Homeಚಳವಳಿರಾಜ್ಯೋತ್ಸವದಂದು ಕನ್ನಡ ಧ್ವಜ ಹಾರಿಸದ ಸರ್ಕಾರದ ನಡೆಗೆ ಕನ್ನಡಿಗರ ಆಕ್ರೋಶ: ಟ್ವಿಟರ್ ಆಂದೋಲನಕ್ಕೆ ಕರೆ

ರಾಜ್ಯೋತ್ಸವದಂದು ಕನ್ನಡ ಧ್ವಜ ಹಾರಿಸದ ಸರ್ಕಾರದ ನಡೆಗೆ ಕನ್ನಡಿಗರ ಆಕ್ರೋಶ: ಟ್ವಿಟರ್ ಆಂದೋಲನಕ್ಕೆ ಕರೆ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರೇ ಕನ್ನಡ ಧ್ವಜ ಹಾರಿಸಿರುವಾಗ ಜಿಲ್ಲಾ ಉಸ್ತುವಾರಿ ಸಚಿವರು ಬಾವುಟ ಹಾರಿಸದಂತೆ ತಡೆದ ಶಕ್ತಿ ಯಾವುದು ಎಂದು ಕರ್ನಾಟಕ ರಕ್ಷಣಾ ವೇದಿಕೆ ಪ್ರಶ್ನಿಸಿದೆ.

- Advertisement -
- Advertisement -

ನಿನ್ನೆ 65ನೇ ಕನ್ನಡ ರಾಜ್ಯೋತ್ಸವ ಜರುಗಿದೆ. ಪ್ರತಿ ವರ್ಷವು ಕನ್ನಡದ ಹಬ್ಬದಂತೆ ವಿಜೃಂಭಣೆಯಿಂದ ಆಚರಿಸುತ್ತಿದ್ದ ಕನ್ನಡಿಗರ ಪಾಲಿಗೆ ಈ ವರ್ಷ ಕೊರೊನಾ ಸಣ್ಣ ತಡೆಯಾದರೆ ಬಿಜೆಪಿ ಸರ್ಕಾರ ದೊಡ್ಡ ಬಂಡೆಯಂತೆ ಅಡ್ಡನಿಂತಿದೆ. ರಾಜ್ಯೋತ್ಸವದಂದೇ ಜಿಲ್ಲಾಕೇಂದ್ರಗಳಲ್ಲಿ ಕನ್ನಡ ಧ್ವಜ ಹಾರಿಸದೆ ಕೇವಲ ರಾಷ್ಟ್ರಧ್ವಜ ಮಾತ್ರ ಹಾರಿಸಿದ ಸರ್ಕಾರದ ನಡೆಗೆ ಕನ್ನಡಿಗರು ಕೆಂಡಾಮಂಡಲವಾಗಿದ್ದಾರೆ.

ಮೊದಲಿಗೆ ಕೊರೊನಾ ಮಾರ್ಗಸೂಚಿಗಳ ಅನ್ವಯ 100 ಜನಕ್ಕಿಂತ ಹೆಚ್ಚು ಸೇರಬಾರದು, ಮೆರವಣಿಗೆ ಮಾಡಬಾರದು, ಕಾರ್ಯಕ್ರಮಕ್ಕೆ ಅನುಮತಿ ಪಡೆಯಬೇಕೆಂದು ನಿಯಮಗಳನ್ನು ಹೇರಿದ ಸರ್ಕಾರ, ಉಪಚುನಾವಣೆಯ ಪ್ರಚಾರಕ್ಕೆ ಮಾತ್ರ ನಿಷೇಧ ಹೇರಿಲ್ಲ ಎಂದು ಹಲವು ಕನ್ನಡಿಗರು ಕಿಡಿಕಾರಿದ್ದಾರೆ.

ಮಂಡ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇವಲ ರಾಷ್ಟ್ರ ಧ್ವಜ ಮಾತ್ರ ಹಾರಿಸಿರುವುದು.

ಇನ್ನು ಕನ್ನಡ ರಾಜ್ಯೋತ್ಸವದ ದಿನವಾದ ನಿನ್ನೆ ಹಲವಾರು ಜಿಲ್ಲಾಕೇಂದ್ರಗಳಲ್ಲಿ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ಕನ್ನಡ ಧ್ವಜ ಹಾರಿಸದೇ ಕನ್ನಡಿಗರ ಸ್ವಾಭಿಮಾನವನ್ನು ಕೆಣಕಲಾಗಿದೆ. ಸ್ವತಃ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರೇ ಕನ್ನಡ ಧ್ವಜ ಹಾರಿಸಿರುವಾಗ ಜಿಲ್ಲಾ ಉಸ್ತುವಾರಿ ಸಚಿವರು ಬಾವುಟ ಹಾರಿಸದಂತೆ ತಡೆದ ಶಕ್ತಿ ಯಾವುದು ಎಂದು ಕರ್ನಾಟಕ ರಕ್ಷಣಾ ವೇದಿಕೆ ಪ್ರಶ್ನಿಸಿದೆ.

ಸರ್ಕಾರದ, ಸಚಿವರುಗಳ ಉದ್ಧಟತನದ, ಅಭಿಮಾನಶೂನ್ಯ ನಡೆಯನ್ನು ಖಂಡಿಸಲು ಇಂದು ಸಂಜೆ 5 ಗಂಟೆಯಿಂದ #ನಮ್ಮಧ್ವಜ_ನಮ್ಮಹೆಮ್ಮೆ ಹೆಸರಿನಲ್ಲಿ ಟ್ವಿಟರ್ ಆಂದೋಲನಕ್ಕೆ ಕರೆ ನೀಡಿದೆ.

