Homeಕರ್ನಾಟಕಅಪ್ಪು ಹಾದಿಯಲ್ಲಿ ನಡೆಯುತ್ತಿರುವ ಅಭಿಮಾನಿಗಳು: ನೇತ್ರದಾನಕ್ಕೆ ಸಾಲುಗಟ್ಟಿ ನಿಂತ ಫ್ಯಾನ್ಸ್

ಅಪ್ಪು ಹಾದಿಯಲ್ಲಿ ನಡೆಯುತ್ತಿರುವ ಅಭಿಮಾನಿಗಳು: ನೇತ್ರದಾನಕ್ಕೆ ಸಾಲುಗಟ್ಟಿ ನಿಂತ ಫ್ಯಾನ್ಸ್

- Advertisement -
- Advertisement -

ನೇತ್ರದಾನ ಮಾಡಿ ನಾಲ್ವರ ಬಾಳಿಗೆ ಬೆಳಕಾಗಿರುವ ನಟ ಪುನೀತ್ ರಾಜ್‌ಕುಮಾರ್‌ ಅವರ ಹಾದಿಯಲ್ಲಿ ನಡೆಯಲು ನಿರ್ಧರಿಸಿರುವ ಅವರ ಅಭಿಮಾನಿ ಬಳಗ ತಾವು ಕೂಡ ನೇತ್ರದಾನ ಮಾಡಲು ಮುಂದಾಗಿದ್ದಾರೆ. ಕಳೆದ ಎರಡು ದಿನಗಳಿಂದ ಬಳ್ಳಾರಿಯಲ್ಲಿ ಸರತಿ ಸಾಲಿನಲ್ಲಿ ನಿಂತು ನೇತ್ರದಾನಕ್ಕೆ ನೋಂದಣಿ ಮಾಡಿಸುತ್ತಿದ್ದಾರೆ.

ತಮ್ಮ ಕಣ್ಣುಗಳನ್ನು ದಾನ ಮಾಡಿದ್ದ ಅಪ್ಪು ಅವರಿಂದ ಸ್ಪೂರ್ತಿ ಪಡೆದ ಬಳಿಕ, ಅವರ ಅಭಿಮಾನಿಗಳ ಸಂಖ್ಯೆಯನ್ನು ನೋಡಿ ಬಳ್ಳಾರಿ ಜಿಲ್ಲೆಯ ಆರೋಗ್ಯ ಅಧಿಕಾರಿಗಳು ಅಚ್ಚರಿಗೊಂಡಿದ್ದಾರೆ. ತಮ್ಮ ಸಾವಿನ ನಂತರ ತಮ್ಮ ಕಣ್ಣುಗಳನ್ನು ದಾನ ಮಾಡವ ಪ್ರತಿಜ್ಞೆಗೆ ಮುಂದಾಗಿದ್ದಾರೆ.

ಹಲವರು ಆಸ್ಪತ್ರೆಗಳಿಗೆ ತೆರಳಿ ತಮ್ಮ ಕಣ್ಣುಗಳನ್ನು ದಾನ ಮಾಡುವುದಾಗಿ ಬರೆದುಕೊಡುತ್ತಿದ್ದಾರೆ. ಅದಕ್ಕಾಗಿ ಆಸ್ಪತ್ರೆ ಮತ್ತು ಖಾಸಗಿ ವೈದ್ಯರಿಗೆ ಕರೆ ಮಾಡಿ, ನೇತ್ರದಾನದ ವಿಧಾನಗಳ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ಪುನೀತ್ ಅವರ ತಂದೆ ಡಾ. ರಾಜ್‌ಕುಮಾರ್ ನಿಧನರಾದಾಗ ಅವರ ಕಣ್ಣುಗಳನ್ನು ದಾನ ಮಾಡಿದ್ದರು. ಆಗಲೂ ಇದೇ ರೀತಿಯ ವಾತಾವರಣ ಕಂಡುಬಂದಿತ್ತು.

ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಪುನೀತ್ ರಾಜ್‌ಕುಮಾರ್ ಅವರು ಹಲವಾರು ಸಿನಿಮಾಗಳನ್ನು ಚಿತ್ರೀಕರಿಸಿದ್ದಾರೆ. ಹೀಗಾಗಿ, ಈ ಎರಡೂ ಜಿಲ್ಲೆಗಳಲ್ಲಿ ಅಪಾರ ಅಭಿಮಾನಿಗಳಿದ್ದಾರೆ. ತಮ್ಮ ನೆಚ್ಚಿನ ನಟನನ್ನು ಕಳೆದುಕೊಂಡ ಅಭಿಮಾನಿಗಳು, ಪುನೀತ್ ಅವರ ಹಾದಿಯಲ್ಲಿ ಸಾಗಿ ಶ್ರದ್ಧಾಂಜಲಿ ಅರ್ಪಿಸುವ ನಿಟ್ಟಿನಲ್ಲಿ ನೇತ್ರದಾನದ ವಾಗ್ದಾನ ಕೈಗೊಳ್ಳುತ್ತಿರುವುದು ಹೆಚ್ಚಾಗಿದೆ.

