Homeಕರ್ನಾಟಕರಾಜ್ಯೋತ್ಸವದ ಕುರಿತು ಕನ್ನಡದಲ್ಲಿ ಟ್ವೀಟ್ ಮಾಡಿ ಪ್ರಶಂಸೆ ಮತ್ತು ಟ್ರೋಲ್‌ಗೊಳಗಾದ ಪ್ರಧಾನಿ ಮೋದಿ...

ರಾಜ್ಯೋತ್ಸವದ ಕುರಿತು ಕನ್ನಡದಲ್ಲಿ ಟ್ವೀಟ್ ಮಾಡಿ ಪ್ರಶಂಸೆ ಮತ್ತು ಟ್ರೋಲ್‌ಗೊಳಗಾದ ಪ್ರಧಾನಿ ಮೋದಿ…

- Advertisement -
- Advertisement -

ಕನ್ನಡದ ರಾಜ್ಯೋತ್ಸವದ ಕುರಿತು ಪ್ರಧಾನಿ ನರೇಂದ್ರ ಮೋದಿಯವರು ಕನ್ನಡದಲ್ಲಿ ಟ್ವೀಟ್‌ ಮಾಡಿ ಪ್ರಾರ್ಥಿಸಿದ್ದಾರೆ. ಹಲವು ಜನರು ಪ್ರಧಾನಿಯವರ ಕನ್ನಡ ಟ್ವೀಟ್‌ ನೋಡಿ ಪುಳಕಿತಗೊಂಡರೆ ಮತ್ತಷ್ಟು ಜನರು ಪ್ರಧಾನಿ ವಿರುದ್ಧ ಕಿಡಿಕಾರಿದ್ದಾರೆ.

“ರಾಷ್ಟ್ರದ ಬೆಳವಣಿಗೆಗೆ ಕರ್ನಾಟಕ ನೀಡಿದ ಅತ್ಯುನ್ನತ ಕೊಡುಗೆಯನ್ನು ಆಚರಣೆ ಮಾಡುವ ದಿವಸವೇ ಕರ್ನಾಟಕ ರಾಜ್ಯೋತ್ಸವ. ಕನ್ನಡಿಗರ ವಿಶಾಲ ಹೃದಯವಂತಿಕೆ ಹಾಗೂ ಕನ್ನಡ ನಾಡಿನ ಸೌಂದರ್ಯ ಹೆಸರುವಾಸಿಯಾದದ್ದು. ಬರುವ ದಿನಗಳಲ್ಲಿ ಕರ್ನಾಟಕದ ಅಭಿವೃದ್ಧಿಗಾಗಿ ಪ್ರಾರ್ಥಿಸುತ್ತೇನೆ.” ಎಂದು ನರೇಂದ್ರ ಮೋದಿಯವರು ಟ್ವೀಟ್‌ ಮಾಡಿದ್ದಾರೆ.

ಇದಕ್ಕೆ “ಸರ್ ನಿಮ್ಮ ಬೆಂಬಲದ ಸರ್ಕಾರ ಇವತ್ತು‌ ಕನ್ನಡದ ಧ್ವಜವನ್ನ ಎಷ್ಟೋ ಜಿಲ್ಲಾ ಕೇಂದ್ರಗಳಲ್ಲಿ‌ ಹಾರಿಸುತ್ತಿಲ್ಲ ಎಂಬ ಸುದ್ದಿ ಬಂದಿಲ್ವ ಯಾಕೆ ಬಂದಿದ್ರು ಸುಮ್ಮನಿದ್ದೀರಾ..” ಎಂದು ಸುಮಂತ್‌ ಗೌಡ ಎಂಬುವವರು ಪ್ರಶ್ನಿಸಿದ್ದಾರೆ.

