Homeಕರ್ನಾಟಕ‘ಪಂಪ ಮಹಾಕವಿ ರಸ್ತೆ’ ಹೆಸರು ಬದಲಿಸಲು ಪ್ರಸ್ತಾವನೆ ಸಲ್ಲಿಸಿದ ಕನ್ನಡ ಸಾಹಿತ್ಯ ಪರಿಷತ್‌!

‘ಪಂಪ ಮಹಾಕವಿ ರಸ್ತೆ’ ಹೆಸರು ಬದಲಿಸಲು ಪ್ರಸ್ತಾವನೆ ಸಲ್ಲಿಸಿದ ಕನ್ನಡ ಸಾಹಿತ್ಯ ಪರಿಷತ್‌!

“ನಮ್ಮ ಎದುರಿನ ರಸ್ತೆಗೆ ನಮ್ಮತನ ಬೇಕಾಲ್ಲವೇ?” ಎಂದು ಪ್ರಶ್ನಿಸಿದ್ದಾರೆ ಕಸಾಪ ಅಧ್ಯಕ್ಷರಾದ ಮಹೇಶ್ ಜೋಶಿ.

- Advertisement -
- Advertisement -

ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್‌ (ಕಸಾಪ) ಮಂದಿನ ‘ಪಂಪ ಮಹಾಕವಿ ರಸ್ತೆ’ ಎಂಬ ಹೆಸರನ್ನು ಬದಲಿಸುವ ಪ್ರಸ್ತಾಪವನ್ನು ಕಸಾಪ ಮುಂದಿಟ್ಟಿದೆ.

ಈ ರಸ್ತೆಯಲ್ಲಿನ ಸುಮಾರು ಅರ್ಧ ಕಿಮೀಯನ್ನು ‘ಕನ್ನಡ ಸಾಹಿತ್ಯ ಪರಿಷತ್‌ ರಸ್ತೆ’ ಎಂದು ಹೆಸರಿಡಬೇಕೆಂದು ಕಸಾಪ ಬಯಸಿದೆ.

ಚಾಮರಾಜಪೇಟೆಯ ಮಿಂಟೋ ಆಸ್ಪತ್ರೆ ಮತ್ತು ಮಕ್ಕಳ ಕೂಟ ಪಾರ್ಕ್ ನಡುವಿನ ರಸ್ತೆಯನ್ನು ಕನ್ನಡ ಸಾಹಿತ್ಯ ಪರಿಷತ್ ರಸ್ತೆ ಎಂದು ಮರುನಾಮಕರಣ ಮಾಡಲು ಕಸಾಪ ಮುಂದಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ರಸ್ತೆಗೆ ಪ್ರಸ್ತುತ ಪಂಪ ಮಹಾಕವಿ ಎಂದು ಹೆಸರಿಡಲಾಗಿದೆ. ಇಲ್ಲಿನ ಅರ್ಧ ಕಿ.ಮೀ.ಯಷ್ಟು ರಸ್ತೆಯನ್ನು ಕನ್ನಡ ಪರಿಮಳದಿಂದ, ಕನ್ನಡಮಯದಿಂದ ತುಂಬಬೇಕು ಎಂಬ ಪ್ರಸ್ತಾವನೆಯನ್ನು ಕಸಾಪ ಸಲ್ಲಿಸಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಂದೆ ಈ ಕುರಿತು ಪ್ರಸ್ತಾವನೆ ಸಲ್ಲಿಸಲು ಕಸಾಪ ಅಧಿಕಾರಿಗಳು ಸಜ್ಜಾಗಿದ್ದಾರೆ.

ಕಸಾಪ ಅಧ್ಯಕ್ಷ ಮಹೇಶ್ ಜೋಶಿಯವರು ಬಿಬಿಎಂಪಿ ಅಧಿಕಾರಿಗಳಿಗೆ ಪತ್ರ ಬರೆದಿದ್ದು, ಮುಖ್ಯಮಂತ್ರಿಗಳು ಇತ್ತೀಚೆಗೆ ಪರಿಷತ್‌ಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರೊಂದಿಗೂ ಚರ್ಚಿಸಿದ್ದೇವೆ ಎಂದಿದ್ದಾರೆ.

