Homeಕರ್ನಾಟಕರಾಜ್ಯೋತ್ಸವದ ಕುರಿತು ಕನ್ನಡದಲ್ಲಿ ಟ್ವೀಟ್ ಮಾಡಿ ಪ್ರಶಂಸೆ ಮತ್ತು ಟ್ರೋಲ್‌ಗೊಳಗಾದ ಪ್ರಧಾನಿ ಮೋದಿ...

ರಾಜ್ಯೋತ್ಸವದ ಕುರಿತು ಕನ್ನಡದಲ್ಲಿ ಟ್ವೀಟ್ ಮಾಡಿ ಪ್ರಶಂಸೆ ಮತ್ತು ಟ್ರೋಲ್‌ಗೊಳಗಾದ ಪ್ರಧಾನಿ ಮೋದಿ…

- Advertisement -
- Advertisement -

ಕನ್ನಡದ ರಾಜ್ಯೋತ್ಸವದ ಕುರಿತು ಪ್ರಧಾನಿ ನರೇಂದ್ರ ಮೋದಿಯವರು ಕನ್ನಡದಲ್ಲಿ ಟ್ವೀಟ್‌ ಮಾಡಿ ಪ್ರಾರ್ಥಿಸಿದ್ದಾರೆ. ಹಲವು ಜನರು ಪ್ರಧಾನಿಯವರ ಕನ್ನಡ ಟ್ವೀಟ್‌ ನೋಡಿ ಪುಳಕಿತಗೊಂಡರೆ ಮತ್ತಷ್ಟು ಜನರು ಪ್ರಧಾನಿ ವಿರುದ್ಧ ಕಿಡಿಕಾರಿದ್ದಾರೆ.

“ರಾಷ್ಟ್ರದ ಬೆಳವಣಿಗೆಗೆ ಕರ್ನಾಟಕ ನೀಡಿದ ಅತ್ಯುನ್ನತ ಕೊಡುಗೆಯನ್ನು ಆಚರಣೆ ಮಾಡುವ ದಿವಸವೇ ಕರ್ನಾಟಕ ರಾಜ್ಯೋತ್ಸವ. ಕನ್ನಡಿಗರ ವಿಶಾಲ ಹೃದಯವಂತಿಕೆ ಹಾಗೂ ಕನ್ನಡ ನಾಡಿನ ಸೌಂದರ್ಯ ಹೆಸರುವಾಸಿಯಾದದ್ದು. ಬರುವ ದಿನಗಳಲ್ಲಿ ಕರ್ನಾಟಕದ ಅಭಿವೃದ್ಧಿಗಾಗಿ ಪ್ರಾರ್ಥಿಸುತ್ತೇನೆ.” ಎಂದು ನರೇಂದ್ರ ಮೋದಿಯವರು ಟ್ವೀಟ್‌ ಮಾಡಿದ್ದಾರೆ.

ಇದಕ್ಕೆ “ಸರ್ ನಿಮ್ಮ ಬೆಂಬಲದ ಸರ್ಕಾರ ಇವತ್ತು‌ ಕನ್ನಡದ ಧ್ವಜವನ್ನ ಎಷ್ಟೋ ಜಿಲ್ಲಾ ಕೇಂದ್ರಗಳಲ್ಲಿ‌ ಹಾರಿಸುತ್ತಿಲ್ಲ ಎಂಬ ಸುದ್ದಿ ಬಂದಿಲ್ವ ಯಾಕೆ ಬಂದಿದ್ರು ಸುಮ್ಮನಿದ್ದೀರಾ..” ಎಂದು ಸುಮಂತ್‌ ಗೌಡ ಎಂಬುವವರು ಪ್ರಶ್ನಿಸಿದ್ದಾರೆ.

