Homeಕರ್ನಾಟಕರಾಜ್ಯೋತ್ಸವ ಪ್ರಶಸ್ತಿ ಪ್ರಕಟ : ಕಾಳಿಗಿಂತ ಬೂಸಾನೇ ಹೆಚ್ಚು...

ರಾಜ್ಯೋತ್ಸವ ಪ್ರಶಸ್ತಿ ಪ್ರಕಟ : ಕಾಳಿಗಿಂತ ಬೂಸಾನೇ ಹೆಚ್ಚು…

ಪ್ರಶಸ್ತಿ ಪಟ್ಟಿಯಲ್ಲಿ ಬಿಜೆಪಿ ನಿಷ್ಠರೇ ಹೆಚ್ಚು. ಜಾತಿಗೂ ಪ್ರಾಧಾನ್ಯತೆ ಸಿಕ್ಕಿದೆ. ಪ್ರಶಸ್ತಿಗೆ ಆಯ್ಕೆಯಾದ ಅರ್ಹರೂ ಬಹುತೇಕ ಸಂಘ ಪರಿವಾರದವರೇ ಆಗಿದ್ದಾರೆ.

- Advertisement -
- Advertisement -

ಕನ್ನಡ ರಾಜ್ಯೋತ್ಸವಕ್ಕೆ ರಾಜ್ಯ ಸಜ್ಜಾಗುತ್ತಿದೆ. ನವೆಂಬರ್ ಕನ್ನಡಿಗರು ಎದ್ದುಕೂತಿದ್ದಾರೆ. ಸರ್ಕಾರವೂ ರಾಜ್ಯೋತ್ಸವ ಪ್ರಶಸ್ತಿ ಪಡೆಯುವ (ನ)ಗಣ್ಯರ ಪಟ್ಟಿಯನ್ನು ಪ್ರಕಟಿಸಿದೆ. ಈ ಪಟ್ಟಿಯಲ್ಲಿ ಕಾಳಿಗಿಂತ ಬೂಸಾನೇ ಹೆಚ್ಚು. ಅರ್ಹರಿಗಿಂತ ಅನರ್ಹರೇ ತುಂಬಿ ಹೋಗಿದ್ದಾರೆ. ಸಾಧನೆ ಮಾಡದವರು ಪ್ರಶಸ್ತಿ ಹೊಡೆದುಕೊಂಡಿದ್ದಾರೆ. ಅಂದರೆ ರಾಜ್ಯ ಸರ್ಕಾರ ಅಷ್ಟರಮಟ್ಟಿಗೆ ಪ್ರಶಸ್ತಿ ಆಯ್ಕೆಯಲ್ಲಿ ಕೈಯಾಡಿಸಿದೆ. 60 ವರ್ಷದ ಮಾನದಂಡ ಮಾತ್ರ ಪಾಲನೆಯಾದಂತೆ ಕಾಣುತ್ತಿದೆ. ಬಿಜೆಪಿ ಸರ್ಕಾರವೂ ತನಗೆ ಬೇಕಾದವರ ಹೆಸರನ್ನೇ ಆಯ್ದುಕೊಂಡಂತಿದೆ. ಆಯ್ಕೆ ಸಮಿತಿ ವರದಿಗೂ ಸ್ವಲ್ಪಮಟ್ಟಿಗೆ ಮನ್ನಣೆ ಸಿಕ್ಕಿದೆ.

