Homeಕರ್ನಾಟಕರಾಜ್ಯೋತ್ಸವದ ಕುರಿತು ಕನ್ನಡದಲ್ಲಿ ಟ್ವೀಟ್ ಮಾಡಿ ಪ್ರಶಂಸೆ ಮತ್ತು ಟ್ರೋಲ್‌ಗೊಳಗಾದ ಪ್ರಧಾನಿ ಮೋದಿ...

ರಾಜ್ಯೋತ್ಸವದ ಕುರಿತು ಕನ್ನಡದಲ್ಲಿ ಟ್ವೀಟ್ ಮಾಡಿ ಪ್ರಶಂಸೆ ಮತ್ತು ಟ್ರೋಲ್‌ಗೊಳಗಾದ ಪ್ರಧಾನಿ ಮೋದಿ…

- Advertisement -
- Advertisement -

ಕನ್ನಡದ ರಾಜ್ಯೋತ್ಸವದ ಕುರಿತು ಪ್ರಧಾನಿ ನರೇಂದ್ರ ಮೋದಿಯವರು ಕನ್ನಡದಲ್ಲಿ ಟ್ವೀಟ್‌ ಮಾಡಿ ಪ್ರಾರ್ಥಿಸಿದ್ದಾರೆ. ಹಲವು ಜನರು ಪ್ರಧಾನಿಯವರ ಕನ್ನಡ ಟ್ವೀಟ್‌ ನೋಡಿ ಪುಳಕಿತಗೊಂಡರೆ ಮತ್ತಷ್ಟು ಜನರು ಪ್ರಧಾನಿ ವಿರುದ್ಧ ಕಿಡಿಕಾರಿದ್ದಾರೆ.

“ರಾಷ್ಟ್ರದ ಬೆಳವಣಿಗೆಗೆ ಕರ್ನಾಟಕ ನೀಡಿದ ಅತ್ಯುನ್ನತ ಕೊಡುಗೆಯನ್ನು ಆಚರಣೆ ಮಾಡುವ ದಿವಸವೇ ಕರ್ನಾಟಕ ರಾಜ್ಯೋತ್ಸವ. ಕನ್ನಡಿಗರ ವಿಶಾಲ ಹೃದಯವಂತಿಕೆ ಹಾಗೂ ಕನ್ನಡ ನಾಡಿನ ಸೌಂದರ್ಯ ಹೆಸರುವಾಸಿಯಾದದ್ದು. ಬರುವ ದಿನಗಳಲ್ಲಿ ಕರ್ನಾಟಕದ ಅಭಿವೃದ್ಧಿಗಾಗಿ ಪ್ರಾರ್ಥಿಸುತ್ತೇನೆ.” ಎಂದು ನರೇಂದ್ರ ಮೋದಿಯವರು ಟ್ವೀಟ್‌ ಮಾಡಿದ್ದಾರೆ.

ಇದಕ್ಕೆ “ಸರ್ ನಿಮ್ಮ ಬೆಂಬಲದ ಸರ್ಕಾರ ಇವತ್ತು‌ ಕನ್ನಡದ ಧ್ವಜವನ್ನ ಎಷ್ಟೋ ಜಿಲ್ಲಾ ಕೇಂದ್ರಗಳಲ್ಲಿ‌ ಹಾರಿಸುತ್ತಿಲ್ಲ ಎಂಬ ಸುದ್ದಿ ಬಂದಿಲ್ವ ಯಾಕೆ ಬಂದಿದ್ರು ಸುಮ್ಮನಿದ್ದೀರಾ..” ಎಂದು ಸುಮಂತ್‌ ಗೌಡ ಎಂಬುವವರು ಪ್ರಶ್ನಿಸಿದ್ದಾರೆ.

