Homeಕರ್ನಾಟಕಕರ್ನಾಟಕದಲ್ಲಿ ಕನ್ನಡ ಕಡೆಗಣಿಸಿದರೆ ಸಹಿಸುವುದಿಲ್ಲ; ಕರವೇ ಎಚ್ಚರಿಕೆ

ಕರ್ನಾಟಕದಲ್ಲಿ ಕನ್ನಡ ಕಡೆಗಣಿಸಿದರೆ ಸಹಿಸುವುದಿಲ್ಲ; ಕರವೇ ಎಚ್ಚರಿಕೆ

- Advertisement -
- Advertisement -

ಇತ್ತೀಚಿಗೆ ಕರ್ನಾಟಕದಲ್ಲಿ ಸರ್ಕಾರಿ ಹಾಗೂ ಖಾಸಗೀ ಕಾರ್ಯಕ್ರಮಗಳಲ್ಲಿ ಕನ್ನಡ ಭಾಷೆ ಕಡೆಗಣಿಸುತ್ತಿದ್ದು ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಮಾತ್ರ ಕಾರ್ಯಕ್ರಮ ನಡೆಸುತ್ತಿರುವುದಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಆಕ್ಷೇಪ ವ್ಯಕ್ತಪಡಿಸಿದೆ. ಇನ್ನು ಮುಂದೆ ಕರ್ನಾಟಕದಲ್ಲಿ ಕನ್ನಡ ಕಡೆಗಣಿಸಿದರೆ ಸಹಿಸುವುದಿಲ್ಲ ಎಂದು ಕರವೇ ಎಚ್ಚರಿಕೆ ನೀಡಿದೆ.

ಎಸ್‌ಡಿಎಸ್ ಕ್ಷಯರೋಗ ಸಂಶೋಧನಾ ಕೇಂದ್ರ ಹಾಗೂ ರಾಜೀವ್ ಗಾಂಧಿ ಎದೆರೋಗ ಸಂಸ್ಥೆ ಹಾಗು ರಾಷ್ಟ್ರೀಯ ನರವಿಜ್ಞಾನ ಮತ್ತು ಮಾನಸಿಕ ಆರೋಗ್ಯ ಸಂಸ್ಥೆಗಳಲ್ಲಿ 10-10-2021ರಂದು ನಡೆದ ಕಾರ್ಯಕ್ರಮಗಳಲ್ಲಿ ಕನ್ನಡವನ್ನು ಕಡೆಗಣಿಸಲಾಗಿತ್ತು. ಕಾರ್ಯಕ್ರಮದ ಬ್ಯಾನರ್ ಸೇರಿದಂತೆ ಎಲ್ಲವನ್ನು ಹಿಂದಿ, ಇಂಗ್ಲಿಷ್‌ನಲ್ಲಿ ನಡೆಸಲಾಗಿತ್ತು. ಈ ಹಿನ್ನೆಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಮುಖಂಡರು ಇಂದು ಆ ಸಂಸ್ಥೆಗಳಿಗೆ ಭೇಟಿ ನೀಡಿ ಮುಂದೆ ಕನ್ನಡವನ್ನೇ ಬಳಸುವಂತೆ ಒತ್ತಾಯಿಸಲಾಗಿದೆ.

ಈ ಕುರಿತು ಹೇಳಿಕೆ ನೀಡಿರುವ ಕರವೇ ಸಾಮಾಜಿಕ‌ ಜಾಲತಾಣ ಮಖ್ಯಸ್ಥರಾದ ದಿನೇಶ್ ಕುಮಾರ್ ಎಸ್.ಸಿ, “ನಿಮ್ಹಾನ್ಸ್ ನಿರ್ದೇಶಕಿ ಡಾ.ಪ್ರತಿಮಾ ಹಾಗು ರಾಜೀವ್ ಗಾಂಧಿ‌ ಆಸ್ಪತ್ರೆಯ ನಿರ್ದೇಶಕ‌‌ ಡಾ.ನಾಗರಾಜ್ ಅವರಿಗೆ ಖಂಡನಾ ಪತ್ರವನ್ನು ನೀಡಿದ್ದೇವೆ. ಆಗಿರುವ ಪ್ರಮಾದವನ್ನು ಮತ್ತೆ ಮರುಕಳಿಸದಂತೆ ನೋಡಿಕೊಳ್ಳಬೇಕು ಎಂದು ಎಚ್ಚರಿಕೆ ನೀಡಿದ್ದೇವೆ. ಈ ಸಂದರ್ಭದಲ್ಲಿ ಕನ್ನಡ ಕಡೆಗಣನೆ ಆಗಿರುವುದನ್ನು ಒಪ್ಪಿಕೊಂಡು‌‌ ಕ್ಷಮೆ ಯಾಚಿಸಿದ ನಿರ್ದೇಶಕರು ಇನ್ನುಮುಂದೆ ಈ ರೀತಿಯ ತಪ್ಪುಗಳು ಆಗದಂತೆ ನೋಡಿಕೊಳ್ಳುವುದಾಗಿ ವಾಗ್ದಾನ ಮಾಡಿದರು” ಎಂದಿದ್ದಾರೆ.