Interview| ಆರೆಸ್ಸೆಸ್‌ಗೆ ಸೇರಿದವನೆಂಬ ಅಪಪ್ರಚಾರ: ಮಹೇಶ ಜೋಶಿ | Prajavani
ಕಸಾಪ ಅಧ್ಯಕ್ಷರಾದ ಮಹೇಶ್ ಜೋಶಿ

ಕಸಾಪ ರಸ್ತೆ ಕಲ್ಪನೆಯ ಕುರಿತು ಚರ್ಚಿಸಲು ಆ ವ್ಯಾಪ್ತಿಯಲ್ಲಿರುವ ಸಂಸ್ಥೆಗಳು/ಸಂಘಟನೆಗಳೊಂದಿಗೆ ಶೀಘ್ರದಲ್ಲೇ ಸಭೆಯನ್ನು ಕರೆಯುವುದಾಗಿ ಜೋಶಿ ಹೇಳಿದ್ದಾರೆ.

“ಈ ವ್ಯಾಪ್ತಿಯಲ್ಲಿ ಪೊಲೀಸ್ ಠಾಣೆ, ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ, ಒಂದು ಪ್ರಾದೇಶಿಕ ಪತ್ರಿಕಾ ಕಚೇರಿ, ಕೆಲವು ಬ್ಯಾಂಕ್‌ಗಳು, ಉದ್ಯಾನವನ ಮತ್ತು ಮಿಂಟೋ ಕಣ್ಣಿನ ಆಸ್ಪತ್ರೆಯಂತಹ ಕೆಲವು ಪ್ರಮುಖ ಸಂಸ್ಥೆಗಳಿವೆ. ನಮ್ಮ ಪ್ರಸ್ತಾಪವನ್ನು ಚರ್ಚಿಸಲು ಮತ್ತು ಅವರ ಸಲಹೆಗಳನ್ನು ಪಡೆಯಲು ನಾವು ಎಲ್ಲರನ್ನೂ ಆಹ್ವಾನಿಸುತ್ತೇವೆ” ಎಂದಿದ್ದಾರೆ.

“ಈ ರಸ್ತೆಯು ಕನ್ನಡ ಪ್ರೇಮಿಗಳ ಕಣ್ಣು ಮತ್ತು ಕಿವಿಗೆ ರಸದೌತಣ ನೀಡಲಿದೆ. ಬೆಂಗಳೂರಿಗೆ ಬರುವ ಪ್ರತಿಯೊಬ್ಬ ಪ್ರವಾಸಿಗರನ್ನು ಆಕರ್ಷಿಸುವುದು ನಮ್ಮ ಉದ್ದೇಶವಾಗಿದೆ” ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಆ ರಸ್ತೆಯಲ್ಲಿ ಕಾರ್ಯನಿರ್ವಹಿಸುವ ಕಚೇರಿಗಳು ಮತ್ತು ಸಂಸ್ಥೆಗಳಲ್ಲಿ ಕೆಲಸ ಮಾಡುವವರಿಗೆ ಪರ್ಯಾಯ ವಾಹನ ನಿಲುಗಡೆ ವ್ಯವಸ್ಥೆ ಕಲ್ಪಿಸುವ ಕುರಿತು ಕಸಾಪ ಚರ್ಚಿಸುತ್ತಿದೆ. ಈ ರಸ್ತೆಯಲ್ಲಿ ಕನ್ನಡ ಕವಿಗಳ ಭಾವಚಿತ್ರವನ್ನು ಹಾಕಲಾಗುವುದು. ದೀಪಾಲಂಕಾರ ಮಾಡಲಾಗುವುದು. ಕನ್ನಡ ಪದಗಳಿಂದ ಅಲಂಕರಿಸಿದ ಗೋಡೆಗಳನ್ನು ನಿರ್ಮಿಸಲಾಗುವುದು. ಹಳದಿ-ಕೆಂಪು ಬಣ್ಣದಿಂದ ರಸ್ತೆಯ ಮೆರುಗು ಹೆಚ್ಚಿಸಲಾಗುವುದು ಎಂದು ಕಸಾಪ ಪ್ರಸ್ತಾಪಿಸಿದೆ.

