Homeಕರ್ನಾಟಕರಾಜ್ಯೋತ್ಸವ ಪ್ರಶಸ್ತಿ ಪ್ರಕಟ : ಕಾಳಿಗಿಂತ ಬೂಸಾನೇ ಹೆಚ್ಚು...

ರಾಜ್ಯೋತ್ಸವ ಪ್ರಶಸ್ತಿ ಪ್ರಕಟ : ಕಾಳಿಗಿಂತ ಬೂಸಾನೇ ಹೆಚ್ಚು…

ಪ್ರಶಸ್ತಿ ಪಟ್ಟಿಯಲ್ಲಿ ಬಿಜೆಪಿ ನಿಷ್ಠರೇ ಹೆಚ್ಚು. ಜಾತಿಗೂ ಪ್ರಾಧಾನ್ಯತೆ ಸಿಕ್ಕಿದೆ. ಪ್ರಶಸ್ತಿಗೆ ಆಯ್ಕೆಯಾದ ಅರ್ಹರೂ ಬಹುತೇಕ ಸಂಘ ಪರಿವಾರದವರೇ ಆಗಿದ್ದಾರೆ.

- Advertisement -
- Advertisement -

ಕನ್ನಡ ರಾಜ್ಯೋತ್ಸವಕ್ಕೆ ರಾಜ್ಯ ಸಜ್ಜಾಗುತ್ತಿದೆ. ನವೆಂಬರ್ ಕನ್ನಡಿಗರು ಎದ್ದುಕೂತಿದ್ದಾರೆ. ಸರ್ಕಾರವೂ ರಾಜ್ಯೋತ್ಸವ ಪ್ರಶಸ್ತಿ ಪಡೆಯುವ (ನ)ಗಣ್ಯರ ಪಟ್ಟಿಯನ್ನು ಪ್ರಕಟಿಸಿದೆ. ಈ ಪಟ್ಟಿಯಲ್ಲಿ ಕಾಳಿಗಿಂತ ಬೂಸಾನೇ ಹೆಚ್ಚು. ಅರ್ಹರಿಗಿಂತ ಅನರ್ಹರೇ ತುಂಬಿ ಹೋಗಿದ್ದಾರೆ. ಸಾಧನೆ ಮಾಡದವರು ಪ್ರಶಸ್ತಿ ಹೊಡೆದುಕೊಂಡಿದ್ದಾರೆ. ಅಂದರೆ ರಾಜ್ಯ ಸರ್ಕಾರ ಅಷ್ಟರಮಟ್ಟಿಗೆ ಪ್ರಶಸ್ತಿ ಆಯ್ಕೆಯಲ್ಲಿ ಕೈಯಾಡಿಸಿದೆ. 60 ವರ್ಷದ ಮಾನದಂಡ ಮಾತ್ರ ಪಾಲನೆಯಾದಂತೆ ಕಾಣುತ್ತಿದೆ. ಬಿಜೆಪಿ ಸರ್ಕಾರವೂ ತನಗೆ ಬೇಕಾದವರ ಹೆಸರನ್ನೇ ಆಯ್ದುಕೊಂಡಂತಿದೆ. ಆಯ್ಕೆ ಸಮಿತಿ ವರದಿಗೂ ಸ್ವಲ್ಪಮಟ್ಟಿಗೆ ಮನ್ನಣೆ ಸಿಕ್ಕಿದೆ.

