Homeಕರ್ನಾಟಕ‘ಮುಸ್ಕಾನ್‌‌’ ಬಗ್ಗೆ ಸುಳ್ಳು ಹಬ್ಬಿಸುತ್ತಿರುವ ಕನ್ನಡ ಮಾಧ್ಯಮಗಳು: ಬೇಸರ ವ್ಯಕ್ತಪಡಿಸಿದ ಪೊಲೀಸರು

‘ಮುಸ್ಕಾನ್‌‌’ ಬಗ್ಗೆ ಸುಳ್ಳು ಹಬ್ಬಿಸುತ್ತಿರುವ ಕನ್ನಡ ಮಾಧ್ಯಮಗಳು: ಬೇಸರ ವ್ಯಕ್ತಪಡಿಸಿದ ಪೊಲೀಸರು

- Advertisement -
- Advertisement -

ರಾಜ್ಯದಾದ್ಯಂತ ಹಿಜಾಬ್‌ ವಿಚಾರವಾಗಿ ವಿವಾದ ಭುಗಿಲೆದ್ದ ಸಂದರ್ಭದಲ್ಲಿ ಬಿಜೆಪಿ ಬೆಂಬಲಿತ ಎಬಿವಿಪಿ ಸಂಘಟನೆಯ ದುಷ್ಕರ್ಮಿಗಳಿಂದ ಸುತ್ತುವರೆಯಲ್ಪಟ್ಟಾಗ, ‘ಅಲ್ಲಾಹು ಅಕ್ಬರ್‌’ ಎಂದು ಘೋಷಣೆ ಕೂಗಿದ್ದ ಮಂಡ್ಯದ ಪಿಇಎಸ್‌‌‌ ವಿದ್ಯಾರ್ಥಿನಿ ಮುಸ್ಕಾನ್ ವಿಚಾರವಾಗಿ, ರಾಜ್ಯದ ಹಲವಾರು ಸುದ್ದಿ ಮಾಧ್ಯಮಗಳು ಕಪೋಲಕಲ್ಪಿತ ಸುಳ್ಳು ವರದಿಗಳನ್ನು ಪ್ರಕಟಿಸಿ ಓದುಗರನ್ನು ದಾರಿತಪ್ಪಿಸಿವೆ.

ಮುಖ್ಯವಾಗಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌‌, ವಿಜಯವಾಣಿ, ಪಬ್ಲಿಕ್ ಟಿವಿ, ಪವರ್‌ ಟಿವಿ, ಸಂಜೆವಾಣಿ ಸೇರಿದಂತೆ ಹಲವಾರು ಪತ್ರಿಕೆಗಳು ಮತ್ತು ಮಾಧ್ಯಮಗಳು ತಮ್ಮ ವೆಬ್‌ಸೈಟ್‌ನಲ್ಲಿ, “ವಿದ್ಯಾರ್ಥಿನಿ ಮುಸ್ಕಾನ್ ಮತ್ತು ಅವರ ಕುಟುಂಬ ಪೊಲೀಸರನ್ನು ಯಾಮಾರಿಸಿ ವಿದೇಶಕ್ಕೆ ತೆರಳಿದ್ದಾರೆ” ಎಂದು ವರದಿ ಮಾಡಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸುವರ್ಣ ನ್ಯೂಸ್‌ ತನ್ನ ವರದಿಯಲ್ಲಿ, “ಪೊಲೀಸರಿಗೆ ಮಾಹಿತಿ ನೀಡದೆ ವಿದೇಶಕ್ಕೆ ಹಾರಿದ ಹಿಜಾಬ್ ಹುಡುಗಿ ಮುಸ್ಕಾನ್” ಎಂದು ಸುಳ್ಳು ಸುದ್ದಿಯನ್ನು ವರದಿ ಮಾಡಿದೆ. ಅದು ತನ್ನ ವರದಿಯಲ್ಲಿ ಯಾವುದೇ ಪೊಲೀಸರ ಅಧಿಕೃತ ಹೇಳಿಕೆಯನ್ನು ಉಲ್ಲೇಖಿಸಿಲ್ಲ. ಕೇವಲ ಕಪೋಲ ಕಲ್ಪಿತವಾಗಿ ಸುದ್ದಿಯನ್ನು ವರದಿ ಮಾಡಿದೆ. ಸುವರ್ಣ ನ್ಯೂಸ್‌ನ ಈ ವರದಿಯನ್ನು ನಂದನ್ ರಾಮಕೃಷ್ಣ, ಮಂಡ್ಯ ಎಂಬವರು ಮಾಡಿದ್ದಾರೆ.