ಕನ್ನಡದ ಆದಿಕವಿ ಪಂಪನ ಹೆಸರನ್ನು ಬದಲಿಸುವ ಅವಶ್ಯವಿದೆಯೇ ಎಂಬ ಪ್ರಶ್ನೆ ಎದ್ದಿದೆ. ಈ ಕುರಿತು ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಮಹೇಶ್ ಜೋಶಿಯವರು, “ನ್ಯಾಷನಲ್‌ ಕಾಲೇಜಿನಿಂದ ಆರಂಭವಾಗಿ ಮಿಂಟೋ ಆಸ್ಪತ್ರೆಯವರೆಗೆ ಪಂಪ ಮಹಾಕವಿ ರಸ್ತೆ ಇದೆ. ನ್ಯಾಷನಲ್ ಕಾಲೇಜಿನಿಂದ ಮಕ್ಕಳ ಕೂಟದವರೆಗೆ ಪಂಪ ಮಹಾಕವಿ ರಸ್ತೆ ಎಂದೇ ಇರುತ್ತದೆ. ಅದರ ಮುಂದಿನ ರಸ್ತೆಯನ್ನು ಕನ್ನಡ ಸಾಹಿತ್ಯ ಪರಿಷತ್‌ ರಸ್ತೆ ಎಂದು ಇಡಬೇಕೆಂದು ಯೋಚಿಸಿದ್ದೇವೆ” ಎಂದರು.

ಪಂಪನ ಹೆಸರಲ್ಲಿರುವ ರಸ್ತೆಯಿಂದ ಕಸಾಪಕ್ಕೆ ಆಗುವ ನಷ್ಟವೇನು ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ಕನ್ನಡ ಸಾಹಿತ್ಯ ಪರಿಷತ್‌ ಕೂಡ ಕನ್ನಡಕ್ಕಾಗಿಯೇ ದುಡಿದಿದೆ. ಮೈಸೂರು ಒಡೆಯರಿಂದ ಸ್ಥಾಪನೆಯಾಗಿರುವ ಸಂಸ್ಥೆ ಕಸಾಪ. ನಮ್ಮ ಎದುರಿನ ರಸ್ತೆಗೆ ನಮ್ಮತನ ಬೇಕಾಲ್ಲವೇ? ಕಸಾಪ ಎಂಬ ನಮ್ಮತನ ಬೇಡವೆ? ಪಂಪ ಎಂಬ ಹೆಸರನ್ನು ನಾವು ಬದಲಿಸುತ್ತಿಲ್ಲ. ಪಂಪ ರಸ್ತೆಯೂ ಇರುತ್ತದೆ. ಕನ್ನಡ ಸಾಹಿತ್ಯ ಪರಿಷತ್ ರಸ್ತೆಯೂ ಇರುತ್ತದೆ. ಹೀಗಾಗಿ ಈ ರಸ್ತೆಗೆ ಮತ್ತಷ್ಟು ಮೆರಗು ಬರುತ್ತದೆ” ಎಂದು ಅಭಿಪ್ರಾಯಪಟ್ಟರು.

ಇದನ್ನೂ ಓದಿರಿ: ಕಸಾಪ ಸದಸ್ಯತ್ವ ಮತ್ತು ಅನಕ್ಷರಸ್ಥತೆ; ಅಕ್ಷರಜ್ಞಾನ, ಸಾಹಿತ್ಯ, ಕಲೆ – ಒಂದು ವಿವೇಚನೆ

