Homeಕರ್ನಾಟಕರಾಜ್ಯೋತ್ಸವ ಪ್ರಶಸ್ತಿ ಪ್ರಕಟ : ಕಾಳಿಗಿಂತ ಬೂಸಾನೇ ಹೆಚ್ಚು...

ರಾಜ್ಯೋತ್ಸವ ಪ್ರಶಸ್ತಿ ಪ್ರಕಟ : ಕಾಳಿಗಿಂತ ಬೂಸಾನೇ ಹೆಚ್ಚು…

ಪ್ರಶಸ್ತಿ ಪಟ್ಟಿಯಲ್ಲಿ ಬಿಜೆಪಿ ನಿಷ್ಠರೇ ಹೆಚ್ಚು. ಜಾತಿಗೂ ಪ್ರಾಧಾನ್ಯತೆ ಸಿಕ್ಕಿದೆ. ಪ್ರಶಸ್ತಿಗೆ ಆಯ್ಕೆಯಾದ ಅರ್ಹರೂ ಬಹುತೇಕ ಸಂಘ ಪರಿವಾರದವರೇ ಆಗಿದ್ದಾರೆ.

- Advertisement -
- Advertisement -

ಕನ್ನಡ ರಾಜ್ಯೋತ್ಸವಕ್ಕೆ ರಾಜ್ಯ ಸಜ್ಜಾಗುತ್ತಿದೆ. ನವೆಂಬರ್ ಕನ್ನಡಿಗರು ಎದ್ದುಕೂತಿದ್ದಾರೆ. ಸರ್ಕಾರವೂ ರಾಜ್ಯೋತ್ಸವ ಪ್ರಶಸ್ತಿ ಪಡೆಯುವ (ನ)ಗಣ್ಯರ ಪಟ್ಟಿಯನ್ನು ಪ್ರಕಟಿಸಿದೆ. ಈ ಪಟ್ಟಿಯಲ್ಲಿ ಕಾಳಿಗಿಂತ ಬೂಸಾನೇ ಹೆಚ್ಚು. ಅರ್ಹರಿಗಿಂತ ಅನರ್ಹರೇ ತುಂಬಿ ಹೋಗಿದ್ದಾರೆ. ಸಾಧನೆ ಮಾಡದವರು ಪ್ರಶಸ್ತಿ ಹೊಡೆದುಕೊಂಡಿದ್ದಾರೆ. ಅಂದರೆ ರಾಜ್ಯ ಸರ್ಕಾರ ಅಷ್ಟರಮಟ್ಟಿಗೆ ಪ್ರಶಸ್ತಿ ಆಯ್ಕೆಯಲ್ಲಿ ಕೈಯಾಡಿಸಿದೆ. 60 ವರ್ಷದ ಮಾನದಂಡ ಮಾತ್ರ ಪಾಲನೆಯಾದಂತೆ ಕಾಣುತ್ತಿದೆ. ಬಿಜೆಪಿ ಸರ್ಕಾರವೂ ತನಗೆ ಬೇಕಾದವರ ಹೆಸರನ್ನೇ ಆಯ್ದುಕೊಂಡಂತಿದೆ. ಆಯ್ಕೆ ಸಮಿತಿ ವರದಿಗೂ ಸ್ವಲ್ಪಮಟ್ಟಿಗೆ ಮನ್ನಣೆ ಸಿಕ್ಕಿದೆ.

