Homeಕರ್ನಾಟಕರಾಜ್ಯೋತ್ಸವ ಪ್ರಶಸ್ತಿ ಪ್ರಕಟ : ಕಾಳಿಗಿಂತ ಬೂಸಾನೇ ಹೆಚ್ಚು...

ರಾಜ್ಯೋತ್ಸವ ಪ್ರಶಸ್ತಿ ಪ್ರಕಟ : ಕಾಳಿಗಿಂತ ಬೂಸಾನೇ ಹೆಚ್ಚು…

ಪ್ರಶಸ್ತಿ ಪಟ್ಟಿಯಲ್ಲಿ ಬಿಜೆಪಿ ನಿಷ್ಠರೇ ಹೆಚ್ಚು. ಜಾತಿಗೂ ಪ್ರಾಧಾನ್ಯತೆ ಸಿಕ್ಕಿದೆ. ಪ್ರಶಸ್ತಿಗೆ ಆಯ್ಕೆಯಾದ ಅರ್ಹರೂ ಬಹುತೇಕ ಸಂಘ ಪರಿವಾರದವರೇ ಆಗಿದ್ದಾರೆ.

- Advertisement -
- Advertisement -

ಕನ್ನಡ ರಾಜ್ಯೋತ್ಸವಕ್ಕೆ ರಾಜ್ಯ ಸಜ್ಜಾಗುತ್ತಿದೆ. ನವೆಂಬರ್ ಕನ್ನಡಿಗರು ಎದ್ದುಕೂತಿದ್ದಾರೆ. ಸರ್ಕಾರವೂ ರಾಜ್ಯೋತ್ಸವ ಪ್ರಶಸ್ತಿ ಪಡೆಯುವ (ನ)ಗಣ್ಯರ ಪಟ್ಟಿಯನ್ನು ಪ್ರಕಟಿಸಿದೆ. ಈ ಪಟ್ಟಿಯಲ್ಲಿ ಕಾಳಿಗಿಂತ ಬೂಸಾನೇ ಹೆಚ್ಚು. ಅರ್ಹರಿಗಿಂತ ಅನರ್ಹರೇ ತುಂಬಿ ಹೋಗಿದ್ದಾರೆ. ಸಾಧನೆ ಮಾಡದವರು ಪ್ರಶಸ್ತಿ ಹೊಡೆದುಕೊಂಡಿದ್ದಾರೆ. ಅಂದರೆ ರಾಜ್ಯ ಸರ್ಕಾರ ಅಷ್ಟರಮಟ್ಟಿಗೆ ಪ್ರಶಸ್ತಿ ಆಯ್ಕೆಯಲ್ಲಿ ಕೈಯಾಡಿಸಿದೆ. 60 ವರ್ಷದ ಮಾನದಂಡ ಮಾತ್ರ ಪಾಲನೆಯಾದಂತೆ ಕಾಣುತ್ತಿದೆ. ಬಿಜೆಪಿ ಸರ್ಕಾರವೂ ತನಗೆ ಬೇಕಾದವರ ಹೆಸರನ್ನೇ ಆಯ್ದುಕೊಂಡಂತಿದೆ. ಆಯ್ಕೆ ಸಮಿತಿ ವರದಿಗೂ ಸ್ವಲ್ಪಮಟ್ಟಿಗೆ ಮನ್ನಣೆ ಸಿಕ್ಕಿದೆ.

