Homeಕರ್ನಾಟಕರಾಜ್ಯೋತ್ಸವದ ಕುರಿತು ಕನ್ನಡದಲ್ಲಿ ಟ್ವೀಟ್ ಮಾಡಿ ಪ್ರಶಂಸೆ ಮತ್ತು ಟ್ರೋಲ್‌ಗೊಳಗಾದ ಪ್ರಧಾನಿ ಮೋದಿ...

ರಾಜ್ಯೋತ್ಸವದ ಕುರಿತು ಕನ್ನಡದಲ್ಲಿ ಟ್ವೀಟ್ ಮಾಡಿ ಪ್ರಶಂಸೆ ಮತ್ತು ಟ್ರೋಲ್‌ಗೊಳಗಾದ ಪ್ರಧಾನಿ ಮೋದಿ…

- Advertisement -
- Advertisement -

ಕನ್ನಡದ ರಾಜ್ಯೋತ್ಸವದ ಕುರಿತು ಪ್ರಧಾನಿ ನರೇಂದ್ರ ಮೋದಿಯವರು ಕನ್ನಡದಲ್ಲಿ ಟ್ವೀಟ್‌ ಮಾಡಿ ಪ್ರಾರ್ಥಿಸಿದ್ದಾರೆ. ಹಲವು ಜನರು ಪ್ರಧಾನಿಯವರ ಕನ್ನಡ ಟ್ವೀಟ್‌ ನೋಡಿ ಪುಳಕಿತಗೊಂಡರೆ ಮತ್ತಷ್ಟು ಜನರು ಪ್ರಧಾನಿ ವಿರುದ್ಧ ಕಿಡಿಕಾರಿದ್ದಾರೆ.

“ರಾಷ್ಟ್ರದ ಬೆಳವಣಿಗೆಗೆ ಕರ್ನಾಟಕ ನೀಡಿದ ಅತ್ಯುನ್ನತ ಕೊಡುಗೆಯನ್ನು ಆಚರಣೆ ಮಾಡುವ ದಿವಸವೇ ಕರ್ನಾಟಕ ರಾಜ್ಯೋತ್ಸವ. ಕನ್ನಡಿಗರ ವಿಶಾಲ ಹೃದಯವಂತಿಕೆ ಹಾಗೂ ಕನ್ನಡ ನಾಡಿನ ಸೌಂದರ್ಯ ಹೆಸರುವಾಸಿಯಾದದ್ದು. ಬರುವ ದಿನಗಳಲ್ಲಿ ಕರ್ನಾಟಕದ ಅಭಿವೃದ್ಧಿಗಾಗಿ ಪ್ರಾರ್ಥಿಸುತ್ತೇನೆ.” ಎಂದು ನರೇಂದ್ರ ಮೋದಿಯವರು ಟ್ವೀಟ್‌ ಮಾಡಿದ್ದಾರೆ.

ಇದಕ್ಕೆ “ಸರ್ ನಿಮ್ಮ ಬೆಂಬಲದ ಸರ್ಕಾರ ಇವತ್ತು‌ ಕನ್ನಡದ ಧ್ವಜವನ್ನ ಎಷ್ಟೋ ಜಿಲ್ಲಾ ಕೇಂದ್ರಗಳಲ್ಲಿ‌ ಹಾರಿಸುತ್ತಿಲ್ಲ ಎಂಬ ಸುದ್ದಿ ಬಂದಿಲ್ವ ಯಾಕೆ ಬಂದಿದ್ರು ಸುಮ್ಮನಿದ್ದೀರಾ..” ಎಂದು ಸುಮಂತ್‌ ಗೌಡ ಎಂಬುವವರು ಪ್ರಶ್ನಿಸಿದ್ದಾರೆ.

