Homeಕರ್ನಾಟಕಕರ್ನಾಟಕದಲ್ಲಿ ಕನ್ನಡ ಕಡೆಗಣಿಸಿದರೆ ಸಹಿಸುವುದಿಲ್ಲ; ಕರವೇ ಎಚ್ಚರಿಕೆ

ಕರ್ನಾಟಕದಲ್ಲಿ ಕನ್ನಡ ಕಡೆಗಣಿಸಿದರೆ ಸಹಿಸುವುದಿಲ್ಲ; ಕರವೇ ಎಚ್ಚರಿಕೆ

- Advertisement -
- Advertisement -

ಇತ್ತೀಚಿಗೆ ಕರ್ನಾಟಕದಲ್ಲಿ ಸರ್ಕಾರಿ ಹಾಗೂ ಖಾಸಗೀ ಕಾರ್ಯಕ್ರಮಗಳಲ್ಲಿ ಕನ್ನಡ ಭಾಷೆ ಕಡೆಗಣಿಸುತ್ತಿದ್ದು ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಮಾತ್ರ ಕಾರ್ಯಕ್ರಮ ನಡೆಸುತ್ತಿರುವುದಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಆಕ್ಷೇಪ ವ್ಯಕ್ತಪಡಿಸಿದೆ. ಇನ್ನು ಮುಂದೆ ಕರ್ನಾಟಕದಲ್ಲಿ ಕನ್ನಡ ಕಡೆಗಣಿಸಿದರೆ ಸಹಿಸುವುದಿಲ್ಲ ಎಂದು ಕರವೇ ಎಚ್ಚರಿಕೆ ನೀಡಿದೆ.

ಎಸ್‌ಡಿಎಸ್ ಕ್ಷಯರೋಗ ಸಂಶೋಧನಾ ಕೇಂದ್ರ ಹಾಗೂ ರಾಜೀವ್ ಗಾಂಧಿ ಎದೆರೋಗ ಸಂಸ್ಥೆ ಹಾಗು ರಾಷ್ಟ್ರೀಯ ನರವಿಜ್ಞಾನ ಮತ್ತು ಮಾನಸಿಕ ಆರೋಗ್ಯ ಸಂಸ್ಥೆಗಳಲ್ಲಿ 10-10-2021ರಂದು ನಡೆದ ಕಾರ್ಯಕ್ರಮಗಳಲ್ಲಿ ಕನ್ನಡವನ್ನು ಕಡೆಗಣಿಸಲಾಗಿತ್ತು. ಕಾರ್ಯಕ್ರಮದ ಬ್ಯಾನರ್ ಸೇರಿದಂತೆ ಎಲ್ಲವನ್ನು ಹಿಂದಿ, ಇಂಗ್ಲಿಷ್‌ನಲ್ಲಿ ನಡೆಸಲಾಗಿತ್ತು. ಈ ಹಿನ್ನೆಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಮುಖಂಡರು ಇಂದು ಆ ಸಂಸ್ಥೆಗಳಿಗೆ ಭೇಟಿ ನೀಡಿ ಮುಂದೆ ಕನ್ನಡವನ್ನೇ ಬಳಸುವಂತೆ ಒತ್ತಾಯಿಸಲಾಗಿದೆ.

ಈ ಕುರಿತು ಹೇಳಿಕೆ ನೀಡಿರುವ ಕರವೇ ಸಾಮಾಜಿಕ‌ ಜಾಲತಾಣ ಮಖ್ಯಸ್ಥರಾದ ದಿನೇಶ್ ಕುಮಾರ್ ಎಸ್.ಸಿ, “ನಿಮ್ಹಾನ್ಸ್ ನಿರ್ದೇಶಕಿ ಡಾ.ಪ್ರತಿಮಾ ಹಾಗು ರಾಜೀವ್ ಗಾಂಧಿ‌ ಆಸ್ಪತ್ರೆಯ ನಿರ್ದೇಶಕ‌‌ ಡಾ.ನಾಗರಾಜ್ ಅವರಿಗೆ ಖಂಡನಾ ಪತ್ರವನ್ನು ನೀಡಿದ್ದೇವೆ. ಆಗಿರುವ ಪ್ರಮಾದವನ್ನು ಮತ್ತೆ ಮರುಕಳಿಸದಂತೆ ನೋಡಿಕೊಳ್ಳಬೇಕು ಎಂದು ಎಚ್ಚರಿಕೆ ನೀಡಿದ್ದೇವೆ. ಈ ಸಂದರ್ಭದಲ್ಲಿ ಕನ್ನಡ ಕಡೆಗಣನೆ ಆಗಿರುವುದನ್ನು ಒಪ್ಪಿಕೊಂಡು‌‌ ಕ್ಷಮೆ ಯಾಚಿಸಿದ ನಿರ್ದೇಶಕರು ಇನ್ನುಮುಂದೆ ಈ ರೀತಿಯ ತಪ್ಪುಗಳು ಆಗದಂತೆ ನೋಡಿಕೊಳ್ಳುವುದಾಗಿ ವಾಗ್ದಾನ ಮಾಡಿದರು” ಎಂದಿದ್ದಾರೆ.