ಪ್ರಧಾನಿಗಳೇ.. ಈಗ ಏನೋ ಕರ್ನಾಟಕದ ಕಾಳಜಿ ವಹಿಸೋರ ರೀತಿ ಟ್ವೀಟ್ ಮಾಡೋ ನಾಟಕ ಬಿಡಿ.. ಉತ್ತರ ಕರ್ನಾಟಕದ ಜನ ಪ್ರವಾಹದಿಂದ ಸಂಕಷ್ಟದಲ್ಲಿದ್ದಾರೆ ಅವರ ಜೀವನಕ್ಕೆ ಅಗತ್ಯತೆಗಳನ್ನ ಕಲ್ಪಿಸುವ ಕಡೆ ನಿಮ್ಮ ಗಮನ ಕೊಡಿ.. ಈ ನಾಟಕಗಳೆಲ್ಲ ನಿಲ್ಲಿಸಿ, ಇನ್ಮುಂದೆ ಪ್ರಯೋಜನಕ್ಕೆ ಬರಲ್ಲ ಇವು ಎಂದು ಪ್ರಸನ್ನ ಕುಮಾರ ಎಂಬುವವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಒಂದೆಡೆ @BJP4Karnataka
ಸರ್ಕಾರ #ನಾಡಧ್ವಜ ಹಾರದಂತಿರಬೇಕು ಎಂಬ ನೀತಿಯನ್ನು ಜಾರಿಗೊಳಿಸಿದೆ, ಇನ್ನೊಂದೆಡೆ #ರಾಜ್ಯೋತ್ಸವ ಹೆಸರಿನಲ್ಲಿ ಹುಸಿ ಶುಭಾಶಯ ಕೋರುವ ಅವರದೇ ಪಕ್ಷದ ನಾಯಕರು. ಎಂತಹ ಆಶಾಢಭೂತಿತನ ಇವರದ್ದು. #KannadaRajyotsava ಮತ್ತು ಬಾವುಟ ನಮ್ಮ ಹಕ್ಕು ಅದನ್ನು ತಡೆಯಲು ನೆಡೆಸುವ ಸಕಲ ಯತ್ನವೂ ಸೋಲಲಿದೆ. #ಜಯಕರ್ನಾಟಕ ಎಂದು ಸ್ವಾಮಿಯವರು ಪ್ರತಿಕ್ರಿಯೆ ನೀಡಿದ್ದಾರೆ.

ಕನ್ನಡದಲ್ಲಿ ಟ್ವೀಟ್ ಮಾಡಿದಕ್ಕೆ ಧನ್ಯವಾದಗಳು ಮೋದಿಜಿ. ಆದರೆ ಕರ್ನಾಟಕಕ್ಕೆ ನಿಮ್ಮ ಕೊಡುಗೆ ಏನು ? ಕನ್ನಡಿಗರು ವಿಶಾಲ ಹೃದಯವಂತಿಕೆಯರು ನಿಜ,ಆದರೆ ನಮ್ಮ ನಾಡ ಧ್ವಜದ ತಂಟೆಗೆ ಬರೋದು,ಬಲವಂತದ ಹಿಂದಿ ಹೇರಿಕೆ ಸಹಿಸೊಲ್ಲ. ಕೊಡುಗೆ ನೀಡಿ ಮಾತಾಡಿ.. ಕನ್ನಡ ಕಾಮಧೇನು… ಕರ್ನಾಟಕ ಕಲ್ಪವೃಕ್ಷ.. ಎಂದು ದೇವರಾಜ್‌ ಅಚಾರ್ಯರವರು ಕಮೆಂಟ್‌ ಮಾಡಿದ್ದಾರೆ.

ಇಂದು ಮಾಡುವ ಟ್ವೀಟ್ ಅನ್ನು ಅಂದು ಉತ್ತರ ಕರ್ನಾಟಕ ಮುಳುಗಿದಾಗ ಮಾಡಿದ್ದರೆ ನಮ್ಮ ಜನರಿಗೆ ಇನ್ನೂ ಹತ್ತಿರವಾಗುತ್ತಿದ್ದೀರಿ. ಇನ್ನೂ ಕಾಲ ಮಿಂಚಿಲ್ಲ ಕನ್ನಡತನವನ್ನು ಉಳಿಸಿ ಬೆಳೆಸುವ ನಿಮ್ಮ ಮಾತು ಬರೀ ಟ್ವೀಟ್ ಗೆ ಸಿಮೀತವಾಗದೆ ಕಾರ್ಯರೂಪಕ್ಕೆ ಬರುವ ಮಾತಾಗಲಿ. ಎಂದು ತರ್ಲೆಪುಟ್ಟ ಎಂಬುವವರು ಟ್ವೀಟ್‌ ಮಾಡಿದ್ದಾರೆ.

