Homeಕರ್ನಾಟಕ‘ಪಂಪ ಮಹಾಕವಿ ರಸ್ತೆ’ ಹೆಸರು ಬದಲಿಸಲು ಪ್ರಸ್ತಾವನೆ ಸಲ್ಲಿಸಿದ ಕನ್ನಡ ಸಾಹಿತ್ಯ ಪರಿಷತ್‌!

‘ಪಂಪ ಮಹಾಕವಿ ರಸ್ತೆ’ ಹೆಸರು ಬದಲಿಸಲು ಪ್ರಸ್ತಾವನೆ ಸಲ್ಲಿಸಿದ ಕನ್ನಡ ಸಾಹಿತ್ಯ ಪರಿಷತ್‌!

“ನಮ್ಮ ಎದುರಿನ ರಸ್ತೆಗೆ ನಮ್ಮತನ ಬೇಕಾಲ್ಲವೇ?” ಎಂದು ಪ್ರಶ್ನಿಸಿದ್ದಾರೆ ಕಸಾಪ ಅಧ್ಯಕ್ಷರಾದ ಮಹೇಶ್ ಜೋಶಿ.

- Advertisement -
- Advertisement -

ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್‌ (ಕಸಾಪ) ಮಂದಿನ ‘ಪಂಪ ಮಹಾಕವಿ ರಸ್ತೆ’ ಎಂಬ ಹೆಸರನ್ನು ಬದಲಿಸುವ ಪ್ರಸ್ತಾಪವನ್ನು ಕಸಾಪ ಮುಂದಿಟ್ಟಿದೆ.

ಈ ರಸ್ತೆಯಲ್ಲಿನ ಸುಮಾರು ಅರ್ಧ ಕಿಮೀಯನ್ನು ‘ಕನ್ನಡ ಸಾಹಿತ್ಯ ಪರಿಷತ್‌ ರಸ್ತೆ’ ಎಂದು ಹೆಸರಿಡಬೇಕೆಂದು ಕಸಾಪ ಬಯಸಿದೆ.

ಚಾಮರಾಜಪೇಟೆಯ ಮಿಂಟೋ ಆಸ್ಪತ್ರೆ ಮತ್ತು ಮಕ್ಕಳ ಕೂಟ ಪಾರ್ಕ್ ನಡುವಿನ ರಸ್ತೆಯನ್ನು ಕನ್ನಡ ಸಾಹಿತ್ಯ ಪರಿಷತ್ ರಸ್ತೆ ಎಂದು ಮರುನಾಮಕರಣ ಮಾಡಲು ಕಸಾಪ ಮುಂದಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ರಸ್ತೆಗೆ ಪ್ರಸ್ತುತ ಪಂಪ ಮಹಾಕವಿ ಎಂದು ಹೆಸರಿಡಲಾಗಿದೆ. ಇಲ್ಲಿನ ಅರ್ಧ ಕಿ.ಮೀ.ಯಷ್ಟು ರಸ್ತೆಯನ್ನು ಕನ್ನಡ ಪರಿಮಳದಿಂದ, ಕನ್ನಡಮಯದಿಂದ ತುಂಬಬೇಕು ಎಂಬ ಪ್ರಸ್ತಾವನೆಯನ್ನು ಕಸಾಪ ಸಲ್ಲಿಸಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಂದೆ ಈ ಕುರಿತು ಪ್ರಸ್ತಾವನೆ ಸಲ್ಲಿಸಲು ಕಸಾಪ ಅಧಿಕಾರಿಗಳು ಸಜ್ಜಾಗಿದ್ದಾರೆ.

ಕಸಾಪ ಅಧ್ಯಕ್ಷ ಮಹೇಶ್ ಜೋಶಿಯವರು ಬಿಬಿಎಂಪಿ ಅಧಿಕಾರಿಗಳಿಗೆ ಪತ್ರ ಬರೆದಿದ್ದು, ಮುಖ್ಯಮಂತ್ರಿಗಳು ಇತ್ತೀಚೆಗೆ ಪರಿಷತ್‌ಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರೊಂದಿಗೂ ಚರ್ಚಿಸಿದ್ದೇವೆ ಎಂದಿದ್ದಾರೆ.