ಸಾಹಿತ್ಯ ಕ್ಷೇತ್ರದಲ್ಲಿ ಬಿ. ರಾಜಶೇಖರಪ್ಪ ಪ್ರಾಚೀನ ಚಿತ್ರದುರ್ಗ, ನಿರಂತರ, ಹುಲ್ಲೂರು ಶ್ರೀನಿವಾಸ ಜೋಯಿಸರು – ಇತಿಹಾಸ ಸಂಶೋಧಕ ಹೀಗೆ ಹಲವು ಕೃತಿಗಳನ್ನು ಬರೆದು ಹೆಸರು ಮಾಡಿದ್ದಾರೆ. ರಂಗಭೂಮಿಯಲ್ಲಿ ಭಾರ್ಗವಿ ನಾರಾಯಣ (ಸಾಹಿತಿ/ಪರಿಸರವಾದಿ ಪ್ರಕಾಶ ಬೆಳವಾಡಿ ತಾಯಿ) ಚಲನಚಿತ್ರ, ಕಿರುತೆರೆ, ರಂಗಭೂಮಿಯಲ್ಲಿ ಕೆಲಸ ಮಾಡಿ ಜನರ ನಡುವೆ ಗುರುತಿಸಿಕೊಂಡಿದ್ದಾರೆ. ಪ್ರಜಾವಾಣಿಯಲ್ಲಿ ವಾರಕ್ಕೊಮ್ಮೆ ಲೇಖನ ಬರೆಯುವ ಜೊತೆಗೆ ಶಿಕ್ಷಣದ ಕುರಿತು ಕೃತಿಗಳನ್ನು ರಚಿಸಿದ ಡಾ.ಗುರುರಾಜ ಕರ್ಜಗಿ ಪ್ರಸಿದ್ದರಾಗಿದ್ದಾರೆ. ಚಂದನ ಟಿವಿಯಲ್ಲಿ ಥಟ್ ಅಂತ ಹೇಳಿ ಕಾರ್ಯಕ್ರಮ ನಡೆಸಿಕೊಡುವ ಡಾ. ನಾ.ಸೋಮಶ್ವರ್ ಮತ್ತು ಉದ್ಯಮಿಯಾಗಿ ಯಶಸ್ವಿಯಾಗಿರುವ ಡಾ.ವಿಜಯ ಸಂಕೇಶ್ವರ್, ಪ್ರಾಮಾಣಿಕತೆ ಮತ್ತು ಪಾರದರ್ಶಕತೆಗೆ ಹೆಸರಾದ ನ್ಯಾಯಮೂರ್ತಿ ಎನ್. ಕುಮಾರ್ ಹೀಗೆ ಬೆರಳೆಕೆಯ ಸಾಧಕರನ್ನು ಗುರುತಿಸಿರುವುದು ಶ್ಲಾಘನೀಯ.

ಇವರು ತಮ್ಮದೇ ಕ್ಷೇತ್ರದಲ್ಲಿ ಸ್ವಲ್ಪಮಟ್ಟಿಗಾದರೂ ಕೆಲಸ ಮಾಡಿ ಹೆಸರು ಮಾಡಿದ್ದಾರೆ. ಇಂಥವರ ಆಯ್ಕೆಯನ್ನು ಯಾರೂ ಕೂಡ ಪ್ರಶ್ನಿಸಲಾರರು. ಸಾಹಿತ್ಯ ಒಬ್ಬರು, ರಂಗಭೂಮಿ ಒಂದಿಬ್ಬರು, ನ್ಯಾಯಾಂಗದಲ್ಲಿ ಒಬ್ಬರು ಸಾಧನೆ ಮಾಡಿರುವುದನ್ನು ನಾಡಿನ ಜನತೆ ಕಂಡಿದೆ ಮತ್ತು ಗುರುತಿಸಿದೆ. ಪತ್ರಿಕೋದ್ಯಮದಲ್ಲಿ ಪರಿಣಾಮಕಾರಿ ಬರಹಗಳನ್ನು ಬರೆಯದಿದ್ದರೂ ಸಂಪಾದಕರಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಗುರುತಿಸಿಕೊಂಡಿರುವ ಬಿ.ವಿ. ಮಲ್ಲಿಕಾರ್ಜುನಯ್ಯ ಅವರಿಗೂ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಇದನ್ನು ಮೆಚ್ಚಲೇಬೇಕು.

