Homeಕರ್ನಾಟಕಅಪ್ಪು ಹಾದಿಯಲ್ಲಿ ನಡೆಯುತ್ತಿರುವ ಅಭಿಮಾನಿಗಳು: ನೇತ್ರದಾನಕ್ಕೆ ಸಾಲುಗಟ್ಟಿ ನಿಂತ ಫ್ಯಾನ್ಸ್

ಅಪ್ಪು ಹಾದಿಯಲ್ಲಿ ನಡೆಯುತ್ತಿರುವ ಅಭಿಮಾನಿಗಳು: ನೇತ್ರದಾನಕ್ಕೆ ಸಾಲುಗಟ್ಟಿ ನಿಂತ ಫ್ಯಾನ್ಸ್

- Advertisement -
- Advertisement -

ನೇತ್ರದಾನ ಮಾಡಿ ನಾಲ್ವರ ಬಾಳಿಗೆ ಬೆಳಕಾಗಿರುವ ನಟ ಪುನೀತ್ ರಾಜ್‌ಕುಮಾರ್‌ ಅವರ ಹಾದಿಯಲ್ಲಿ ನಡೆಯಲು ನಿರ್ಧರಿಸಿರುವ ಅವರ ಅಭಿಮಾನಿ ಬಳಗ ತಾವು ಕೂಡ ನೇತ್ರದಾನ ಮಾಡಲು ಮುಂದಾಗಿದ್ದಾರೆ. ಕಳೆದ ಎರಡು ದಿನಗಳಿಂದ ಬಳ್ಳಾರಿಯಲ್ಲಿ ಸರತಿ ಸಾಲಿನಲ್ಲಿ ನಿಂತು ನೇತ್ರದಾನಕ್ಕೆ ನೋಂದಣಿ ಮಾಡಿಸುತ್ತಿದ್ದಾರೆ.

ತಮ್ಮ ಕಣ್ಣುಗಳನ್ನು ದಾನ ಮಾಡಿದ್ದ ಅಪ್ಪು ಅವರಿಂದ ಸ್ಪೂರ್ತಿ ಪಡೆದ ಬಳಿಕ, ಅವರ ಅಭಿಮಾನಿಗಳ ಸಂಖ್ಯೆಯನ್ನು ನೋಡಿ ಬಳ್ಳಾರಿ ಜಿಲ್ಲೆಯ ಆರೋಗ್ಯ ಅಧಿಕಾರಿಗಳು ಅಚ್ಚರಿಗೊಂಡಿದ್ದಾರೆ. ತಮ್ಮ ಸಾವಿನ ನಂತರ ತಮ್ಮ ಕಣ್ಣುಗಳನ್ನು ದಾನ ಮಾಡವ ಪ್ರತಿಜ್ಞೆಗೆ ಮುಂದಾಗಿದ್ದಾರೆ.

ಹಲವರು ಆಸ್ಪತ್ರೆಗಳಿಗೆ ತೆರಳಿ ತಮ್ಮ ಕಣ್ಣುಗಳನ್ನು ದಾನ ಮಾಡುವುದಾಗಿ ಬರೆದುಕೊಡುತ್ತಿದ್ದಾರೆ. ಅದಕ್ಕಾಗಿ ಆಸ್ಪತ್ರೆ ಮತ್ತು ಖಾಸಗಿ ವೈದ್ಯರಿಗೆ ಕರೆ ಮಾಡಿ, ನೇತ್ರದಾನದ ವಿಧಾನಗಳ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ಪುನೀತ್ ಅವರ ತಂದೆ ಡಾ. ರಾಜ್‌ಕುಮಾರ್ ನಿಧನರಾದಾಗ ಅವರ ಕಣ್ಣುಗಳನ್ನು ದಾನ ಮಾಡಿದ್ದರು. ಆಗಲೂ ಇದೇ ರೀತಿಯ ವಾತಾವರಣ ಕಂಡುಬಂದಿತ್ತು.

ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಪುನೀತ್ ರಾಜ್‌ಕುಮಾರ್ ಅವರು ಹಲವಾರು ಸಿನಿಮಾಗಳನ್ನು ಚಿತ್ರೀಕರಿಸಿದ್ದಾರೆ. ಹೀಗಾಗಿ, ಈ ಎರಡೂ ಜಿಲ್ಲೆಗಳಲ್ಲಿ ಅಪಾರ ಅಭಿಮಾನಿಗಳಿದ್ದಾರೆ. ತಮ್ಮ ನೆಚ್ಚಿನ ನಟನನ್ನು ಕಳೆದುಕೊಂಡ ಅಭಿಮಾನಿಗಳು, ಪುನೀತ್ ಅವರ ಹಾದಿಯಲ್ಲಿ ಸಾಗಿ ಶ್ರದ್ಧಾಂಜಲಿ ಅರ್ಪಿಸುವ ನಿಟ್ಟಿನಲ್ಲಿ ನೇತ್ರದಾನದ ವಾಗ್ದಾನ ಕೈಗೊಳ್ಳುತ್ತಿರುವುದು ಹೆಚ್ಚಾಗಿದೆ.

