Homeಕರ್ನಾಟಕ’ಕನ್ನಡ ಕಾಯಕ ವರ್ಷ’: ಲಾಂಛನ ಬಿಡುಗಡೆ ಮಾಡಿದ ಟಿ.ಎಸ್. ನಾಗಾಭರಣ

’ಕನ್ನಡ ಕಾಯಕ ವರ್ಷ’: ಲಾಂಛನ ಬಿಡುಗಡೆ ಮಾಡಿದ ಟಿ.ಎಸ್. ನಾಗಾಭರಣ

ಸುಲಭವಾಗಿ ಕನ್ನಡ ಕಲಿಯುವಂತಾಗಲು ಆರಂಭಿಕ ಕ್ರಮವಾಗಿ ಇ-ಕನ್ನಡ ಕಲಿಕಾ ಅಕಾಡೆಮಿ ಪೋರ್ಟಲ್ ಆರಂಭಿಸಲಾಗಿದೆ.

- Advertisement -
- Advertisement -

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಘೋಷಿಸಿರುವ “ಕನ್ನಡ ಕಾಯಕ ವರ್ಷಾಚರಣೆ-2020ʼʼ ಯ ಲಾಂಛನವನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಟಿ.ಎಸ್.ನಾಗಾಭರಣ ವಿಧಾನಸೌಧದಲ್ಲಿ ಇಂದು ಬಿಡುಗಡೆಗೊಳಿಸಿದರು.

ಲಾಂಛನ  ಬಿಡುಗಡೆ ಮಾಡುವ ಮೂಲಕ ಕನ್ನಡ ಕಾಯಕ ವರ್ಷ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ನಾಗಾಭರಣ, ಕಾರ್ಯಕ್ರಮವನ್ನು ಒಂದು ವರ್ಷಪೂರ್ತಿ ಅರ್ಥಪೂಣವಾಗಿ ಆಚರಿಸಲು ಹಲವು ಪ್ರತ್ಯೇಕ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮ ಯಶಸ್ವಿಯಾಗಲು ಎಲ್ಲರ ಸಹಭಾಗಿತ್ವ ಬಹಳ ಮುಖ್ಯ ಎಂದರು.

ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆಯಾಗಿದ್ದು, ಮತ್ತಷ್ಟು ಸಮೃದ್ಧವಾಗಿ ವಿಸ್ತಾರಗೊಳಿಸಲು ಕನ್ನಡವನ್ನು ವಿವಿಧ ವಯೋಮಾನದ, ವಿವಿಧ ರಂಗಗಳ ಜನರು ಸುಲಭವಾಗಿ ಕಲಿಯುವಂತಾಗಲು ಆರಂಭಿಕ ಕ್ರಮವಾಗಿ ಇ-ಕನ್ನಡ ಕಲಿಕಾ ಅಕಾಡೆಮಿ ಪೋರ್ಟಲ್ ಒಂದನ್ನು ಆರಂಭಿಸಲಾಗಿದೆ. ಇಲ್ಲಿ ಕನ್ನಡ ಕಲಿಕೆ, ಜ್ಞಾನ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಎಲ್ಲಾ ಮಾಹಿತಿಗಳನ್ನೂ ಕಾಲಕಾಲಕ್ಕೆ ಸಂಗ್ರಹಿಸಿ ಪ್ರಕಟಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ಕನ್ನಡದಲ್ಲಿ ಬ್ಯಾಂಕಿಂಗ್ ಪರೀಕ್ಷೆ: ಮಾತು ತಪ್ಪಿದ ಕೇಂದ್ರ ಸರ್ಕಾರ – ಟಿ.ಎಸ್.ನಾಗಾಭರಣ