ಆದರೆ ವಿವಿಧ ಕ್ಷೇತ್ರದ ಗಣ್ಯರನ್ನು ಆಯ್ಕೆ ಮಾಡುವಲ್ಲಿ ಸಮತೋಲನ ಕಾಯ್ದುಕೊಂಡಿಲ್ಲ. ಕೆಲವು ರಂಗಗಳಿಂದ ಹೆಚ್ಚು ಮಂದಿಯನ್ನು ಪ್ರಶಸ್ತಿಗೆ ಆಯ್ಕೆ ಮಾಡಿದ್ದರೆ, ಕೆಲ ಕ್ಷೇತ್ರಗಳಲ್ಲಿ ಒಬ್ಬರಿಗೆ ಮಾತ್ರ ಅವಕಾಶ ನೀಡಿದೆ. ಸಂಕೀರ್ಣದಲ್ಲಿ ಆರು ಮಂದಿ, ಜಾನಪದ ಐದು, ರಂಗಭೂಮಿ ಆರು, ವೈದ್ಯಕೀಯ ಐದು ಹೀಗೆ ಪಟ್ಟಿ ಅಸಮತೋಲನದಿಂದ ಕೂಡಿರುವುದನ್ನು ಯಾರೇ ಆದರೂ ಗುರುತಿಸಬಹುದು.

ವಿಮರ್ಶೆ, ಗುಡಿಕೈಗಾರಿಕೆ, ನ್ಯಾಯಾಂಗ, ಸಹಕಾರ, ಪತ್ರಿಕೋದ್ಯಮ, ಕಿರುತೆರೆ, ಚಲನಚಿತ್ರ, ಬಯಲಾಟ, ಯಕ್ಷಗಾನ ಕ್ಷೇತ್ರದಿಂದ ತಲಾ ಒಬ್ಬರನ್ನು ಮಾತ್ರ ಆಯ್ಕೆ ಮಾಡಿದೆ. ಸಂಗೀತ ಕ್ಷೇತ್ರದ ಛೋಟಿ ರೆಹಮತ್ ಖಾನ್, ಜಾನಪದ ಕ್ಷೇತ್ರದಲ್ಲಿ ಉಸ್ಮಾನ್ ಸಾಬ್ ಖಾದರ ಎಂಬಿಬ್ಬರು ಮುಸ್ಲಿಂ ಸಾಧಕರಿಗೂ ಪಟ್ಟಿಯಲ್ಲಿ ಅವಕಾಶ ಕಲ್ಪಿಸಿ ಎಲ್ಲರ ಹುಬ್ಬೇರುವಂತೆ ಮಾಡಿದೆ. ಯಾಕೆಂದರೆ ಅಲ್ಪಸಂಖ್ಯಾತರ ಮತಗಳೇ ಬೇಡ ಎನ್ನುವ, ಚುನಾವಣೆಯಲ್ಲಿ ಟಿಕೆಟ್ ನೀಡುವಾಗ ಮುಸ್ಲೀಮರಿಗೆ ಪ್ರಾತಿನಿಧ್ಯವೇ ಕಲ್ಪಿಸದ, ಟಿಪ್ಪು ಜಯಂತಿಗೆ ವಿರೋಧ ವ್ಯಕ್ತಪಡಿಸುವ ಬಿಜೆಪಿ ಸರ್ಕಾರದಲ್ಲಿ ಅಲ್ಪಸಂಖ್ಯಾತರು ಅದರಲ್ಲೂ ಮುಸ್ಲಿಂ ಸಾಧಕರನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಿರುವುದು ಸೋಜಿಗವೇ ಸರಿ.