ಪ್ರಧಾನಿಗಳೇ.. ಈಗ ಏನೋ ಕರ್ನಾಟಕದ ಕಾಳಜಿ ವಹಿಸೋರ ರೀತಿ ಟ್ವೀಟ್ ಮಾಡೋ ನಾಟಕ ಬಿಡಿ.. ಉತ್ತರ ಕರ್ನಾಟಕದ ಜನ ಪ್ರವಾಹದಿಂದ ಸಂಕಷ್ಟದಲ್ಲಿದ್ದಾರೆ ಅವರ ಜೀವನಕ್ಕೆ ಅಗತ್ಯತೆಗಳನ್ನ ಕಲ್ಪಿಸುವ ಕಡೆ ನಿಮ್ಮ ಗಮನ ಕೊಡಿ.. ಈ ನಾಟಕಗಳೆಲ್ಲ ನಿಲ್ಲಿಸಿ, ಇನ್ಮುಂದೆ ಪ್ರಯೋಜನಕ್ಕೆ ಬರಲ್ಲ ಇವು ಎಂದು ಪ್ರಸನ್ನ ಕುಮಾರ ಎಂಬುವವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಒಂದೆಡೆ @BJP4Karnataka
ಸರ್ಕಾರ #ನಾಡಧ್ವಜ ಹಾರದಂತಿರಬೇಕು ಎಂಬ ನೀತಿಯನ್ನು ಜಾರಿಗೊಳಿಸಿದೆ, ಇನ್ನೊಂದೆಡೆ #ರಾಜ್ಯೋತ್ಸವ ಹೆಸರಿನಲ್ಲಿ ಹುಸಿ ಶುಭಾಶಯ ಕೋರುವ ಅವರದೇ ಪಕ್ಷದ ನಾಯಕರು. ಎಂತಹ ಆಶಾಢಭೂತಿತನ ಇವರದ್ದು. #KannadaRajyotsava ಮತ್ತು ಬಾವುಟ ನಮ್ಮ ಹಕ್ಕು ಅದನ್ನು ತಡೆಯಲು ನೆಡೆಸುವ ಸಕಲ ಯತ್ನವೂ ಸೋಲಲಿದೆ. #ಜಯಕರ್ನಾಟಕ ಎಂದು ಸ್ವಾಮಿಯವರು ಪ್ರತಿಕ್ರಿಯೆ ನೀಡಿದ್ದಾರೆ.

ಕನ್ನಡದಲ್ಲಿ ಟ್ವೀಟ್ ಮಾಡಿದಕ್ಕೆ ಧನ್ಯವಾದಗಳು ಮೋದಿಜಿ. ಆದರೆ ಕರ್ನಾಟಕಕ್ಕೆ ನಿಮ್ಮ ಕೊಡುಗೆ ಏನು ? ಕನ್ನಡಿಗರು ವಿಶಾಲ ಹೃದಯವಂತಿಕೆಯರು ನಿಜ,ಆದರೆ ನಮ್ಮ ನಾಡ ಧ್ವಜದ ತಂಟೆಗೆ ಬರೋದು,ಬಲವಂತದ ಹಿಂದಿ ಹೇರಿಕೆ ಸಹಿಸೊಲ್ಲ. ಕೊಡುಗೆ ನೀಡಿ ಮಾತಾಡಿ.. ಕನ್ನಡ ಕಾಮಧೇನು… ಕರ್ನಾಟಕ ಕಲ್ಪವೃಕ್ಷ.. ಎಂದು ದೇವರಾಜ್‌ ಅಚಾರ್ಯರವರು ಕಮೆಂಟ್‌ ಮಾಡಿದ್ದಾರೆ.

ಇಂದು ಮಾಡುವ ಟ್ವೀಟ್ ಅನ್ನು ಅಂದು ಉತ್ತರ ಕರ್ನಾಟಕ ಮುಳುಗಿದಾಗ ಮಾಡಿದ್ದರೆ ನಮ್ಮ ಜನರಿಗೆ ಇನ್ನೂ ಹತ್ತಿರವಾಗುತ್ತಿದ್ದೀರಿ. ಇನ್ನೂ ಕಾಲ ಮಿಂಚಿಲ್ಲ ಕನ್ನಡತನವನ್ನು ಉಳಿಸಿ ಬೆಳೆಸುವ ನಿಮ್ಮ ಮಾತು ಬರೀ ಟ್ವೀಟ್ ಗೆ ಸಿಮೀತವಾಗದೆ ಕಾರ್ಯರೂಪಕ್ಕೆ ಬರುವ ಮಾತಾಗಲಿ. ಎಂದು ತರ್ಲೆಪುಟ್ಟ ಎಂಬುವವರು ಟ್ವೀಟ್‌ ಮಾಡಿದ್ದಾರೆ.