ಮೊದಲು ನೆರೆ ಸಂತ್ರಸ್ತರಿಗೆ ಹಣ ಕೊಡಪ್ಪ..ಕನ್ನಡದ ಮೇಲಿನ ದಬ್ಬಾಳಿಕೆ ನಿಲ್ಲಿಸಪ್ಪ ತಾತಪ್ಪ.. ಆಮೇಲೆ ಬೇಕಿದ್ರೆ ನಾಟಕ ಮಾಡು ಎಂದು ಸಾಗರ್‌ ಮನಸು ಪ್ರತಿಕ್ರಿಯಿಸಿದ್ದಾರೆ.

ಧನ್ಯವಾದಗಳು. ನಿಮ್ಮ ಈ ಸಂದೇಶ ಪರಿಪೂರ್ಣವಾಗುವುದು ನೆರೆ ಸಂತ್ರಸ್ಥರಿಗೆ ಸಿಗಬೇಕಾದ ಎಲ್ಲಾ ರೀತಿಯ ಸಹಾಯಗಳು ದೊರೆತಾಗ ಮಾತ್ರ! ಎಂದು ಗಣೇಶ್‌ ರಾವ್‌ರವರು ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಚುನಾವಣೆ ಬಂದಾಗ 20ಕ್ಕು ಹೆಚ್ಚು ಬಾರಿ ಚುನಾವಣಾ ಪ್ರಚಾರಕ್ಕೆ ಬರುವ ನೀವು ನೆರೆ ಬಂದಾಗ ಒಮ್ಮೆಯೂ ಭೇಟಿ ನೀಡಿಲ್ಲ ಮತ್ತು ನೀಡೋದು ಇಲ್ಲ. ಆದರೆ ಇವಾಗ ದೊಡ್ಡದಾಗಿ #ಕನ್ನಡರಾಜ್ಯೋತ್ಸವ ದ ಶುಭಾಶಯ ತಿಳಿಸುತ್ತಿದ್ದೀರಿ? ನಿಮ್ಮ ನಟನೆಯ ಮುಂದೆ ಎಲ್ಲಾ ನಟರು ಶೂನ್ಯ ಬಿಡಿ ಎಂದು ಚೇತನ್‌ ಕುಮಾರ್‌ ಎಂಬುವವರು ಕಿಡಿಕಾರಿದ್ದಾರೆ.

ತಮಗೂ ಕೂಡಾ ಕನ್ನಡ ರಾಜ್ಯೋತ್ಸವದ ಹಾರ್ಧಿಕ್ ಶುಭಾಶಯಗಳು ನಮ್ಮ ದೇಶದ ಹೆಮ್ಮೆಯ ಮೋದಿಜೀ ಅವರಿಗೆ ಈ ನಿಮ್ಮದ ಟ್ವಿಟ್ ಎಲ್ಲಾ ಕನ್ನಡ ಮಹಾ ಜನತೆಗೆ ಖುಷಿ ತಂದಿದೆ ನನ್ನ ದೇವ್ರು … ಎಂದು ನಮೋ ಮಹಾಂತೇಶ್‌ ಎಂಬುವವರು ಟ್ವೀಟ್‌ ಮಾಡಿದ್ದಾರೆ.

ನೀವು ಕನ್ನಡ ಭಾಷೆಯಲ್ಲಿ ಮಾತನಾಡುವುದನ್ನು ಕೇಳುವುದೇ ಚೆಂದ ಮೋದಿ ಅವರೇ, ಹೌದು ಕರ್ನಾಟಕ ವಿಶಾಲ ಹೃದಯ ಉಳ್ಳ ಹೆಮ್ಮೆಯ ಕನ್ನಡಿಗರ ನಾಡು. ಕನ್ನಡ ರಾಜ್ಯೋತ್ಸವದ ಶುಭಾಶಯಗಳು  ಎಂದು ಸಹನಾ ರೇಣುಕಾರವರು ಪ್ರತಿಕ್ರಿಯೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಆತನಿಗೆ ಕನ್ನಡ ಬರುವುದಿಲ್ಲ ಎಂದು ಗೊತ್ತಿದ್ದರೂ ಕೆಲವು ಮೂರ್ಖರು ಪುಳಕಿತರಾಗಿದ್ದಾರಲ್ಲ! ಈತ ರಾಜ್ಯದ ಅಭಿವೃದ್ಧಿಗೆ ಪ್ರಾರ್ಥನೆ ಮಾಡುವ ಬದಲು ಕೆಲಸಮಾಡಲಿ!

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...