ಪ್ರಧಾನಿಗಳೇ.. ಈಗ ಏನೋ ಕರ್ನಾಟಕದ ಕಾಳಜಿ ವಹಿಸೋರ ರೀತಿ ಟ್ವೀಟ್ ಮಾಡೋ ನಾಟಕ ಬಿಡಿ.. ಉತ್ತರ ಕರ್ನಾಟಕದ ಜನ ಪ್ರವಾಹದಿಂದ ಸಂಕಷ್ಟದಲ್ಲಿದ್ದಾರೆ ಅವರ ಜೀವನಕ್ಕೆ ಅಗತ್ಯತೆಗಳನ್ನ ಕಲ್ಪಿಸುವ ಕಡೆ ನಿಮ್ಮ ಗಮನ ಕೊಡಿ.. ಈ ನಾಟಕಗಳೆಲ್ಲ ನಿಲ್ಲಿಸಿ, ಇನ್ಮುಂದೆ ಪ್ರಯೋಜನಕ್ಕೆ ಬರಲ್ಲ ಇವು ಎಂದು ಪ್ರಸನ್ನ ಕುಮಾರ ಎಂಬುವವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಒಂದೆಡೆ @BJP4Karnataka
ಸರ್ಕಾರ #ನಾಡಧ್ವಜ ಹಾರದಂತಿರಬೇಕು ಎಂಬ ನೀತಿಯನ್ನು ಜಾರಿಗೊಳಿಸಿದೆ, ಇನ್ನೊಂದೆಡೆ #ರಾಜ್ಯೋತ್ಸವ ಹೆಸರಿನಲ್ಲಿ ಹುಸಿ ಶುಭಾಶಯ ಕೋರುವ ಅವರದೇ ಪಕ್ಷದ ನಾಯಕರು. ಎಂತಹ ಆಶಾಢಭೂತಿತನ ಇವರದ್ದು. #KannadaRajyotsava ಮತ್ತು ಬಾವುಟ ನಮ್ಮ ಹಕ್ಕು ಅದನ್ನು ತಡೆಯಲು ನೆಡೆಸುವ ಸಕಲ ಯತ್ನವೂ ಸೋಲಲಿದೆ. #ಜಯಕರ್ನಾಟಕ ಎಂದು ಸ್ವಾಮಿಯವರು ಪ್ರತಿಕ್ರಿಯೆ ನೀಡಿದ್ದಾರೆ.

ಕನ್ನಡದಲ್ಲಿ ಟ್ವೀಟ್ ಮಾಡಿದಕ್ಕೆ ಧನ್ಯವಾದಗಳು ಮೋದಿಜಿ. ಆದರೆ ಕರ್ನಾಟಕಕ್ಕೆ ನಿಮ್ಮ ಕೊಡುಗೆ ಏನು ? ಕನ್ನಡಿಗರು ವಿಶಾಲ ಹೃದಯವಂತಿಕೆಯರು ನಿಜ,ಆದರೆ ನಮ್ಮ ನಾಡ ಧ್ವಜದ ತಂಟೆಗೆ ಬರೋದು,ಬಲವಂತದ ಹಿಂದಿ ಹೇರಿಕೆ ಸಹಿಸೊಲ್ಲ. ಕೊಡುಗೆ ನೀಡಿ ಮಾತಾಡಿ.. ಕನ್ನಡ ಕಾಮಧೇನು… ಕರ್ನಾಟಕ ಕಲ್ಪವೃಕ್ಷ.. ಎಂದು ದೇವರಾಜ್‌ ಅಚಾರ್ಯರವರು ಕಮೆಂಟ್‌ ಮಾಡಿದ್ದಾರೆ.

ಇಂದು ಮಾಡುವ ಟ್ವೀಟ್ ಅನ್ನು ಅಂದು ಉತ್ತರ ಕರ್ನಾಟಕ ಮುಳುಗಿದಾಗ ಮಾಡಿದ್ದರೆ ನಮ್ಮ ಜನರಿಗೆ ಇನ್ನೂ ಹತ್ತಿರವಾಗುತ್ತಿದ್ದೀರಿ. ಇನ್ನೂ ಕಾಲ ಮಿಂಚಿಲ್ಲ ಕನ್ನಡತನವನ್ನು ಉಳಿಸಿ ಬೆಳೆಸುವ ನಿಮ್ಮ ಮಾತು ಬರೀ ಟ್ವೀಟ್ ಗೆ ಸಿಮೀತವಾಗದೆ ಕಾರ್ಯರೂಪಕ್ಕೆ ಬರುವ ಮಾತಾಗಲಿ. ಎಂದು ತರ್ಲೆಪುಟ್ಟ ಎಂಬುವವರು ಟ್ವೀಟ್‌ ಮಾಡಿದ್ದಾರೆ.

