Homeಕರ್ನಾಟಕರಾಜ್ಯೋತ್ಸವದ ಕುರಿತು ಕನ್ನಡದಲ್ಲಿ ಟ್ವೀಟ್ ಮಾಡಿ ಪ್ರಶಂಸೆ ಮತ್ತು ಟ್ರೋಲ್‌ಗೊಳಗಾದ ಪ್ರಧಾನಿ ಮೋದಿ...

ರಾಜ್ಯೋತ್ಸವದ ಕುರಿತು ಕನ್ನಡದಲ್ಲಿ ಟ್ವೀಟ್ ಮಾಡಿ ಪ್ರಶಂಸೆ ಮತ್ತು ಟ್ರೋಲ್‌ಗೊಳಗಾದ ಪ್ರಧಾನಿ ಮೋದಿ…

- Advertisement -
- Advertisement -

ಕನ್ನಡದ ರಾಜ್ಯೋತ್ಸವದ ಕುರಿತು ಪ್ರಧಾನಿ ನರೇಂದ್ರ ಮೋದಿಯವರು ಕನ್ನಡದಲ್ಲಿ ಟ್ವೀಟ್‌ ಮಾಡಿ ಪ್ರಾರ್ಥಿಸಿದ್ದಾರೆ. ಹಲವು ಜನರು ಪ್ರಧಾನಿಯವರ ಕನ್ನಡ ಟ್ವೀಟ್‌ ನೋಡಿ ಪುಳಕಿತಗೊಂಡರೆ ಮತ್ತಷ್ಟು ಜನರು ಪ್ರಧಾನಿ ವಿರುದ್ಧ ಕಿಡಿಕಾರಿದ್ದಾರೆ.

“ರಾಷ್ಟ್ರದ ಬೆಳವಣಿಗೆಗೆ ಕರ್ನಾಟಕ ನೀಡಿದ ಅತ್ಯುನ್ನತ ಕೊಡುಗೆಯನ್ನು ಆಚರಣೆ ಮಾಡುವ ದಿವಸವೇ ಕರ್ನಾಟಕ ರಾಜ್ಯೋತ್ಸವ. ಕನ್ನಡಿಗರ ವಿಶಾಲ ಹೃದಯವಂತಿಕೆ ಹಾಗೂ ಕನ್ನಡ ನಾಡಿನ ಸೌಂದರ್ಯ ಹೆಸರುವಾಸಿಯಾದದ್ದು. ಬರುವ ದಿನಗಳಲ್ಲಿ ಕರ್ನಾಟಕದ ಅಭಿವೃದ್ಧಿಗಾಗಿ ಪ್ರಾರ್ಥಿಸುತ್ತೇನೆ.” ಎಂದು ನರೇಂದ್ರ ಮೋದಿಯವರು ಟ್ವೀಟ್‌ ಮಾಡಿದ್ದಾರೆ.

ಇದಕ್ಕೆ “ಸರ್ ನಿಮ್ಮ ಬೆಂಬಲದ ಸರ್ಕಾರ ಇವತ್ತು‌ ಕನ್ನಡದ ಧ್ವಜವನ್ನ ಎಷ್ಟೋ ಜಿಲ್ಲಾ ಕೇಂದ್ರಗಳಲ್ಲಿ‌ ಹಾರಿಸುತ್ತಿಲ್ಲ ಎಂಬ ಸುದ್ದಿ ಬಂದಿಲ್ವ ಯಾಕೆ ಬಂದಿದ್ರು ಸುಮ್ಮನಿದ್ದೀರಾ..” ಎಂದು ಸುಮಂತ್‌ ಗೌಡ ಎಂಬುವವರು ಪ್ರಶ್ನಿಸಿದ್ದಾರೆ.

