Homeಕರ್ನಾಟಕಅಪ್ಪು ಹಾದಿಯಲ್ಲಿ ನಡೆಯುತ್ತಿರುವ ಅಭಿಮಾನಿಗಳು: ನೇತ್ರದಾನಕ್ಕೆ ಸಾಲುಗಟ್ಟಿ ನಿಂತ ಫ್ಯಾನ್ಸ್

ಅಪ್ಪು ಹಾದಿಯಲ್ಲಿ ನಡೆಯುತ್ತಿರುವ ಅಭಿಮಾನಿಗಳು: ನೇತ್ರದಾನಕ್ಕೆ ಸಾಲುಗಟ್ಟಿ ನಿಂತ ಫ್ಯಾನ್ಸ್

- Advertisement -
- Advertisement -

ನೇತ್ರದಾನ ಮಾಡಿ ನಾಲ್ವರ ಬಾಳಿಗೆ ಬೆಳಕಾಗಿರುವ ನಟ ಪುನೀತ್ ರಾಜ್‌ಕುಮಾರ್‌ ಅವರ ಹಾದಿಯಲ್ಲಿ ನಡೆಯಲು ನಿರ್ಧರಿಸಿರುವ ಅವರ ಅಭಿಮಾನಿ ಬಳಗ ತಾವು ಕೂಡ ನೇತ್ರದಾನ ಮಾಡಲು ಮುಂದಾಗಿದ್ದಾರೆ. ಕಳೆದ ಎರಡು ದಿನಗಳಿಂದ ಬಳ್ಳಾರಿಯಲ್ಲಿ ಸರತಿ ಸಾಲಿನಲ್ಲಿ ನಿಂತು ನೇತ್ರದಾನಕ್ಕೆ ನೋಂದಣಿ ಮಾಡಿಸುತ್ತಿದ್ದಾರೆ.

ತಮ್ಮ ಕಣ್ಣುಗಳನ್ನು ದಾನ ಮಾಡಿದ್ದ ಅಪ್ಪು ಅವರಿಂದ ಸ್ಪೂರ್ತಿ ಪಡೆದ ಬಳಿಕ, ಅವರ ಅಭಿಮಾನಿಗಳ ಸಂಖ್ಯೆಯನ್ನು ನೋಡಿ ಬಳ್ಳಾರಿ ಜಿಲ್ಲೆಯ ಆರೋಗ್ಯ ಅಧಿಕಾರಿಗಳು ಅಚ್ಚರಿಗೊಂಡಿದ್ದಾರೆ. ತಮ್ಮ ಸಾವಿನ ನಂತರ ತಮ್ಮ ಕಣ್ಣುಗಳನ್ನು ದಾನ ಮಾಡವ ಪ್ರತಿಜ್ಞೆಗೆ ಮುಂದಾಗಿದ್ದಾರೆ.

ಹಲವರು ಆಸ್ಪತ್ರೆಗಳಿಗೆ ತೆರಳಿ ತಮ್ಮ ಕಣ್ಣುಗಳನ್ನು ದಾನ ಮಾಡುವುದಾಗಿ ಬರೆದುಕೊಡುತ್ತಿದ್ದಾರೆ. ಅದಕ್ಕಾಗಿ ಆಸ್ಪತ್ರೆ ಮತ್ತು ಖಾಸಗಿ ವೈದ್ಯರಿಗೆ ಕರೆ ಮಾಡಿ, ನೇತ್ರದಾನದ ವಿಧಾನಗಳ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ಪುನೀತ್ ಅವರ ತಂದೆ ಡಾ. ರಾಜ್‌ಕುಮಾರ್ ನಿಧನರಾದಾಗ ಅವರ ಕಣ್ಣುಗಳನ್ನು ದಾನ ಮಾಡಿದ್ದರು. ಆಗಲೂ ಇದೇ ರೀತಿಯ ವಾತಾವರಣ ಕಂಡುಬಂದಿತ್ತು.

ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಪುನೀತ್ ರಾಜ್‌ಕುಮಾರ್ ಅವರು ಹಲವಾರು ಸಿನಿಮಾಗಳನ್ನು ಚಿತ್ರೀಕರಿಸಿದ್ದಾರೆ. ಹೀಗಾಗಿ, ಈ ಎರಡೂ ಜಿಲ್ಲೆಗಳಲ್ಲಿ ಅಪಾರ ಅಭಿಮಾನಿಗಳಿದ್ದಾರೆ. ತಮ್ಮ ನೆಚ್ಚಿನ ನಟನನ್ನು ಕಳೆದುಕೊಂಡ ಅಭಿಮಾನಿಗಳು, ಪುನೀತ್ ಅವರ ಹಾದಿಯಲ್ಲಿ ಸಾಗಿ ಶ್ರದ್ಧಾಂಜಲಿ ಅರ್ಪಿಸುವ ನಿಟ್ಟಿನಲ್ಲಿ ನೇತ್ರದಾನದ ವಾಗ್ದಾನ ಕೈಗೊಳ್ಳುತ್ತಿರುವುದು ಹೆಚ್ಚಾಗಿದೆ.

