Homeಕರ್ನಾಟಕರಾಜ್ಯೋತ್ಸವ ಪ್ರಶಸ್ತಿ ಪ್ರಕಟ : ಕಾಳಿಗಿಂತ ಬೂಸಾನೇ ಹೆಚ್ಚು...

ರಾಜ್ಯೋತ್ಸವ ಪ್ರಶಸ್ತಿ ಪ್ರಕಟ : ಕಾಳಿಗಿಂತ ಬೂಸಾನೇ ಹೆಚ್ಚು…

ಪ್ರಶಸ್ತಿ ಪಟ್ಟಿಯಲ್ಲಿ ಬಿಜೆಪಿ ನಿಷ್ಠರೇ ಹೆಚ್ಚು. ಜಾತಿಗೂ ಪ್ರಾಧಾನ್ಯತೆ ಸಿಕ್ಕಿದೆ. ಪ್ರಶಸ್ತಿಗೆ ಆಯ್ಕೆಯಾದ ಅರ್ಹರೂ ಬಹುತೇಕ ಸಂಘ ಪರಿವಾರದವರೇ ಆಗಿದ್ದಾರೆ.

- Advertisement -
- Advertisement -

ಕನ್ನಡ ರಾಜ್ಯೋತ್ಸವಕ್ಕೆ ರಾಜ್ಯ ಸಜ್ಜಾಗುತ್ತಿದೆ. ನವೆಂಬರ್ ಕನ್ನಡಿಗರು ಎದ್ದುಕೂತಿದ್ದಾರೆ. ಸರ್ಕಾರವೂ ರಾಜ್ಯೋತ್ಸವ ಪ್ರಶಸ್ತಿ ಪಡೆಯುವ (ನ)ಗಣ್ಯರ ಪಟ್ಟಿಯನ್ನು ಪ್ರಕಟಿಸಿದೆ. ಈ ಪಟ್ಟಿಯಲ್ಲಿ ಕಾಳಿಗಿಂತ ಬೂಸಾನೇ ಹೆಚ್ಚು. ಅರ್ಹರಿಗಿಂತ ಅನರ್ಹರೇ ತುಂಬಿ ಹೋಗಿದ್ದಾರೆ. ಸಾಧನೆ ಮಾಡದವರು ಪ್ರಶಸ್ತಿ ಹೊಡೆದುಕೊಂಡಿದ್ದಾರೆ. ಅಂದರೆ ರಾಜ್ಯ ಸರ್ಕಾರ ಅಷ್ಟರಮಟ್ಟಿಗೆ ಪ್ರಶಸ್ತಿ ಆಯ್ಕೆಯಲ್ಲಿ ಕೈಯಾಡಿಸಿದೆ. 60 ವರ್ಷದ ಮಾನದಂಡ ಮಾತ್ರ ಪಾಲನೆಯಾದಂತೆ ಕಾಣುತ್ತಿದೆ. ಬಿಜೆಪಿ ಸರ್ಕಾರವೂ ತನಗೆ ಬೇಕಾದವರ ಹೆಸರನ್ನೇ ಆಯ್ದುಕೊಂಡಂತಿದೆ. ಆಯ್ಕೆ ಸಮಿತಿ ವರದಿಗೂ ಸ್ವಲ್ಪಮಟ್ಟಿಗೆ ಮನ್ನಣೆ ಸಿಕ್ಕಿದೆ.

