Homeಕರ್ನಾಟಕಕರ್ನಾಟಕದಲ್ಲಿ ಕನ್ನಡ ಕಡೆಗಣಿಸಿದರೆ ಸಹಿಸುವುದಿಲ್ಲ; ಕರವೇ ಎಚ್ಚರಿಕೆ

ಕರ್ನಾಟಕದಲ್ಲಿ ಕನ್ನಡ ಕಡೆಗಣಿಸಿದರೆ ಸಹಿಸುವುದಿಲ್ಲ; ಕರವೇ ಎಚ್ಚರಿಕೆ

- Advertisement -
- Advertisement -

ಇತ್ತೀಚಿಗೆ ಕರ್ನಾಟಕದಲ್ಲಿ ಸರ್ಕಾರಿ ಹಾಗೂ ಖಾಸಗೀ ಕಾರ್ಯಕ್ರಮಗಳಲ್ಲಿ ಕನ್ನಡ ಭಾಷೆ ಕಡೆಗಣಿಸುತ್ತಿದ್ದು ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಮಾತ್ರ ಕಾರ್ಯಕ್ರಮ ನಡೆಸುತ್ತಿರುವುದಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಆಕ್ಷೇಪ ವ್ಯಕ್ತಪಡಿಸಿದೆ. ಇನ್ನು ಮುಂದೆ ಕರ್ನಾಟಕದಲ್ಲಿ ಕನ್ನಡ ಕಡೆಗಣಿಸಿದರೆ ಸಹಿಸುವುದಿಲ್ಲ ಎಂದು ಕರವೇ ಎಚ್ಚರಿಕೆ ನೀಡಿದೆ.

ಎಸ್‌ಡಿಎಸ್ ಕ್ಷಯರೋಗ ಸಂಶೋಧನಾ ಕೇಂದ್ರ ಹಾಗೂ ರಾಜೀವ್ ಗಾಂಧಿ ಎದೆರೋಗ ಸಂಸ್ಥೆ ಹಾಗು ರಾಷ್ಟ್ರೀಯ ನರವಿಜ್ಞಾನ ಮತ್ತು ಮಾನಸಿಕ ಆರೋಗ್ಯ ಸಂಸ್ಥೆಗಳಲ್ಲಿ 10-10-2021ರಂದು ನಡೆದ ಕಾರ್ಯಕ್ರಮಗಳಲ್ಲಿ ಕನ್ನಡವನ್ನು ಕಡೆಗಣಿಸಲಾಗಿತ್ತು. ಕಾರ್ಯಕ್ರಮದ ಬ್ಯಾನರ್ ಸೇರಿದಂತೆ ಎಲ್ಲವನ್ನು ಹಿಂದಿ, ಇಂಗ್ಲಿಷ್‌ನಲ್ಲಿ ನಡೆಸಲಾಗಿತ್ತು. ಈ ಹಿನ್ನೆಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಮುಖಂಡರು ಇಂದು ಆ ಸಂಸ್ಥೆಗಳಿಗೆ ಭೇಟಿ ನೀಡಿ ಮುಂದೆ ಕನ್ನಡವನ್ನೇ ಬಳಸುವಂತೆ ಒತ್ತಾಯಿಸಲಾಗಿದೆ.

ಈ ಕುರಿತು ಹೇಳಿಕೆ ನೀಡಿರುವ ಕರವೇ ಸಾಮಾಜಿಕ‌ ಜಾಲತಾಣ ಮಖ್ಯಸ್ಥರಾದ ದಿನೇಶ್ ಕುಮಾರ್ ಎಸ್.ಸಿ, “ನಿಮ್ಹಾನ್ಸ್ ನಿರ್ದೇಶಕಿ ಡಾ.ಪ್ರತಿಮಾ ಹಾಗು ರಾಜೀವ್ ಗಾಂಧಿ‌ ಆಸ್ಪತ್ರೆಯ ನಿರ್ದೇಶಕ‌‌ ಡಾ.ನಾಗರಾಜ್ ಅವರಿಗೆ ಖಂಡನಾ ಪತ್ರವನ್ನು ನೀಡಿದ್ದೇವೆ. ಆಗಿರುವ ಪ್ರಮಾದವನ್ನು ಮತ್ತೆ ಮರುಕಳಿಸದಂತೆ ನೋಡಿಕೊಳ್ಳಬೇಕು ಎಂದು ಎಚ್ಚರಿಕೆ ನೀಡಿದ್ದೇವೆ. ಈ ಸಂದರ್ಭದಲ್ಲಿ ಕನ್ನಡ ಕಡೆಗಣನೆ ಆಗಿರುವುದನ್ನು ಒಪ್ಪಿಕೊಂಡು‌‌ ಕ್ಷಮೆ ಯಾಚಿಸಿದ ನಿರ್ದೇಶಕರು ಇನ್ನುಮುಂದೆ ಈ ರೀತಿಯ ತಪ್ಪುಗಳು ಆಗದಂತೆ ನೋಡಿಕೊಳ್ಳುವುದಾಗಿ ವಾಗ್ದಾನ ಮಾಡಿದರು” ಎಂದಿದ್ದಾರೆ.

