Homeಕರ್ನಾಟಕರಾಜ್ಯೋತ್ಸವ ಪ್ರಶಸ್ತಿ ಪ್ರಕಟ : ಕಾಳಿಗಿಂತ ಬೂಸಾನೇ ಹೆಚ್ಚು...

ರಾಜ್ಯೋತ್ಸವ ಪ್ರಶಸ್ತಿ ಪ್ರಕಟ : ಕಾಳಿಗಿಂತ ಬೂಸಾನೇ ಹೆಚ್ಚು…

ಪ್ರಶಸ್ತಿ ಪಟ್ಟಿಯಲ್ಲಿ ಬಿಜೆಪಿ ನಿಷ್ಠರೇ ಹೆಚ್ಚು. ಜಾತಿಗೂ ಪ್ರಾಧಾನ್ಯತೆ ಸಿಕ್ಕಿದೆ. ಪ್ರಶಸ್ತಿಗೆ ಆಯ್ಕೆಯಾದ ಅರ್ಹರೂ ಬಹುತೇಕ ಸಂಘ ಪರಿವಾರದವರೇ ಆಗಿದ್ದಾರೆ.

- Advertisement -
- Advertisement -

ಕನ್ನಡ ರಾಜ್ಯೋತ್ಸವಕ್ಕೆ ರಾಜ್ಯ ಸಜ್ಜಾಗುತ್ತಿದೆ. ನವೆಂಬರ್ ಕನ್ನಡಿಗರು ಎದ್ದುಕೂತಿದ್ದಾರೆ. ಸರ್ಕಾರವೂ ರಾಜ್ಯೋತ್ಸವ ಪ್ರಶಸ್ತಿ ಪಡೆಯುವ (ನ)ಗಣ್ಯರ ಪಟ್ಟಿಯನ್ನು ಪ್ರಕಟಿಸಿದೆ. ಈ ಪಟ್ಟಿಯಲ್ಲಿ ಕಾಳಿಗಿಂತ ಬೂಸಾನೇ ಹೆಚ್ಚು. ಅರ್ಹರಿಗಿಂತ ಅನರ್ಹರೇ ತುಂಬಿ ಹೋಗಿದ್ದಾರೆ. ಸಾಧನೆ ಮಾಡದವರು ಪ್ರಶಸ್ತಿ ಹೊಡೆದುಕೊಂಡಿದ್ದಾರೆ. ಅಂದರೆ ರಾಜ್ಯ ಸರ್ಕಾರ ಅಷ್ಟರಮಟ್ಟಿಗೆ ಪ್ರಶಸ್ತಿ ಆಯ್ಕೆಯಲ್ಲಿ ಕೈಯಾಡಿಸಿದೆ. 60 ವರ್ಷದ ಮಾನದಂಡ ಮಾತ್ರ ಪಾಲನೆಯಾದಂತೆ ಕಾಣುತ್ತಿದೆ. ಬಿಜೆಪಿ ಸರ್ಕಾರವೂ ತನಗೆ ಬೇಕಾದವರ ಹೆಸರನ್ನೇ ಆಯ್ದುಕೊಂಡಂತಿದೆ. ಆಯ್ಕೆ ಸಮಿತಿ ವರದಿಗೂ ಸ್ವಲ್ಪಮಟ್ಟಿಗೆ ಮನ್ನಣೆ ಸಿಕ್ಕಿದೆ.