ಸಾಹಿತ್ಯ ಕ್ಷೇತ್ರದಲ್ಲಿ ಬಿ. ರಾಜಶೇಖರಪ್ಪ ಪ್ರಾಚೀನ ಚಿತ್ರದುರ್ಗ, ನಿರಂತರ, ಹುಲ್ಲೂರು ಶ್ರೀನಿವಾಸ ಜೋಯಿಸರು – ಇತಿಹಾಸ ಸಂಶೋಧಕ ಹೀಗೆ ಹಲವು ಕೃತಿಗಳನ್ನು ಬರೆದು ಹೆಸರು ಮಾಡಿದ್ದಾರೆ. ರಂಗಭೂಮಿಯಲ್ಲಿ ಭಾರ್ಗವಿ ನಾರಾಯಣ (ಸಾಹಿತಿ/ಪರಿಸರವಾದಿ ಪ್ರಕಾಶ ಬೆಳವಾಡಿ ತಾಯಿ) ಚಲನಚಿತ್ರ, ಕಿರುತೆರೆ, ರಂಗಭೂಮಿಯಲ್ಲಿ ಕೆಲಸ ಮಾಡಿ ಜನರ ನಡುವೆ ಗುರುತಿಸಿಕೊಂಡಿದ್ದಾರೆ. ಪ್ರಜಾವಾಣಿಯಲ್ಲಿ ವಾರಕ್ಕೊಮ್ಮೆ ಲೇಖನ ಬರೆಯುವ ಜೊತೆಗೆ ಶಿಕ್ಷಣದ ಕುರಿತು ಕೃತಿಗಳನ್ನು ರಚಿಸಿದ ಡಾ.ಗುರುರಾಜ ಕರ್ಜಗಿ ಪ್ರಸಿದ್ದರಾಗಿದ್ದಾರೆ. ಚಂದನ ಟಿವಿಯಲ್ಲಿ ಥಟ್ ಅಂತ ಹೇಳಿ ಕಾರ್ಯಕ್ರಮ ನಡೆಸಿಕೊಡುವ ಡಾ. ನಾ.ಸೋಮಶ್ವರ್ ಮತ್ತು ಉದ್ಯಮಿಯಾಗಿ ಯಶಸ್ವಿಯಾಗಿರುವ ಡಾ.ವಿಜಯ ಸಂಕೇಶ್ವರ್, ಪ್ರಾಮಾಣಿಕತೆ ಮತ್ತು ಪಾರದರ್ಶಕತೆಗೆ ಹೆಸರಾದ ನ್ಯಾಯಮೂರ್ತಿ ಎನ್. ಕುಮಾರ್ ಹೀಗೆ ಬೆರಳೆಕೆಯ ಸಾಧಕರನ್ನು ಗುರುತಿಸಿರುವುದು ಶ್ಲಾಘನೀಯ.

ಇವರು ತಮ್ಮದೇ ಕ್ಷೇತ್ರದಲ್ಲಿ ಸ್ವಲ್ಪಮಟ್ಟಿಗಾದರೂ ಕೆಲಸ ಮಾಡಿ ಹೆಸರು ಮಾಡಿದ್ದಾರೆ. ಇಂಥವರ ಆಯ್ಕೆಯನ್ನು ಯಾರೂ ಕೂಡ ಪ್ರಶ್ನಿಸಲಾರರು. ಸಾಹಿತ್ಯ ಒಬ್ಬರು, ರಂಗಭೂಮಿ ಒಂದಿಬ್ಬರು, ನ್ಯಾಯಾಂಗದಲ್ಲಿ ಒಬ್ಬರು ಸಾಧನೆ ಮಾಡಿರುವುದನ್ನು ನಾಡಿನ ಜನತೆ ಕಂಡಿದೆ ಮತ್ತು ಗುರುತಿಸಿದೆ. ಪತ್ರಿಕೋದ್ಯಮದಲ್ಲಿ ಪರಿಣಾಮಕಾರಿ ಬರಹಗಳನ್ನು ಬರೆಯದಿದ್ದರೂ ಸಂಪಾದಕರಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಗುರುತಿಸಿಕೊಂಡಿರುವ ಬಿ.ವಿ. ಮಲ್ಲಿಕಾರ್ಜುನಯ್ಯ ಅವರಿಗೂ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಇದನ್ನು ಮೆಚ್ಚಲೇಬೇಕು.