ಸಾಹಿತ್ಯ ಕ್ಷೇತ್ರದಲ್ಲಿ ಬಿ. ರಾಜಶೇಖರಪ್ಪ ಪ್ರಾಚೀನ ಚಿತ್ರದುರ್ಗ, ನಿರಂತರ, ಹುಲ್ಲೂರು ಶ್ರೀನಿವಾಸ ಜೋಯಿಸರು – ಇತಿಹಾಸ ಸಂಶೋಧಕ ಹೀಗೆ ಹಲವು ಕೃತಿಗಳನ್ನು ಬರೆದು ಹೆಸರು ಮಾಡಿದ್ದಾರೆ. ರಂಗಭೂಮಿಯಲ್ಲಿ ಭಾರ್ಗವಿ ನಾರಾಯಣ (ಸಾಹಿತಿ/ಪರಿಸರವಾದಿ ಪ್ರಕಾಶ ಬೆಳವಾಡಿ ತಾಯಿ) ಚಲನಚಿತ್ರ, ಕಿರುತೆರೆ, ರಂಗಭೂಮಿಯಲ್ಲಿ ಕೆಲಸ ಮಾಡಿ ಜನರ ನಡುವೆ ಗುರುತಿಸಿಕೊಂಡಿದ್ದಾರೆ. ಪ್ರಜಾವಾಣಿಯಲ್ಲಿ ವಾರಕ್ಕೊಮ್ಮೆ ಲೇಖನ ಬರೆಯುವ ಜೊತೆಗೆ ಶಿಕ್ಷಣದ ಕುರಿತು ಕೃತಿಗಳನ್ನು ರಚಿಸಿದ ಡಾ.ಗುರುರಾಜ ಕರ್ಜಗಿ ಪ್ರಸಿದ್ದರಾಗಿದ್ದಾರೆ. ಚಂದನ ಟಿವಿಯಲ್ಲಿ ಥಟ್ ಅಂತ ಹೇಳಿ ಕಾರ್ಯಕ್ರಮ ನಡೆಸಿಕೊಡುವ ಡಾ. ನಾ.ಸೋಮಶ್ವರ್ ಮತ್ತು ಉದ್ಯಮಿಯಾಗಿ ಯಶಸ್ವಿಯಾಗಿರುವ ಡಾ.ವಿಜಯ ಸಂಕೇಶ್ವರ್, ಪ್ರಾಮಾಣಿಕತೆ ಮತ್ತು ಪಾರದರ್ಶಕತೆಗೆ ಹೆಸರಾದ ನ್ಯಾಯಮೂರ್ತಿ ಎನ್. ಕುಮಾರ್ ಹೀಗೆ ಬೆರಳೆಕೆಯ ಸಾಧಕರನ್ನು ಗುರುತಿಸಿರುವುದು ಶ್ಲಾಘನೀಯ.

ಇವರು ತಮ್ಮದೇ ಕ್ಷೇತ್ರದಲ್ಲಿ ಸ್ವಲ್ಪಮಟ್ಟಿಗಾದರೂ ಕೆಲಸ ಮಾಡಿ ಹೆಸರು ಮಾಡಿದ್ದಾರೆ. ಇಂಥವರ ಆಯ್ಕೆಯನ್ನು ಯಾರೂ ಕೂಡ ಪ್ರಶ್ನಿಸಲಾರರು. ಸಾಹಿತ್ಯ ಒಬ್ಬರು, ರಂಗಭೂಮಿ ಒಂದಿಬ್ಬರು, ನ್ಯಾಯಾಂಗದಲ್ಲಿ ಒಬ್ಬರು ಸಾಧನೆ ಮಾಡಿರುವುದನ್ನು ನಾಡಿನ ಜನತೆ ಕಂಡಿದೆ ಮತ್ತು ಗುರುತಿಸಿದೆ. ಪತ್ರಿಕೋದ್ಯಮದಲ್ಲಿ ಪರಿಣಾಮಕಾರಿ ಬರಹಗಳನ್ನು ಬರೆಯದಿದ್ದರೂ ಸಂಪಾದಕರಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಗುರುತಿಸಿಕೊಂಡಿರುವ ಬಿ.ವಿ. ಮಲ್ಲಿಕಾರ್ಜುನಯ್ಯ ಅವರಿಗೂ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಇದನ್ನು ಮೆಚ್ಚಲೇಬೇಕು.