ಮೊದಲು ನೆರೆ ಸಂತ್ರಸ್ತರಿಗೆ ಹಣ ಕೊಡಪ್ಪ..ಕನ್ನಡದ ಮೇಲಿನ ದಬ್ಬಾಳಿಕೆ ನಿಲ್ಲಿಸಪ್ಪ ತಾತಪ್ಪ.. ಆಮೇಲೆ ಬೇಕಿದ್ರೆ ನಾಟಕ ಮಾಡು ಎಂದು ಸಾಗರ್‌ ಮನಸು ಪ್ರತಿಕ್ರಿಯಿಸಿದ್ದಾರೆ.

ಧನ್ಯವಾದಗಳು. ನಿಮ್ಮ ಈ ಸಂದೇಶ ಪರಿಪೂರ್ಣವಾಗುವುದು ನೆರೆ ಸಂತ್ರಸ್ಥರಿಗೆ ಸಿಗಬೇಕಾದ ಎಲ್ಲಾ ರೀತಿಯ ಸಹಾಯಗಳು ದೊರೆತಾಗ ಮಾತ್ರ! ಎಂದು ಗಣೇಶ್‌ ರಾವ್‌ರವರು ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಚುನಾವಣೆ ಬಂದಾಗ 20ಕ್ಕು ಹೆಚ್ಚು ಬಾರಿ ಚುನಾವಣಾ ಪ್ರಚಾರಕ್ಕೆ ಬರುವ ನೀವು ನೆರೆ ಬಂದಾಗ ಒಮ್ಮೆಯೂ ಭೇಟಿ ನೀಡಿಲ್ಲ ಮತ್ತು ನೀಡೋದು ಇಲ್ಲ. ಆದರೆ ಇವಾಗ ದೊಡ್ಡದಾಗಿ #ಕನ್ನಡರಾಜ್ಯೋತ್ಸವ ದ ಶುಭಾಶಯ ತಿಳಿಸುತ್ತಿದ್ದೀರಿ? ನಿಮ್ಮ ನಟನೆಯ ಮುಂದೆ ಎಲ್ಲಾ ನಟರು ಶೂನ್ಯ ಬಿಡಿ ಎಂದು ಚೇತನ್‌ ಕುಮಾರ್‌ ಎಂಬುವವರು ಕಿಡಿಕಾರಿದ್ದಾರೆ.

ತಮಗೂ ಕೂಡಾ ಕನ್ನಡ ರಾಜ್ಯೋತ್ಸವದ ಹಾರ್ಧಿಕ್ ಶುಭಾಶಯಗಳು ನಮ್ಮ ದೇಶದ ಹೆಮ್ಮೆಯ ಮೋದಿಜೀ ಅವರಿಗೆ ಈ ನಿಮ್ಮದ ಟ್ವಿಟ್ ಎಲ್ಲಾ ಕನ್ನಡ ಮಹಾ ಜನತೆಗೆ ಖುಷಿ ತಂದಿದೆ ನನ್ನ ದೇವ್ರು … ಎಂದು ನಮೋ ಮಹಾಂತೇಶ್‌ ಎಂಬುವವರು ಟ್ವೀಟ್‌ ಮಾಡಿದ್ದಾರೆ.

ನೀವು ಕನ್ನಡ ಭಾಷೆಯಲ್ಲಿ ಮಾತನಾಡುವುದನ್ನು ಕೇಳುವುದೇ ಚೆಂದ ಮೋದಿ ಅವರೇ, ಹೌದು ಕರ್ನಾಟಕ ವಿಶಾಲ ಹೃದಯ ಉಳ್ಳ ಹೆಮ್ಮೆಯ ಕನ್ನಡಿಗರ ನಾಡು. ಕನ್ನಡ ರಾಜ್ಯೋತ್ಸವದ ಶುಭಾಶಯಗಳು  ಎಂದು ಸಹನಾ ರೇಣುಕಾರವರು ಪ್ರತಿಕ್ರಿಯೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಆತನಿಗೆ ಕನ್ನಡ ಬರುವುದಿಲ್ಲ ಎಂದು ಗೊತ್ತಿದ್ದರೂ ಕೆಲವು ಮೂರ್ಖರು ಪುಳಕಿತರಾಗಿದ್ದಾರಲ್ಲ! ಈತ ರಾಜ್ಯದ ಅಭಿವೃದ್ಧಿಗೆ ಪ್ರಾರ್ಥನೆ ಮಾಡುವ ಬದಲು ಕೆಲಸಮಾಡಲಿ!

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...