Homeಕರ್ನಾಟಕ’ಕನ್ನಡ ಕಾಯಕ ವರ್ಷ’: ಲಾಂಛನ ಬಿಡುಗಡೆ ಮಾಡಿದ ಟಿ.ಎಸ್. ನಾಗಾಭರಣ

’ಕನ್ನಡ ಕಾಯಕ ವರ್ಷ’: ಲಾಂಛನ ಬಿಡುಗಡೆ ಮಾಡಿದ ಟಿ.ಎಸ್. ನಾಗಾಭರಣ

ಸುಲಭವಾಗಿ ಕನ್ನಡ ಕಲಿಯುವಂತಾಗಲು ಆರಂಭಿಕ ಕ್ರಮವಾಗಿ ಇ-ಕನ್ನಡ ಕಲಿಕಾ ಅಕಾಡೆಮಿ ಪೋರ್ಟಲ್ ಆರಂಭಿಸಲಾಗಿದೆ.

- Advertisement -
- Advertisement -

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಘೋಷಿಸಿರುವ “ಕನ್ನಡ ಕಾಯಕ ವರ್ಷಾಚರಣೆ-2020ʼʼ ಯ ಲಾಂಛನವನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಟಿ.ಎಸ್.ನಾಗಾಭರಣ ವಿಧಾನಸೌಧದಲ್ಲಿ ಇಂದು ಬಿಡುಗಡೆಗೊಳಿಸಿದರು.

ಲಾಂಛನ  ಬಿಡುಗಡೆ ಮಾಡುವ ಮೂಲಕ ಕನ್ನಡ ಕಾಯಕ ವರ್ಷ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ನಾಗಾಭರಣ, ಕಾರ್ಯಕ್ರಮವನ್ನು ಒಂದು ವರ್ಷಪೂರ್ತಿ ಅರ್ಥಪೂಣವಾಗಿ ಆಚರಿಸಲು ಹಲವು ಪ್ರತ್ಯೇಕ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮ ಯಶಸ್ವಿಯಾಗಲು ಎಲ್ಲರ ಸಹಭಾಗಿತ್ವ ಬಹಳ ಮುಖ್ಯ ಎಂದರು.

ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆಯಾಗಿದ್ದು, ಮತ್ತಷ್ಟು ಸಮೃದ್ಧವಾಗಿ ವಿಸ್ತಾರಗೊಳಿಸಲು ಕನ್ನಡವನ್ನು ವಿವಿಧ ವಯೋಮಾನದ, ವಿವಿಧ ರಂಗಗಳ ಜನರು ಸುಲಭವಾಗಿ ಕಲಿಯುವಂತಾಗಲು ಆರಂಭಿಕ ಕ್ರಮವಾಗಿ ಇ-ಕನ್ನಡ ಕಲಿಕಾ ಅಕಾಡೆಮಿ ಪೋರ್ಟಲ್ ಒಂದನ್ನು ಆರಂಭಿಸಲಾಗಿದೆ. ಇಲ್ಲಿ ಕನ್ನಡ ಕಲಿಕೆ, ಜ್ಞಾನ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಎಲ್ಲಾ ಮಾಹಿತಿಗಳನ್ನೂ ಕಾಲಕಾಲಕ್ಕೆ ಸಂಗ್ರಹಿಸಿ ಪ್ರಕಟಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ಕನ್ನಡದಲ್ಲಿ ಬ್ಯಾಂಕಿಂಗ್ ಪರೀಕ್ಷೆ: ಮಾತು ತಪ್ಪಿದ ಕೇಂದ್ರ ಸರ್ಕಾರ – ಟಿ.ಎಸ್.ನಾಗಾಭರಣ