ಪ್ರಧಾನಿಗಳೇ.. ಈಗ ಏನೋ ಕರ್ನಾಟಕದ ಕಾಳಜಿ ವಹಿಸೋರ ರೀತಿ ಟ್ವೀಟ್ ಮಾಡೋ ನಾಟಕ ಬಿಡಿ.. ಉತ್ತರ ಕರ್ನಾಟಕದ ಜನ ಪ್ರವಾಹದಿಂದ ಸಂಕಷ್ಟದಲ್ಲಿದ್ದಾರೆ ಅವರ ಜೀವನಕ್ಕೆ ಅಗತ್ಯತೆಗಳನ್ನ ಕಲ್ಪಿಸುವ ಕಡೆ ನಿಮ್ಮ ಗಮನ ಕೊಡಿ.. ಈ ನಾಟಕಗಳೆಲ್ಲ ನಿಲ್ಲಿಸಿ, ಇನ್ಮುಂದೆ ಪ್ರಯೋಜನಕ್ಕೆ ಬರಲ್ಲ ಇವು ಎಂದು ಪ್ರಸನ್ನ ಕುಮಾರ ಎಂಬುವವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಒಂದೆಡೆ @BJP4Karnataka
ಸರ್ಕಾರ #ನಾಡಧ್ವಜ ಹಾರದಂತಿರಬೇಕು ಎಂಬ ನೀತಿಯನ್ನು ಜಾರಿಗೊಳಿಸಿದೆ, ಇನ್ನೊಂದೆಡೆ #ರಾಜ್ಯೋತ್ಸವ ಹೆಸರಿನಲ್ಲಿ ಹುಸಿ ಶುಭಾಶಯ ಕೋರುವ ಅವರದೇ ಪಕ್ಷದ ನಾಯಕರು. ಎಂತಹ ಆಶಾಢಭೂತಿತನ ಇವರದ್ದು. #KannadaRajyotsava ಮತ್ತು ಬಾವುಟ ನಮ್ಮ ಹಕ್ಕು ಅದನ್ನು ತಡೆಯಲು ನೆಡೆಸುವ ಸಕಲ ಯತ್ನವೂ ಸೋಲಲಿದೆ. #ಜಯಕರ್ನಾಟಕ ಎಂದು ಸ್ವಾಮಿಯವರು ಪ್ರತಿಕ್ರಿಯೆ ನೀಡಿದ್ದಾರೆ.

ಕನ್ನಡದಲ್ಲಿ ಟ್ವೀಟ್ ಮಾಡಿದಕ್ಕೆ ಧನ್ಯವಾದಗಳು ಮೋದಿಜಿ. ಆದರೆ ಕರ್ನಾಟಕಕ್ಕೆ ನಿಮ್ಮ ಕೊಡುಗೆ ಏನು ? ಕನ್ನಡಿಗರು ವಿಶಾಲ ಹೃದಯವಂತಿಕೆಯರು ನಿಜ,ಆದರೆ ನಮ್ಮ ನಾಡ ಧ್ವಜದ ತಂಟೆಗೆ ಬರೋದು,ಬಲವಂತದ ಹಿಂದಿ ಹೇರಿಕೆ ಸಹಿಸೊಲ್ಲ. ಕೊಡುಗೆ ನೀಡಿ ಮಾತಾಡಿ.. ಕನ್ನಡ ಕಾಮಧೇನು… ಕರ್ನಾಟಕ ಕಲ್ಪವೃಕ್ಷ.. ಎಂದು ದೇವರಾಜ್‌ ಅಚಾರ್ಯರವರು ಕಮೆಂಟ್‌ ಮಾಡಿದ್ದಾರೆ.

ಇಂದು ಮಾಡುವ ಟ್ವೀಟ್ ಅನ್ನು ಅಂದು ಉತ್ತರ ಕರ್ನಾಟಕ ಮುಳುಗಿದಾಗ ಮಾಡಿದ್ದರೆ ನಮ್ಮ ಜನರಿಗೆ ಇನ್ನೂ ಹತ್ತಿರವಾಗುತ್ತಿದ್ದೀರಿ. ಇನ್ನೂ ಕಾಲ ಮಿಂಚಿಲ್ಲ ಕನ್ನಡತನವನ್ನು ಉಳಿಸಿ ಬೆಳೆಸುವ ನಿಮ್ಮ ಮಾತು ಬರೀ ಟ್ವೀಟ್ ಗೆ ಸಿಮೀತವಾಗದೆ ಕಾರ್ಯರೂಪಕ್ಕೆ ಬರುವ ಮಾತಾಗಲಿ. ಎಂದು ತರ್ಲೆಪುಟ್ಟ ಎಂಬುವವರು ಟ್ವೀಟ್‌ ಮಾಡಿದ್ದಾರೆ.