ಪ್ರಶಸ್ತಿ ಪಟ್ಟಿಯಲ್ಲಿ ಬಿಜೆಪಿ ನಿಷ್ಠರೇ ಹೆಚ್ಚು. ಜಾತಿಗೂ ಪ್ರಾಧಾನ್ಯತೆ ಸಿಕ್ಕಿದೆ. ಪ್ರಶಸ್ತಿಗೆ ಆಯ್ಕೆಯಾದ ಅರ್ಹರೂ ಬಹುತೇಕ ಸಂಘ ಪರಿವಾರದವರೇ ಆಗಿದ್ದಾರೆ. ಪತಂಜಲಿ ಯೋಗ ಶಿಕ್ಷಣ ಸಂಸ್ಥೆ ಯೋಗ ವ್ಯಾಪಾರದಲ್ಲಿ ನಿರತವಾಗಿದೆ. ಯೋಗ ಕಲಿಸುವ ನೆಪದಲ್ಲಿ ಬಿಜೆಪಿ ಪರ ಕೆಲಸ ಮಾಡುತ್ತಿದೆ. ಇದು ಎಲ್ಲರಿಗೂ ಗೊತ್ತಿರುವ ಸಂಗತಿ. ಯೋಗ ಕಲಿಸುವ ಅಕ್ಕಂದಿರು, ಅಣ್ಣಂದಿರುವ ಮೂಲತಃ ಕೇಸರಿ ಪರಿವಾರದವರೇ ಆಗಿರುತ್ತಾರೆ. ಅವರನ್ನು ಯೋಗ ಕಲಿಕಾರ್ಥಿಗಳಿಗೆ ಅಣ್ಣ, ಅಕ್ಕ, ಜೀ ಎಂದೇ ಸಂಬೋಧಿಸುತ್ತಾರೆ. ಹಾಗಾಗಿ ಪತಂಜಲಿ ಯೋಗ ಶಿಕ್ಷಣ ಸಂಸ್ಥೆ ಪಕ್ಷಾತೀತವಾದ ಸಂಸ್ಥೆಯಲ್ಲ. ಅದು ಕೂಡ ಸನಾತನಿಗಳ ಕೂಟ.

ಡಾ.ಕೆ.ಚಿದಾನಂದಗೌಡ ಕುವೆಂಪು ವಿವಿ ಕುಲಪತಿಯಾಗಿ ನಿವೃತ್ತರಾಗಿರುವವರು. ಅವರು ಇಂಜಿನಿಯರಿಂಗ್‌ ಗೀತೆಗಳು, ಪುಟಾಣಿಗಳ ವಿಜ್ಞಾನ ಪದ್ಯಗಳು, ಸಂಪರ್ಕ ಮಾಧ್ಯಮಗಳು ಕೃತಿಗಳನ್ನು ಬರೆದಿದ್ದಾರೆ. ಇವರನ್ನು ಶಿಕ್ಷಣ ಕ್ಷೇತ್ರದಿಂದ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಶಿಕ್ಷಣ ಕ್ಷೇತ್ರಕ್ಕೆ ಇವರ ಕೊಡುಗೆ ಏನು ಎಂಬುದೇ ರಹಸ್ಯ. ಚಲನಚಿತ್ರ ಮತ್ತು ಕಿರುತೆರೆ ವಿಭಾಗದಲ್ಲಿ ಗುರುತಿಸಿರುವ ಶೈಲಶ್ರೀ ಮತ್ತು ಜಯಕುಮಾರ ಕೊಡಗನೂರ ಅವರ ಹೆಸರುಗಳೇ ಜನರಿಗೆ ಪರಿಚಯವಿಲ್ಲ. ಅಂಥವರೂ ವಯಸ್ಸಿನ ಆಧಾರದಲ್ಲಿ ಪಟ್ಟಿಯ ಒಳ ಸೇರಿದ್ದಾರೆ. ವೈದ್ಯಕೀಯ ಕ್ಷೇತ್ರದಲ್ಲಿ ಐದು ಮಂದಿ ವೈದ್ಯರನ್ನು ಗುರುತಿಸುವ ಅಗತ್ಯ ಏನಿತ್ತು ಎಂಬ ಪ್ರಶ್ನೆ ಮೂಡಿದೆ.

ನ್ಯಾಯಮೂರ್ತಿ ನಾಗಮೋಹನದಾಸ್ ಆಯ್ಕೆ ಸಮಿತಿ ವರದಿಯನ್ನು ಕೊಟ್ಟ ನಂತರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ಅವರು ಪಟ್ಟಿಯಲ್ಲಿ ಕೆಲವೊಂದು ಬದಲಾವಣೆಗಳನ್ನು ಮಾಡಿದ್ದಾರೆ. ತಮಗೆ ಬೇಕಾದವರನ್ನು ಆಯ್ಕೆ ಮಾಡಿಕೊಂಡಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ. ಇದು ನಿರೀಕ್ಷತವೂ ಆಗಿತ್ತಲ್ಲವೇ??

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...