ಸಾಹಿತ್ಯ ಕ್ಷೇತ್ರದಲ್ಲಿ ಬಿ. ರಾಜಶೇಖರಪ್ಪ ಪ್ರಾಚೀನ ಚಿತ್ರದುರ್ಗ, ನಿರಂತರ, ಹುಲ್ಲೂರು ಶ್ರೀನಿವಾಸ ಜೋಯಿಸರು – ಇತಿಹಾಸ ಸಂಶೋಧಕ ಹೀಗೆ ಹಲವು ಕೃತಿಗಳನ್ನು ಬರೆದು ಹೆಸರು ಮಾಡಿದ್ದಾರೆ. ರಂಗಭೂಮಿಯಲ್ಲಿ ಭಾರ್ಗವಿ ನಾರಾಯಣ (ಸಾಹಿತಿ/ಪರಿಸರವಾದಿ ಪ್ರಕಾಶ ಬೆಳವಾಡಿ ತಾಯಿ) ಚಲನಚಿತ್ರ, ಕಿರುತೆರೆ, ರಂಗಭೂಮಿಯಲ್ಲಿ ಕೆಲಸ ಮಾಡಿ ಜನರ ನಡುವೆ ಗುರುತಿಸಿಕೊಂಡಿದ್ದಾರೆ. ಪ್ರಜಾವಾಣಿಯಲ್ಲಿ ವಾರಕ್ಕೊಮ್ಮೆ ಲೇಖನ ಬರೆಯುವ ಜೊತೆಗೆ ಶಿಕ್ಷಣದ ಕುರಿತು ಕೃತಿಗಳನ್ನು ರಚಿಸಿದ ಡಾ.ಗುರುರಾಜ ಕರ್ಜಗಿ ಪ್ರಸಿದ್ದರಾಗಿದ್ದಾರೆ. ಚಂದನ ಟಿವಿಯಲ್ಲಿ ಥಟ್ ಅಂತ ಹೇಳಿ ಕಾರ್ಯಕ್ರಮ ನಡೆಸಿಕೊಡುವ ಡಾ. ನಾ.ಸೋಮಶ್ವರ್ ಮತ್ತು ಉದ್ಯಮಿಯಾಗಿ ಯಶಸ್ವಿಯಾಗಿರುವ ಡಾ.ವಿಜಯ ಸಂಕೇಶ್ವರ್, ಪ್ರಾಮಾಣಿಕತೆ ಮತ್ತು ಪಾರದರ್ಶಕತೆಗೆ ಹೆಸರಾದ ನ್ಯಾಯಮೂರ್ತಿ ಎನ್. ಕುಮಾರ್ ಹೀಗೆ ಬೆರಳೆಕೆಯ ಸಾಧಕರನ್ನು ಗುರುತಿಸಿರುವುದು ಶ್ಲಾಘನೀಯ.

ಇವರು ತಮ್ಮದೇ ಕ್ಷೇತ್ರದಲ್ಲಿ ಸ್ವಲ್ಪಮಟ್ಟಿಗಾದರೂ ಕೆಲಸ ಮಾಡಿ ಹೆಸರು ಮಾಡಿದ್ದಾರೆ. ಇಂಥವರ ಆಯ್ಕೆಯನ್ನು ಯಾರೂ ಕೂಡ ಪ್ರಶ್ನಿಸಲಾರರು. ಸಾಹಿತ್ಯ ಒಬ್ಬರು, ರಂಗಭೂಮಿ ಒಂದಿಬ್ಬರು, ನ್ಯಾಯಾಂಗದಲ್ಲಿ ಒಬ್ಬರು ಸಾಧನೆ ಮಾಡಿರುವುದನ್ನು ನಾಡಿನ ಜನತೆ ಕಂಡಿದೆ ಮತ್ತು ಗುರುತಿಸಿದೆ. ಪತ್ರಿಕೋದ್ಯಮದಲ್ಲಿ ಪರಿಣಾಮಕಾರಿ ಬರಹಗಳನ್ನು ಬರೆಯದಿದ್ದರೂ ಸಂಪಾದಕರಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಗುರುತಿಸಿಕೊಂಡಿರುವ ಬಿ.ವಿ. ಮಲ್ಲಿಕಾರ್ಜುನಯ್ಯ ಅವರಿಗೂ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಇದನ್ನು ಮೆಚ್ಚಲೇಬೇಕು.

