅಧಿಕೃತ 22 ಭಾಷೆಗಳನ್ನು ಬಳಸಿ: ಟಿ.ಎಸ್.ನಾಗಾಭರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...