ಮೊದಲು ನೆರೆ ಸಂತ್ರಸ್ತರಿಗೆ ಹಣ ಕೊಡಪ್ಪ..ಕನ್ನಡದ ಮೇಲಿನ ದಬ್ಬಾಳಿಕೆ ನಿಲ್ಲಿಸಪ್ಪ ತಾತಪ್ಪ.. ಆಮೇಲೆ ಬೇಕಿದ್ರೆ ನಾಟಕ ಮಾಡು ಎಂದು ಸಾಗರ್‌ ಮನಸು ಪ್ರತಿಕ್ರಿಯಿಸಿದ್ದಾರೆ.

ಧನ್ಯವಾದಗಳು. ನಿಮ್ಮ ಈ ಸಂದೇಶ ಪರಿಪೂರ್ಣವಾಗುವುದು ನೆರೆ ಸಂತ್ರಸ್ಥರಿಗೆ ಸಿಗಬೇಕಾದ ಎಲ್ಲಾ ರೀತಿಯ ಸಹಾಯಗಳು ದೊರೆತಾಗ ಮಾತ್ರ! ಎಂದು ಗಣೇಶ್‌ ರಾವ್‌ರವರು ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಚುನಾವಣೆ ಬಂದಾಗ 20ಕ್ಕು ಹೆಚ್ಚು ಬಾರಿ ಚುನಾವಣಾ ಪ್ರಚಾರಕ್ಕೆ ಬರುವ ನೀವು ನೆರೆ ಬಂದಾಗ ಒಮ್ಮೆಯೂ ಭೇಟಿ ನೀಡಿಲ್ಲ ಮತ್ತು ನೀಡೋದು ಇಲ್ಲ. ಆದರೆ ಇವಾಗ ದೊಡ್ಡದಾಗಿ #ಕನ್ನಡರಾಜ್ಯೋತ್ಸವ ದ ಶುಭಾಶಯ ತಿಳಿಸುತ್ತಿದ್ದೀರಿ? ನಿಮ್ಮ ನಟನೆಯ ಮುಂದೆ ಎಲ್ಲಾ ನಟರು ಶೂನ್ಯ ಬಿಡಿ ಎಂದು ಚೇತನ್‌ ಕುಮಾರ್‌ ಎಂಬುವವರು ಕಿಡಿಕಾರಿದ್ದಾರೆ.

ತಮಗೂ ಕೂಡಾ ಕನ್ನಡ ರಾಜ್ಯೋತ್ಸವದ ಹಾರ್ಧಿಕ್ ಶುಭಾಶಯಗಳು ನಮ್ಮ ದೇಶದ ಹೆಮ್ಮೆಯ ಮೋದಿಜೀ ಅವರಿಗೆ ಈ ನಿಮ್ಮದ ಟ್ವಿಟ್ ಎಲ್ಲಾ ಕನ್ನಡ ಮಹಾ ಜನತೆಗೆ ಖುಷಿ ತಂದಿದೆ ನನ್ನ ದೇವ್ರು … ಎಂದು ನಮೋ ಮಹಾಂತೇಶ್‌ ಎಂಬುವವರು ಟ್ವೀಟ್‌ ಮಾಡಿದ್ದಾರೆ.

ನೀವು ಕನ್ನಡ ಭಾಷೆಯಲ್ಲಿ ಮಾತನಾಡುವುದನ್ನು ಕೇಳುವುದೇ ಚೆಂದ ಮೋದಿ ಅವರೇ, ಹೌದು ಕರ್ನಾಟಕ ವಿಶಾಲ ಹೃದಯ ಉಳ್ಳ ಹೆಮ್ಮೆಯ ಕನ್ನಡಿಗರ ನಾಡು. ಕನ್ನಡ ರಾಜ್ಯೋತ್ಸವದ ಶುಭಾಶಯಗಳು  ಎಂದು ಸಹನಾ ರೇಣುಕಾರವರು ಪ್ರತಿಕ್ರಿಯೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಆತನಿಗೆ ಕನ್ನಡ ಬರುವುದಿಲ್ಲ ಎಂದು ಗೊತ್ತಿದ್ದರೂ ಕೆಲವು ಮೂರ್ಖರು ಪುಳಕಿತರಾಗಿದ್ದಾರಲ್ಲ! ಈತ ರಾಜ್ಯದ ಅಭಿವೃದ್ಧಿಗೆ ಪ್ರಾರ್ಥನೆ ಮಾಡುವ ಬದಲು ಕೆಲಸಮಾಡಲಿ!

LEAVE A REPLY

Please enter your comment!
Please enter your name here

- Advertisment -

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...