ನಿಮ್ಹಾನ್ಸ್ ಸಂಸ್ಥೆಗೆ ನೂರು ಎಕರೆ ಜಾಗ ನೀಡಿ, ಅಡಿಗಲ್ಲು ಹಾಕಿ ಸ್ಥಾಪಿಸಿದ್ದು ರಾಜರ್ಷಿ‌ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು. 1936ರಲ್ಲಿ ನಿಮ್ಹಾನ್ಸ್ ಸಂಸ್ಥೆಯನ್ನು ಸ್ಥಾಪಿಸಿದಾಗ ಹಿಂದಿ ಎಂಬ ಭಾಷೆಯ ಪರಿಚಯವೇ ಕನ್ನಡಿಗರಿಗೆ ಇರಲಿಲ್ಲ. ಇಂಥ‌ ಸಂಸ್ಥೆಯಲ್ಲಿ ಹಿಂದಿ ನುಡಿಗೆ ಹೆಚ್ಚುಗಾರಿಕೆ ನೀಡಿ,‌ ಕನ್ನಡಕ್ಕೆ ಅಪಮಾನ ಎಸಗಿದರೆ ಸಹಿಸಿಕೊಳ್ಳಲು ಸಾಧ್ಯವಿಲ್ಲ ಎಂದು ದಿನೇಶ್ ಕುಮಾರ್ ತಿಳಿಸಿದ್ದಾರೆ.

ಕರ್ನಾಟಕ ರಕ್ಷಣಾ ವೇದಿಕೆ ನಿಯೋಗದಲ್ಲಿ‌ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಸಣ್ಣೀರಪ್ಪ, ರಾಜ್ಯ ಉಪಾಧ್ಯಕ್ಷ‌ ಬಿ.ಎಚ್.ಸತೀಶ್ ಗೌಡ,‌ ಯುವ ಘಟಕದ ರಾಜ್ಯಾಧ್ಯಕ್ಷ ಟಿ.ಎ.ಧರ್ಮರಾಜ್ ಗೌಡ, ಸಾಮಾಜಿಕ ಜಾಲತಾಣ ಬೆಂಗಳೂರು ನಗರ ಅಧ್ಯಕ್ಷ ನಿತೀಶ್ ಮನುಗೌಡ, ವಿಜಯನಗರ ಕ್ಷೇತ್ರ ಘಟಕದ ಅಧ್ಯಕ್ಷ ಬಾಲು, ಯುವ ಘಟಕದ ಬೆಂಗಳೂರು ನಗರ ಅಧ್ಯಕ್ಷ ಕಾರ್ತಿಕ್ ಸೇರಿದಂತೆ‌ ಹಲವರು ಪಾಲ್ಗೊಂಡಿದ್ದರು.


ಇದನ್ನೂ ಓದಿ: ನೈತಿಕತೆ ಇಲ್ಲದೇ ಬದುಕಲಾಗದು: ಮಾರಲ್ ಪೊಲೀಸಿಂಗ್ ಸಮರ್ಥಿಸಿಕೊಂಡ ಸಿಎಂ ಬಸವರಾಜ ಬೊಮ್ಮಾಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಔದು ಕರ್ನಾಟಕದಲ್ಲಿ ಕನ್ನಡ ಭಾಷೆಯೆ ಸಾರ್ವಭೌಮ ,ಕನ್ನಡ ಮೊದಲು ನಂತರ ಹಿಂದಿ ,ಇಂಗ್ಲೀಷ್ ಭಾಷೆ ಸರಿಯಾದ ವಿಚಾರವೇ ,ಆದರೆ ಮೊದಲು ಈ ಹೋರಾಟ ಗಾರರು ಕನ್ನಡ ಭಾಷೆಯ ಇತಿಹಾಸ ,ವ್ಯಾಕರಣ ,ನಾಡಗೀತೆ ಗಳನ್ನ ಮೊದಲು ತಿಳಿದಿರಬೇಕು .

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....