“ನಮ್ಮ ಸಂಸ್ಕೃತಿಯನ್ನು ತೆರೆದಿಡಬೇಕಿದೆ. ಈ ರಸ್ತೆಯಲ್ಲಿ ಕನ್ನಡತನ ತೆರೆದುಕೊಳ್ಳುತ್ತದೆ. ಹಳೆಯಗನ್ನಡ, ಹೊಸಗನ್ನಡದ ಸೊಬಗು ತೋರಿಸುತ್ತೇವೆ. ಕನ್ನಡತನವನ್ನು ಹೇಗೆಲ್ಲ ತರಬಹುದೆಂದು ಯೋಚನೆ ಮಾಡುತ್ತಿದ್ದೇವೆ. ಈಗ ಒಂದು ಕನಸು ಕಂಡಿದ್ದೇವೆ. ಇನ್ನೂ ಸಾಕಾರವಾಗಿಲ್ಲ” ಎಂದು ತಿಳಿಸಿದರು.

ಲೇಖಕಿ ಪ್ರತಿಭಾ ನಂದಕುಮಾರ್‌ ಅವರು ಈ ಕುರಿತು ಕಮೆಂಟ್ ಮಾಡಿದ್ದು, “ಇದಕ್ಕೆ ನನ್ನ ವಿರೋಧವಿದೆ” ಎಂದಿದ್ದಾರೆ.

ಬಿಜೆಪಿ ಮುಖಂಡ ಪ್ರಕಾಶ್‌ ಶೇಷರಾಘವಾಚರ್‌ ಪ್ರತಿಕ್ರಿಯಿಸಿ, “ಕನ್ನಡ ಭಾಷೆಯ ಶ್ರೀಮಂತಿಕೆ ಹೆಚ್ಚು ಮಾಡುವ ಕೆಲಸ ಮಾಡೋದು ಬಿಟ್ಟು ರಸ್ತೆಗೆ ಹೆಸರು ಬದಲಾಯಿಸುವ ಕೆಲಸಕ್ಕೆ ಮುಂದಾಗಿರುವುದು ಸರಿಯಲ್ಲ” ಎಂದು ಟೀಕಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

12 COMMENTS

  1. ಮೊದಲು ಎಲ್ಲಾ ಜಿಲ್ಲೆಗಳಲ್ಲಿ ಬಾಕಿ ಇರುವ ದತ್ತಿ ಕಾರ್ಯಕ್ರಮಗಳು, ಜಿಲ್ಲಾ ಮತ್ತು ತಾಲ್ಲೂಕು ಸಮ್ಮೇಳನಗಳನ್ನು ಮಾಡಿ
    ಅದು ಬಿಟ್ಟು ಪಂಪ ಮಹಾಕವಿ ರಸ್ತೆ ಹೆಸರು ಬದಲಿಸೋ ಕೆಲಸ ಬೇಡ… ಅದು ಆದ್ಯತೆಯ ಕೆಲಸವಲ್ಲ.*ಮಾನವ ಕುಲಂ ತಾನೊಂದೇ ವಲಂ* ಎಂದು ಸಮಾನತೆಯ ಸಂದೇಶವನ್ನು ಒಂದು ಸಾವಿರ ಸಾವಿರ ವರ್ಷಗಳ ಹಿಂದೆಯೇ ಪಂಪ‌ ಹೇಳಿದ್ದಾನೆ. ಅಂತ ಶ್ರೇಷ್ಠ ಕವಿಯ ಹೆಸರನ್ನು ಬದಲಿಸಲು ಕಸಾಪ ಅಧ್ಯಕ್ಷರು ಹೊರಟಿರುವುದು ಅಕ್ಷಮ್ಯ ಮತ್ತು ಖಂಡನೀಯ. ಕಸಾಪ ಕೂಡಲೇ ಈ ಹೆಸರು ಬದಲಾವಣೆ ಪ್ರಸ್ತಾಪವನ್ನು ಕೈ ಬಿಡಬೇಕು..

  2. ಈ ಜೋಶಿಗೆ ಎಲ್ಲೋ ತಲೆ ಕೆಟ್ಟಿದೆ. ಪಂಪ ನಮ್ಮವನಲ್ಲವಾ? ಹೆಸರು ಬದಲಾವಣೆ ಬೇಡ.

