Homeಕರ್ನಾಟಕರಾಜ್ಯೋತ್ಸವದ ಕುರಿತು ಕನ್ನಡದಲ್ಲಿ ಟ್ವೀಟ್ ಮಾಡಿ ಪ್ರಶಂಸೆ ಮತ್ತು ಟ್ರೋಲ್‌ಗೊಳಗಾದ ಪ್ರಧಾನಿ ಮೋದಿ...

ರಾಜ್ಯೋತ್ಸವದ ಕುರಿತು ಕನ್ನಡದಲ್ಲಿ ಟ್ವೀಟ್ ಮಾಡಿ ಪ್ರಶಂಸೆ ಮತ್ತು ಟ್ರೋಲ್‌ಗೊಳಗಾದ ಪ್ರಧಾನಿ ಮೋದಿ…

- Advertisement -
- Advertisement -

ಕನ್ನಡದ ರಾಜ್ಯೋತ್ಸವದ ಕುರಿತು ಪ್ರಧಾನಿ ನರೇಂದ್ರ ಮೋದಿಯವರು ಕನ್ನಡದಲ್ಲಿ ಟ್ವೀಟ್‌ ಮಾಡಿ ಪ್ರಾರ್ಥಿಸಿದ್ದಾರೆ. ಹಲವು ಜನರು ಪ್ರಧಾನಿಯವರ ಕನ್ನಡ ಟ್ವೀಟ್‌ ನೋಡಿ ಪುಳಕಿತಗೊಂಡರೆ ಮತ್ತಷ್ಟು ಜನರು ಪ್ರಧಾನಿ ವಿರುದ್ಧ ಕಿಡಿಕಾರಿದ್ದಾರೆ.

“ರಾಷ್ಟ್ರದ ಬೆಳವಣಿಗೆಗೆ ಕರ್ನಾಟಕ ನೀಡಿದ ಅತ್ಯುನ್ನತ ಕೊಡುಗೆಯನ್ನು ಆಚರಣೆ ಮಾಡುವ ದಿವಸವೇ ಕರ್ನಾಟಕ ರಾಜ್ಯೋತ್ಸವ. ಕನ್ನಡಿಗರ ವಿಶಾಲ ಹೃದಯವಂತಿಕೆ ಹಾಗೂ ಕನ್ನಡ ನಾಡಿನ ಸೌಂದರ್ಯ ಹೆಸರುವಾಸಿಯಾದದ್ದು. ಬರುವ ದಿನಗಳಲ್ಲಿ ಕರ್ನಾಟಕದ ಅಭಿವೃದ್ಧಿಗಾಗಿ ಪ್ರಾರ್ಥಿಸುತ್ತೇನೆ.” ಎಂದು ನರೇಂದ್ರ ಮೋದಿಯವರು ಟ್ವೀಟ್‌ ಮಾಡಿದ್ದಾರೆ.

ಇದಕ್ಕೆ “ಸರ್ ನಿಮ್ಮ ಬೆಂಬಲದ ಸರ್ಕಾರ ಇವತ್ತು‌ ಕನ್ನಡದ ಧ್ವಜವನ್ನ ಎಷ್ಟೋ ಜಿಲ್ಲಾ ಕೇಂದ್ರಗಳಲ್ಲಿ‌ ಹಾರಿಸುತ್ತಿಲ್ಲ ಎಂಬ ಸುದ್ದಿ ಬಂದಿಲ್ವ ಯಾಕೆ ಬಂದಿದ್ರು ಸುಮ್ಮನಿದ್ದೀರಾ..” ಎಂದು ಸುಮಂತ್‌ ಗೌಡ ಎಂಬುವವರು ಪ್ರಶ್ನಿಸಿದ್ದಾರೆ.