ಇದನ್ನೂ ಓದಿ: ಕನ್ನಡ ನಟರ ಅಭಿಮಾನಿಗಳಿಂದ ’ಫ್ಯಾನ್ಸ್ ವಾರ್‌’ಗೆ ಫುಲ್ ಸ್ಟಾಪ್!

ಇನ್ನು ಅಪ್ಪು ಅಭಿಮಾನಿಗಳ ಆಶಯದಂತೆ ಹೊಸಪೇಟೆಯಲ್ಲಿ ಪುನೀತ್ ರಾಜ್ ಕುಮಾರ್ ಪ್ರತಿಮೆ ಸ್ಥಾಪಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಈಗಾಗಲೇ ಹೇಳಿದ್ದಾರೆ. ಬಳ್ಳಾರಿ ಮತ್ತು ವಿಜಯನಗರದ ಅಭಿಮಾನಿಗಳು ದೇಣಿಗೆ ನೀಡಲು ಮುಂದಾಗಿದ್ದಾರೆ.

ಅಪ್ಪು ಅವರ ಕಣ್ಣುಗಳನ್ನು ಆಧುನಿಕ ತಂತ್ರಜ್ಞಾನದೊಂದಿಗೆ ಕಸಿ ಮಾಡಿ ನಾಲ್ಕು ಜನರಿಗೆ ಕಣ್ಣುಗಳನ್ನು ದಾನ ಮಾಡಿರುವುದು ಹಲವು ಜನರ ಮೇಲೆ ಪರಿಣಾಮ ಬೀರಿದೆ. ಹಲವರು ತಮ್ಮ ಕಣ್ಣುಗಳನ್ನೂ ತಾವು ನಿಧನ ಹೊಂದಿದ ಬಳಿಕ ಅದೇ ರೀತಿಯಲ್ಲಿ ಬಳಸಿಕೊಳ್ಳಬೇಕು ಎಂದು ಹೇಳುತ್ತಿದ್ದಾರೆ.

ಬಳ್ಳಾರಿ ಜಿಲ್ಲಾ ಅಂಧತ್ವ ನಿಯಂತ್ರಣ ಕಾರ್ಯಕ್ರಮದ ಅಧಿಕಾರಿ ಡಾ.ಸಿ.ರಾಜಶೇಖರ್ ರೆಡ್ಡಿ, “ಕಳೆದ ಎರಡು ದಿನಗಳಿಂದ ಅನೇಕರು ನೇತ್ರದಾನ ಮಾಡುವ ಬಗ್ಗೆ ವಿಚಾರಿಸುತ್ತಿದ್ದಾರೆ. ಇದು ಸರಳ ಪ್ರಕ್ರಿಯೆಯಾಗಿದ್ದು, ಫಾರ್ಮ್ ಅನ್ನು ಭರ್ತಿ ಮಾಡಬೇಕು. ಫಾರ್ಮ್‌ನಲ್ಲಿ ವೈಯಕ್ತಿಕ ವಿವರಗಳನ್ನು ನೀಡಬೇಕು. ದಾನಕ್ಕಾಗಿ ತಮ್ಮ ಕಣ್ಣುಗಳನ್ನು ಒತ್ತೆ ಇಟ್ಟಿರುವ ವ್ಯಕ್ತಿಯು ಸತ್ತರೆ ಹತ್ತಿರದ ಕುಟುಂಬದ ಸದಸ್ಯರು ವೈದ್ಯಕೀಯ ತಂಡಕ್ಕೆ ತಿಳಿಸುತ್ತಾರೆ. ದಾನಿಯ ಮರಣದ ಆರು ಗಂಟೆಗಳ ಒಳಗೆ ನಾವು ಅವರ ಕಣ್ಣುಗಳನ್ನು ತೆಗೆದುಕೊಳ್ಳುತ್ತೇವೆ. ಅಲ್ಲದೆ, ನಾವು ನೇತ್ರದಾನ ಪ್ರಕ್ರಿಯೆಯನ್ನು ಮತ್ತಷ್ಟು ಸರಳಗೊಳಿಸಲು ಯೋಜಿಸುತ್ತಿದ್ದೇವೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ನಾಲ್ವರಿಗೆ ಬೆಳಕಾದ ನಟ ಪುನೀತ್‌ ಕಣ್ಣುಗಳು: ರಾಜ್ಯದಲ್ಲಿ ಮೊದಲ ಬಾರಿಗೆ ಹೊಸ ತಂತ್ರ ಬಳಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...