Interview| ಆರೆಸ್ಸೆಸ್‌ಗೆ ಸೇರಿದವನೆಂಬ ಅಪಪ್ರಚಾರ: ಮಹೇಶ ಜೋಶಿ | Prajavani
ಕಸಾಪ ಅಧ್ಯಕ್ಷರಾದ ಮಹೇಶ್ ಜೋಶಿ

ಕಸಾಪ ರಸ್ತೆ ಕಲ್ಪನೆಯ ಕುರಿತು ಚರ್ಚಿಸಲು ಆ ವ್ಯಾಪ್ತಿಯಲ್ಲಿರುವ ಸಂಸ್ಥೆಗಳು/ಸಂಘಟನೆಗಳೊಂದಿಗೆ ಶೀಘ್ರದಲ್ಲೇ ಸಭೆಯನ್ನು ಕರೆಯುವುದಾಗಿ ಜೋಶಿ ಹೇಳಿದ್ದಾರೆ.

“ಈ ವ್ಯಾಪ್ತಿಯಲ್ಲಿ ಪೊಲೀಸ್ ಠಾಣೆ, ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ, ಒಂದು ಪ್ರಾದೇಶಿಕ ಪತ್ರಿಕಾ ಕಚೇರಿ, ಕೆಲವು ಬ್ಯಾಂಕ್‌ಗಳು, ಉದ್ಯಾನವನ ಮತ್ತು ಮಿಂಟೋ ಕಣ್ಣಿನ ಆಸ್ಪತ್ರೆಯಂತಹ ಕೆಲವು ಪ್ರಮುಖ ಸಂಸ್ಥೆಗಳಿವೆ. ನಮ್ಮ ಪ್ರಸ್ತಾಪವನ್ನು ಚರ್ಚಿಸಲು ಮತ್ತು ಅವರ ಸಲಹೆಗಳನ್ನು ಪಡೆಯಲು ನಾವು ಎಲ್ಲರನ್ನೂ ಆಹ್ವಾನಿಸುತ್ತೇವೆ” ಎಂದಿದ್ದಾರೆ.

“ಈ ರಸ್ತೆಯು ಕನ್ನಡ ಪ್ರೇಮಿಗಳ ಕಣ್ಣು ಮತ್ತು ಕಿವಿಗೆ ರಸದೌತಣ ನೀಡಲಿದೆ. ಬೆಂಗಳೂರಿಗೆ ಬರುವ ಪ್ರತಿಯೊಬ್ಬ ಪ್ರವಾಸಿಗರನ್ನು ಆಕರ್ಷಿಸುವುದು ನಮ್ಮ ಉದ್ದೇಶವಾಗಿದೆ” ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಆ ರಸ್ತೆಯಲ್ಲಿ ಕಾರ್ಯನಿರ್ವಹಿಸುವ ಕಚೇರಿಗಳು ಮತ್ತು ಸಂಸ್ಥೆಗಳಲ್ಲಿ ಕೆಲಸ ಮಾಡುವವರಿಗೆ ಪರ್ಯಾಯ ವಾಹನ ನಿಲುಗಡೆ ವ್ಯವಸ್ಥೆ ಕಲ್ಪಿಸುವ ಕುರಿತು ಕಸಾಪ ಚರ್ಚಿಸುತ್ತಿದೆ. ಈ ರಸ್ತೆಯಲ್ಲಿ ಕನ್ನಡ ಕವಿಗಳ ಭಾವಚಿತ್ರವನ್ನು ಹಾಕಲಾಗುವುದು. ದೀಪಾಲಂಕಾರ ಮಾಡಲಾಗುವುದು. ಕನ್ನಡ ಪದಗಳಿಂದ ಅಲಂಕರಿಸಿದ ಗೋಡೆಗಳನ್ನು ನಿರ್ಮಿಸಲಾಗುವುದು. ಹಳದಿ-ಕೆಂಪು ಬಣ್ಣದಿಂದ ರಸ್ತೆಯ ಮೆರುಗು ಹೆಚ್ಚಿಸಲಾಗುವುದು ಎಂದು ಕಸಾಪ ಪ್ರಸ್ತಾಪಿಸಿದೆ.