ಪ್ರಧಾನಿಗಳೇ.. ಈಗ ಏನೋ ಕರ್ನಾಟಕದ ಕಾಳಜಿ ವಹಿಸೋರ ರೀತಿ ಟ್ವೀಟ್ ಮಾಡೋ ನಾಟಕ ಬಿಡಿ.. ಉತ್ತರ ಕರ್ನಾಟಕದ ಜನ ಪ್ರವಾಹದಿಂದ ಸಂಕಷ್ಟದಲ್ಲಿದ್ದಾರೆ ಅವರ ಜೀವನಕ್ಕೆ ಅಗತ್ಯತೆಗಳನ್ನ ಕಲ್ಪಿಸುವ ಕಡೆ ನಿಮ್ಮ ಗಮನ ಕೊಡಿ.. ಈ ನಾಟಕಗಳೆಲ್ಲ ನಿಲ್ಲಿಸಿ, ಇನ್ಮುಂದೆ ಪ್ರಯೋಜನಕ್ಕೆ ಬರಲ್ಲ ಇವು ಎಂದು ಪ್ರಸನ್ನ ಕುಮಾರ ಎಂಬುವವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಒಂದೆಡೆ @BJP4Karnataka
ಸರ್ಕಾರ #ನಾಡಧ್ವಜ ಹಾರದಂತಿರಬೇಕು ಎಂಬ ನೀತಿಯನ್ನು ಜಾರಿಗೊಳಿಸಿದೆ, ಇನ್ನೊಂದೆಡೆ #ರಾಜ್ಯೋತ್ಸವ ಹೆಸರಿನಲ್ಲಿ ಹುಸಿ ಶುಭಾಶಯ ಕೋರುವ ಅವರದೇ ಪಕ್ಷದ ನಾಯಕರು. ಎಂತಹ ಆಶಾಢಭೂತಿತನ ಇವರದ್ದು. #KannadaRajyotsava ಮತ್ತು ಬಾವುಟ ನಮ್ಮ ಹಕ್ಕು ಅದನ್ನು ತಡೆಯಲು ನೆಡೆಸುವ ಸಕಲ ಯತ್ನವೂ ಸೋಲಲಿದೆ. #ಜಯಕರ್ನಾಟಕ ಎಂದು ಸ್ವಾಮಿಯವರು ಪ್ರತಿಕ್ರಿಯೆ ನೀಡಿದ್ದಾರೆ.

ಕನ್ನಡದಲ್ಲಿ ಟ್ವೀಟ್ ಮಾಡಿದಕ್ಕೆ ಧನ್ಯವಾದಗಳು ಮೋದಿಜಿ. ಆದರೆ ಕರ್ನಾಟಕಕ್ಕೆ ನಿಮ್ಮ ಕೊಡುಗೆ ಏನು ? ಕನ್ನಡಿಗರು ವಿಶಾಲ ಹೃದಯವಂತಿಕೆಯರು ನಿಜ,ಆದರೆ ನಮ್ಮ ನಾಡ ಧ್ವಜದ ತಂಟೆಗೆ ಬರೋದು,ಬಲವಂತದ ಹಿಂದಿ ಹೇರಿಕೆ ಸಹಿಸೊಲ್ಲ. ಕೊಡುಗೆ ನೀಡಿ ಮಾತಾಡಿ.. ಕನ್ನಡ ಕಾಮಧೇನು… ಕರ್ನಾಟಕ ಕಲ್ಪವೃಕ್ಷ.. ಎಂದು ದೇವರಾಜ್‌ ಅಚಾರ್ಯರವರು ಕಮೆಂಟ್‌ ಮಾಡಿದ್ದಾರೆ.

ಇಂದು ಮಾಡುವ ಟ್ವೀಟ್ ಅನ್ನು ಅಂದು ಉತ್ತರ ಕರ್ನಾಟಕ ಮುಳುಗಿದಾಗ ಮಾಡಿದ್ದರೆ ನಮ್ಮ ಜನರಿಗೆ ಇನ್ನೂ ಹತ್ತಿರವಾಗುತ್ತಿದ್ದೀರಿ. ಇನ್ನೂ ಕಾಲ ಮಿಂಚಿಲ್ಲ ಕನ್ನಡತನವನ್ನು ಉಳಿಸಿ ಬೆಳೆಸುವ ನಿಮ್ಮ ಮಾತು ಬರೀ ಟ್ವೀಟ್ ಗೆ ಸಿಮೀತವಾಗದೆ ಕಾರ್ಯರೂಪಕ್ಕೆ ಬರುವ ಮಾತಾಗಲಿ. ಎಂದು ತರ್ಲೆಪುಟ್ಟ ಎಂಬುವವರು ಟ್ವೀಟ್‌ ಮಾಡಿದ್ದಾರೆ.

