Homeಕರ್ನಾಟಕರಾಜ್ಯೋತ್ಸವದ ಕುರಿತು ಕನ್ನಡದಲ್ಲಿ ಟ್ವೀಟ್ ಮಾಡಿ ಪ್ರಶಂಸೆ ಮತ್ತು ಟ್ರೋಲ್‌ಗೊಳಗಾದ ಪ್ರಧಾನಿ ಮೋದಿ...

ರಾಜ್ಯೋತ್ಸವದ ಕುರಿತು ಕನ್ನಡದಲ್ಲಿ ಟ್ವೀಟ್ ಮಾಡಿ ಪ್ರಶಂಸೆ ಮತ್ತು ಟ್ರೋಲ್‌ಗೊಳಗಾದ ಪ್ರಧಾನಿ ಮೋದಿ…

- Advertisement -
- Advertisement -

ಕನ್ನಡದ ರಾಜ್ಯೋತ್ಸವದ ಕುರಿತು ಪ್ರಧಾನಿ ನರೇಂದ್ರ ಮೋದಿಯವರು ಕನ್ನಡದಲ್ಲಿ ಟ್ವೀಟ್‌ ಮಾಡಿ ಪ್ರಾರ್ಥಿಸಿದ್ದಾರೆ. ಹಲವು ಜನರು ಪ್ರಧಾನಿಯವರ ಕನ್ನಡ ಟ್ವೀಟ್‌ ನೋಡಿ ಪುಳಕಿತಗೊಂಡರೆ ಮತ್ತಷ್ಟು ಜನರು ಪ್ರಧಾನಿ ವಿರುದ್ಧ ಕಿಡಿಕಾರಿದ್ದಾರೆ.

“ರಾಷ್ಟ್ರದ ಬೆಳವಣಿಗೆಗೆ ಕರ್ನಾಟಕ ನೀಡಿದ ಅತ್ಯುನ್ನತ ಕೊಡುಗೆಯನ್ನು ಆಚರಣೆ ಮಾಡುವ ದಿವಸವೇ ಕರ್ನಾಟಕ ರಾಜ್ಯೋತ್ಸವ. ಕನ್ನಡಿಗರ ವಿಶಾಲ ಹೃದಯವಂತಿಕೆ ಹಾಗೂ ಕನ್ನಡ ನಾಡಿನ ಸೌಂದರ್ಯ ಹೆಸರುವಾಸಿಯಾದದ್ದು. ಬರುವ ದಿನಗಳಲ್ಲಿ ಕರ್ನಾಟಕದ ಅಭಿವೃದ್ಧಿಗಾಗಿ ಪ್ರಾರ್ಥಿಸುತ್ತೇನೆ.” ಎಂದು ನರೇಂದ್ರ ಮೋದಿಯವರು ಟ್ವೀಟ್‌ ಮಾಡಿದ್ದಾರೆ.

ಇದಕ್ಕೆ “ಸರ್ ನಿಮ್ಮ ಬೆಂಬಲದ ಸರ್ಕಾರ ಇವತ್ತು‌ ಕನ್ನಡದ ಧ್ವಜವನ್ನ ಎಷ್ಟೋ ಜಿಲ್ಲಾ ಕೇಂದ್ರಗಳಲ್ಲಿ‌ ಹಾರಿಸುತ್ತಿಲ್ಲ ಎಂಬ ಸುದ್ದಿ ಬಂದಿಲ್ವ ಯಾಕೆ ಬಂದಿದ್ರು ಸುಮ್ಮನಿದ್ದೀರಾ..” ಎಂದು ಸುಮಂತ್‌ ಗೌಡ ಎಂಬುವವರು ಪ್ರಶ್ನಿಸಿದ್ದಾರೆ.