ಇದನ್ನೂ ಓದಿ: ಕನ್ನಡ ನಟರ ಅಭಿಮಾನಿಗಳಿಂದ ’ಫ್ಯಾನ್ಸ್ ವಾರ್‌’ಗೆ ಫುಲ್ ಸ್ಟಾಪ್!

ಇನ್ನು ಅಪ್ಪು ಅಭಿಮಾನಿಗಳ ಆಶಯದಂತೆ ಹೊಸಪೇಟೆಯಲ್ಲಿ ಪುನೀತ್ ರಾಜ್ ಕುಮಾರ್ ಪ್ರತಿಮೆ ಸ್ಥಾಪಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಈಗಾಗಲೇ ಹೇಳಿದ್ದಾರೆ. ಬಳ್ಳಾರಿ ಮತ್ತು ವಿಜಯನಗರದ ಅಭಿಮಾನಿಗಳು ದೇಣಿಗೆ ನೀಡಲು ಮುಂದಾಗಿದ್ದಾರೆ.

ಅಪ್ಪು ಅವರ ಕಣ್ಣುಗಳನ್ನು ಆಧುನಿಕ ತಂತ್ರಜ್ಞಾನದೊಂದಿಗೆ ಕಸಿ ಮಾಡಿ ನಾಲ್ಕು ಜನರಿಗೆ ಕಣ್ಣುಗಳನ್ನು ದಾನ ಮಾಡಿರುವುದು ಹಲವು ಜನರ ಮೇಲೆ ಪರಿಣಾಮ ಬೀರಿದೆ. ಹಲವರು ತಮ್ಮ ಕಣ್ಣುಗಳನ್ನೂ ತಾವು ನಿಧನ ಹೊಂದಿದ ಬಳಿಕ ಅದೇ ರೀತಿಯಲ್ಲಿ ಬಳಸಿಕೊಳ್ಳಬೇಕು ಎಂದು ಹೇಳುತ್ತಿದ್ದಾರೆ.

ಬಳ್ಳಾರಿ ಜಿಲ್ಲಾ ಅಂಧತ್ವ ನಿಯಂತ್ರಣ ಕಾರ್ಯಕ್ರಮದ ಅಧಿಕಾರಿ ಡಾ.ಸಿ.ರಾಜಶೇಖರ್ ರೆಡ್ಡಿ, “ಕಳೆದ ಎರಡು ದಿನಗಳಿಂದ ಅನೇಕರು ನೇತ್ರದಾನ ಮಾಡುವ ಬಗ್ಗೆ ವಿಚಾರಿಸುತ್ತಿದ್ದಾರೆ. ಇದು ಸರಳ ಪ್ರಕ್ರಿಯೆಯಾಗಿದ್ದು, ಫಾರ್ಮ್ ಅನ್ನು ಭರ್ತಿ ಮಾಡಬೇಕು. ಫಾರ್ಮ್‌ನಲ್ಲಿ ವೈಯಕ್ತಿಕ ವಿವರಗಳನ್ನು ನೀಡಬೇಕು. ದಾನಕ್ಕಾಗಿ ತಮ್ಮ ಕಣ್ಣುಗಳನ್ನು ಒತ್ತೆ ಇಟ್ಟಿರುವ ವ್ಯಕ್ತಿಯು ಸತ್ತರೆ ಹತ್ತಿರದ ಕುಟುಂಬದ ಸದಸ್ಯರು ವೈದ್ಯಕೀಯ ತಂಡಕ್ಕೆ ತಿಳಿಸುತ್ತಾರೆ. ದಾನಿಯ ಮರಣದ ಆರು ಗಂಟೆಗಳ ಒಳಗೆ ನಾವು ಅವರ ಕಣ್ಣುಗಳನ್ನು ತೆಗೆದುಕೊಳ್ಳುತ್ತೇವೆ. ಅಲ್ಲದೆ, ನಾವು ನೇತ್ರದಾನ ಪ್ರಕ್ರಿಯೆಯನ್ನು ಮತ್ತಷ್ಟು ಸರಳಗೊಳಿಸಲು ಯೋಜಿಸುತ್ತಿದ್ದೇವೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ನಾಲ್ವರಿಗೆ ಬೆಳಕಾದ ನಟ ಪುನೀತ್‌ ಕಣ್ಣುಗಳು: ರಾಜ್ಯದಲ್ಲಿ ಮೊದಲ ಬಾರಿಗೆ ಹೊಸ ತಂತ್ರ ಬಳಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...