ಇದನ್ನೂ ಓದಿ: ಪಬ್ಲಿಕ್‌, ಸುವರ್ಣ, ಟಿವಿ9 ಮತ್ತು ಪಬ್ಲಿಕ್ ಟಿವಿ ಕಚೇರಿ ಮುಂದೆ ಬುಧವಾರ ‘ಆತ್ಮಾವಲೋಕನ ಸತ್ಯಾಗ್ರಹ’

ಪಬ್ಲಿಕ್‌ ಟಿವಿ ತನ್ನ ವೆಬ್‌ಸೈಟ್‌ನಲ್ಲಿ, “ಪೊಲೀಸರನ್ನು ಯಾಮಾರಿಸಿ ವಿದೇಶಕ್ಕೆ ಹಾರಿದ ಅಲ್ಲಾಹು ಅಕ್ಬರ್‌ ಕೂಗಿದ ವಿದ್ಯಾರ್ಥಿನಿ” ಎಂಬ ಹೆಡ್‌ಲೈನ್‌ನೊಂದಿಗೆ ವರದಿ ಮಾಡಿದೆ. ಈ ವರದಿಯಲ್ಲಿ ಕೂಡಾ ಪತ್ರಿಕೆ ಯಾವುದೇ ಖಚಿತ ಮಾಹಿತಿಯನ್ನು ನೀಡದೆ ಸುಳ್ಳು ಮಾಹಿತಿಯನ್ನು ಬರೆಯಲಾಗಿದೆ.

ಪವರ್‌ ಟಿವಿಯ ವೆಬ್‌ಸೈಟ್‌ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ, “ವಿದೇಶಕ್ಕೆ ಹಾರಿದ ವಿದ್ಯಾರ್ಥಿನಿ ಮುಷ್ಕಾನ್; ಉಗ್ರಗಾಮಿಗಳ ಭೇಟಿ ಸಂಚು ಇದೆಯಾ?” ಎಂದು ಸುಳ್ಳು ಸುದ್ದಿಯನ್ನು ಪ್ರಶ್ನಾರ್ಥಕವಾಗಿ ಬರೆದು ಓದುಗರನ್ನು ದಾರಿ ತಪ್ಪಿಸಿದೆ. ಜೊತೆಗೆ ವರದಿಯಲ್ಲಿ, ಮುಸ್ಕಾನ್ ಪೊಲೀಸರನ್ನು ಯಾಮಾರಿಸಿ ವಿದೇಶಕ್ಕೆ ತೆರಳಿದ್ದಾರೆ ಎಂದು ಪ್ರತಿಪಾದಿಸಿದೆ.

ವಿಜಯವಾಣಿ ಕೂಡಾ ತಮ್ಮ ವೆಬ್‌ಸೈಟ್‌ನಲ್ಲಿ ಪೊಲೀಸರನ್ನು ಯಾಮಾರಿಸಿ ಮುಸ್ಕಾನ್ ವಿದೇಶಕ್ಕೆ ತೆರಳಿದ್ದಾರೆ ಎಂದು ವರದಿ ಮಾಡಿದೆ. ಸಂಜೆವಾಣಿ ಪತ್ರಿಕೆಯ ವೆಬ್‌ಸೈಟ್‌ನಲ್ಲಿ, “ಖಾಕಿಗೆ ಮಾಹಿತಿ ನೀಡದೆ ಸೌದಿಗೆ ತೆರಳಿದ ಮುಸ್ಕಾನ್‌ ಕುಟುಂಬ” ಎಂಬ ಹೆಡ್‌ಲೈನ್ ನೀಡಿ ವರದಿ ಪ್ರಕಟಿಸಿದೆ.