ರಾಜ್ಯ, ದೇಶ ಮತ್ತು ವಿದೇಶದಲ್ಲಿ ನೆಲೆಸಿರುವ ಕನ್ನಡಿಗರಿಗೆ ಸರ್ಕಾರಿ ಮತ್ತು ಖಾಸಗಿ ವಲಯದಲ್ಲಿ ಉದ್ಯೋಗ ಪಡೆಯಲು ಸಹಕಾರಿಯಾಗಲು ಹಾಗೂ ಅವರಿಗೆ ಉನ್ನತ ಶಿಕ್ಷಣದಲ್ಲಿ ಅವಕಾಶ ಸಿಗುವ ನಿಟ್ಟಿನಲ್ಲಿ “ಕನ್ನಡ ಭಾಷಾ ಕೌಶಲ್ಯ ಆನ್‌ಲೈನ್ ಪರೀಕ್ಷೆ” ವ್ಯವಸ್ಥೆಯನ್ನು ರೂಪಿಸಲಾಗಿದೆ ಎಂದರು

ಕನ್ನಡದಲ್ಲಿ ಇ-ಮೇಲ್ ವಿಳಾಸಗಳನ್ನು ರಚಿಸಿಕೊಳ್ಳಲು ಕೆಲ ದಿನಗಳಷ್ಟೇ ಕಾಯಬೇಕಿದೆ ಎಂಬ ಅಂಶವನ್ನು ನಾಗಾಭರಣ ತಿಳಿಸಿದ್ದಾರೆ. ’ಕರ್ನಾಟಕ.ಭಾರತ(ಕರ್ನಾಟಕ[ಡಾಟ್]ಭಾರತ) ಎಂಬ ಯು.ಆರ್‌.ಎಲ್ ಭಾರತ ಸರ್ಕಾರದ ನ್ಯಾಶನಲ್ ಇಂಟರ್ನೆಟ್ ಎಕ್ಸ್ಚೇಂಜ್ ಆಫ್ ಇಂಡಿಯಾವು ಕರ್ನಾಟಕ ಸರ್ಕಾರದ ಬಳಕೆಗಾಗಿ ಮೀಸಲಿಟ್ಟಿದೆ.  ಇ–ಆಡಳಿತ ಇಲಾಖೆಯ ಮೂಲಕ ನೋಂದಣಿ ಪ್ರಕ್ರಿಯೆ ನಡೆಯುತ್ತಿದೆ. ಇದು ಜಾರಿಯಾದಲ್ಲಿ ಇ-ಮೇಲ್‌ ವಿಳಾಸಗಳನ್ನು ಕನ್ನಡದಲ್ಲಿಯೇ ರಚಿಸಿಕೊಳ್ಳಬಹುದಾಗಿದೆ, ಆ ಮೂಲಕ ಜಗತ್ತಿನಾದ್ಯಂತ ಕನ್ನಡದ ಕಂಪನ್ನು ಪಸರಿಸಲು ಸಹಕಾರಿಯಾಗಲಿದೆ’ ಎಂದು ವಿವರಿಸಿದರು.

ಕನ್ನಡ ಲಿಪಿಯಲ್ಲೇ ಉಚಿತ ಇ-ಮೇಲ್ ಸೇವೆಯನ್ನು ಎಲ್ಲ ಕನ್ನಡಿಗರಿಗೆ  ನೀಡುವ ಸದುದ್ದೇಶದಿಂದ ಕರ್ನಾಟಕ ಸರ್ಕಾರವು ಈಗಿರುವ “.ಭಾರತ್“ (ಡಾಟ್ ಭಾರತ್) ಸೇವೆಯನ್ನು ಬಳಸಿಕೊಂಡು ರಾಜ್ಯ ಸರ್ಕಾರದ ಎಲ್ಲ ಜಾಲತಾಣ (ವೆಬ್ಸೈಟ್)ಗಳನ್ನು ಕನ್ನಡಕ್ಕೆ ಬದಲಾಯಿಸಿದರೆ ಕನ್ನಡದಲ್ಲೇ ಇ-ಮೈಲ್ ಸೇವೆಯನ್ನೂ ನೀಡಬಹುದು (ಉದಾಹರಣೆಗೆ ಮುಖ್ಯಮಂತ್ರಿ@ಕರ್ನಾಟಕ.ಭಾರತ) ಎಂದರು.