ಕನ್ನಡದ ಆದಿಕವಿ ಪಂಪನ ಹೆಸರನ್ನು ಬದಲಿಸುವ ಅವಶ್ಯವಿದೆಯೇ ಎಂಬ ಪ್ರಶ್ನೆ ಎದ್ದಿದೆ. ಈ ಕುರಿತು ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಮಹೇಶ್ ಜೋಶಿಯವರು, “ನ್ಯಾಷನಲ್‌ ಕಾಲೇಜಿನಿಂದ ಆರಂಭವಾಗಿ ಮಿಂಟೋ ಆಸ್ಪತ್ರೆಯವರೆಗೆ ಪಂಪ ಮಹಾಕವಿ ರಸ್ತೆ ಇದೆ. ನ್ಯಾಷನಲ್ ಕಾಲೇಜಿನಿಂದ ಮಕ್ಕಳ ಕೂಟದವರೆಗೆ ಪಂಪ ಮಹಾಕವಿ ರಸ್ತೆ ಎಂದೇ ಇರುತ್ತದೆ. ಅದರ ಮುಂದಿನ ರಸ್ತೆಯನ್ನು ಕನ್ನಡ ಸಾಹಿತ್ಯ ಪರಿಷತ್‌ ರಸ್ತೆ ಎಂದು ಇಡಬೇಕೆಂದು ಯೋಚಿಸಿದ್ದೇವೆ” ಎಂದರು.

ಪಂಪನ ಹೆಸರಲ್ಲಿರುವ ರಸ್ತೆಯಿಂದ ಕಸಾಪಕ್ಕೆ ಆಗುವ ನಷ್ಟವೇನು ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ಕನ್ನಡ ಸಾಹಿತ್ಯ ಪರಿಷತ್‌ ಕೂಡ ಕನ್ನಡಕ್ಕಾಗಿಯೇ ದುಡಿದಿದೆ. ಮೈಸೂರು ಒಡೆಯರಿಂದ ಸ್ಥಾಪನೆಯಾಗಿರುವ ಸಂಸ್ಥೆ ಕಸಾಪ. ನಮ್ಮ ಎದುರಿನ ರಸ್ತೆಗೆ ನಮ್ಮತನ ಬೇಕಾಲ್ಲವೇ? ಕಸಾಪ ಎಂಬ ನಮ್ಮತನ ಬೇಡವೆ? ಪಂಪ ಎಂಬ ಹೆಸರನ್ನು ನಾವು ಬದಲಿಸುತ್ತಿಲ್ಲ. ಪಂಪ ರಸ್ತೆಯೂ ಇರುತ್ತದೆ. ಕನ್ನಡ ಸಾಹಿತ್ಯ ಪರಿಷತ್ ರಸ್ತೆಯೂ ಇರುತ್ತದೆ. ಹೀಗಾಗಿ ಈ ರಸ್ತೆಗೆ ಮತ್ತಷ್ಟು ಮೆರಗು ಬರುತ್ತದೆ” ಎಂದು ಅಭಿಪ್ರಾಯಪಟ್ಟರು.

ಇದನ್ನೂ ಓದಿರಿ: ಕಸಾಪ ಸದಸ್ಯತ್ವ ಮತ್ತು ಅನಕ್ಷರಸ್ಥತೆ; ಅಕ್ಷರಜ್ಞಾನ, ಸಾಹಿತ್ಯ, ಕಲೆ – ಒಂದು ವಿವೇಚನೆ

“ನಮ್ಮ ಸಂಸ್ಕೃತಿಯನ್ನು ತೆರೆದಿಡಬೇಕಿದೆ. ಈ ರಸ್ತೆಯಲ್ಲಿ ಕನ್ನಡತನ ತೆರೆದುಕೊಳ್ಳುತ್ತದೆ. ಹಳೆಯಗನ್ನಡ, ಹೊಸಗನ್ನಡದ ಸೊಬಗು ತೋರಿಸುತ್ತೇವೆ. ಕನ್ನಡತನವನ್ನು ಹೇಗೆಲ್ಲ ತರಬಹುದೆಂದು ಯೋಚನೆ ಮಾಡುತ್ತಿದ್ದೇವೆ. ಈಗ ಒಂದು ಕನಸು ಕಂಡಿದ್ದೇವೆ. ಇನ್ನೂ ಸಾಕಾರವಾಗಿಲ್ಲ” ಎಂದು ತಿಳಿಸಿದರು.