ಪ್ರಧಾನಿಗಳೇ.. ಈಗ ಏನೋ ಕರ್ನಾಟಕದ ಕಾಳಜಿ ವಹಿಸೋರ ರೀತಿ ಟ್ವೀಟ್ ಮಾಡೋ ನಾಟಕ ಬಿಡಿ.. ಉತ್ತರ ಕರ್ನಾಟಕದ ಜನ ಪ್ರವಾಹದಿಂದ ಸಂಕಷ್ಟದಲ್ಲಿದ್ದಾರೆ ಅವರ ಜೀವನಕ್ಕೆ ಅಗತ್ಯತೆಗಳನ್ನ ಕಲ್ಪಿಸುವ ಕಡೆ ನಿಮ್ಮ ಗಮನ ಕೊಡಿ.. ಈ ನಾಟಕಗಳೆಲ್ಲ ನಿಲ್ಲಿಸಿ, ಇನ್ಮುಂದೆ ಪ್ರಯೋಜನಕ್ಕೆ ಬರಲ್ಲ ಇವು ಎಂದು ಪ್ರಸನ್ನ ಕುಮಾರ ಎಂಬುವವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಒಂದೆಡೆ @BJP4Karnataka
ಸರ್ಕಾರ #ನಾಡಧ್ವಜ ಹಾರದಂತಿರಬೇಕು ಎಂಬ ನೀತಿಯನ್ನು ಜಾರಿಗೊಳಿಸಿದೆ, ಇನ್ನೊಂದೆಡೆ #ರಾಜ್ಯೋತ್ಸವ ಹೆಸರಿನಲ್ಲಿ ಹುಸಿ ಶುಭಾಶಯ ಕೋರುವ ಅವರದೇ ಪಕ್ಷದ ನಾಯಕರು. ಎಂತಹ ಆಶಾಢಭೂತಿತನ ಇವರದ್ದು. #KannadaRajyotsava ಮತ್ತು ಬಾವುಟ ನಮ್ಮ ಹಕ್ಕು ಅದನ್ನು ತಡೆಯಲು ನೆಡೆಸುವ ಸಕಲ ಯತ್ನವೂ ಸೋಲಲಿದೆ. #ಜಯಕರ್ನಾಟಕ ಎಂದು ಸ್ವಾಮಿಯವರು ಪ್ರತಿಕ್ರಿಯೆ ನೀಡಿದ್ದಾರೆ.

ಕನ್ನಡದಲ್ಲಿ ಟ್ವೀಟ್ ಮಾಡಿದಕ್ಕೆ ಧನ್ಯವಾದಗಳು ಮೋದಿಜಿ. ಆದರೆ ಕರ್ನಾಟಕಕ್ಕೆ ನಿಮ್ಮ ಕೊಡುಗೆ ಏನು ? ಕನ್ನಡಿಗರು ವಿಶಾಲ ಹೃದಯವಂತಿಕೆಯರು ನಿಜ,ಆದರೆ ನಮ್ಮ ನಾಡ ಧ್ವಜದ ತಂಟೆಗೆ ಬರೋದು,ಬಲವಂತದ ಹಿಂದಿ ಹೇರಿಕೆ ಸಹಿಸೊಲ್ಲ. ಕೊಡುಗೆ ನೀಡಿ ಮಾತಾಡಿ.. ಕನ್ನಡ ಕಾಮಧೇನು… ಕರ್ನಾಟಕ ಕಲ್ಪವೃಕ್ಷ.. ಎಂದು ದೇವರಾಜ್‌ ಅಚಾರ್ಯರವರು ಕಮೆಂಟ್‌ ಮಾಡಿದ್ದಾರೆ.

ಇಂದು ಮಾಡುವ ಟ್ವೀಟ್ ಅನ್ನು ಅಂದು ಉತ್ತರ ಕರ್ನಾಟಕ ಮುಳುಗಿದಾಗ ಮಾಡಿದ್ದರೆ ನಮ್ಮ ಜನರಿಗೆ ಇನ್ನೂ ಹತ್ತಿರವಾಗುತ್ತಿದ್ದೀರಿ. ಇನ್ನೂ ಕಾಲ ಮಿಂಚಿಲ್ಲ ಕನ್ನಡತನವನ್ನು ಉಳಿಸಿ ಬೆಳೆಸುವ ನಿಮ್ಮ ಮಾತು ಬರೀ ಟ್ವೀಟ್ ಗೆ ಸಿಮೀತವಾಗದೆ ಕಾರ್ಯರೂಪಕ್ಕೆ ಬರುವ ಮಾತಾಗಲಿ. ಎಂದು ತರ್ಲೆಪುಟ್ಟ ಎಂಬುವವರು ಟ್ವೀಟ್‌ ಮಾಡಿದ್ದಾರೆ.