ರಾಜ್ಯ, ದೇಶ ಮತ್ತು ವಿದೇಶದಲ್ಲಿ ನೆಲೆಸಿರುವ ಕನ್ನಡಿಗರಿಗೆ ಸರ್ಕಾರಿ ಮತ್ತು ಖಾಸಗಿ ವಲಯದಲ್ಲಿ ಉದ್ಯೋಗ ಪಡೆಯಲು ಸಹಕಾರಿಯಾಗಲು ಹಾಗೂ ಅವರಿಗೆ ಉನ್ನತ ಶಿಕ್ಷಣದಲ್ಲಿ ಅವಕಾಶ ಸಿಗುವ ನಿಟ್ಟಿನಲ್ಲಿ “ಕನ್ನಡ ಭಾಷಾ ಕೌಶಲ್ಯ ಆನ್‌ಲೈನ್ ಪರೀಕ್ಷೆ” ವ್ಯವಸ್ಥೆಯನ್ನು ರೂಪಿಸಲಾಗಿದೆ ಎಂದರು

ಕನ್ನಡದಲ್ಲಿ ಇ-ಮೇಲ್ ವಿಳಾಸಗಳನ್ನು ರಚಿಸಿಕೊಳ್ಳಲು ಕೆಲ ದಿನಗಳಷ್ಟೇ ಕಾಯಬೇಕಿದೆ ಎಂಬ ಅಂಶವನ್ನು ನಾಗಾಭರಣ ತಿಳಿಸಿದ್ದಾರೆ. ’ಕರ್ನಾಟಕ.ಭಾರತ(ಕರ್ನಾಟಕ[ಡಾಟ್]ಭಾರತ) ಎಂಬ ಯು.ಆರ್‌.ಎಲ್ ಭಾರತ ಸರ್ಕಾರದ ನ್ಯಾಶನಲ್ ಇಂಟರ್ನೆಟ್ ಎಕ್ಸ್ಚೇಂಜ್ ಆಫ್ ಇಂಡಿಯಾವು ಕರ್ನಾಟಕ ಸರ್ಕಾರದ ಬಳಕೆಗಾಗಿ ಮೀಸಲಿಟ್ಟಿದೆ.  ಇ–ಆಡಳಿತ ಇಲಾಖೆಯ ಮೂಲಕ ನೋಂದಣಿ ಪ್ರಕ್ರಿಯೆ ನಡೆಯುತ್ತಿದೆ. ಇದು ಜಾರಿಯಾದಲ್ಲಿ ಇ-ಮೇಲ್‌ ವಿಳಾಸಗಳನ್ನು ಕನ್ನಡದಲ್ಲಿಯೇ ರಚಿಸಿಕೊಳ್ಳಬಹುದಾಗಿದೆ, ಆ ಮೂಲಕ ಜಗತ್ತಿನಾದ್ಯಂತ ಕನ್ನಡದ ಕಂಪನ್ನು ಪಸರಿಸಲು ಸಹಕಾರಿಯಾಗಲಿದೆ’ ಎಂದು ವಿವರಿಸಿದರು.

ಕನ್ನಡ ಲಿಪಿಯಲ್ಲೇ ಉಚಿತ ಇ-ಮೇಲ್ ಸೇವೆಯನ್ನು ಎಲ್ಲ ಕನ್ನಡಿಗರಿಗೆ  ನೀಡುವ ಸದುದ್ದೇಶದಿಂದ ಕರ್ನಾಟಕ ಸರ್ಕಾರವು ಈಗಿರುವ “.ಭಾರತ್“ (ಡಾಟ್ ಭಾರತ್) ಸೇವೆಯನ್ನು ಬಳಸಿಕೊಂಡು ರಾಜ್ಯ ಸರ್ಕಾರದ ಎಲ್ಲ ಜಾಲತಾಣ (ವೆಬ್ಸೈಟ್)ಗಳನ್ನು ಕನ್ನಡಕ್ಕೆ ಬದಲಾಯಿಸಿದರೆ ಕನ್ನಡದಲ್ಲೇ ಇ-ಮೈಲ್ ಸೇವೆಯನ್ನೂ ನೀಡಬಹುದು (ಉದಾಹರಣೆಗೆ ಮುಖ್ಯಮಂತ್ರಿ@ಕರ್ನಾಟಕ.ಭಾರತ) ಎಂದರು.