ಸಾಹಿತ್ಯ ಕ್ಷೇತ್ರದಲ್ಲಿ ಬಿ. ರಾಜಶೇಖರಪ್ಪ ಪ್ರಾಚೀನ ಚಿತ್ರದುರ್ಗ, ನಿರಂತರ, ಹುಲ್ಲೂರು ಶ್ರೀನಿವಾಸ ಜೋಯಿಸರು – ಇತಿಹಾಸ ಸಂಶೋಧಕ ಹೀಗೆ ಹಲವು ಕೃತಿಗಳನ್ನು ಬರೆದು ಹೆಸರು ಮಾಡಿದ್ದಾರೆ. ರಂಗಭೂಮಿಯಲ್ಲಿ ಭಾರ್ಗವಿ ನಾರಾಯಣ (ಸಾಹಿತಿ/ಪರಿಸರವಾದಿ ಪ್ರಕಾಶ ಬೆಳವಾಡಿ ತಾಯಿ) ಚಲನಚಿತ್ರ, ಕಿರುತೆರೆ, ರಂಗಭೂಮಿಯಲ್ಲಿ ಕೆಲಸ ಮಾಡಿ ಜನರ ನಡುವೆ ಗುರುತಿಸಿಕೊಂಡಿದ್ದಾರೆ. ಪ್ರಜಾವಾಣಿಯಲ್ಲಿ ವಾರಕ್ಕೊಮ್ಮೆ ಲೇಖನ ಬರೆಯುವ ಜೊತೆಗೆ ಶಿಕ್ಷಣದ ಕುರಿತು ಕೃತಿಗಳನ್ನು ರಚಿಸಿದ ಡಾ.ಗುರುರಾಜ ಕರ್ಜಗಿ ಪ್ರಸಿದ್ದರಾಗಿದ್ದಾರೆ. ಚಂದನ ಟಿವಿಯಲ್ಲಿ ಥಟ್ ಅಂತ ಹೇಳಿ ಕಾರ್ಯಕ್ರಮ ನಡೆಸಿಕೊಡುವ ಡಾ. ನಾ.ಸೋಮಶ್ವರ್ ಮತ್ತು ಉದ್ಯಮಿಯಾಗಿ ಯಶಸ್ವಿಯಾಗಿರುವ ಡಾ.ವಿಜಯ ಸಂಕೇಶ್ವರ್, ಪ್ರಾಮಾಣಿಕತೆ ಮತ್ತು ಪಾರದರ್ಶಕತೆಗೆ ಹೆಸರಾದ ನ್ಯಾಯಮೂರ್ತಿ ಎನ್. ಕುಮಾರ್ ಹೀಗೆ ಬೆರಳೆಕೆಯ ಸಾಧಕರನ್ನು ಗುರುತಿಸಿರುವುದು ಶ್ಲಾಘನೀಯ.

ಇವರು ತಮ್ಮದೇ ಕ್ಷೇತ್ರದಲ್ಲಿ ಸ್ವಲ್ಪಮಟ್ಟಿಗಾದರೂ ಕೆಲಸ ಮಾಡಿ ಹೆಸರು ಮಾಡಿದ್ದಾರೆ. ಇಂಥವರ ಆಯ್ಕೆಯನ್ನು ಯಾರೂ ಕೂಡ ಪ್ರಶ್ನಿಸಲಾರರು. ಸಾಹಿತ್ಯ ಒಬ್ಬರು, ರಂಗಭೂಮಿ ಒಂದಿಬ್ಬರು, ನ್ಯಾಯಾಂಗದಲ್ಲಿ ಒಬ್ಬರು ಸಾಧನೆ ಮಾಡಿರುವುದನ್ನು ನಾಡಿನ ಜನತೆ ಕಂಡಿದೆ ಮತ್ತು ಗುರುತಿಸಿದೆ. ಪತ್ರಿಕೋದ್ಯಮದಲ್ಲಿ ಪರಿಣಾಮಕಾರಿ ಬರಹಗಳನ್ನು ಬರೆಯದಿದ್ದರೂ ಸಂಪಾದಕರಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಗುರುತಿಸಿಕೊಂಡಿರುವ ಬಿ.ವಿ. ಮಲ್ಲಿಕಾರ್ಜುನಯ್ಯ ಅವರಿಗೂ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಇದನ್ನು ಮೆಚ್ಚಲೇಬೇಕು.

