Homeಕರ್ನಾಟಕ’ಕನ್ನಡ ಕಂಕಣ ದಿನ’; ಕರ್ನಾಟಕ ರಣಧೀರ ಪಡೆಯಿಂದ ವಿಭಿನ್ನ ರಾಜ್ಯೋತ್ಸವ!

’ಕನ್ನಡ ಕಂಕಣ ದಿನ’; ಕರ್ನಾಟಕ ರಣಧೀರ ಪಡೆಯಿಂದ ವಿಭಿನ್ನ ರಾಜ್ಯೋತ್ಸವ!

- Advertisement -
- Advertisement -

ಕರ್ನಾಟಕ ರಣಧೀರ ಪಡೆಯ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ವಿಶಿಷ್ಟವಾಗಿ ಆಚರಿಸಲಾಗಿದ್ದು, “ನವೆಂಬರ್ 1 ನೇ ದಿನವನ್ನು ಇನ್ನುಮುಂದೆ “ಕನ್ನಡ ಕಂಕಣ ದಿನ”ವನ್ನಾಗಿ ಆಚರಿಸಲಾಗುತ್ತದೆ. ಈ ಮೂಲಕ ಕನ್ನಡದ ಕೆಲಸಗಳನ್ನು ರಾಜ್ಯದಾದ್ಯಂತ ಮಾಡಲಾಗುತ್ತದೆ” ಎಂದು ರಣಧೀರ ಪಡೆಯ ಭೈರಪ್ಪ ಹರೀಶ್ ಕುಮಾರ್ ಹೇಳಿದರು.

ಇಂದು ಬೆಂಗಳೂರಿನ ಆನಂದರಾವ್ ವೃತ್ತದಲ್ಲಿ ಧ್ವಜಾರೋಹಣ ಮಾಡಿ, ಎಲ್ಲರಿಗೂ ಕಂಕಣ ಕಟ್ಟುವ ಮೂಲಕ ಕನ್ನಡ ಭಾಷೆ, ಸಂಸ್ಕೃತಿಯನ್ನು ಯುವಪೀಳಿಗೆಗೆ ತಲುಪಿಸಿ ತಮ್ಮ ಸಂಘಟನೆಯ ಕೆಲಸವನ್ನು ಇನ್ನಷ್ಟು ವಿಸ್ತರಿಸಿಕೊಳ್ಳಲಾಗುತ್ತದೆ ಎಂದು ಹೇಳಿದರು.

ಕರ್ನಾಟಕದಲ್ಲಿರುವ, ವರ್ಷಪೂರ್ತಿ ಸಕ್ರಿಯವಾಗಿ ಕ್ರಿಯಾತ್ಮಕ ಕಾರ್ಯಕ್ರಮಗಳು ಮತ್ತು ಹೋರಾಟಗಳನ್ನು ಮಾಡಿಕೊಂಡುಬರುತ್ತಿರುವ ಕರ್ನಾಟಕ ರಣಧೀರ ಪಡೆ, ಈ ಬಾರಿ ಇಂತಹ ವಿಶೇಷ ಕಾರ್ಯಕ್ರಮವೊಂದನ್ನು ಮಾಡುವುದರ ಮೂಲಕ ರಾಜ್ಯ ಮಾತ್ರವಲ್ಲದೇ ಸಾಗರವನ್ನೂ ದಾಟಿ ವಿದೇಶಗಳಲ್ಲೂ ಬೆಂಬಲ ಪಡೆದಿದೆ. ಈ ಮೂಲಕ ಅಲ್ಲಿಯೂ ಕನ್ನಡ ಕಂಕಣ ದಿನವನ್ನು ಆಚರಿಸಲಾಗಿದೆ.

ಇದನ್ನೂ ಓದಿ:ರಾಜ್ಯೋತ್ಸವದ ಕುರಿತು ಕನ್ನಡದಲ್ಲಿ ಟ್ವೀಟ್ ಮಾಡಿ ಪ್ರಶಂಸೆ ಮತ್ತು ಟ್ರೋಲ್‌ಗೊಳಗಾದ ಪ್ರಧಾನಿ ಮೋದಿ…

ಇದನ್ನೂ ಓದಿ: ಕನ್ನಡ ಧ್ವಜಾರೋಹಣವಿಲ್ಲದೇ ಕನ್ನಡ ರಾಜ್ಯೋತ್ಸವ: ಸರ್ಕಾರದ ವಿರುದ್ಧ ಕಿಡಿ ಕಾರಿದ ನೆಟ್ಟಿಗರು