ಆದರೆ ವಿವಿಧ ಕ್ಷೇತ್ರದ ಗಣ್ಯರನ್ನು ಆಯ್ಕೆ ಮಾಡುವಲ್ಲಿ ಸಮತೋಲನ ಕಾಯ್ದುಕೊಂಡಿಲ್ಲ. ಕೆಲವು ರಂಗಗಳಿಂದ ಹೆಚ್ಚು ಮಂದಿಯನ್ನು ಪ್ರಶಸ್ತಿಗೆ ಆಯ್ಕೆ ಮಾಡಿದ್ದರೆ, ಕೆಲ ಕ್ಷೇತ್ರಗಳಲ್ಲಿ ಒಬ್ಬರಿಗೆ ಮಾತ್ರ ಅವಕಾಶ ನೀಡಿದೆ. ಸಂಕೀರ್ಣದಲ್ಲಿ ಆರು ಮಂದಿ, ಜಾನಪದ ಐದು, ರಂಗಭೂಮಿ ಆರು, ವೈದ್ಯಕೀಯ ಐದು ಹೀಗೆ ಪಟ್ಟಿ ಅಸಮತೋಲನದಿಂದ ಕೂಡಿರುವುದನ್ನು ಯಾರೇ ಆದರೂ ಗುರುತಿಸಬಹುದು.

ವಿಮರ್ಶೆ, ಗುಡಿಕೈಗಾರಿಕೆ, ನ್ಯಾಯಾಂಗ, ಸಹಕಾರ, ಪತ್ರಿಕೋದ್ಯಮ, ಕಿರುತೆರೆ, ಚಲನಚಿತ್ರ, ಬಯಲಾಟ, ಯಕ್ಷಗಾನ ಕ್ಷೇತ್ರದಿಂದ ತಲಾ ಒಬ್ಬರನ್ನು ಮಾತ್ರ ಆಯ್ಕೆ ಮಾಡಿದೆ. ಸಂಗೀತ ಕ್ಷೇತ್ರದ ಛೋಟಿ ರೆಹಮತ್ ಖಾನ್, ಜಾನಪದ ಕ್ಷೇತ್ರದಲ್ಲಿ ಉಸ್ಮಾನ್ ಸಾಬ್ ಖಾದರ ಎಂಬಿಬ್ಬರು ಮುಸ್ಲಿಂ ಸಾಧಕರಿಗೂ ಪಟ್ಟಿಯಲ್ಲಿ ಅವಕಾಶ ಕಲ್ಪಿಸಿ ಎಲ್ಲರ ಹುಬ್ಬೇರುವಂತೆ ಮಾಡಿದೆ. ಯಾಕೆಂದರೆ ಅಲ್ಪಸಂಖ್ಯಾತರ ಮತಗಳೇ ಬೇಡ ಎನ್ನುವ, ಚುನಾವಣೆಯಲ್ಲಿ ಟಿಕೆಟ್ ನೀಡುವಾಗ ಮುಸ್ಲೀಮರಿಗೆ ಪ್ರಾತಿನಿಧ್ಯವೇ ಕಲ್ಪಿಸದ, ಟಿಪ್ಪು ಜಯಂತಿಗೆ ವಿರೋಧ ವ್ಯಕ್ತಪಡಿಸುವ ಬಿಜೆಪಿ ಸರ್ಕಾರದಲ್ಲಿ ಅಲ್ಪಸಂಖ್ಯಾತರು ಅದರಲ್ಲೂ ಮುಸ್ಲಿಂ ಸಾಧಕರನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಿರುವುದು ಸೋಜಿಗವೇ ಸರಿ.