ಇನ್ನೂ ಕೆಲವು ಮಾಧ್ಯಮಗಳು, ಯಾವುದೇ ಸುದ್ದಿ ಮೌಲ್ಯವಿಲ್ಲದ, ಕುಟುಂಬವೊಂದರ ವೈಯಕ್ತಿಕ ಪ್ರವಾಸವನ್ನು ವರದಿ ಮಾಡಿದ್ದು, ಜನರನ್ನು ದಾರಿ ತಪ್ಪಿಸಿವೆ.

ಇದನ್ನೂ ಓದಿ: ‘ಬಾಯಿಗೆ ಬಂದಿದ್ದು ಬರೀತೀರಾ?’: ಕೋಮುದ್ವೇಷದ ಸುದ್ದಿಗಾಗಿ ‘ಪಬ್ಲಿಕ್ ಟಿವಿ’ ಪತ್ರಕರ್ತನ ವಿರುದ್ದ ಡಿಸಿಪಿ ಕಿಡಿ

ಮುಸ್ಕಾನ್‌ ಮತ್ತು ಅವರ ಕುಟುಂಬ ಪೊಲೀಸರನ್ನು ಯಾಮಾರಿಸಿ ಹೋಗಿದ್ದರೆ? ಪೊಲೀಸರು ಹೇಳಿದ್ದೇನು?

ವಾಸ್ತವದಲ್ಲಿ ಮುಸ್ಕಾನ್ ಮತ್ತು ಅವರ ಕುಟುಂಬ ರಂಜಾನ್ ಸಮಯದಲ್ಲೇ ಮುಸ್ಲಿಮರ ಪವಿತ್ರ ಸ್ಥಳವಾದ ಸೌದಿ ಅರೇಬಿಯಾದ ಮಕ್ಕಾಗೆ ತೀರ್ಥ ಯಾತ್ರೆಗೆ ಹೋಗಿರುವುದು ವರದಿಯಾಗಿದೆ. ಆದರೆ ಅವರು ಪೊಲೀಸರನ್ನು ಯಾಮಾರಿಸಿ ಹೋಗಿದ್ದಾರೆ ಎನ್ನುವ ಆರೋಪಕ್ಕೆ ಸಂಬಂಧಿಸಿದಂತೆ ಮಂಡ್ಯ ಪೂರ್ವ ಪೊಲೀಸ್‌ ಠಾಣೆಯ ಪೊಲೀಸ್‌ ಅಧಿಕಾರಿಯೊಬ್ಬರು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದ್ದಾರೆ.

‘ನಾನುಗೌರಿ.ಕಾಂ’ ಜೊತೆಗೆ ಮಾತನಾಡಿದ ಪೊಲೀಸ್ ಅಧಿಕಾರಿ, “ಹೊರ ದೇಶಕ್ಕೆ ಹೋಗುವ ನಿಯಮದಂತೆ, ಕಾನೂನು ಬದ್ದವಾಗಿಯೇ ಮುಸ್ಕಾನ್ ಅವರ ಕುಟುಂಬ ವಿದೇಶಕ್ಕೆ ಹೋಗಿದೆ. ಪೊಲೀಸರಿಗೆ ಯಾಮಾರಿಸಿ, ಹೇಳದೆ ಕೇಳದೆ, ಯಾರದೇ ಕಣ್ಣು ತಪ್ಪಿಸಿ ಹೋಗಿಲ್ಲ” ಎಂದು ಸ್ಪಷ್ಟ ಪಡಿಸಿದ್ದಾರೆ.

