Homeಚಳವಳಿರಾಜ್ಯೋತ್ಸವದಂದು ಕನ್ನಡ ಧ್ವಜ ಹಾರಿಸದ ಸರ್ಕಾರದ ನಡೆಗೆ ಕನ್ನಡಿಗರ ಆಕ್ರೋಶ: ಟ್ವಿಟರ್ ಆಂದೋಲನಕ್ಕೆ ಕರೆ

ರಾಜ್ಯೋತ್ಸವದಂದು ಕನ್ನಡ ಧ್ವಜ ಹಾರಿಸದ ಸರ್ಕಾರದ ನಡೆಗೆ ಕನ್ನಡಿಗರ ಆಕ್ರೋಶ: ಟ್ವಿಟರ್ ಆಂದೋಲನಕ್ಕೆ ಕರೆ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರೇ ಕನ್ನಡ ಧ್ವಜ ಹಾರಿಸಿರುವಾಗ ಜಿಲ್ಲಾ ಉಸ್ತುವಾರಿ ಸಚಿವರು ಬಾವುಟ ಹಾರಿಸದಂತೆ ತಡೆದ ಶಕ್ತಿ ಯಾವುದು ಎಂದು ಕರ್ನಾಟಕ ರಕ್ಷಣಾ ವೇದಿಕೆ ಪ್ರಶ್ನಿಸಿದೆ.

- Advertisement -
- Advertisement -

ನಿನ್ನೆ 65ನೇ ಕನ್ನಡ ರಾಜ್ಯೋತ್ಸವ ಜರುಗಿದೆ. ಪ್ರತಿ ವರ್ಷವು ಕನ್ನಡದ ಹಬ್ಬದಂತೆ ವಿಜೃಂಭಣೆಯಿಂದ ಆಚರಿಸುತ್ತಿದ್ದ ಕನ್ನಡಿಗರ ಪಾಲಿಗೆ ಈ ವರ್ಷ ಕೊರೊನಾ ಸಣ್ಣ ತಡೆಯಾದರೆ ಬಿಜೆಪಿ ಸರ್ಕಾರ ದೊಡ್ಡ ಬಂಡೆಯಂತೆ ಅಡ್ಡನಿಂತಿದೆ. ರಾಜ್ಯೋತ್ಸವದಂದೇ ಜಿಲ್ಲಾಕೇಂದ್ರಗಳಲ್ಲಿ ಕನ್ನಡ ಧ್ವಜ ಹಾರಿಸದೆ ಕೇವಲ ರಾಷ್ಟ್ರಧ್ವಜ ಮಾತ್ರ ಹಾರಿಸಿದ ಸರ್ಕಾರದ ನಡೆಗೆ ಕನ್ನಡಿಗರು ಕೆಂಡಾಮಂಡಲವಾಗಿದ್ದಾರೆ.

ಮೊದಲಿಗೆ ಕೊರೊನಾ ಮಾರ್ಗಸೂಚಿಗಳ ಅನ್ವಯ 100 ಜನಕ್ಕಿಂತ ಹೆಚ್ಚು ಸೇರಬಾರದು, ಮೆರವಣಿಗೆ ಮಾಡಬಾರದು, ಕಾರ್ಯಕ್ರಮಕ್ಕೆ ಅನುಮತಿ ಪಡೆಯಬೇಕೆಂದು ನಿಯಮಗಳನ್ನು ಹೇರಿದ ಸರ್ಕಾರ, ಉಪಚುನಾವಣೆಯ ಪ್ರಚಾರಕ್ಕೆ ಮಾತ್ರ ನಿಷೇಧ ಹೇರಿಲ್ಲ ಎಂದು ಹಲವು ಕನ್ನಡಿಗರು ಕಿಡಿಕಾರಿದ್ದಾರೆ.

ಮಂಡ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇವಲ ರಾಷ್ಟ್ರ ಧ್ವಜ ಮಾತ್ರ ಹಾರಿಸಿರುವುದು.

ಇನ್ನು ಕನ್ನಡ ರಾಜ್ಯೋತ್ಸವದ ದಿನವಾದ ನಿನ್ನೆ ಹಲವಾರು ಜಿಲ್ಲಾಕೇಂದ್ರಗಳಲ್ಲಿ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ಕನ್ನಡ ಧ್ವಜ ಹಾರಿಸದೇ ಕನ್ನಡಿಗರ ಸ್ವಾಭಿಮಾನವನ್ನು ಕೆಣಕಲಾಗಿದೆ. ಸ್ವತಃ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರೇ ಕನ್ನಡ ಧ್ವಜ ಹಾರಿಸಿರುವಾಗ ಜಿಲ್ಲಾ ಉಸ್ತುವಾರಿ ಸಚಿವರು ಬಾವುಟ ಹಾರಿಸದಂತೆ ತಡೆದ ಶಕ್ತಿ ಯಾವುದು ಎಂದು ಕರ್ನಾಟಕ ರಕ್ಷಣಾ ವೇದಿಕೆ ಪ್ರಶ್ನಿಸಿದೆ.

ಸರ್ಕಾರದ, ಸಚಿವರುಗಳ ಉದ್ಧಟತನದ, ಅಭಿಮಾನಶೂನ್ಯ ನಡೆಯನ್ನು ಖಂಡಿಸಲು ಇಂದು ಸಂಜೆ 5 ಗಂಟೆಯಿಂದ #ನಮ್ಮಧ್ವಜ_ನಮ್ಮಹೆಮ್ಮೆ ಹೆಸರಿನಲ್ಲಿ ಟ್ವಿಟರ್ ಆಂದೋಲನಕ್ಕೆ ಕರೆ ನೀಡಿದೆ.