  3. ಜೋಶಿಯವರೇ, ಪಂಪ ನಮ್ಮವನಲ್ಲವೇ, ಇತ್ತೀಚಿಗೆ ರಸ್ತೆಯ, ಬಡಾವಣೆಯ ಹೆಸರು ಬದಲಾಯಿಸುವ ಪ್ರವೃತ್ತಿ ಹೆಚ್ಚಾಗುತ್ತಿದೆ, ದಶಕಗಳಿಂದ ಇಟ್ಟಿರುವ ಹೆಸರನ್ನು ಬದಲಾವಣೆ ಮಾಡುವ ಅಗತ್ಯವೆನಿದೆ, ಅದರ ಬದಲಿಗೆ ಕನ್ನಡ ಉಳಿಸುವ ಬೆಳೆಸುವ ಕಾರ್ಯಕ್ರಮ ಹಮ್ಮಿಕೊಳ್ಳಿ.

  4. ಮೊದಲು ಶಿಕಾರಿಪುರದಲ್ಲಿ ಕಸಾಪ ಕಟ್ಟಡವೆಲ್ಲಿ ಇದೆ ಅಂತ ಹುಡುಕಿ ತೋರಿಸು ,ಮುಂದೆ ರಸ್ತೆ ಹೆಸರು ಬದಲಾಯಿಸುವಂತೆ…ಮೂರ್ಖ ಶಿಖಾಮಣಿ.

  5. Y this president is acting like RSS man (he may love Bjp)because they are in d habit of changing roads name where ever they rule it’s a bad idea , pampa is our great ADI KAVI , no pl don’t do it 🙏

  6. Y this president is acting like RSS man (he may love Bjp too)because they are in d habit of changing roads name where ever they rule it’s a bad idea , pampa is our great ADI KAVI , no pl don’t do it 🙏

  7. ಇಂತಹ ಮಹಾಕವಿಗಳಿಂದಲೇ ನಮ್ಮ ನಾಡು, ಭಾಷೆಗೆ ಮೆರುಗು ಬಂದಿದೆ
    ಕಸ್ತೂರಿಯ ಕಂಪು ಇದೆ. ಇಂತಹ ಚಿಲ್ಲರೆ ವಿಚಾರಗಳನ್ನು ಬಿಟ್ಟು ನಾಡು, ಮರೆಆಗುತ್ತಿರುವ ಕನ್ನಡದ ಮೆರುಗನ್ನು ಆಧುನಿಕ ಯುಗದಲ್ಲಿ ಹೇಗೆ ಆಗಸದ ಎತ್ತರಕ್ಕೆ ಹರಡ ಬೇಕು ಎಂಬುದರ ಕಡೆಗೆ ಕಾರ್ಯ ಪ್ರವೃತ್ತ ರಾಗಿ

  8. ಪಂಪ ಅನ್ನಿ ಕನ್ನಡ ಅನ್ನಿ ಎಲ್ಲ ಒಂದೆ ಅಂತ ಮಹಾನ್ ಕವಿಯ ಹೆಸರನ್ನು ಬದಲಾಯಿಸುವುದು ಮೂರ್ಖತನದ ಪರಮಾವದಿ ಪಕ್ಕದ ರಸ್ತೆಗೆ ಆ ಹೆಸರಿಡಿ

  9. ಅಧಿಕವಿ ಹೆಸರನ್ನು ಬದಲಿಸುವುದಿರಲಿ ಅವರಹೇಸರೆಳೋಕು ನಾಲಾಯಕ್ ನೀನು ಲೆ ಜೋಶಿ.
    ನಿನ್ನ ತಲೆಗೆ ಬಲವಾದ ಪೆಟ್ ಹಾಕಿದ್ರೆ ಆಗ ನಿನಗಿಡಿದಿರೋ ಹುಚ್ಚು ಬಿಡುತ್ತಾ ನೋಡ್ಬೇಕು

  10. ಈ ಅಧ್ಯಕ್ಷರಿಗೆ ಮಾಡಲಿಕ್ಕೆ ಬೇರೆ ಕೆಲಸವಿಲ್ಲವಾ.ಆದಿಕವಿಯಿಂದ ಕನ್ನಡಕ್ಕೆ ಮೆರುಗು ಬಂದಿರೊದು.