ನಿಮ್ಹಾನ್ಸ್ ಸಂಸ್ಥೆಗೆ ನೂರು ಎಕರೆ ಜಾಗ ನೀಡಿ, ಅಡಿಗಲ್ಲು ಹಾಕಿ ಸ್ಥಾಪಿಸಿದ್ದು ರಾಜರ್ಷಿ‌ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು. 1936ರಲ್ಲಿ ನಿಮ್ಹಾನ್ಸ್ ಸಂಸ್ಥೆಯನ್ನು ಸ್ಥಾಪಿಸಿದಾಗ ಹಿಂದಿ ಎಂಬ ಭಾಷೆಯ ಪರಿಚಯವೇ ಕನ್ನಡಿಗರಿಗೆ ಇರಲಿಲ್ಲ. ಇಂಥ‌ ಸಂಸ್ಥೆಯಲ್ಲಿ ಹಿಂದಿ ನುಡಿಗೆ ಹೆಚ್ಚುಗಾರಿಕೆ ನೀಡಿ,‌ ಕನ್ನಡಕ್ಕೆ ಅಪಮಾನ ಎಸಗಿದರೆ ಸಹಿಸಿಕೊಳ್ಳಲು ಸಾಧ್ಯವಿಲ್ಲ ಎಂದು ದಿನೇಶ್ ಕುಮಾರ್ ತಿಳಿಸಿದ್ದಾರೆ.

ಕರ್ನಾಟಕ ರಕ್ಷಣಾ ವೇದಿಕೆ ನಿಯೋಗದಲ್ಲಿ‌ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಸಣ್ಣೀರಪ್ಪ, ರಾಜ್ಯ ಉಪಾಧ್ಯಕ್ಷ‌ ಬಿ.ಎಚ್.ಸತೀಶ್ ಗೌಡ,‌ ಯುವ ಘಟಕದ ರಾಜ್ಯಾಧ್ಯಕ್ಷ ಟಿ.ಎ.ಧರ್ಮರಾಜ್ ಗೌಡ, ಸಾಮಾಜಿಕ ಜಾಲತಾಣ ಬೆಂಗಳೂರು ನಗರ ಅಧ್ಯಕ್ಷ ನಿತೀಶ್ ಮನುಗೌಡ, ವಿಜಯನಗರ ಕ್ಷೇತ್ರ ಘಟಕದ ಅಧ್ಯಕ್ಷ ಬಾಲು, ಯುವ ಘಟಕದ ಬೆಂಗಳೂರು ನಗರ ಅಧ್ಯಕ್ಷ ಕಾರ್ತಿಕ್ ಸೇರಿದಂತೆ‌ ಹಲವರು ಪಾಲ್ಗೊಂಡಿದ್ದರು.


ಇದನ್ನೂ ಓದಿ: ನೈತಿಕತೆ ಇಲ್ಲದೇ ಬದುಕಲಾಗದು: ಮಾರಲ್ ಪೊಲೀಸಿಂಗ್ ಸಮರ್ಥಿಸಿಕೊಂಡ ಸಿಎಂ ಬಸವರಾಜ ಬೊಮ್ಮಾಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಔದು ಕರ್ನಾಟಕದಲ್ಲಿ ಕನ್ನಡ ಭಾಷೆಯೆ ಸಾರ್ವಭೌಮ ,ಕನ್ನಡ ಮೊದಲು ನಂತರ ಹಿಂದಿ ,ಇಂಗ್ಲೀಷ್ ಭಾಷೆ ಸರಿಯಾದ ವಿಚಾರವೇ ,ಆದರೆ ಮೊದಲು ಈ ಹೋರಾಟ ಗಾರರು ಕನ್ನಡ ಭಾಷೆಯ ಇತಿಹಾಸ ,ವ್ಯಾಕರಣ ,ನಾಡಗೀತೆ ಗಳನ್ನ ಮೊದಲು ತಿಳಿದಿರಬೇಕು .

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...