ಆದರೆ ವಿವಿಧ ಕ್ಷೇತ್ರದ ಗಣ್ಯರನ್ನು ಆಯ್ಕೆ ಮಾಡುವಲ್ಲಿ ಸಮತೋಲನ ಕಾಯ್ದುಕೊಂಡಿಲ್ಲ. ಕೆಲವು ರಂಗಗಳಿಂದ ಹೆಚ್ಚು ಮಂದಿಯನ್ನು ಪ್ರಶಸ್ತಿಗೆ ಆಯ್ಕೆ ಮಾಡಿದ್ದರೆ, ಕೆಲ ಕ್ಷೇತ್ರಗಳಲ್ಲಿ ಒಬ್ಬರಿಗೆ ಮಾತ್ರ ಅವಕಾಶ ನೀಡಿದೆ. ಸಂಕೀರ್ಣದಲ್ಲಿ ಆರು ಮಂದಿ, ಜಾನಪದ ಐದು, ರಂಗಭೂಮಿ ಆರು, ವೈದ್ಯಕೀಯ ಐದು ಹೀಗೆ ಪಟ್ಟಿ ಅಸಮತೋಲನದಿಂದ ಕೂಡಿರುವುದನ್ನು ಯಾರೇ ಆದರೂ ಗುರುತಿಸಬಹುದು.

ವಿಮರ್ಶೆ, ಗುಡಿಕೈಗಾರಿಕೆ, ನ್ಯಾಯಾಂಗ, ಸಹಕಾರ, ಪತ್ರಿಕೋದ್ಯಮ, ಕಿರುತೆರೆ, ಚಲನಚಿತ್ರ, ಬಯಲಾಟ, ಯಕ್ಷಗಾನ ಕ್ಷೇತ್ರದಿಂದ ತಲಾ ಒಬ್ಬರನ್ನು ಮಾತ್ರ ಆಯ್ಕೆ ಮಾಡಿದೆ. ಸಂಗೀತ ಕ್ಷೇತ್ರದ ಛೋಟಿ ರೆಹಮತ್ ಖಾನ್, ಜಾನಪದ ಕ್ಷೇತ್ರದಲ್ಲಿ ಉಸ್ಮಾನ್ ಸಾಬ್ ಖಾದರ ಎಂಬಿಬ್ಬರು ಮುಸ್ಲಿಂ ಸಾಧಕರಿಗೂ ಪಟ್ಟಿಯಲ್ಲಿ ಅವಕಾಶ ಕಲ್ಪಿಸಿ ಎಲ್ಲರ ಹುಬ್ಬೇರುವಂತೆ ಮಾಡಿದೆ. ಯಾಕೆಂದರೆ ಅಲ್ಪಸಂಖ್ಯಾತರ ಮತಗಳೇ ಬೇಡ ಎನ್ನುವ, ಚುನಾವಣೆಯಲ್ಲಿ ಟಿಕೆಟ್ ನೀಡುವಾಗ ಮುಸ್ಲೀಮರಿಗೆ ಪ್ರಾತಿನಿಧ್ಯವೇ ಕಲ್ಪಿಸದ, ಟಿಪ್ಪು ಜಯಂತಿಗೆ ವಿರೋಧ ವ್ಯಕ್ತಪಡಿಸುವ ಬಿಜೆಪಿ ಸರ್ಕಾರದಲ್ಲಿ ಅಲ್ಪಸಂಖ್ಯಾತರು ಅದರಲ್ಲೂ ಮುಸ್ಲಿಂ ಸಾಧಕರನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಿರುವುದು ಸೋಜಿಗವೇ ಸರಿ.