ಮೊದಲು ನೆರೆ ಸಂತ್ರಸ್ತರಿಗೆ ಹಣ ಕೊಡಪ್ಪ..ಕನ್ನಡದ ಮೇಲಿನ ದಬ್ಬಾಳಿಕೆ ನಿಲ್ಲಿಸಪ್ಪ ತಾತಪ್ಪ.. ಆಮೇಲೆ ಬೇಕಿದ್ರೆ ನಾಟಕ ಮಾಡು ಎಂದು ಸಾಗರ್‌ ಮನಸು ಪ್ರತಿಕ್ರಿಯಿಸಿದ್ದಾರೆ.

ಧನ್ಯವಾದಗಳು. ನಿಮ್ಮ ಈ ಸಂದೇಶ ಪರಿಪೂರ್ಣವಾಗುವುದು ನೆರೆ ಸಂತ್ರಸ್ಥರಿಗೆ ಸಿಗಬೇಕಾದ ಎಲ್ಲಾ ರೀತಿಯ ಸಹಾಯಗಳು ದೊರೆತಾಗ ಮಾತ್ರ! ಎಂದು ಗಣೇಶ್‌ ರಾವ್‌ರವರು ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಚುನಾವಣೆ ಬಂದಾಗ 20ಕ್ಕು ಹೆಚ್ಚು ಬಾರಿ ಚುನಾವಣಾ ಪ್ರಚಾರಕ್ಕೆ ಬರುವ ನೀವು ನೆರೆ ಬಂದಾಗ ಒಮ್ಮೆಯೂ ಭೇಟಿ ನೀಡಿಲ್ಲ ಮತ್ತು ನೀಡೋದು ಇಲ್ಲ. ಆದರೆ ಇವಾಗ ದೊಡ್ಡದಾಗಿ #ಕನ್ನಡರಾಜ್ಯೋತ್ಸವ ದ ಶುಭಾಶಯ ತಿಳಿಸುತ್ತಿದ್ದೀರಿ? ನಿಮ್ಮ ನಟನೆಯ ಮುಂದೆ ಎಲ್ಲಾ ನಟರು ಶೂನ್ಯ ಬಿಡಿ ಎಂದು ಚೇತನ್‌ ಕುಮಾರ್‌ ಎಂಬುವವರು ಕಿಡಿಕಾರಿದ್ದಾರೆ.

ತಮಗೂ ಕೂಡಾ ಕನ್ನಡ ರಾಜ್ಯೋತ್ಸವದ ಹಾರ್ಧಿಕ್ ಶುಭಾಶಯಗಳು ನಮ್ಮ ದೇಶದ ಹೆಮ್ಮೆಯ ಮೋದಿಜೀ ಅವರಿಗೆ ಈ ನಿಮ್ಮದ ಟ್ವಿಟ್ ಎಲ್ಲಾ ಕನ್ನಡ ಮಹಾ ಜನತೆಗೆ ಖುಷಿ ತಂದಿದೆ ನನ್ನ ದೇವ್ರು … ಎಂದು ನಮೋ ಮಹಾಂತೇಶ್‌ ಎಂಬುವವರು ಟ್ವೀಟ್‌ ಮಾಡಿದ್ದಾರೆ.

ನೀವು ಕನ್ನಡ ಭಾಷೆಯಲ್ಲಿ ಮಾತನಾಡುವುದನ್ನು ಕೇಳುವುದೇ ಚೆಂದ ಮೋದಿ ಅವರೇ, ಹೌದು ಕರ್ನಾಟಕ ವಿಶಾಲ ಹೃದಯ ಉಳ್ಳ ಹೆಮ್ಮೆಯ ಕನ್ನಡಿಗರ ನಾಡು. ಕನ್ನಡ ರಾಜ್ಯೋತ್ಸವದ ಶುಭಾಶಯಗಳು  ಎಂದು ಸಹನಾ ರೇಣುಕಾರವರು ಪ್ರತಿಕ್ರಿಯೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಆತನಿಗೆ ಕನ್ನಡ ಬರುವುದಿಲ್ಲ ಎಂದು ಗೊತ್ತಿದ್ದರೂ ಕೆಲವು ಮೂರ್ಖರು ಪುಳಕಿತರಾಗಿದ್ದಾರಲ್ಲ! ಈತ ರಾಜ್ಯದ ಅಭಿವೃದ್ಧಿಗೆ ಪ್ರಾರ್ಥನೆ ಮಾಡುವ ಬದಲು ಕೆಲಸಮಾಡಲಿ!

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...