ಕರ್ನಾಟಕ ಏಕೀಕರಣದ 65 ವರ್ಷಗಳ ಇತಿಹಾಸದಲ್ಲಿ ರಾಜ್ಯೋತ್ಸವದಂದು ಕನ್ನಡ ಧ್ವಜ ರಾರಾಜಿಸುತ್ತಿತ್ತು. ಆದರೆ 2017 ರಿಂದ ಬಿಜೆಪಿ ಪಕ್ಷ ಮತ್ತು ಸಂಘಪರಿವಾರ ಒಂದು ದೇಶ- ಒಂದು ಧ್ವಜ ಎಂಬ ಹೆಸರಿನಲ್ಲಿ ಕೇವಲ ರಾಷ್ಟ್ರಧ್ವಜ ಮಾತ್ರ ಹಾರಿಸಬೇಕು ಎಂಬ ಪ್ರಚಾರ ಆರಂಭಿಸಿತು. ಅಲ್ಲಿಂದ ಆರಂಭವಾಗಿ ದೇಶಕ್ಕೆ ಒಂದೇ ಧ್ವಜ ಸಾಕು, ಕನ್ನಡ ಧ್ವಜದ ಅವಶ್ಯಕತೆಯಿಲ್ಲ ಎನ್ನುವಷ್ಟರ ಮಟ್ಟಿಗೆ ಚರ್ಚೆಗಳು ನಡೆದಿವೆ. ದೇಶದ ಏಕತೆ, ಏಕ ರಾಷ್ಟ್ರ-ಏಕ ಸಂಸ್ಕೃತಿ ಎಂಬಂತೆ ರಾಷ್ಟ್ರಧ್ವಜವೇ ಸಾಕು ಎಂಬುದು ಸಂಘಪರಿವಾರದ ಅಭಿಪ್ರಾಯ.

ಇದಕ್ಕೆ ವಿರುದ್ಧವಾಗಿ ನಮಗೆ ರಾಷ್ಟ್ರಧ್ವಜ ಮತ್ತು ನಾಡಧ್ವಜ ಎರಡೂ ಬೇಕು. ಕನ್ನಡ ಧ್ವಜ ನಮ್ಮ ಸ್ವಾಭಿಮಾನದ ಸಂಕೇತ. ಕನ್ನಡ ರಾಜ್ಯೋತ್ಸವದಂದು ನಾಡಧ್ವಜ ಹಾರಬೇಕು ಎಂದು ಕನ್ನಡಿಗರು ಮತ್ತು ಪ್ರಗತಿಪರರು ಒತ್ತಾಯಿಸಿದ್ದರು.

ಕಳೆದ ವರ್ಷ ಕನ್ನಡ ಸಂಸ್ಕೃತಿ ಇಲಾಖೆ ಮತ್ತು ಕೆಲ ತಹಶೀಲ್ದಾರ್‌ಗಳು ಕನ್ನಡ ಧ್ವಜ ಹಾರಿಸದಂತೆ ಸುತ್ತೋಲೆ ಹೊರಡಿಸಿದ್ದರು. ಇದರಿಂದ ಹಲವು ಜಿಲ್ಲಾಕೇಂದ್ರಗಳಲ್ಲಿ ಕೇವಲ ರಾಷ್ಟ್ರಧ್ವಜ ಹಾರಿಸಿ ರಾಜ್ಯೋತ್ಸವ ಮಾಡಲಾಗಿತ್ತು. ಇದರಿಂದ ಸಿಡಿದೆದ್ದ ಕನ್ನಡಿಗರು ರಾಜ್ಯದ್ಯಂತ ಪ್ರತಿಭಟನೆ ನಡೆಸಿದ್ದರು. ಅಷ್ಟು ಮಾತ್ರವಲ್ಲದೇ ಸ್ವಾತಂತ್ರ್ಯ ದಿನಾಚರಣೆಯಂದು ಕೇವಲ ಕನ್ನಡ ಬಾವುಟ ಹಾರಿಸಿ ತಮ್ಮ ಪ್ರತಿರೋಧ ವ್ಯಕ್ತಪಡಿಸಿದ್ದರು.

ಈ ವರ್ಷವೂ ಸಹ ಬಿಜೆಪಿ ಸರ್ಕಾರ ಜಿಲ್ಲಾ ಕೇಂದ್ರಗಳಲ್ಲಿ ಕೇವಲ ರಾಷ್ಟ್ರಧ್ವಜ ಹಾರಿಸಿ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದೆ. ಇದು ಕೇವಲ ಧ್ವಜದ ವಿಷಯ ಮಾತ್ರವಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕನ್ನಡಿಗರ ಅಸ್ಮಿತೆಯನ್ನು ಪ್ರಶ್ನಿಸುವ ಕೆಲಸದಲ್ಲಿ ನಿರತವಾಗಿವೆ ಎಂದು ಕನ್ನಡಿಗರು ಸಿಡಿದೆದ್ದಿದ್ದಾರೆ.


ಇದನ್ನೂ ಓದಿ: ಕನ್ನಡ ಧ್ವಜಾರೋಹಣವಿಲ್ಲದೇ ಕನ್ನಡ ರಾಜ್ಯೋತ್ಸವ: ಸರ್ಕಾರದ ವಿರುದ್ಧ ಕಿಡಿ ಕಾರಿದ ನೆಟ್ಟಿಗರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...