ಸಾಹಿತ್ಯ ಕ್ಷೇತ್ರದಲ್ಲಿ ಬಿ. ರಾಜಶೇಖರಪ್ಪ ಪ್ರಾಚೀನ ಚಿತ್ರದುರ್ಗ, ನಿರಂತರ, ಹುಲ್ಲೂರು ಶ್ರೀನಿವಾಸ ಜೋಯಿಸರು – ಇತಿಹಾಸ ಸಂಶೋಧಕ ಹೀಗೆ ಹಲವು ಕೃತಿಗಳನ್ನು ಬರೆದು ಹೆಸರು ಮಾಡಿದ್ದಾರೆ. ರಂಗಭೂಮಿಯಲ್ಲಿ ಭಾರ್ಗವಿ ನಾರಾಯಣ (ಸಾಹಿತಿ/ಪರಿಸರವಾದಿ ಪ್ರಕಾಶ ಬೆಳವಾಡಿ ತಾಯಿ) ಚಲನಚಿತ್ರ, ಕಿರುತೆರೆ, ರಂಗಭೂಮಿಯಲ್ಲಿ ಕೆಲಸ ಮಾಡಿ ಜನರ ನಡುವೆ ಗುರುತಿಸಿಕೊಂಡಿದ್ದಾರೆ. ಪ್ರಜಾವಾಣಿಯಲ್ಲಿ ವಾರಕ್ಕೊಮ್ಮೆ ಲೇಖನ ಬರೆಯುವ ಜೊತೆಗೆ ಶಿಕ್ಷಣದ ಕುರಿತು ಕೃತಿಗಳನ್ನು ರಚಿಸಿದ ಡಾ.ಗುರುರಾಜ ಕರ್ಜಗಿ ಪ್ರಸಿದ್ದರಾಗಿದ್ದಾರೆ. ಚಂದನ ಟಿವಿಯಲ್ಲಿ ಥಟ್ ಅಂತ ಹೇಳಿ ಕಾರ್ಯಕ್ರಮ ನಡೆಸಿಕೊಡುವ ಡಾ. ನಾ.ಸೋಮಶ್ವರ್ ಮತ್ತು ಉದ್ಯಮಿಯಾಗಿ ಯಶಸ್ವಿಯಾಗಿರುವ ಡಾ.ವಿಜಯ ಸಂಕೇಶ್ವರ್, ಪ್ರಾಮಾಣಿಕತೆ ಮತ್ತು ಪಾರದರ್ಶಕತೆಗೆ ಹೆಸರಾದ ನ್ಯಾಯಮೂರ್ತಿ ಎನ್. ಕುಮಾರ್ ಹೀಗೆ ಬೆರಳೆಕೆಯ ಸಾಧಕರನ್ನು ಗುರುತಿಸಿರುವುದು ಶ್ಲಾಘನೀಯ.

ಇವರು ತಮ್ಮದೇ ಕ್ಷೇತ್ರದಲ್ಲಿ ಸ್ವಲ್ಪಮಟ್ಟಿಗಾದರೂ ಕೆಲಸ ಮಾಡಿ ಹೆಸರು ಮಾಡಿದ್ದಾರೆ. ಇಂಥವರ ಆಯ್ಕೆಯನ್ನು ಯಾರೂ ಕೂಡ ಪ್ರಶ್ನಿಸಲಾರರು. ಸಾಹಿತ್ಯ ಒಬ್ಬರು, ರಂಗಭೂಮಿ ಒಂದಿಬ್ಬರು, ನ್ಯಾಯಾಂಗದಲ್ಲಿ ಒಬ್ಬರು ಸಾಧನೆ ಮಾಡಿರುವುದನ್ನು ನಾಡಿನ ಜನತೆ ಕಂಡಿದೆ ಮತ್ತು ಗುರುತಿಸಿದೆ. ಪತ್ರಿಕೋದ್ಯಮದಲ್ಲಿ ಪರಿಣಾಮಕಾರಿ ಬರಹಗಳನ್ನು ಬರೆಯದಿದ್ದರೂ ಸಂಪಾದಕರಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಗುರುತಿಸಿಕೊಂಡಿರುವ ಬಿ.ವಿ. ಮಲ್ಲಿಕಾರ್ಜುನಯ್ಯ ಅವರಿಗೂ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಇದನ್ನು ಮೆಚ್ಚಲೇಬೇಕು.

ಆದರೆ ವಿವಿಧ ಕ್ಷೇತ್ರದ ಗಣ್ಯರನ್ನು ಆಯ್ಕೆ ಮಾಡುವಲ್ಲಿ ಸಮತೋಲನ ಕಾಯ್ದುಕೊಂಡಿಲ್ಲ. ಕೆಲವು ರಂಗಗಳಿಂದ ಹೆಚ್ಚು ಮಂದಿಯನ್ನು ಪ್ರಶಸ್ತಿಗೆ ಆಯ್ಕೆ ಮಾಡಿದ್ದರೆ, ಕೆಲ ಕ್ಷೇತ್ರಗಳಲ್ಲಿ ಒಬ್ಬರಿಗೆ ಮಾತ್ರ ಅವಕಾಶ ನೀಡಿದೆ. ಸಂಕೀರ್ಣದಲ್ಲಿ ಆರು ಮಂದಿ, ಜಾನಪದ ಐದು, ರಂಗಭೂಮಿ ಆರು, ವೈದ್ಯಕೀಯ ಐದು ಹೀಗೆ ಪಟ್ಟಿ ಅಸಮತೋಲನದಿಂದ ಕೂಡಿರುವುದನ್ನು ಯಾರೇ ಆದರೂ ಗುರುತಿಸಬಹುದು.