“ಎಲ್ಲಿಗಾದರೂ ತೆರಳಬೇಕಾದರೆ ಪೊಲೀಸರಿಗೆ ತಿಳಿಸಬೇಕು ಎಂದು ಪೊಲೀಸರು ಮೌಖಿಕವಾಗಿ ತಿಳಿಸಿದ್ದಾರೆ” ಎಂಬ ಸುವರ್ಣ ಟಿವಿ ವರದಿ ಬಗ್ಗೆ ಪ್ರತಿಕ್ರಿಯಿಸಿದ ಅಧಿಕಾರಿ, “ಇವೆಲ್ಲಾ ಸುಳ್ಳು ಸುದ್ದಿ, ಅವರ ಮೇಲಾಗಲಿ ಅವರ ಕುಟುಂಬದ ಮೇಲಾಗಲಿ ಯಾವುದೇ ಪ್ರಕರಣ ಇಲ್ಲ. ಅವರಿಗೆ ಕ್ರಿಮಿನಲ್ ಹಿನ್ನಲೆಯೂ ಇಲ್ಲ. ಹೀಗಾಗಿ ಅವರನ್ನು ಮಾನಿಟರ್‌ ಮಾಡುವ ಅವಶ್ಯಕತೆಯೂ ಇಲ್ಲ. ಅವರನ್ನು ತನಿಖೆ ಮಾಡಬೇಕು ಎನ್ನುತ್ತಾರೆ, ಆದರೆ ಅವರು ಯಾವ ತಪ್ಪು ಮಾಡಿದ್ದಾರೆ ಎಂದು ತನಿಖೆ ಮಾಡಬೇಕು?” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ದೇಶದ್ರೋಹ ಕಾನೂನಿಗೆ ತಡೆ; ಬಂಧಿತರು ಜಾಮೀನು ಪಡೆಯಬಹುದು: ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ

“ಮಾಧ್ಯಮಗಳಿಗೆ ಯಾವುದೇ ಸುದ್ದಿ ಇಲ್ಲದೆ ಇರುವುದಕ್ಕೆ ಏನೋ ಒಂದನ್ನು ಬರೆದಿದ್ದಾರೆ. ಇದನ್ನೆಲ್ಲಾ ನೋಡುತ್ತಾ ಇರಬೇಕಾದರೆ ನಮಗೆ ಬೇಜಾರಾಗುತ್ತದೆ. ಪೊಲೀಸರ ಹೆಸರು ಬಳಸಿಕೊಂಡು ಮಾಧ್ಯಮಗಳು ಸುಳ್ಳು ಹರಡುತ್ತಿರುವುದರ ಬಗ್ಗೆ ಇಲಾಖೆಯಲ್ಲಿ ಚರ್ಚೆ ನಡೆಯುತ್ತಿದೆ. ಅಂತಹ ಮಾಧ್ಯಮಗಳ ವಿರುದ್ಧ ಶೀಘ್ರದಲ್ಲೇ ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದ್ದಾರೆ.

ಕನ್ನಡ ಮಾಧ್ಯಮಗಳ ಕುಕೃತ್ಯದ ಬಗ್ಗೆ ಪ್ರತಿಕ್ರಿಯಿಸಿರುವ ಮಂಡ್ಯ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಯತೀಶ್‌ ಅವರು, “ಪಿ.ಇ.ಎಸ್ ಕಾಲೇಜಿನ ಬಿಕಾಂ ವಿದ್ಯಾರ್ಥಿನಿ ಮುಸ್ಕಾನ್ ಖಾನ್ ಸೌದಿ ಪ್ರವಾಸಕ್ಕೆ ಪೊಲೀಸ್ ಇಲಾಖೆ ಅನುಮತಿ ಅಗತ್ಯವಿಲ್ಲ. ಮುಸ್ಕಾನ್ ವಿದೇಶ ಪ್ರವಾಸ ಹೊರಟಿರುವುದು ಅವರ ವೈಯಕ್ತಿಕ ವಿಚಾರ. ಅದಕ್ಕೂ ನಮಗೂ ಸಂಬಂಧವಿಲ್ಲ. ಮುಸ್ಕಾನ್ ಮತ್ತು ಅವರ ಕುಟುಂಬದವರ ವಿರುದ್ಧ ಯಾವುದೇ ಪ್ರಕರಣ ದಾಖಲಾಗಿಲ್ಲ” ಎಂದು ಸ್ಪಷ್ಟಪಡಿಸಿರುವುದಾಗಿ ‘ವಾರ್ತಾಭಾರತಿ’ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