ನಿಮ್ಹಾನ್ಸ್ ಸಂಸ್ಥೆಗೆ ನೂರು ಎಕರೆ ಜಾಗ ನೀಡಿ, ಅಡಿಗಲ್ಲು ಹಾಕಿ ಸ್ಥಾಪಿಸಿದ್ದು ರಾಜರ್ಷಿ‌ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು. 1936ರಲ್ಲಿ ನಿಮ್ಹಾನ್ಸ್ ಸಂಸ್ಥೆಯನ್ನು ಸ್ಥಾಪಿಸಿದಾಗ ಹಿಂದಿ ಎಂಬ ಭಾಷೆಯ ಪರಿಚಯವೇ ಕನ್ನಡಿಗರಿಗೆ ಇರಲಿಲ್ಲ. ಇಂಥ‌ ಸಂಸ್ಥೆಯಲ್ಲಿ ಹಿಂದಿ ನುಡಿಗೆ ಹೆಚ್ಚುಗಾರಿಕೆ ನೀಡಿ,‌ ಕನ್ನಡಕ್ಕೆ ಅಪಮಾನ ಎಸಗಿದರೆ ಸಹಿಸಿಕೊಳ್ಳಲು ಸಾಧ್ಯವಿಲ್ಲ ಎಂದು ದಿನೇಶ್ ಕುಮಾರ್ ತಿಳಿಸಿದ್ದಾರೆ.

ಕರ್ನಾಟಕ ರಕ್ಷಣಾ ವೇದಿಕೆ ನಿಯೋಗದಲ್ಲಿ‌ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಸಣ್ಣೀರಪ್ಪ, ರಾಜ್ಯ ಉಪಾಧ್ಯಕ್ಷ‌ ಬಿ.ಎಚ್.ಸತೀಶ್ ಗೌಡ,‌ ಯುವ ಘಟಕದ ರಾಜ್ಯಾಧ್ಯಕ್ಷ ಟಿ.ಎ.ಧರ್ಮರಾಜ್ ಗೌಡ, ಸಾಮಾಜಿಕ ಜಾಲತಾಣ ಬೆಂಗಳೂರು ನಗರ ಅಧ್ಯಕ್ಷ ನಿತೀಶ್ ಮನುಗೌಡ, ವಿಜಯನಗರ ಕ್ಷೇತ್ರ ಘಟಕದ ಅಧ್ಯಕ್ಷ ಬಾಲು, ಯುವ ಘಟಕದ ಬೆಂಗಳೂರು ನಗರ ಅಧ್ಯಕ್ಷ ಕಾರ್ತಿಕ್ ಸೇರಿದಂತೆ‌ ಹಲವರು ಪಾಲ್ಗೊಂಡಿದ್ದರು.


ಇದನ್ನೂ ಓದಿ: ನೈತಿಕತೆ ಇಲ್ಲದೇ ಬದುಕಲಾಗದು: ಮಾರಲ್ ಪೊಲೀಸಿಂಗ್ ಸಮರ್ಥಿಸಿಕೊಂಡ ಸಿಎಂ ಬಸವರಾಜ ಬೊಮ್ಮಾಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಔದು ಕರ್ನಾಟಕದಲ್ಲಿ ಕನ್ನಡ ಭಾಷೆಯೆ ಸಾರ್ವಭೌಮ ,ಕನ್ನಡ ಮೊದಲು ನಂತರ ಹಿಂದಿ ,ಇಂಗ್ಲೀಷ್ ಭಾಷೆ ಸರಿಯಾದ ವಿಚಾರವೇ ,ಆದರೆ ಮೊದಲು ಈ ಹೋರಾಟ ಗಾರರು ಕನ್ನಡ ಭಾಷೆಯ ಇತಿಹಾಸ ,ವ್ಯಾಕರಣ ,ನಾಡಗೀತೆ ಗಳನ್ನ ಮೊದಲು ತಿಳಿದಿರಬೇಕು .

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...