ಆದರೆ ವಿವಿಧ ಕ್ಷೇತ್ರದ ಗಣ್ಯರನ್ನು ಆಯ್ಕೆ ಮಾಡುವಲ್ಲಿ ಸಮತೋಲನ ಕಾಯ್ದುಕೊಂಡಿಲ್ಲ. ಕೆಲವು ರಂಗಗಳಿಂದ ಹೆಚ್ಚು ಮಂದಿಯನ್ನು ಪ್ರಶಸ್ತಿಗೆ ಆಯ್ಕೆ ಮಾಡಿದ್ದರೆ, ಕೆಲ ಕ್ಷೇತ್ರಗಳಲ್ಲಿ ಒಬ್ಬರಿಗೆ ಮಾತ್ರ ಅವಕಾಶ ನೀಡಿದೆ. ಸಂಕೀರ್ಣದಲ್ಲಿ ಆರು ಮಂದಿ, ಜಾನಪದ ಐದು, ರಂಗಭೂಮಿ ಆರು, ವೈದ್ಯಕೀಯ ಐದು ಹೀಗೆ ಪಟ್ಟಿ ಅಸಮತೋಲನದಿಂದ ಕೂಡಿರುವುದನ್ನು ಯಾರೇ ಆದರೂ ಗುರುತಿಸಬಹುದು.

ವಿಮರ್ಶೆ, ಗುಡಿಕೈಗಾರಿಕೆ, ನ್ಯಾಯಾಂಗ, ಸಹಕಾರ, ಪತ್ರಿಕೋದ್ಯಮ, ಕಿರುತೆರೆ, ಚಲನಚಿತ್ರ, ಬಯಲಾಟ, ಯಕ್ಷಗಾನ ಕ್ಷೇತ್ರದಿಂದ ತಲಾ ಒಬ್ಬರನ್ನು ಮಾತ್ರ ಆಯ್ಕೆ ಮಾಡಿದೆ. ಸಂಗೀತ ಕ್ಷೇತ್ರದ ಛೋಟಿ ರೆಹಮತ್ ಖಾನ್, ಜಾನಪದ ಕ್ಷೇತ್ರದಲ್ಲಿ ಉಸ್ಮಾನ್ ಸಾಬ್ ಖಾದರ ಎಂಬಿಬ್ಬರು ಮುಸ್ಲಿಂ ಸಾಧಕರಿಗೂ ಪಟ್ಟಿಯಲ್ಲಿ ಅವಕಾಶ ಕಲ್ಪಿಸಿ ಎಲ್ಲರ ಹುಬ್ಬೇರುವಂತೆ ಮಾಡಿದೆ. ಯಾಕೆಂದರೆ ಅಲ್ಪಸಂಖ್ಯಾತರ ಮತಗಳೇ ಬೇಡ ಎನ್ನುವ, ಚುನಾವಣೆಯಲ್ಲಿ ಟಿಕೆಟ್ ನೀಡುವಾಗ ಮುಸ್ಲೀಮರಿಗೆ ಪ್ರಾತಿನಿಧ್ಯವೇ ಕಲ್ಪಿಸದ, ಟಿಪ್ಪು ಜಯಂತಿಗೆ ವಿರೋಧ ವ್ಯಕ್ತಪಡಿಸುವ ಬಿಜೆಪಿ ಸರ್ಕಾರದಲ್ಲಿ ಅಲ್ಪಸಂಖ್ಯಾತರು ಅದರಲ್ಲೂ ಮುಸ್ಲಿಂ ಸಾಧಕರನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಿರುವುದು ಸೋಜಿಗವೇ ಸರಿ.