ಕೊರೊನಾ ಸಂದರ್ಭದಲ್ಲಿ ಎಲ್ಲರೂ ಒಟ್ಟಿಗೆ ಸೇರಿ ಕನ್ನಡಹಬ್ಬವನ್ನು ಆಚರಿಸಲು ಸಾಧ್ಯವಿಲ್ಲ. ಹಾಗಾಗಿ ಕನ್ನಡಾಭಿಮಾನಿಗಳು ಎಲ್ಲಿದ್ದಾರೋ ಅಲ್ಲಿಂದಲೇ ಕಂಕಣ ಕಟ್ಟಿಕೊಂಡು ಈ ಹಬ್ಬವನ್ನು ಆಚರಿಸಿ ಕನ್ನಡದ ಕೆಲಸಗಳನ್ನು ಮಾಡಲು ಕಂಕಣ ಕಟ್ಟಿಕೊಳ್ಳುವ ಉದ್ದೇಶವನ್ನು ಈ ಕಾರ್ಯಕ್ರಮ ಹೊಂದಿದೆ.

“ನಾವು ಕನ್ನಡಕ್ಕಾಗಿ ವರ್ಷಪೂರ್ತಿ ಹೋರಾಟಗಳನ್ನು ಮಾಡುತ್ತಲೇ ಇರುತ್ತೇವೆ. ಆದರೆ ಈ ದಿನದಂದು ಕನ್ನಡ ರಾಜ್ಯೋತ್ಸವವನ್ನು ಮನೆಮನೆಯ ಹಬ್ಬವಾಗಿ ಆಚರಿಸಬೇಕು ಎಂದು ಕೇಳಿಕೊಳ್ಳುತ್ತೇವೆ. ಈ ಮೂಲಕ ನಿಮ್ಮ ಮನೆಯ ಜನ ಮತ್ತು ಮುಂದಿನ ಪೀಳಿಗೆಗೆ ಕನ್ನಡದ ಕಂಪನ್ನು ವಿಸ್ತರಿಸಿ. ಕನ್ನಡಕ್ಕಾಗಿ ಕಂಕಣ ತೊಡಿ” ಎಂದು ಹರೀಶ್ ಕುಮಾರ್ ಹೇಳಿದರು.

“ಈ ವರ್ಷ ಸುಮಾರು 1 ಲಕ್ಷ ಕಂಕಣಗಳನ್ನು ತಯರಿಸಲಾಗಿದೆ. ಇದನ್ನು ಇಂದಿನ ಕಾರ್ಯಕ್ರಮಕ್ಕೆ ಆಗಮಿಸಿರುವ ಕನ್ನಡಪ್ರೇಮಿಗಳಿಗೆ ಉಚಿತವಾಗಿ ನೀಡಲಾಗುತ್ತಿದೆ. ಇಡೀ ತಿಂಗಳು ಈ ಹಬ್ಬವನ್ನು ವಿಜೃಂಭಣೆಯಿಂದ ಎಲ್ಲರೂ ಆಚರಿಸೋಣ. ಈ ವರ್ಷ ಶಾಲಾ ಕಾಲೇಜುಗಳಿಲ್ಲ. ಹಾಗಾಗಿ ಮುಂದಿನ ವರ್ಷದಿಂದ ಈ ಕಂಕಣ ದಿನವನ್ನು ಶಾಲಾ ಕಾಲೇಜುಗಳಿಗೂ ವಿಸ್ತರಿಸಿ, ಅಲ್ಲಿಯೂ ಆಚರಿಸಲಾಗುವುದು. ಇದು ಹೀಗೆಯೇ ಪ್ರತಿವರ್ಷವೂ ವಿಭಿನ್ನವಾಗಿ ಆಚರಣೆಯಾಗುತ್ತದೆ” ಎಂದು ಹೇಳಿದರು.


ಇದನ್ನೂ ಓದಿ: ಕನ್ನಡ ರಾಜ್ಯೋತ್ಸವದಂದು ಜಾಗತಿಕ ಲಿಂಗಾಯತ ಮಹಾಸಭಾದ ಸಾಗರೋತ್ತರ ಶಾಖೆ ಪ್ರಾರಂಭ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...