ಒಟ್ಟಾರೆ ಕನ್ನಡ ಭಾಷೆಯನ್ನು ರಾಜ್ಯದಲ್ಲಿ ಮಾತ್ರವಲ್ಲದೇ ಜಾಲತಾಣಗಳ ಹೆಸರುಗಳನ್ನು ಕನ್ನಡದಲ್ಲೇ ಬಳಸಲು ಅವಕಾಶ ಒದಗಿಸಿ, ಆ ಮೂಲಕ ಕನ್ನಡ ಭಾಷೆಯನ್ನು ಜಗತ್ತಿನಾದ್ಯಂತ ಪಸರಿಸಬಹುದು ಎಂದಿದ್ದಾರೆ.

ಇನ್ನೂ, ರಾಜ್ಯ ಸರ್ಕಾರದ ವ್ಯಾಪ್ತಿಯಲ್ಲಿರುವ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಜಾಲತಾಣಗಳಲ್ಲಿ ಸಂಪೂರ್ಣವಾಗಿ ಕನ್ನಡವನ್ನು ಬಳಸುವ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳಿಗೂ ಮುಖ್ಯ ಕಾರ್ಯದರ್ಶಿಗಳು ಆದೇಶ ಹೊರಡಿಸಲಿದ್ದು, “ಕನ್ನಡ ಕಾಯಕ ವರ್ಷ”ದಲ್ಲಿ ಕಟ್ಟುನಿಟ್ಟಾದ ಕ್ರಮಗಳನ್ನು ಕೈಗೊಳ್ಳುವುದಾಗಿ ಪ್ರಾಧಿಕಾರ ಅಧ್ಯಕ್ಷ ನಾಗಭರಣ ತಿಳಿಸಿದ್ದಾರೆ.

ಟಿ.ಎಸ್.ನಾಗಾಭರಣ

ಇದರ ಜೊತೆಗೆ ಕನ್ನಡ ಕಾಯಕ ವರ್ಷಾಚರಣೆಯಲ್ಲಿ ನಾಗರಿಕರು, ಖಾಸಗಿ ಸಂಸ್ಥೆಗಳು, ಸರ್ಕಾರಿ ಇಲಾಖೆಗಳು, ಸಂಘಸಂಸ್ಥೆಗಳನ್ನು ಒಳಗೊಳ್ಳಲು ಯೋಜನೆ ರೂಪಿಸಲಾಗುತ್ತದೆ. ಪ್ರಾಯೋಗಿಕವಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದಲೇ ಕರ್ನಾಟಕ ನಾಡಿನ ಚರಿತ್ರೆ ಮತ್ತು ಸಂಸ್ಕೃತಿಯನ್ನು ಬಿಂಬಿಸುವ ಕಿರುಹೊತ್ತಿಗೆಗಳನ್ನು ಪ್ರಕಟಿಸಲಾಗುವುದು. “ಹಾಡಬನ್ನಿ-ನೋಡಬನ್ನಿʼʼ ಕಾರ್ಯಕ್ರಮದ ಮೂಲಕ 10 ಕಿರುಚಿತ್ರ ಮತ್ತು ಹಾಡುಗಳಿಗೆ ವರ್ಷಾಂತ್ಯಕ್ಕೆ ಪ್ರಶಸ್ತಿಯನ್ನು ನೀಡಲಾಗುವುದು. ವಿವಿಧ ಗಣ್ಯರಿಂದ ನಾಡಿನ ಮಕ್ಕಳಿಗೆ “ಉದ್ಯೋಗ ಪೂರ್ವ ಯೂಟ್ಯೂಬ್ ತರಬೇತಿ” ಹಮ್ಮಿಕೊಳ್ಳಲಾಗುವುದು ಎಂದರು.


ಇದನ್ನೂ ಓದಿ:ಮೆಟ್ರೋದಲ್ಲಿ ಹಿಂದಿ ತೆಗೆಯಿರಿ, ಇಲ್ಲ ಎಲ್ಲಾ ಅಧಿಕೃತ 22 ಭಾಷೆಗಳನ್ನು ಬಳಸಿ: ಟಿ.ಎಸ್.ನಾಗಾಭರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...