ಲೇಖಕಿ ಪ್ರತಿಭಾ ನಂದಕುಮಾರ್‌ ಅವರು ಈ ಕುರಿತು ಕಮೆಂಟ್ ಮಾಡಿದ್ದು, “ಇದಕ್ಕೆ ನನ್ನ ವಿರೋಧವಿದೆ” ಎಂದಿದ್ದಾರೆ.

ಬಿಜೆಪಿ ಮುಖಂಡ ಪ್ರಕಾಶ್‌ ಶೇಷರಾಘವಾಚರ್‌ ಪ್ರತಿಕ್ರಿಯಿಸಿ, “ಕನ್ನಡ ಭಾಷೆಯ ಶ್ರೀಮಂತಿಕೆ ಹೆಚ್ಚು ಮಾಡುವ ಕೆಲಸ ಮಾಡೋದು ಬಿಟ್ಟು ರಸ್ತೆಗೆ ಹೆಸರು ಬದಲಾಯಿಸುವ ಕೆಲಸಕ್ಕೆ ಮುಂದಾಗಿರುವುದು ಸರಿಯಲ್ಲ” ಎಂದು ಟೀಕಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

12 COMMENTS

  1. ಮೊದಲು ಎಲ್ಲಾ ಜಿಲ್ಲೆಗಳಲ್ಲಿ ಬಾಕಿ ಇರುವ ದತ್ತಿ ಕಾರ್ಯಕ್ರಮಗಳು, ಜಿಲ್ಲಾ ಮತ್ತು ತಾಲ್ಲೂಕು ಸಮ್ಮೇಳನಗಳನ್ನು ಮಾಡಿ
    ಅದು ಬಿಟ್ಟು ಪಂಪ ಮಹಾಕವಿ ರಸ್ತೆ ಹೆಸರು ಬದಲಿಸೋ ಕೆಲಸ ಬೇಡ… ಅದು ಆದ್ಯತೆಯ ಕೆಲಸವಲ್ಲ.*ಮಾನವ ಕುಲಂ ತಾನೊಂದೇ ವಲಂ* ಎಂದು ಸಮಾನತೆಯ ಸಂದೇಶವನ್ನು ಒಂದು ಸಾವಿರ ಸಾವಿರ ವರ್ಷಗಳ ಹಿಂದೆಯೇ ಪಂಪ‌ ಹೇಳಿದ್ದಾನೆ. ಅಂತ ಶ್ರೇಷ್ಠ ಕವಿಯ ಹೆಸರನ್ನು ಬದಲಿಸಲು ಕಸಾಪ ಅಧ್ಯಕ್ಷರು ಹೊರಟಿರುವುದು ಅಕ್ಷಮ್ಯ ಮತ್ತು ಖಂಡನೀಯ. ಕಸಾಪ ಕೂಡಲೇ ಈ ಹೆಸರು ಬದಲಾವಣೆ ಪ್ರಸ್ತಾಪವನ್ನು ಕೈ ಬಿಡಬೇಕು..

  2. ಈ ಜೋಶಿಗೆ ಎಲ್ಲೋ ತಲೆ ಕೆಟ್ಟಿದೆ. ಪಂಪ ನಮ್ಮವನಲ್ಲವಾ? ಹೆಸರು ಬದಲಾವಣೆ ಬೇಡ.

  3. ಜೋಶಿಯವರೇ, ಪಂಪ ನಮ್ಮವನಲ್ಲವೇ, ಇತ್ತೀಚಿಗೆ ರಸ್ತೆಯ, ಬಡಾವಣೆಯ ಹೆಸರು ಬದಲಾಯಿಸುವ ಪ್ರವೃತ್ತಿ ಹೆಚ್ಚಾಗುತ್ತಿದೆ, ದಶಕಗಳಿಂದ ಇಟ್ಟಿರುವ ಹೆಸರನ್ನು ಬದಲಾವಣೆ ಮಾಡುವ ಅಗತ್ಯವೆನಿದೆ, ಅದರ ಬದಲಿಗೆ ಕನ್ನಡ ಉಳಿಸುವ ಬೆಳೆಸುವ ಕಾರ್ಯಕ್ರಮ ಹಮ್ಮಿಕೊಳ್ಳಿ.

