Homeಕರ್ನಾಟಕಕೊನೆ ಕ್ಷಣದಲ್ಲಿ ಅನುಮತಿ ನಿರಾಕರಿಸಿದ ಕ.ಸಾ.ಪ.; ಸೌಜನ್ಯ ಪರ ಸಮಾಲೋಚನಾ ಸಭೆ ಮುಂದೂಡಿಕೆ

ಕೊನೆ ಕ್ಷಣದಲ್ಲಿ ಅನುಮತಿ ನಿರಾಕರಿಸಿದ ಕ.ಸಾ.ಪ.; ಸೌಜನ್ಯ ಪರ ಸಮಾಲೋಚನಾ ಸಭೆ ಮುಂದೂಡಿಕೆ

- Advertisement -
- Advertisement -

ಪೊಲೀಸರು ನೋಟಿಸ್ ನೀಡಿದ್ದಾರೆ ಎಂಬ ಕಾರಣ ನೀಡಿ ಕೊನೆ ಕ್ಷಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ (ಕಸಾಪ) ನೀಡಿದ್ದ ಅನುಮತಿ ನಿರಾಕರಿಸಿದ್ದರಿಂದ ‘ಸೌಜನ್ಯ ಪರ ಸಮಾಲೋಚನಾ ಸಭೆ’ ಮುಂದೂಡಲಾಗಿದೆ. ಯುಟ್ಯೂಬರ್ ಸಮೀರ್ ಎಂ.ಡಿ. ಎಂಬಾತ ಮಾಡಿದ ವಿಡಿಯೊ ವೈರಲ್ ಆದ ಬಳಿಕ ಸೌಜನ್ಯಾ ಪ್ರಕರಣದ ಮರುತನಿಖೆಗೆ ಒತ್ತಡ ಹೆಚ್ಚಾಗಿದೆ.

ಎಲ್ಲ ಷರತ್ತುಗಳನ್ನು ಒಪ್ಪಿಕೊಂಡು ಕನ್ನಡ ಸಾಹಿತ್ಯ ಪರಿಷತ್ತಿನ ಅಕ್ಕಮಹಾದೇವಿ ಸಭಾಂಗಣದಲ್ಲಿ ಇಂದು (ಭಾನುವಾರ 09/03/2025), 2013 ರಲ್ಲಿ ಅತ್ಯಾಚಾರ-ಹತ್ಯೆಗೆ ಒಳಗಾದ ಧರ್ಮಸ್ಥಳದ ಅಪ್ರಾಪ್ತ ಬಾಲಕಿ ಸೌಜನ್ಯ ಪರವಾಗಿ ಸಮಾಲೋಚನಾ ಸಭೆ ಏರ್ಪಡಿಸಲಾಗಿತ್ತು.

ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸಿರುವ ಆಯೋಜಕರು ಮಾಹಿತಿ ನೀಡಿದ್ದು, “ಕನ್ನಡ ಸಾಹಿತ್ಯ ಪರಿಷತ್ ನ ಅಕ್ಕ ಮಹಾದೇವಿ ಸಭಾಂಗಣದಲ್ಲಿ ಸೌಜನ್ಯ ಪರ ಸಾಹಿತಿ, ಚಿಂತಕ, ಪತ್ರಕರ್ತರು, ಹೋರಾಟಗಾರರ ಸಮಾಲೋಚನಾ ಸಭೆ ಕರೆಯಲಾಗಿತ್ತು. ಆದರೆ, ಕನ್ನಡ ಸಾಹಿತ್ಯ ಪರಿಷತ್ ಒತ್ತಡಕ್ಕೊಳಗಾಗಿ ಕೊನೇ ಕ್ಷಣದಲ್ಲಿ ಸಭಾಂಗಣದ ಅನುಮತಿಯನ್ನು ರದ್ದುಗೊಳಿಸಿದ್ದರಿಂದ ಸಮಾಲೋಚನಾ ಸಭೆಯನ್ನು ಮುಂದೂಡಲಾಗಿದೆ” ಎಂದು ಹೇಳಿದ್ದಾರೆ.

“ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣವನ್ನು ಬಾಡಿಗೆ ಪಾವತಿಸಿ ಕಾರ್ಯಕ್ರಮಕ್ಕೆ ನಿಗಧಿಗೊಳಿಸಲಾಗಿತ್ತು. ಕಾರ್ಯಕ್ರಮದ ಬಗ್ಗೆ ಪರಿಷತ್ ಜೊತೆಗೆ ಚರ್ಚೆ ನಡೆಸಲಾಗಿತ್ತು. ಆದರೆ, ಸಾಹಿತ್ಯ ಪರಿಷತ್ ಗೆ ಬಂದ ಲೀಗಲ್ ನೋಟಿಸ್ ಮತ್ತು ಪೊಲೀಸ್ ನೋಟಿಸ್ ಆಧಾರದಲ್ಲಿ ಸಭಾಂಗಣವನ್ನು ನೀಡಲಾಗುವುದಿಲ್ಲ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು 08.03.2025 ರಂದು ರಾತ್ರಿ 10.30 ಕ್ಕೆ ಸಂಘಟಕರಲ್ಲೋರ್ವರಾದ ಬೈರಪ್ಪ ಹರೀಶ್ ಕುಮಾರ್ ಅವರಿಗೆ ಲಿಖಿತ ನೋಟಿಸ್ ಕಳಿಸಿದ್ದಾರೆ‌” ಎಂದು ಮಾಹಿತಿ ನೀಡಿದ್ದಾರೆ.

“ಕೊನೆ ಕ್ಷಣದಲ್ಲಿ ಸಭಾಂಗಣ ನಿರಾಕರಣೆಯ ಹಿನ್ನಲೆಯಲ್ಲಿ 09.03.2025 ರವಿವಾರ 10.30 ಕ್ಕೆ ಅಕ್ಕಮಹಾದೇವಿ ಸಭಾಂಗಣ, ಕನ್ನಡ ಸಾಹಿತ್ಯ ಪರಿಷತ್ ನಲ್ಲಿ ನಡೆಸಲುದ್ದೇಶಿಸಿದ್ದ “ಸೌಜನ್ಯ ಸಮಾಲೋಚನಾ ಸಭೆ”ಯನ್ನು ಮುಂದೂಡಲಾಗಿದೆ” ಎಂದು ಆಯೋಜಕರು ಅಧಿಕೃತವಾಗಿ ಘೋಷಿಸಿದ್ದಾರೆ.

ನಾನುಗೌರಿ.ಕಾಮ್ ಜೊತೆಗೆ ಮಾತನಾಡಿದ ಕರ್ನಾಟಕ ರಣಧೀರ ಪಡೆ ಅಧ್ಯಕ್ಷ, ಸೌಜನ್ಯ ಸಮಾಲೋಚನಾ ಸಭೆ ಆಯೋಜಕರಲ್ಲಿ ಒಬ್ಬರಾದ ಹರೀಶ್‌ ಕುಮಾರ್, “ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಿಗೆ ನಿನ್ನೆ ತಡರಾತ್ರಿ ವೀರೇಂದ್ರ ಹೆಗಡೆ ಪರ ವಕೀಲರು ಮತ್ತು ವಿ.ವಿ. ಪುರಂ ಪೊಲೀಸರು ನೋಟಿಸ್ ನೀಡಿದ್ದಾರೆ. ವಿವಾದ ಇರುವದರಿಂದ ಅನುಮತಿ ನಿರಾಕರಿಸಿದ್ದೇವೆ ಎಂದು ಖುದ್ದು ಮಹೇಶ್ ಜೋಶಿ ಅವರೇ ನೇರವಾಗಿ ನನಗೆ ವಾಟ್ಸಾಪ್ ಸಂದೇಶ ಕಳಿಸಿದ್ದಾರೆ” ಎಂದು ಮಾಹಿತಿ ನೀಡಿದರು.

“ಸಮಾಲೋಚನಾ ಸಭೆ ರದ್ದುಗೊಳಿಸಿದ್ದೇವೆ ಎಂಬ ಕಾರಣಕ್ಕೆ ಖುಷಿ ಪಡುವ ಅಗತ್ಯ ಇಲ್ಲ, ತುಳಿದಷ್ಟೇ ವೇಗವಾಗಿ ನಾವು ಮೇಲೆದ್ದು ಬರುತ್ತೇವೆ; ಇಂದು ಸಮಾನ ಮನಸ್ಕರೊಂದಿಗೆ ಸಭೆ ನಡೆಸಿ, ಶೀಘ್ರದಲ್ಲೇ ಪರಿಣಾಮಕಾರಿಯಾಗಿ ಕಾರ್ಯಕ್ರಮ ಆಯೋಜಿಸುತ್ತೇವೆ” ಎಂದು ಹೇಳಿದರು.

ಕಲಬುರಗಿ| ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಚಪಾತಿ ವಿವಾದ; ಉತ್ತರ-ದಕ್ಷಿಣ ಭಾರತದ ವಿದ್ಯಾರ್ಥಿಗಳ ನಡುವೆ ಘರ್ಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...