ಪ್ರಶಸ್ತಿ ಪಟ್ಟಿಯಲ್ಲಿ ಬಿಜೆಪಿ ನಿಷ್ಠರೇ ಹೆಚ್ಚು. ಜಾತಿಗೂ ಪ್ರಾಧಾನ್ಯತೆ ಸಿಕ್ಕಿದೆ. ಪ್ರಶಸ್ತಿಗೆ ಆಯ್ಕೆಯಾದ ಅರ್ಹರೂ ಬಹುತೇಕ ಸಂಘ ಪರಿವಾರದವರೇ ಆಗಿದ್ದಾರೆ. ಪತಂಜಲಿ ಯೋಗ ಶಿಕ್ಷಣ ಸಂಸ್ಥೆ ಯೋಗ ವ್ಯಾಪಾರದಲ್ಲಿ ನಿರತವಾಗಿದೆ. ಯೋಗ ಕಲಿಸುವ ನೆಪದಲ್ಲಿ ಬಿಜೆಪಿ ಪರ ಕೆಲಸ ಮಾಡುತ್ತಿದೆ. ಇದು ಎಲ್ಲರಿಗೂ ಗೊತ್ತಿರುವ ಸಂಗತಿ. ಯೋಗ ಕಲಿಸುವ ಅಕ್ಕಂದಿರು, ಅಣ್ಣಂದಿರುವ ಮೂಲತಃ ಕೇಸರಿ ಪರಿವಾರದವರೇ ಆಗಿರುತ್ತಾರೆ. ಅವರನ್ನು ಯೋಗ ಕಲಿಕಾರ್ಥಿಗಳಿಗೆ ಅಣ್ಣ, ಅಕ್ಕ, ಜೀ ಎಂದೇ ಸಂಬೋಧಿಸುತ್ತಾರೆ. ಹಾಗಾಗಿ ಪತಂಜಲಿ ಯೋಗ ಶಿಕ್ಷಣ ಸಂಸ್ಥೆ ಪಕ್ಷಾತೀತವಾದ ಸಂಸ್ಥೆಯಲ್ಲ. ಅದು ಕೂಡ ಸನಾತನಿಗಳ ಕೂಟ.

ಡಾ.ಕೆ.ಚಿದಾನಂದಗೌಡ ಕುವೆಂಪು ವಿವಿ ಕುಲಪತಿಯಾಗಿ ನಿವೃತ್ತರಾಗಿರುವವರು. ಅವರು ಇಂಜಿನಿಯರಿಂಗ್‌ ಗೀತೆಗಳು, ಪುಟಾಣಿಗಳ ವಿಜ್ಞಾನ ಪದ್ಯಗಳು, ಸಂಪರ್ಕ ಮಾಧ್ಯಮಗಳು ಕೃತಿಗಳನ್ನು ಬರೆದಿದ್ದಾರೆ. ಇವರನ್ನು ಶಿಕ್ಷಣ ಕ್ಷೇತ್ರದಿಂದ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಶಿಕ್ಷಣ ಕ್ಷೇತ್ರಕ್ಕೆ ಇವರ ಕೊಡುಗೆ ಏನು ಎಂಬುದೇ ರಹಸ್ಯ. ಚಲನಚಿತ್ರ ಮತ್ತು ಕಿರುತೆರೆ ವಿಭಾಗದಲ್ಲಿ ಗುರುತಿಸಿರುವ ಶೈಲಶ್ರೀ ಮತ್ತು ಜಯಕುಮಾರ ಕೊಡಗನೂರ ಅವರ ಹೆಸರುಗಳೇ ಜನರಿಗೆ ಪರಿಚಯವಿಲ್ಲ. ಅಂಥವರೂ ವಯಸ್ಸಿನ ಆಧಾರದಲ್ಲಿ ಪಟ್ಟಿಯ ಒಳ ಸೇರಿದ್ದಾರೆ. ವೈದ್ಯಕೀಯ ಕ್ಷೇತ್ರದಲ್ಲಿ ಐದು ಮಂದಿ ವೈದ್ಯರನ್ನು ಗುರುತಿಸುವ ಅಗತ್ಯ ಏನಿತ್ತು ಎಂಬ ಪ್ರಶ್ನೆ ಮೂಡಿದೆ.

ನ್ಯಾಯಮೂರ್ತಿ ನಾಗಮೋಹನದಾಸ್ ಆಯ್ಕೆ ಸಮಿತಿ ವರದಿಯನ್ನು ಕೊಟ್ಟ ನಂತರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ಅವರು ಪಟ್ಟಿಯಲ್ಲಿ ಕೆಲವೊಂದು ಬದಲಾವಣೆಗಳನ್ನು ಮಾಡಿದ್ದಾರೆ. ತಮಗೆ ಬೇಕಾದವರನ್ನು ಆಯ್ಕೆ ಮಾಡಿಕೊಂಡಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ. ಇದು ನಿರೀಕ್ಷತವೂ ಆಗಿತ್ತಲ್ಲವೇ??

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...