ಕರ್ನಾಟಕ ಏಕೀಕರಣದ 65 ವರ್ಷಗಳ ಇತಿಹಾಸದಲ್ಲಿ ರಾಜ್ಯೋತ್ಸವದಂದು ಕನ್ನಡ ಧ್ವಜ ರಾರಾಜಿಸುತ್ತಿತ್ತು. ಆದರೆ 2017 ರಿಂದ ಬಿಜೆಪಿ ಪಕ್ಷ ಮತ್ತು ಸಂಘಪರಿವಾರ ಒಂದು ದೇಶ- ಒಂದು ಧ್ವಜ ಎಂಬ ಹೆಸರಿನಲ್ಲಿ ಕೇವಲ ರಾಷ್ಟ್ರಧ್ವಜ ಮಾತ್ರ ಹಾರಿಸಬೇಕು ಎಂಬ ಪ್ರಚಾರ ಆರಂಭಿಸಿತು. ಅಲ್ಲಿಂದ ಆರಂಭವಾಗಿ ದೇಶಕ್ಕೆ ಒಂದೇ ಧ್ವಜ ಸಾಕು, ಕನ್ನಡ ಧ್ವಜದ ಅವಶ್ಯಕತೆಯಿಲ್ಲ ಎನ್ನುವಷ್ಟರ ಮಟ್ಟಿಗೆ ಚರ್ಚೆಗಳು ನಡೆದಿವೆ. ದೇಶದ ಏಕತೆ, ಏಕ ರಾಷ್ಟ್ರ-ಏಕ ಸಂಸ್ಕೃತಿ ಎಂಬಂತೆ ರಾಷ್ಟ್ರಧ್ವಜವೇ ಸಾಕು ಎಂಬುದು ಸಂಘಪರಿವಾರದ ಅಭಿಪ್ರಾಯ.

ಇದಕ್ಕೆ ವಿರುದ್ಧವಾಗಿ ನಮಗೆ ರಾಷ್ಟ್ರಧ್ವಜ ಮತ್ತು ನಾಡಧ್ವಜ ಎರಡೂ ಬೇಕು. ಕನ್ನಡ ಧ್ವಜ ನಮ್ಮ ಸ್ವಾಭಿಮಾನದ ಸಂಕೇತ. ಕನ್ನಡ ರಾಜ್ಯೋತ್ಸವದಂದು ನಾಡಧ್ವಜ ಹಾರಬೇಕು ಎಂದು ಕನ್ನಡಿಗರು ಮತ್ತು ಪ್ರಗತಿಪರರು ಒತ್ತಾಯಿಸಿದ್ದರು.

ಕಳೆದ ವರ್ಷ ಕನ್ನಡ ಸಂಸ್ಕೃತಿ ಇಲಾಖೆ ಮತ್ತು ಕೆಲ ತಹಶೀಲ್ದಾರ್‌ಗಳು ಕನ್ನಡ ಧ್ವಜ ಹಾರಿಸದಂತೆ ಸುತ್ತೋಲೆ ಹೊರಡಿಸಿದ್ದರು. ಇದರಿಂದ ಹಲವು ಜಿಲ್ಲಾಕೇಂದ್ರಗಳಲ್ಲಿ ಕೇವಲ ರಾಷ್ಟ್ರಧ್ವಜ ಹಾರಿಸಿ ರಾಜ್ಯೋತ್ಸವ ಮಾಡಲಾಗಿತ್ತು. ಇದರಿಂದ ಸಿಡಿದೆದ್ದ ಕನ್ನಡಿಗರು ರಾಜ್ಯದ್ಯಂತ ಪ್ರತಿಭಟನೆ ನಡೆಸಿದ್ದರು. ಅಷ್ಟು ಮಾತ್ರವಲ್ಲದೇ ಸ್ವಾತಂತ್ರ್ಯ ದಿನಾಚರಣೆಯಂದು ಕೇವಲ ಕನ್ನಡ ಬಾವುಟ ಹಾರಿಸಿ ತಮ್ಮ ಪ್ರತಿರೋಧ ವ್ಯಕ್ತಪಡಿಸಿದ್ದರು.

ಈ ವರ್ಷವೂ ಸಹ ಬಿಜೆಪಿ ಸರ್ಕಾರ ಜಿಲ್ಲಾ ಕೇಂದ್ರಗಳಲ್ಲಿ ಕೇವಲ ರಾಷ್ಟ್ರಧ್ವಜ ಹಾರಿಸಿ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದೆ. ಇದು ಕೇವಲ ಧ್ವಜದ ವಿಷಯ ಮಾತ್ರವಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕನ್ನಡಿಗರ ಅಸ್ಮಿತೆಯನ್ನು ಪ್ರಶ್ನಿಸುವ ಕೆಲಸದಲ್ಲಿ ನಿರತವಾಗಿವೆ ಎಂದು ಕನ್ನಡಿಗರು ಸಿಡಿದೆದ್ದಿದ್ದಾರೆ.


ಇದನ್ನೂ ಓದಿ: ಕನ್ನಡ ಧ್ವಜಾರೋಹಣವಿಲ್ಲದೇ ಕನ್ನಡ ರಾಜ್ಯೋತ್ಸವ: ಸರ್ಕಾರದ ವಿರುದ್ಧ ಕಿಡಿ ಕಾರಿದ ನೆಟ್ಟಿಗರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...