ಆದರೆ ವಿವಿಧ ಕ್ಷೇತ್ರದ ಗಣ್ಯರನ್ನು ಆಯ್ಕೆ ಮಾಡುವಲ್ಲಿ ಸಮತೋಲನ ಕಾಯ್ದುಕೊಂಡಿಲ್ಲ. ಕೆಲವು ರಂಗಗಳಿಂದ ಹೆಚ್ಚು ಮಂದಿಯನ್ನು ಪ್ರಶಸ್ತಿಗೆ ಆಯ್ಕೆ ಮಾಡಿದ್ದರೆ, ಕೆಲ ಕ್ಷೇತ್ರಗಳಲ್ಲಿ ಒಬ್ಬರಿಗೆ ಮಾತ್ರ ಅವಕಾಶ ನೀಡಿದೆ. ಸಂಕೀರ್ಣದಲ್ಲಿ ಆರು ಮಂದಿ, ಜಾನಪದ ಐದು, ರಂಗಭೂಮಿ ಆರು, ವೈದ್ಯಕೀಯ ಐದು ಹೀಗೆ ಪಟ್ಟಿ ಅಸಮತೋಲನದಿಂದ ಕೂಡಿರುವುದನ್ನು ಯಾರೇ ಆದರೂ ಗುರುತಿಸಬಹುದು.

ವಿಮರ್ಶೆ, ಗುಡಿಕೈಗಾರಿಕೆ, ನ್ಯಾಯಾಂಗ, ಸಹಕಾರ, ಪತ್ರಿಕೋದ್ಯಮ, ಕಿರುತೆರೆ, ಚಲನಚಿತ್ರ, ಬಯಲಾಟ, ಯಕ್ಷಗಾನ ಕ್ಷೇತ್ರದಿಂದ ತಲಾ ಒಬ್ಬರನ್ನು ಮಾತ್ರ ಆಯ್ಕೆ ಮಾಡಿದೆ. ಸಂಗೀತ ಕ್ಷೇತ್ರದ ಛೋಟಿ ರೆಹಮತ್ ಖಾನ್, ಜಾನಪದ ಕ್ಷೇತ್ರದಲ್ಲಿ ಉಸ್ಮಾನ್ ಸಾಬ್ ಖಾದರ ಎಂಬಿಬ್ಬರು ಮುಸ್ಲಿಂ ಸಾಧಕರಿಗೂ ಪಟ್ಟಿಯಲ್ಲಿ ಅವಕಾಶ ಕಲ್ಪಿಸಿ ಎಲ್ಲರ ಹುಬ್ಬೇರುವಂತೆ ಮಾಡಿದೆ. ಯಾಕೆಂದರೆ ಅಲ್ಪಸಂಖ್ಯಾತರ ಮತಗಳೇ ಬೇಡ ಎನ್ನುವ, ಚುನಾವಣೆಯಲ್ಲಿ ಟಿಕೆಟ್ ನೀಡುವಾಗ ಮುಸ್ಲೀಮರಿಗೆ ಪ್ರಾತಿನಿಧ್ಯವೇ ಕಲ್ಪಿಸದ, ಟಿಪ್ಪು ಜಯಂತಿಗೆ ವಿರೋಧ ವ್ಯಕ್ತಪಡಿಸುವ ಬಿಜೆಪಿ ಸರ್ಕಾರದಲ್ಲಿ ಅಲ್ಪಸಂಖ್ಯಾತರು ಅದರಲ್ಲೂ ಮುಸ್ಲಿಂ ಸಾಧಕರನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಿರುವುದು ಸೋಜಿಗವೇ ಸರಿ.