ಪ್ರಧಾನಿಗಳೇ.. ಈಗ ಏನೋ ಕರ್ನಾಟಕದ ಕಾಳಜಿ ವಹಿಸೋರ ರೀತಿ ಟ್ವೀಟ್ ಮಾಡೋ ನಾಟಕ ಬಿಡಿ.. ಉತ್ತರ ಕರ್ನಾಟಕದ ಜನ ಪ್ರವಾಹದಿಂದ ಸಂಕಷ್ಟದಲ್ಲಿದ್ದಾರೆ ಅವರ ಜೀವನಕ್ಕೆ ಅಗತ್ಯತೆಗಳನ್ನ ಕಲ್ಪಿಸುವ ಕಡೆ ನಿಮ್ಮ ಗಮನ ಕೊಡಿ.. ಈ ನಾಟಕಗಳೆಲ್ಲ ನಿಲ್ಲಿಸಿ, ಇನ್ಮುಂದೆ ಪ್ರಯೋಜನಕ್ಕೆ ಬರಲ್ಲ ಇವು ಎಂದು ಪ್ರಸನ್ನ ಕುಮಾರ ಎಂಬುವವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಒಂದೆಡೆ @BJP4Karnataka
ಸರ್ಕಾರ #ನಾಡಧ್ವಜ ಹಾರದಂತಿರಬೇಕು ಎಂಬ ನೀತಿಯನ್ನು ಜಾರಿಗೊಳಿಸಿದೆ, ಇನ್ನೊಂದೆಡೆ #ರಾಜ್ಯೋತ್ಸವ ಹೆಸರಿನಲ್ಲಿ ಹುಸಿ ಶುಭಾಶಯ ಕೋರುವ ಅವರದೇ ಪಕ್ಷದ ನಾಯಕರು. ಎಂತಹ ಆಶಾಢಭೂತಿತನ ಇವರದ್ದು. #KannadaRajyotsava ಮತ್ತು ಬಾವುಟ ನಮ್ಮ ಹಕ್ಕು ಅದನ್ನು ತಡೆಯಲು ನೆಡೆಸುವ ಸಕಲ ಯತ್ನವೂ ಸೋಲಲಿದೆ. #ಜಯಕರ್ನಾಟಕ ಎಂದು ಸ್ವಾಮಿಯವರು ಪ್ರತಿಕ್ರಿಯೆ ನೀಡಿದ್ದಾರೆ.

ಕನ್ನಡದಲ್ಲಿ ಟ್ವೀಟ್ ಮಾಡಿದಕ್ಕೆ ಧನ್ಯವಾದಗಳು ಮೋದಿಜಿ. ಆದರೆ ಕರ್ನಾಟಕಕ್ಕೆ ನಿಮ್ಮ ಕೊಡುಗೆ ಏನು ? ಕನ್ನಡಿಗರು ವಿಶಾಲ ಹೃದಯವಂತಿಕೆಯರು ನಿಜ,ಆದರೆ ನಮ್ಮ ನಾಡ ಧ್ವಜದ ತಂಟೆಗೆ ಬರೋದು,ಬಲವಂತದ ಹಿಂದಿ ಹೇರಿಕೆ ಸಹಿಸೊಲ್ಲ. ಕೊಡುಗೆ ನೀಡಿ ಮಾತಾಡಿ.. ಕನ್ನಡ ಕಾಮಧೇನು… ಕರ್ನಾಟಕ ಕಲ್ಪವೃಕ್ಷ.. ಎಂದು ದೇವರಾಜ್‌ ಅಚಾರ್ಯರವರು ಕಮೆಂಟ್‌ ಮಾಡಿದ್ದಾರೆ.

ಇಂದು ಮಾಡುವ ಟ್ವೀಟ್ ಅನ್ನು ಅಂದು ಉತ್ತರ ಕರ್ನಾಟಕ ಮುಳುಗಿದಾಗ ಮಾಡಿದ್ದರೆ ನಮ್ಮ ಜನರಿಗೆ ಇನ್ನೂ ಹತ್ತಿರವಾಗುತ್ತಿದ್ದೀರಿ. ಇನ್ನೂ ಕಾಲ ಮಿಂಚಿಲ್ಲ ಕನ್ನಡತನವನ್ನು ಉಳಿಸಿ ಬೆಳೆಸುವ ನಿಮ್ಮ ಮಾತು ಬರೀ ಟ್ವೀಟ್ ಗೆ ಸಿಮೀತವಾಗದೆ ಕಾರ್ಯರೂಪಕ್ಕೆ ಬರುವ ಮಾತಾಗಲಿ. ಎಂದು ತರ್ಲೆಪುಟ್ಟ ಎಂಬುವವರು ಟ್ವೀಟ್‌ ಮಾಡಿದ್ದಾರೆ.