  4. ಮೊದಲು ಶಿಕಾರಿಪುರದಲ್ಲಿ ಕಸಾಪ ಕಟ್ಟಡವೆಲ್ಲಿ ಇದೆ ಅಂತ ಹುಡುಕಿ ತೋರಿಸು ,ಮುಂದೆ ರಸ್ತೆ ಹೆಸರು ಬದಲಾಯಿಸುವಂತೆ…ಮೂರ್ಖ ಶಿಖಾಮಣಿ.

  5. Y this president is acting like RSS man (he may love Bjp)because they are in d habit of changing roads name where ever they rule it’s a bad idea , pampa is our great ADI KAVI , no pl don’t do it 🙏

  6. Y this president is acting like RSS man (he may love Bjp too)because they are in d habit of changing roads name where ever they rule it’s a bad idea , pampa is our great ADI KAVI , no pl don’t do it 🙏

  7. ಇಂತಹ ಮಹಾಕವಿಗಳಿಂದಲೇ ನಮ್ಮ ನಾಡು, ಭಾಷೆಗೆ ಮೆರುಗು ಬಂದಿದೆ
    ಕಸ್ತೂರಿಯ ಕಂಪು ಇದೆ. ಇಂತಹ ಚಿಲ್ಲರೆ ವಿಚಾರಗಳನ್ನು ಬಿಟ್ಟು ನಾಡು, ಮರೆಆಗುತ್ತಿರುವ ಕನ್ನಡದ ಮೆರುಗನ್ನು ಆಧುನಿಕ ಯುಗದಲ್ಲಿ ಹೇಗೆ ಆಗಸದ ಎತ್ತರಕ್ಕೆ ಹರಡ ಬೇಕು ಎಂಬುದರ ಕಡೆಗೆ ಕಾರ್ಯ ಪ್ರವೃತ್ತ ರಾಗಿ

  8. ಪಂಪ ಅನ್ನಿ ಕನ್ನಡ ಅನ್ನಿ ಎಲ್ಲ ಒಂದೆ ಅಂತ ಮಹಾನ್ ಕವಿಯ ಹೆಸರನ್ನು ಬದಲಾಯಿಸುವುದು ಮೂರ್ಖತನದ ಪರಮಾವದಿ ಪಕ್ಕದ ರಸ್ತೆಗೆ ಆ ಹೆಸರಿಡಿ

  9. ಅಧಿಕವಿ ಹೆಸರನ್ನು ಬದಲಿಸುವುದಿರಲಿ ಅವರಹೇಸರೆಳೋಕು ನಾಲಾಯಕ್ ನೀನು ಲೆ ಜೋಶಿ.
    ನಿನ್ನ ತಲೆಗೆ ಬಲವಾದ ಪೆಟ್ ಹಾಕಿದ್ರೆ ಆಗ ನಿನಗಿಡಿದಿರೋ ಹುಚ್ಚು ಬಿಡುತ್ತಾ ನೋಡ್ಬೇಕು

  10. ಈ ಅಧ್ಯಕ್ಷರಿಗೆ ಮಾಡಲಿಕ್ಕೆ ಬೇರೆ ಕೆಲಸವಿಲ್ಲವಾ.ಆದಿಕವಿಯಿಂದ ಕನ್ನಡಕ್ಕೆ ಮೆರುಗು ಬಂದಿರೊದು.

  11. ಕನ್ನಡದ ದಿಕವಿ ಪಂಪನ ಹೆಸರಿರುವುದನ್ನು ಬದಲಾಯಿಸಬೇಕೆನ್ನುವ ಆಲೋಚನೆಯೇ ಕ.ಸಾ.ಪ ಕ್ಕೆ ಬಂದಿರುವುದು ದುರದೃಷ್ಟಕರ…..

LEAVE A REPLY

Please enter your comment!
Please enter your name here

- Advertisment -

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...