ವಿಮರ್ಶೆ, ಗುಡಿಕೈಗಾರಿಕೆ, ನ್ಯಾಯಾಂಗ, ಸಹಕಾರ, ಪತ್ರಿಕೋದ್ಯಮ, ಕಿರುತೆರೆ, ಚಲನಚಿತ್ರ, ಬಯಲಾಟ, ಯಕ್ಷಗಾನ ಕ್ಷೇತ್ರದಿಂದ ತಲಾ ಒಬ್ಬರನ್ನು ಮಾತ್ರ ಆಯ್ಕೆ ಮಾಡಿದೆ. ಸಂಗೀತ ಕ್ಷೇತ್ರದ ಛೋಟಿ ರೆಹಮತ್ ಖಾನ್, ಜಾನಪದ ಕ್ಷೇತ್ರದಲ್ಲಿ ಉಸ್ಮಾನ್ ಸಾಬ್ ಖಾದರ ಎಂಬಿಬ್ಬರು ಮುಸ್ಲಿಂ ಸಾಧಕರಿಗೂ ಪಟ್ಟಿಯಲ್ಲಿ ಅವಕಾಶ ಕಲ್ಪಿಸಿ ಎಲ್ಲರ ಹುಬ್ಬೇರುವಂತೆ ಮಾಡಿದೆ. ಯಾಕೆಂದರೆ ಅಲ್ಪಸಂಖ್ಯಾತರ ಮತಗಳೇ ಬೇಡ ಎನ್ನುವ, ಚುನಾವಣೆಯಲ್ಲಿ ಟಿಕೆಟ್ ನೀಡುವಾಗ ಮುಸ್ಲೀಮರಿಗೆ ಪ್ರಾತಿನಿಧ್ಯವೇ ಕಲ್ಪಿಸದ, ಟಿಪ್ಪು ಜಯಂತಿಗೆ ವಿರೋಧ ವ್ಯಕ್ತಪಡಿಸುವ ಬಿಜೆಪಿ ಸರ್ಕಾರದಲ್ಲಿ ಅಲ್ಪಸಂಖ್ಯಾತರು ಅದರಲ್ಲೂ ಮುಸ್ಲಿಂ ಸಾಧಕರನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಿರುವುದು ಸೋಜಿಗವೇ ಸರಿ.

ಪ್ರಶಸ್ತಿ ಪಟ್ಟಿಯಲ್ಲಿ ಬಿಜೆಪಿ ನಿಷ್ಠರೇ ಹೆಚ್ಚು. ಜಾತಿಗೂ ಪ್ರಾಧಾನ್ಯತೆ ಸಿಕ್ಕಿದೆ. ಪ್ರಶಸ್ತಿಗೆ ಆಯ್ಕೆಯಾದ ಅರ್ಹರೂ ಬಹುತೇಕ ಸಂಘ ಪರಿವಾರದವರೇ ಆಗಿದ್ದಾರೆ. ಪತಂಜಲಿ ಯೋಗ ಶಿಕ್ಷಣ ಸಂಸ್ಥೆ ಯೋಗ ವ್ಯಾಪಾರದಲ್ಲಿ ನಿರತವಾಗಿದೆ. ಯೋಗ ಕಲಿಸುವ ನೆಪದಲ್ಲಿ ಬಿಜೆಪಿ ಪರ ಕೆಲಸ ಮಾಡುತ್ತಿದೆ. ಇದು ಎಲ್ಲರಿಗೂ ಗೊತ್ತಿರುವ ಸಂಗತಿ. ಯೋಗ ಕಲಿಸುವ ಅಕ್ಕಂದಿರು, ಅಣ್ಣಂದಿರುವ ಮೂಲತಃ ಕೇಸರಿ ಪರಿವಾರದವರೇ ಆಗಿರುತ್ತಾರೆ. ಅವರನ್ನು ಯೋಗ ಕಲಿಕಾರ್ಥಿಗಳಿಗೆ ಅಣ್ಣ, ಅಕ್ಕ, ಜೀ ಎಂದೇ ಸಂಬೋಧಿಸುತ್ತಾರೆ. ಹಾಗಾಗಿ ಪತಂಜಲಿ ಯೋಗ ಶಿಕ್ಷಣ ಸಂಸ್ಥೆ ಪಕ್ಷಾತೀತವಾದ ಸಂಸ್ಥೆಯಲ್ಲ. ಅದು ಕೂಡ ಸನಾತನಿಗಳ ಕೂಟ.