ಪ್ರಶಸ್ತಿ ಪಟ್ಟಿಯಲ್ಲಿ ಬಿಜೆಪಿ ನಿಷ್ಠರೇ ಹೆಚ್ಚು. ಜಾತಿಗೂ ಪ್ರಾಧಾನ್ಯತೆ ಸಿಕ್ಕಿದೆ. ಪ್ರಶಸ್ತಿಗೆ ಆಯ್ಕೆಯಾದ ಅರ್ಹರೂ ಬಹುತೇಕ ಸಂಘ ಪರಿವಾರದವರೇ ಆಗಿದ್ದಾರೆ. ಪತಂಜಲಿ ಯೋಗ ಶಿಕ್ಷಣ ಸಂಸ್ಥೆ ಯೋಗ ವ್ಯಾಪಾರದಲ್ಲಿ ನಿರತವಾಗಿದೆ. ಯೋಗ ಕಲಿಸುವ ನೆಪದಲ್ಲಿ ಬಿಜೆಪಿ ಪರ ಕೆಲಸ ಮಾಡುತ್ತಿದೆ. ಇದು ಎಲ್ಲರಿಗೂ ಗೊತ್ತಿರುವ ಸಂಗತಿ. ಯೋಗ ಕಲಿಸುವ ಅಕ್ಕಂದಿರು, ಅಣ್ಣಂದಿರುವ ಮೂಲತಃ ಕೇಸರಿ ಪರಿವಾರದವರೇ ಆಗಿರುತ್ತಾರೆ. ಅವರನ್ನು ಯೋಗ ಕಲಿಕಾರ್ಥಿಗಳಿಗೆ ಅಣ್ಣ, ಅಕ್ಕ, ಜೀ ಎಂದೇ ಸಂಬೋಧಿಸುತ್ತಾರೆ. ಹಾಗಾಗಿ ಪತಂಜಲಿ ಯೋಗ ಶಿಕ್ಷಣ ಸಂಸ್ಥೆ ಪಕ್ಷಾತೀತವಾದ ಸಂಸ್ಥೆಯಲ್ಲ. ಅದು ಕೂಡ ಸನಾತನಿಗಳ ಕೂಟ.

ಡಾ.ಕೆ.ಚಿದಾನಂದಗೌಡ ಕುವೆಂಪು ವಿವಿ ಕುಲಪತಿಯಾಗಿ ನಿವೃತ್ತರಾಗಿರುವವರು. ಅವರು ಇಂಜಿನಿಯರಿಂಗ್‌ ಗೀತೆಗಳು, ಪುಟಾಣಿಗಳ ವಿಜ್ಞಾನ ಪದ್ಯಗಳು, ಸಂಪರ್ಕ ಮಾಧ್ಯಮಗಳು ಕೃತಿಗಳನ್ನು ಬರೆದಿದ್ದಾರೆ. ಇವರನ್ನು ಶಿಕ್ಷಣ ಕ್ಷೇತ್ರದಿಂದ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಶಿಕ್ಷಣ ಕ್ಷೇತ್ರಕ್ಕೆ ಇವರ ಕೊಡುಗೆ ಏನು ಎಂಬುದೇ ರಹಸ್ಯ. ಚಲನಚಿತ್ರ ಮತ್ತು ಕಿರುತೆರೆ ವಿಭಾಗದಲ್ಲಿ ಗುರುತಿಸಿರುವ ಶೈಲಶ್ರೀ ಮತ್ತು ಜಯಕುಮಾರ ಕೊಡಗನೂರ ಅವರ ಹೆಸರುಗಳೇ ಜನರಿಗೆ ಪರಿಚಯವಿಲ್ಲ. ಅಂಥವರೂ ವಯಸ್ಸಿನ ಆಧಾರದಲ್ಲಿ ಪಟ್ಟಿಯ ಒಳ ಸೇರಿದ್ದಾರೆ. ವೈದ್ಯಕೀಯ ಕ್ಷೇತ್ರದಲ್ಲಿ ಐದು ಮಂದಿ ವೈದ್ಯರನ್ನು ಗುರುತಿಸುವ ಅಗತ್ಯ ಏನಿತ್ತು ಎಂಬ ಪ್ರಶ್ನೆ ಮೂಡಿದೆ.

ನ್ಯಾಯಮೂರ್ತಿ ನಾಗಮೋಹನದಾಸ್ ಆಯ್ಕೆ ಸಮಿತಿ ವರದಿಯನ್ನು ಕೊಟ್ಟ ನಂತರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ಅವರು ಪಟ್ಟಿಯಲ್ಲಿ ಕೆಲವೊಂದು ಬದಲಾವಣೆಗಳನ್ನು ಮಾಡಿದ್ದಾರೆ. ತಮಗೆ ಬೇಕಾದವರನ್ನು ಆಯ್ಕೆ ಮಾಡಿಕೊಂಡಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ. ಇದು ನಿರೀಕ್ಷತವೂ ಆಗಿತ್ತಲ್ಲವೇ??

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...