ಒಟ್ಟಾರೆ ಕನ್ನಡ ಭಾಷೆಯನ್ನು ರಾಜ್ಯದಲ್ಲಿ ಮಾತ್ರವಲ್ಲದೇ ಜಾಲತಾಣಗಳ ಹೆಸರುಗಳನ್ನು ಕನ್ನಡದಲ್ಲೇ ಬಳಸಲು ಅವಕಾಶ ಒದಗಿಸಿ, ಆ ಮೂಲಕ ಕನ್ನಡ ಭಾಷೆಯನ್ನು ಜಗತ್ತಿನಾದ್ಯಂತ ಪಸರಿಸಬಹುದು ಎಂದಿದ್ದಾರೆ.

ಇನ್ನೂ, ರಾಜ್ಯ ಸರ್ಕಾರದ ವ್ಯಾಪ್ತಿಯಲ್ಲಿರುವ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಜಾಲತಾಣಗಳಲ್ಲಿ ಸಂಪೂರ್ಣವಾಗಿ ಕನ್ನಡವನ್ನು ಬಳಸುವ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳಿಗೂ ಮುಖ್ಯ ಕಾರ್ಯದರ್ಶಿಗಳು ಆದೇಶ ಹೊರಡಿಸಲಿದ್ದು, “ಕನ್ನಡ ಕಾಯಕ ವರ್ಷ”ದಲ್ಲಿ ಕಟ್ಟುನಿಟ್ಟಾದ ಕ್ರಮಗಳನ್ನು ಕೈಗೊಳ್ಳುವುದಾಗಿ ಪ್ರಾಧಿಕಾರ ಅಧ್ಯಕ್ಷ ನಾಗಭರಣ ತಿಳಿಸಿದ್ದಾರೆ.

ಟಿ.ಎಸ್.ನಾಗಾಭರಣ

ಇದರ ಜೊತೆಗೆ ಕನ್ನಡ ಕಾಯಕ ವರ್ಷಾಚರಣೆಯಲ್ಲಿ ನಾಗರಿಕರು, ಖಾಸಗಿ ಸಂಸ್ಥೆಗಳು, ಸರ್ಕಾರಿ ಇಲಾಖೆಗಳು, ಸಂಘಸಂಸ್ಥೆಗಳನ್ನು ಒಳಗೊಳ್ಳಲು ಯೋಜನೆ ರೂಪಿಸಲಾಗುತ್ತದೆ. ಪ್ರಾಯೋಗಿಕವಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದಲೇ ಕರ್ನಾಟಕ ನಾಡಿನ ಚರಿತ್ರೆ ಮತ್ತು ಸಂಸ್ಕೃತಿಯನ್ನು ಬಿಂಬಿಸುವ ಕಿರುಹೊತ್ತಿಗೆಗಳನ್ನು ಪ್ರಕಟಿಸಲಾಗುವುದು. “ಹಾಡಬನ್ನಿ-ನೋಡಬನ್ನಿʼʼ ಕಾರ್ಯಕ್ರಮದ ಮೂಲಕ 10 ಕಿರುಚಿತ್ರ ಮತ್ತು ಹಾಡುಗಳಿಗೆ ವರ್ಷಾಂತ್ಯಕ್ಕೆ ಪ್ರಶಸ್ತಿಯನ್ನು ನೀಡಲಾಗುವುದು. ವಿವಿಧ ಗಣ್ಯರಿಂದ ನಾಡಿನ ಮಕ್ಕಳಿಗೆ “ಉದ್ಯೋಗ ಪೂರ್ವ ಯೂಟ್ಯೂಬ್ ತರಬೇತಿ” ಹಮ್ಮಿಕೊಳ್ಳಲಾಗುವುದು ಎಂದರು.


ಇದನ್ನೂ ಓದಿ:ಮೆಟ್ರೋದಲ್ಲಿ ಹಿಂದಿ ತೆಗೆಯಿರಿ, ಇಲ್ಲ ಎಲ್ಲಾ ಅಧಿಕೃತ 22 ಭಾಷೆಗಳನ್ನು ಬಳಸಿ: ಟಿ.ಎಸ್.ನಾಗಾಭರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...