  11. ಕನ್ನಡದ ದಿಕವಿ ಪಂಪನ ಹೆಸರಿರುವುದನ್ನು ಬದಲಾಯಿಸಬೇಕೆನ್ನುವ ಆಲೋಚನೆಯೇ ಕ.ಸಾ.ಪ ಕ್ಕೆ ಬಂದಿರುವುದು ದುರದೃಷ್ಟಕರ…..

LEAVE A REPLY

Please enter your comment!
Please enter your name here

- Advertisment -

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ....

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...

ಜನಸೇನಾ ಶಾಸಕನಿಂದ ಅತ್ಯಾಚಾರ, ಬಲವಂತದ ಗರ್ಭಪಾತ : ಮಹಿಳೆ ಆರೋಪ

ಆಂಧ್ರ ಪ್ರದೇಶದ ರೈಲ್ವೆ ಕೊಡೂರು ವಿಧಾನಸಭಾ ಕ್ಷೇತ್ರದ ಜನ ಸೇನಾ ಶಾಸಕ ಮತ್ತು ಸರ್ಕಾರಿ ಸಚೇತಕ ಅರವ ಶ್ರೀಧರ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ಬಲವಂತದ ಗರ್ಭಪಾತ ಆರೋಪ ಮಾಡಿದ್ದಾರೆ. ಈ ಕುರಿತು ವಿಡಿಯೋ...

ಬಾರಾಮತಿ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ; ಸಂತಾಪ ಸೂಚಿಸಿದ ಪ್ರಮುಖರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ಐವರು ಜನರು ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಪುಣೆ ಜಿಲ್ಲೆಯಲ್ಲಿ ಪತನಗೊಂಡು ಸಾವನ್ನಪ್ಪಿದ್ದಾರೆ. ಎನ್‌ಸಿಪಿ ನಾಯಕರಾದ ಅಜಿತ್ ಪವಾರ್ (66) ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ...

ಗುರುಗ್ರಾಮ ಮತ್ತು ಚಂಡೀಗಢದ ಶಾಲೆಗಳಲ್ಲಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ: ವಿದ್ಯಾರ್ಥಿಗಳ ಸ್ಥಳಾಂತರ

ಗುರುಗ್ರಾಮ್‌ನ ಕನಿಷ್ಠ ಆರು ಖಾಸಗಿ ಶಾಲೆಗಳಿಗೆ ಬುಧವಾರ ಬೆಳಿಗ್ಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿದ್ದು, ದೊಡ್ಡ ಪ್ರಮಾಣದ ಸ್ಥಳಾಂತರ ಮತ್ತು ಭದ್ರತಾ ತಪಾಸಣೆಗಳನ್ನು ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಬೆಳಿಗ್ಗೆ 7:10 ರ ಸುಮಾರಿಗೆ...

ಜಿಲ್ಲಾ ಸಹಕಾರಿ ಬ್ಯಾಂಕ್‌ನಿಂದ ಮಹಾರಾಷ್ಟ್ರ ಡಿಸಿಎಂ ಆಗುವವರೆಗೆ: ಅಜಿತ್ ಪವಾರ್ ರಾಜಕೀಯ ಹೆಜ್ಜೆಗಳು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಬುಧವಾರ ಬಾರಾಮತಿಯಲ್ಲಿ ಲ್ಯಾಂಡ್‌ ಆಗಲು ಪ್ರಯತ್ನಿಸುವಾಗ ಅವರು ಪ್ರಯಾಣಿಸುತ್ತಿದ್ದ ವಿಮಾನ ಅಪಘಾತಕ್ಕೀಡಾಗಿ ನಿಧನರಾದರು. ಈ ಅಪಘಾತ ಮೂಲಕ, ಮಹಾರಾಷ್ಟ್ರದ ಅತ್ಯಂತ ಪ್ರಭಾವಶಾಲಿ ಮತ್ತು ಶಾಶ್ವತ ರಾಜಕೀಯ ವ್ಯಕ್ತಿಗಳಲ್ಲಿ...