ಮೊದಲು ನೆರೆ ಸಂತ್ರಸ್ತರಿಗೆ ಹಣ ಕೊಡಪ್ಪ..ಕನ್ನಡದ ಮೇಲಿನ ದಬ್ಬಾಳಿಕೆ ನಿಲ್ಲಿಸಪ್ಪ ತಾತಪ್ಪ.. ಆಮೇಲೆ ಬೇಕಿದ್ರೆ ನಾಟಕ ಮಾಡು ಎಂದು ಸಾಗರ್‌ ಮನಸು ಪ್ರತಿಕ್ರಿಯಿಸಿದ್ದಾರೆ.

ಧನ್ಯವಾದಗಳು. ನಿಮ್ಮ ಈ ಸಂದೇಶ ಪರಿಪೂರ್ಣವಾಗುವುದು ನೆರೆ ಸಂತ್ರಸ್ಥರಿಗೆ ಸಿಗಬೇಕಾದ ಎಲ್ಲಾ ರೀತಿಯ ಸಹಾಯಗಳು ದೊರೆತಾಗ ಮಾತ್ರ! ಎಂದು ಗಣೇಶ್‌ ರಾವ್‌ರವರು ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಚುನಾವಣೆ ಬಂದಾಗ 20ಕ್ಕು ಹೆಚ್ಚು ಬಾರಿ ಚುನಾವಣಾ ಪ್ರಚಾರಕ್ಕೆ ಬರುವ ನೀವು ನೆರೆ ಬಂದಾಗ ಒಮ್ಮೆಯೂ ಭೇಟಿ ನೀಡಿಲ್ಲ ಮತ್ತು ನೀಡೋದು ಇಲ್ಲ. ಆದರೆ ಇವಾಗ ದೊಡ್ಡದಾಗಿ #ಕನ್ನಡರಾಜ್ಯೋತ್ಸವ ದ ಶುಭಾಶಯ ತಿಳಿಸುತ್ತಿದ್ದೀರಿ? ನಿಮ್ಮ ನಟನೆಯ ಮುಂದೆ ಎಲ್ಲಾ ನಟರು ಶೂನ್ಯ ಬಿಡಿ ಎಂದು ಚೇತನ್‌ ಕುಮಾರ್‌ ಎಂಬುವವರು ಕಿಡಿಕಾರಿದ್ದಾರೆ.

ತಮಗೂ ಕೂಡಾ ಕನ್ನಡ ರಾಜ್ಯೋತ್ಸವದ ಹಾರ್ಧಿಕ್ ಶುಭಾಶಯಗಳು ನಮ್ಮ ದೇಶದ ಹೆಮ್ಮೆಯ ಮೋದಿಜೀ ಅವರಿಗೆ ಈ ನಿಮ್ಮದ ಟ್ವಿಟ್ ಎಲ್ಲಾ ಕನ್ನಡ ಮಹಾ ಜನತೆಗೆ ಖುಷಿ ತಂದಿದೆ ನನ್ನ ದೇವ್ರು … ಎಂದು ನಮೋ ಮಹಾಂತೇಶ್‌ ಎಂಬುವವರು ಟ್ವೀಟ್‌ ಮಾಡಿದ್ದಾರೆ.

ನೀವು ಕನ್ನಡ ಭಾಷೆಯಲ್ಲಿ ಮಾತನಾಡುವುದನ್ನು ಕೇಳುವುದೇ ಚೆಂದ ಮೋದಿ ಅವರೇ, ಹೌದು ಕರ್ನಾಟಕ ವಿಶಾಲ ಹೃದಯ ಉಳ್ಳ ಹೆಮ್ಮೆಯ ಕನ್ನಡಿಗರ ನಾಡು. ಕನ್ನಡ ರಾಜ್ಯೋತ್ಸವದ ಶುಭಾಶಯಗಳು  ಎಂದು ಸಹನಾ ರೇಣುಕಾರವರು ಪ್ರತಿಕ್ರಿಯೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಆತನಿಗೆ ಕನ್ನಡ ಬರುವುದಿಲ್ಲ ಎಂದು ಗೊತ್ತಿದ್ದರೂ ಕೆಲವು ಮೂರ್ಖರು ಪುಳಕಿತರಾಗಿದ್ದಾರಲ್ಲ! ಈತ ರಾಜ್ಯದ ಅಭಿವೃದ್ಧಿಗೆ ಪ್ರಾರ್ಥನೆ ಮಾಡುವ ಬದಲು ಕೆಲಸಮಾಡಲಿ!

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...