ಡಾ.ಕೆ.ಚಿದಾನಂದಗೌಡ ಕುವೆಂಪು ವಿವಿ ಕುಲಪತಿಯಾಗಿ ನಿವೃತ್ತರಾಗಿರುವವರು. ಅವರು ಇಂಜಿನಿಯರಿಂಗ್‌ ಗೀತೆಗಳು, ಪುಟಾಣಿಗಳ ವಿಜ್ಞಾನ ಪದ್ಯಗಳು, ಸಂಪರ್ಕ ಮಾಧ್ಯಮಗಳು ಕೃತಿಗಳನ್ನು ಬರೆದಿದ್ದಾರೆ. ಇವರನ್ನು ಶಿಕ್ಷಣ ಕ್ಷೇತ್ರದಿಂದ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಶಿಕ್ಷಣ ಕ್ಷೇತ್ರಕ್ಕೆ ಇವರ ಕೊಡುಗೆ ಏನು ಎಂಬುದೇ ರಹಸ್ಯ. ಚಲನಚಿತ್ರ ಮತ್ತು ಕಿರುತೆರೆ ವಿಭಾಗದಲ್ಲಿ ಗುರುತಿಸಿರುವ ಶೈಲಶ್ರೀ ಮತ್ತು ಜಯಕುಮಾರ ಕೊಡಗನೂರ ಅವರ ಹೆಸರುಗಳೇ ಜನರಿಗೆ ಪರಿಚಯವಿಲ್ಲ. ಅಂಥವರೂ ವಯಸ್ಸಿನ ಆಧಾರದಲ್ಲಿ ಪಟ್ಟಿಯ ಒಳ ಸೇರಿದ್ದಾರೆ. ವೈದ್ಯಕೀಯ ಕ್ಷೇತ್ರದಲ್ಲಿ ಐದು ಮಂದಿ ವೈದ್ಯರನ್ನು ಗುರುತಿಸುವ ಅಗತ್ಯ ಏನಿತ್ತು ಎಂಬ ಪ್ರಶ್ನೆ ಮೂಡಿದೆ.

ನ್ಯಾಯಮೂರ್ತಿ ನಾಗಮೋಹನದಾಸ್ ಆಯ್ಕೆ ಸಮಿತಿ ವರದಿಯನ್ನು ಕೊಟ್ಟ ನಂತರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ಅವರು ಪಟ್ಟಿಯಲ್ಲಿ ಕೆಲವೊಂದು ಬದಲಾವಣೆಗಳನ್ನು ಮಾಡಿದ್ದಾರೆ. ತಮಗೆ ಬೇಕಾದವರನ್ನು ಆಯ್ಕೆ ಮಾಡಿಕೊಂಡಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ. ಇದು ನಿರೀಕ್ಷತವೂ ಆಗಿತ್ತಲ್ಲವೇ??

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಸ್ಲಾಮಾಬಾದ್‌ನಲ್ಲಿ ಅಮೆರಿಕ–ಇರಾನ್ ಶಾಂತಿ ಮಾತುಕತೆ; ಪಾಕಿಸ್ತಾನ ಮಧ್ಯಸ್ಥಿಕೆ

ಹಲವು ರೀತಿಯ ಪ್ರತಿಷ್ಠೆ ಪ್ರದರ್ಶನ, ಭಿನ್ನಾಭಿಪ್ರಾಯಗಳ ನಡುವೆ ಅಮೆರಿಕ-ಇರಾನ್ ಶಾಂತಿ ಮಾತುಕತೆ ಶನಿವಾರ (ಏ.11) ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ಪ್ರಾರಂಭಗೊಳ್ಳಲಿದೆ. ಪಾಕಿಸ್ತಾನದ ಪಾಲಿಗೆ ಇದು ಅತ್ಯಂತ ಪ್ರತಿಷ್ಠೆಯ ವಿಷಯವಾಗಿ ಮಾರ್ಪಟ್ಟಿದೆ. ಅಮೆರಿಕದ ಪರವಾಗಿ ಉಪಾಧ್ಯಕ್ಷ ಜೆ.ಡಿ....

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...