ಮೊದಲು ನೆರೆ ಸಂತ್ರಸ್ತರಿಗೆ ಹಣ ಕೊಡಪ್ಪ..ಕನ್ನಡದ ಮೇಲಿನ ದಬ್ಬಾಳಿಕೆ ನಿಲ್ಲಿಸಪ್ಪ ತಾತಪ್ಪ.. ಆಮೇಲೆ ಬೇಕಿದ್ರೆ ನಾಟಕ ಮಾಡು ಎಂದು ಸಾಗರ್‌ ಮನಸು ಪ್ರತಿಕ್ರಿಯಿಸಿದ್ದಾರೆ.

ಧನ್ಯವಾದಗಳು. ನಿಮ್ಮ ಈ ಸಂದೇಶ ಪರಿಪೂರ್ಣವಾಗುವುದು ನೆರೆ ಸಂತ್ರಸ್ಥರಿಗೆ ಸಿಗಬೇಕಾದ ಎಲ್ಲಾ ರೀತಿಯ ಸಹಾಯಗಳು ದೊರೆತಾಗ ಮಾತ್ರ! ಎಂದು ಗಣೇಶ್‌ ರಾವ್‌ರವರು ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಚುನಾವಣೆ ಬಂದಾಗ 20ಕ್ಕು ಹೆಚ್ಚು ಬಾರಿ ಚುನಾವಣಾ ಪ್ರಚಾರಕ್ಕೆ ಬರುವ ನೀವು ನೆರೆ ಬಂದಾಗ ಒಮ್ಮೆಯೂ ಭೇಟಿ ನೀಡಿಲ್ಲ ಮತ್ತು ನೀಡೋದು ಇಲ್ಲ. ಆದರೆ ಇವಾಗ ದೊಡ್ಡದಾಗಿ #ಕನ್ನಡರಾಜ್ಯೋತ್ಸವ ದ ಶುಭಾಶಯ ತಿಳಿಸುತ್ತಿದ್ದೀರಿ? ನಿಮ್ಮ ನಟನೆಯ ಮುಂದೆ ಎಲ್ಲಾ ನಟರು ಶೂನ್ಯ ಬಿಡಿ ಎಂದು ಚೇತನ್‌ ಕುಮಾರ್‌ ಎಂಬುವವರು ಕಿಡಿಕಾರಿದ್ದಾರೆ.

ತಮಗೂ ಕೂಡಾ ಕನ್ನಡ ರಾಜ್ಯೋತ್ಸವದ ಹಾರ್ಧಿಕ್ ಶುಭಾಶಯಗಳು ನಮ್ಮ ದೇಶದ ಹೆಮ್ಮೆಯ ಮೋದಿಜೀ ಅವರಿಗೆ ಈ ನಿಮ್ಮದ ಟ್ವಿಟ್ ಎಲ್ಲಾ ಕನ್ನಡ ಮಹಾ ಜನತೆಗೆ ಖುಷಿ ತಂದಿದೆ ನನ್ನ ದೇವ್ರು … ಎಂದು ನಮೋ ಮಹಾಂತೇಶ್‌ ಎಂಬುವವರು ಟ್ವೀಟ್‌ ಮಾಡಿದ್ದಾರೆ.

ನೀವು ಕನ್ನಡ ಭಾಷೆಯಲ್ಲಿ ಮಾತನಾಡುವುದನ್ನು ಕೇಳುವುದೇ ಚೆಂದ ಮೋದಿ ಅವರೇ, ಹೌದು ಕರ್ನಾಟಕ ವಿಶಾಲ ಹೃದಯ ಉಳ್ಳ ಹೆಮ್ಮೆಯ ಕನ್ನಡಿಗರ ನಾಡು. ಕನ್ನಡ ರಾಜ್ಯೋತ್ಸವದ ಶುಭಾಶಯಗಳು  ಎಂದು ಸಹನಾ ರೇಣುಕಾರವರು ಪ್ರತಿಕ್ರಿಯೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಆತನಿಗೆ ಕನ್ನಡ ಬರುವುದಿಲ್ಲ ಎಂದು ಗೊತ್ತಿದ್ದರೂ ಕೆಲವು ಮೂರ್ಖರು ಪುಳಕಿತರಾಗಿದ್ದಾರಲ್ಲ! ಈತ ರಾಜ್ಯದ ಅಭಿವೃದ್ಧಿಗೆ ಪ್ರಾರ್ಥನೆ ಮಾಡುವ ಬದಲು ಕೆಲಸಮಾಡಲಿ!

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...