ಮೊದಲು ನೆರೆ ಸಂತ್ರಸ್ತರಿಗೆ ಹಣ ಕೊಡಪ್ಪ..ಕನ್ನಡದ ಮೇಲಿನ ದಬ್ಬಾಳಿಕೆ ನಿಲ್ಲಿಸಪ್ಪ ತಾತಪ್ಪ.. ಆಮೇಲೆ ಬೇಕಿದ್ರೆ ನಾಟಕ ಮಾಡು ಎಂದು ಸಾಗರ್‌ ಮನಸು ಪ್ರತಿಕ್ರಿಯಿಸಿದ್ದಾರೆ.

ಧನ್ಯವಾದಗಳು. ನಿಮ್ಮ ಈ ಸಂದೇಶ ಪರಿಪೂರ್ಣವಾಗುವುದು ನೆರೆ ಸಂತ್ರಸ್ಥರಿಗೆ ಸಿಗಬೇಕಾದ ಎಲ್ಲಾ ರೀತಿಯ ಸಹಾಯಗಳು ದೊರೆತಾಗ ಮಾತ್ರ! ಎಂದು ಗಣೇಶ್‌ ರಾವ್‌ರವರು ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಚುನಾವಣೆ ಬಂದಾಗ 20ಕ್ಕು ಹೆಚ್ಚು ಬಾರಿ ಚುನಾವಣಾ ಪ್ರಚಾರಕ್ಕೆ ಬರುವ ನೀವು ನೆರೆ ಬಂದಾಗ ಒಮ್ಮೆಯೂ ಭೇಟಿ ನೀಡಿಲ್ಲ ಮತ್ತು ನೀಡೋದು ಇಲ್ಲ. ಆದರೆ ಇವಾಗ ದೊಡ್ಡದಾಗಿ #ಕನ್ನಡರಾಜ್ಯೋತ್ಸವ ದ ಶುಭಾಶಯ ತಿಳಿಸುತ್ತಿದ್ದೀರಿ? ನಿಮ್ಮ ನಟನೆಯ ಮುಂದೆ ಎಲ್ಲಾ ನಟರು ಶೂನ್ಯ ಬಿಡಿ ಎಂದು ಚೇತನ್‌ ಕುಮಾರ್‌ ಎಂಬುವವರು ಕಿಡಿಕಾರಿದ್ದಾರೆ.

ತಮಗೂ ಕೂಡಾ ಕನ್ನಡ ರಾಜ್ಯೋತ್ಸವದ ಹಾರ್ಧಿಕ್ ಶುಭಾಶಯಗಳು ನಮ್ಮ ದೇಶದ ಹೆಮ್ಮೆಯ ಮೋದಿಜೀ ಅವರಿಗೆ ಈ ನಿಮ್ಮದ ಟ್ವಿಟ್ ಎಲ್ಲಾ ಕನ್ನಡ ಮಹಾ ಜನತೆಗೆ ಖುಷಿ ತಂದಿದೆ ನನ್ನ ದೇವ್ರು … ಎಂದು ನಮೋ ಮಹಾಂತೇಶ್‌ ಎಂಬುವವರು ಟ್ವೀಟ್‌ ಮಾಡಿದ್ದಾರೆ.

ನೀವು ಕನ್ನಡ ಭಾಷೆಯಲ್ಲಿ ಮಾತನಾಡುವುದನ್ನು ಕೇಳುವುದೇ ಚೆಂದ ಮೋದಿ ಅವರೇ, ಹೌದು ಕರ್ನಾಟಕ ವಿಶಾಲ ಹೃದಯ ಉಳ್ಳ ಹೆಮ್ಮೆಯ ಕನ್ನಡಿಗರ ನಾಡು. ಕನ್ನಡ ರಾಜ್ಯೋತ್ಸವದ ಶುಭಾಶಯಗಳು  ಎಂದು ಸಹನಾ ರೇಣುಕಾರವರು ಪ್ರತಿಕ್ರಿಯೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಆತನಿಗೆ ಕನ್ನಡ ಬರುವುದಿಲ್ಲ ಎಂದು ಗೊತ್ತಿದ್ದರೂ ಕೆಲವು ಮೂರ್ಖರು ಪುಳಕಿತರಾಗಿದ್ದಾರಲ್ಲ! ಈತ ರಾಜ್ಯದ ಅಭಿವೃದ್ಧಿಗೆ ಪ್ರಾರ್ಥನೆ ಮಾಡುವ ಬದಲು ಕೆಲಸಮಾಡಲಿ!

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...