ಪ್ರಶಸ್ತಿ ಪಟ್ಟಿಯಲ್ಲಿ ಬಿಜೆಪಿ ನಿಷ್ಠರೇ ಹೆಚ್ಚು. ಜಾತಿಗೂ ಪ್ರಾಧಾನ್ಯತೆ ಸಿಕ್ಕಿದೆ. ಪ್ರಶಸ್ತಿಗೆ ಆಯ್ಕೆಯಾದ ಅರ್ಹರೂ ಬಹುತೇಕ ಸಂಘ ಪರಿವಾರದವರೇ ಆಗಿದ್ದಾರೆ. ಪತಂಜಲಿ ಯೋಗ ಶಿಕ್ಷಣ ಸಂಸ್ಥೆ ಯೋಗ ವ್ಯಾಪಾರದಲ್ಲಿ ನಿರತವಾಗಿದೆ. ಯೋಗ ಕಲಿಸುವ ನೆಪದಲ್ಲಿ ಬಿಜೆಪಿ ಪರ ಕೆಲಸ ಮಾಡುತ್ತಿದೆ. ಇದು ಎಲ್ಲರಿಗೂ ಗೊತ್ತಿರುವ ಸಂಗತಿ. ಯೋಗ ಕಲಿಸುವ ಅಕ್ಕಂದಿರು, ಅಣ್ಣಂದಿರುವ ಮೂಲತಃ ಕೇಸರಿ ಪರಿವಾರದವರೇ ಆಗಿರುತ್ತಾರೆ. ಅವರನ್ನು ಯೋಗ ಕಲಿಕಾರ್ಥಿಗಳಿಗೆ ಅಣ್ಣ, ಅಕ್ಕ, ಜೀ ಎಂದೇ ಸಂಬೋಧಿಸುತ್ತಾರೆ. ಹಾಗಾಗಿ ಪತಂಜಲಿ ಯೋಗ ಶಿಕ್ಷಣ ಸಂಸ್ಥೆ ಪಕ್ಷಾತೀತವಾದ ಸಂಸ್ಥೆಯಲ್ಲ. ಅದು ಕೂಡ ಸನಾತನಿಗಳ ಕೂಟ.

ಡಾ.ಕೆ.ಚಿದಾನಂದಗೌಡ ಕುವೆಂಪು ವಿವಿ ಕುಲಪತಿಯಾಗಿ ನಿವೃತ್ತರಾಗಿರುವವರು. ಅವರು ಇಂಜಿನಿಯರಿಂಗ್‌ ಗೀತೆಗಳು, ಪುಟಾಣಿಗಳ ವಿಜ್ಞಾನ ಪದ್ಯಗಳು, ಸಂಪರ್ಕ ಮಾಧ್ಯಮಗಳು ಕೃತಿಗಳನ್ನು ಬರೆದಿದ್ದಾರೆ. ಇವರನ್ನು ಶಿಕ್ಷಣ ಕ್ಷೇತ್ರದಿಂದ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಶಿಕ್ಷಣ ಕ್ಷೇತ್ರಕ್ಕೆ ಇವರ ಕೊಡುಗೆ ಏನು ಎಂಬುದೇ ರಹಸ್ಯ. ಚಲನಚಿತ್ರ ಮತ್ತು ಕಿರುತೆರೆ ವಿಭಾಗದಲ್ಲಿ ಗುರುತಿಸಿರುವ ಶೈಲಶ್ರೀ ಮತ್ತು ಜಯಕುಮಾರ ಕೊಡಗನೂರ ಅವರ ಹೆಸರುಗಳೇ ಜನರಿಗೆ ಪರಿಚಯವಿಲ್ಲ. ಅಂಥವರೂ ವಯಸ್ಸಿನ ಆಧಾರದಲ್ಲಿ ಪಟ್ಟಿಯ ಒಳ ಸೇರಿದ್ದಾರೆ. ವೈದ್ಯಕೀಯ ಕ್ಷೇತ್ರದಲ್ಲಿ ಐದು ಮಂದಿ ವೈದ್ಯರನ್ನು ಗುರುತಿಸುವ ಅಗತ್ಯ ಏನಿತ್ತು ಎಂಬ ಪ್ರಶ್ನೆ ಮೂಡಿದೆ.

ನ್ಯಾಯಮೂರ್ತಿ ನಾಗಮೋಹನದಾಸ್ ಆಯ್ಕೆ ಸಮಿತಿ ವರದಿಯನ್ನು ಕೊಟ್ಟ ನಂತರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ಅವರು ಪಟ್ಟಿಯಲ್ಲಿ ಕೆಲವೊಂದು ಬದಲಾವಣೆಗಳನ್ನು ಮಾಡಿದ್ದಾರೆ. ತಮಗೆ ಬೇಕಾದವರನ್ನು ಆಯ್ಕೆ ಮಾಡಿಕೊಂಡಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ. ಇದು ನಿರೀಕ್ಷತವೂ ಆಗಿತ್ತಲ್ಲವೇ??

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...