ಪ್ರಶಸ್ತಿ ಪಟ್ಟಿಯಲ್ಲಿ ಬಿಜೆಪಿ ನಿಷ್ಠರೇ ಹೆಚ್ಚು. ಜಾತಿಗೂ ಪ್ರಾಧಾನ್ಯತೆ ಸಿಕ್ಕಿದೆ. ಪ್ರಶಸ್ತಿಗೆ ಆಯ್ಕೆಯಾದ ಅರ್ಹರೂ ಬಹುತೇಕ ಸಂಘ ಪರಿವಾರದವರೇ ಆಗಿದ್ದಾರೆ. ಪತಂಜಲಿ ಯೋಗ ಶಿಕ್ಷಣ ಸಂಸ್ಥೆ ಯೋಗ ವ್ಯಾಪಾರದಲ್ಲಿ ನಿರತವಾಗಿದೆ. ಯೋಗ ಕಲಿಸುವ ನೆಪದಲ್ಲಿ ಬಿಜೆಪಿ ಪರ ಕೆಲಸ ಮಾಡುತ್ತಿದೆ. ಇದು ಎಲ್ಲರಿಗೂ ಗೊತ್ತಿರುವ ಸಂಗತಿ. ಯೋಗ ಕಲಿಸುವ ಅಕ್ಕಂದಿರು, ಅಣ್ಣಂದಿರುವ ಮೂಲತಃ ಕೇಸರಿ ಪರಿವಾರದವರೇ ಆಗಿರುತ್ತಾರೆ. ಅವರನ್ನು ಯೋಗ ಕಲಿಕಾರ್ಥಿಗಳಿಗೆ ಅಣ್ಣ, ಅಕ್ಕ, ಜೀ ಎಂದೇ ಸಂಬೋಧಿಸುತ್ತಾರೆ. ಹಾಗಾಗಿ ಪತಂಜಲಿ ಯೋಗ ಶಿಕ್ಷಣ ಸಂಸ್ಥೆ ಪಕ್ಷಾತೀತವಾದ ಸಂಸ್ಥೆಯಲ್ಲ. ಅದು ಕೂಡ ಸನಾತನಿಗಳ ಕೂಟ.

ಡಾ.ಕೆ.ಚಿದಾನಂದಗೌಡ ಕುವೆಂಪು ವಿವಿ ಕುಲಪತಿಯಾಗಿ ನಿವೃತ್ತರಾಗಿರುವವರು. ಅವರು ಇಂಜಿನಿಯರಿಂಗ್‌ ಗೀತೆಗಳು, ಪುಟಾಣಿಗಳ ವಿಜ್ಞಾನ ಪದ್ಯಗಳು, ಸಂಪರ್ಕ ಮಾಧ್ಯಮಗಳು ಕೃತಿಗಳನ್ನು ಬರೆದಿದ್ದಾರೆ. ಇವರನ್ನು ಶಿಕ್ಷಣ ಕ್ಷೇತ್ರದಿಂದ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಶಿಕ್ಷಣ ಕ್ಷೇತ್ರಕ್ಕೆ ಇವರ ಕೊಡುಗೆ ಏನು ಎಂಬುದೇ ರಹಸ್ಯ. ಚಲನಚಿತ್ರ ಮತ್ತು ಕಿರುತೆರೆ ವಿಭಾಗದಲ್ಲಿ ಗುರುತಿಸಿರುವ ಶೈಲಶ್ರೀ ಮತ್ತು ಜಯಕುಮಾರ ಕೊಡಗನೂರ ಅವರ ಹೆಸರುಗಳೇ ಜನರಿಗೆ ಪರಿಚಯವಿಲ್ಲ. ಅಂಥವರೂ ವಯಸ್ಸಿನ ಆಧಾರದಲ್ಲಿ ಪಟ್ಟಿಯ ಒಳ ಸೇರಿದ್ದಾರೆ. ವೈದ್ಯಕೀಯ ಕ್ಷೇತ್ರದಲ್ಲಿ ಐದು ಮಂದಿ ವೈದ್ಯರನ್ನು ಗುರುತಿಸುವ ಅಗತ್ಯ ಏನಿತ್ತು ಎಂಬ ಪ್ರಶ್ನೆ ಮೂಡಿದೆ.

ನ್ಯಾಯಮೂರ್ತಿ ನಾಗಮೋಹನದಾಸ್ ಆಯ್ಕೆ ಸಮಿತಿ ವರದಿಯನ್ನು ಕೊಟ್ಟ ನಂತರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ಅವರು ಪಟ್ಟಿಯಲ್ಲಿ ಕೆಲವೊಂದು ಬದಲಾವಣೆಗಳನ್ನು ಮಾಡಿದ್ದಾರೆ. ತಮಗೆ ಬೇಕಾದವರನ್ನು ಆಯ್ಕೆ ಮಾಡಿಕೊಂಡಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ. ಇದು ನಿರೀಕ್ಷತವೂ ಆಗಿತ್ತಲ್ಲವೇ??

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...