8 COMMENTS

  1. ವಾರ್ತಾಭಾರತಿ ಎಂಬ ಮತಾಂಧ ,ಪಾಕಿಸ್ತಾನ್ ಪ್ರೇಮಿ ಮಾಧ್ಯಮದ ವರದಿಯನ್ನು ಸಮರ್ಥ ಮಾಡುವ ಈ ನಗರ ನಕ್ಸಲರ ಪತ್ರಿಕೆಯ ಬಂಡವಾಳ ಏನೆಂಬುದು ದೇಶದ ಜನರಿಗೆ ತಿಳಿದ ವಿಷಯವೇ ಆಗಿದೆ

  2. ಮಾನಗೆಟ್ಟ, ನೀಚ ಕನ್ನಡ ಮಾಧ್ಯಮಗಳು ಮತ್ತು ಲಂಭಕ್ತರಿಗೆ ಯಾವುದೇ ಅಧಿಕೃತ ಸುದ್ದಿ ಮೂಲಗಳ ಅವಶ್ಯಕತೆ ಇಲ್ಲ. ಅವು ನರಹಂತಕನ ಅನೈತಿಕ ಕೂಸುಗಳು. ಅವಕ್ಕೆ ಅವರಪ್ಪ ಅಧಿಕಾರದಲ್ಲಿರುವುದು ಮುಖ್ಯ.

  3. ಮಾನಗೆಟ್ಟ ಸುದ್ದಿಮಾಧ್ಯಮಗಳಿಗೆ ರಾಷ್ಟ್ರದಾದ್ಯಂತ ಸಾಕಷ್ಟು ಸುದ್ದಿಗಳಿವೆ. ಬೆಲೆ ಏರಿಕೆ… ನಿರುಧ್ಯೋಗ….. ಜಿಡಿಫಿ ದರ. …. ಸಣ್ಣ ಕೈಗಾರಿಕೆಗಳ ದುಸ್ಥಿತಿ…. ಇವುಗಳ ಬಗ್ಗೆ ಅವರು ಬಿತ್ತರ ಮಾಡಲಿ

  4. ಇಂಥಾ ಮಿಂಡಿ ಮೀಡಿಯಾಗಳು ಜಾತಿ ಧರ್ಮ ಹೇಳಿಕೊಂಡು ಜನರನ್ನು ದಿಕ್ಕು ತಪ್ಪಿಸುತ್ತಿದ್ದಾರೆ. ಇವರು ಗ್ಯಾಸ್, ಪೆಟ್ರೋಲ್, ಡೀಸೆಲ್, ದಿನಸಿ ವಸ್ತುಗಳ ಬೆಲೆಯೇರಿಕೆ ಬಗ್ಗೇ ಮಾತನಾಡಲು ದೈರ್ಯ ಇಲ್ಲ.

  5. ಈ ನಾಚಿಕೆ ಗೆಟ್ಟ ಕೊಮುವಾದಿ ಮಾಧ್ಯಮ ಗಳದ್ದು ಇದು ಎನು ಹೊಸದೆನಲ್ಲ. ಸುಳ್ಳು ಸುದ್ದಿ ಹಬ್ಬಿಸಿ ದೇಶದಲ್ಲಿ ಬೆಂಕಿ ಹಚ್ಚುವುದರಲ್ಲಿ ಇವರಿಗೆ ಮೋದಲನೆ ಸ್ಥಾನ. ಥು… ಇವ್ರ ಜನ್ಮ ಕುಕ್ಕೆ ಥು…

  6. History itself is controlled and diverted since many decades..schools are educated false history to destroy peaceful culture in India. Check history ..
    Since independence secularism had taken its max advantage politically .advantagies does not like to know true history .it’s right time to cancel all benefits, reservations and fight for transparency rule ,equal education, equal hospitality, that too free of cost canceling all subsidies, private schools, universities, hospitals..sd be taken over by Indian government.
    Stop doing news about muslim student girl.let them roam anywhere why r we bothered.
    Hope intelligence is wise enough to track her.
    She is communal minded supportive by same mindsets.

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...