ಇದನ್ನೂ ಓದಿ: ಕನ್ನಡ ನಟರ ಅಭಿಮಾನಿಗಳಿಂದ ’ಫ್ಯಾನ್ಸ್ ವಾರ್‌’ಗೆ ಫುಲ್ ಸ್ಟಾಪ್!

ಇನ್ನು ಅಪ್ಪು ಅಭಿಮಾನಿಗಳ ಆಶಯದಂತೆ ಹೊಸಪೇಟೆಯಲ್ಲಿ ಪುನೀತ್ ರಾಜ್ ಕುಮಾರ್ ಪ್ರತಿಮೆ ಸ್ಥಾಪಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಈಗಾಗಲೇ ಹೇಳಿದ್ದಾರೆ. ಬಳ್ಳಾರಿ ಮತ್ತು ವಿಜಯನಗರದ ಅಭಿಮಾನಿಗಳು ದೇಣಿಗೆ ನೀಡಲು ಮುಂದಾಗಿದ್ದಾರೆ.

ಅಪ್ಪು ಅವರ ಕಣ್ಣುಗಳನ್ನು ಆಧುನಿಕ ತಂತ್ರಜ್ಞಾನದೊಂದಿಗೆ ಕಸಿ ಮಾಡಿ ನಾಲ್ಕು ಜನರಿಗೆ ಕಣ್ಣುಗಳನ್ನು ದಾನ ಮಾಡಿರುವುದು ಹಲವು ಜನರ ಮೇಲೆ ಪರಿಣಾಮ ಬೀರಿದೆ. ಹಲವರು ತಮ್ಮ ಕಣ್ಣುಗಳನ್ನೂ ತಾವು ನಿಧನ ಹೊಂದಿದ ಬಳಿಕ ಅದೇ ರೀತಿಯಲ್ಲಿ ಬಳಸಿಕೊಳ್ಳಬೇಕು ಎಂದು ಹೇಳುತ್ತಿದ್ದಾರೆ.

ಬಳ್ಳಾರಿ ಜಿಲ್ಲಾ ಅಂಧತ್ವ ನಿಯಂತ್ರಣ ಕಾರ್ಯಕ್ರಮದ ಅಧಿಕಾರಿ ಡಾ.ಸಿ.ರಾಜಶೇಖರ್ ರೆಡ್ಡಿ, “ಕಳೆದ ಎರಡು ದಿನಗಳಿಂದ ಅನೇಕರು ನೇತ್ರದಾನ ಮಾಡುವ ಬಗ್ಗೆ ವಿಚಾರಿಸುತ್ತಿದ್ದಾರೆ. ಇದು ಸರಳ ಪ್ರಕ್ರಿಯೆಯಾಗಿದ್ದು, ಫಾರ್ಮ್ ಅನ್ನು ಭರ್ತಿ ಮಾಡಬೇಕು. ಫಾರ್ಮ್‌ನಲ್ಲಿ ವೈಯಕ್ತಿಕ ವಿವರಗಳನ್ನು ನೀಡಬೇಕು. ದಾನಕ್ಕಾಗಿ ತಮ್ಮ ಕಣ್ಣುಗಳನ್ನು ಒತ್ತೆ ಇಟ್ಟಿರುವ ವ್ಯಕ್ತಿಯು ಸತ್ತರೆ ಹತ್ತಿರದ ಕುಟುಂಬದ ಸದಸ್ಯರು ವೈದ್ಯಕೀಯ ತಂಡಕ್ಕೆ ತಿಳಿಸುತ್ತಾರೆ. ದಾನಿಯ ಮರಣದ ಆರು ಗಂಟೆಗಳ ಒಳಗೆ ನಾವು ಅವರ ಕಣ್ಣುಗಳನ್ನು ತೆಗೆದುಕೊಳ್ಳುತ್ತೇವೆ. ಅಲ್ಲದೆ, ನಾವು ನೇತ್ರದಾನ ಪ್ರಕ್ರಿಯೆಯನ್ನು ಮತ್ತಷ್ಟು ಸರಳಗೊಳಿಸಲು ಯೋಜಿಸುತ್ತಿದ್ದೇವೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ನಾಲ್ವರಿಗೆ ಬೆಳಕಾದ ನಟ ಪುನೀತ್‌ ಕಣ್ಣುಗಳು: ರಾಜ್ಯದಲ್ಲಿ ಮೊದಲ ಬಾರಿಗೆ ಹೊಸ ತಂತ್ರ ಬಳಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...