Homeಕರ್ನಾಟಕಕೊನೆ ಕ್ಷಣದಲ್ಲಿ ಅನುಮತಿ ನಿರಾಕರಿಸಿದ ಕ.ಸಾ.ಪ.; ಸೌಜನ್ಯ ಪರ ಸಮಾಲೋಚನಾ ಸಭೆ ಮುಂದೂಡಿಕೆ

ಕೊನೆ ಕ್ಷಣದಲ್ಲಿ ಅನುಮತಿ ನಿರಾಕರಿಸಿದ ಕ.ಸಾ.ಪ.; ಸೌಜನ್ಯ ಪರ ಸಮಾಲೋಚನಾ ಸಭೆ ಮುಂದೂಡಿಕೆ

- Advertisement -
- Advertisement -

ಪೊಲೀಸರು ನೋಟಿಸ್ ನೀಡಿದ್ದಾರೆ ಎಂಬ ಕಾರಣ ನೀಡಿ ಕೊನೆ ಕ್ಷಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ (ಕಸಾಪ) ನೀಡಿದ್ದ ಅನುಮತಿ ನಿರಾಕರಿಸಿದ್ದರಿಂದ ‘ಸೌಜನ್ಯ ಪರ ಸಮಾಲೋಚನಾ ಸಭೆ’ ಮುಂದೂಡಲಾಗಿದೆ. ಯುಟ್ಯೂಬರ್ ಸಮೀರ್ ಎಂ.ಡಿ. ಎಂಬಾತ ಮಾಡಿದ ವಿಡಿಯೊ ವೈರಲ್ ಆದ ಬಳಿಕ ಸೌಜನ್ಯಾ ಪ್ರಕರಣದ ಮರುತನಿಖೆಗೆ ಒತ್ತಡ ಹೆಚ್ಚಾಗಿದೆ.

ಎಲ್ಲ ಷರತ್ತುಗಳನ್ನು ಒಪ್ಪಿಕೊಂಡು ಕನ್ನಡ ಸಾಹಿತ್ಯ ಪರಿಷತ್ತಿನ ಅಕ್ಕಮಹಾದೇವಿ ಸಭಾಂಗಣದಲ್ಲಿ ಇಂದು (ಭಾನುವಾರ 09/03/2025), 2013 ರಲ್ಲಿ ಅತ್ಯಾಚಾರ-ಹತ್ಯೆಗೆ ಒಳಗಾದ ಧರ್ಮಸ್ಥಳದ ಅಪ್ರಾಪ್ತ ಬಾಲಕಿ ಸೌಜನ್ಯ ಪರವಾಗಿ ಸಮಾಲೋಚನಾ ಸಭೆ ಏರ್ಪಡಿಸಲಾಗಿತ್ತು.

ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸಿರುವ ಆಯೋಜಕರು ಮಾಹಿತಿ ನೀಡಿದ್ದು, “ಕನ್ನಡ ಸಾಹಿತ್ಯ ಪರಿಷತ್ ನ ಅಕ್ಕ ಮಹಾದೇವಿ ಸಭಾಂಗಣದಲ್ಲಿ ಸೌಜನ್ಯ ಪರ ಸಾಹಿತಿ, ಚಿಂತಕ, ಪತ್ರಕರ್ತರು, ಹೋರಾಟಗಾರರ ಸಮಾಲೋಚನಾ ಸಭೆ ಕರೆಯಲಾಗಿತ್ತು. ಆದರೆ, ಕನ್ನಡ ಸಾಹಿತ್ಯ ಪರಿಷತ್ ಒತ್ತಡಕ್ಕೊಳಗಾಗಿ ಕೊನೇ ಕ್ಷಣದಲ್ಲಿ ಸಭಾಂಗಣದ ಅನುಮತಿಯನ್ನು ರದ್ದುಗೊಳಿಸಿದ್ದರಿಂದ ಸಮಾಲೋಚನಾ ಸಭೆಯನ್ನು ಮುಂದೂಡಲಾಗಿದೆ” ಎಂದು ಹೇಳಿದ್ದಾರೆ.

“ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣವನ್ನು ಬಾಡಿಗೆ ಪಾವತಿಸಿ ಕಾರ್ಯಕ್ರಮಕ್ಕೆ ನಿಗಧಿಗೊಳಿಸಲಾಗಿತ್ತು. ಕಾರ್ಯಕ್ರಮದ ಬಗ್ಗೆ ಪರಿಷತ್ ಜೊತೆಗೆ ಚರ್ಚೆ ನಡೆಸಲಾಗಿತ್ತು. ಆದರೆ, ಸಾಹಿತ್ಯ ಪರಿಷತ್ ಗೆ ಬಂದ ಲೀಗಲ್ ನೋಟಿಸ್ ಮತ್ತು ಪೊಲೀಸ್ ನೋಟಿಸ್ ಆಧಾರದಲ್ಲಿ ಸಭಾಂಗಣವನ್ನು ನೀಡಲಾಗುವುದಿಲ್ಲ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು 08.03.2025 ರಂದು ರಾತ್ರಿ 10.30 ಕ್ಕೆ ಸಂಘಟಕರಲ್ಲೋರ್ವರಾದ ಬೈರಪ್ಪ ಹರೀಶ್ ಕುಮಾರ್ ಅವರಿಗೆ ಲಿಖಿತ ನೋಟಿಸ್ ಕಳಿಸಿದ್ದಾರೆ‌” ಎಂದು ಮಾಹಿತಿ ನೀಡಿದ್ದಾರೆ.

“ಕೊನೆ ಕ್ಷಣದಲ್ಲಿ ಸಭಾಂಗಣ ನಿರಾಕರಣೆಯ ಹಿನ್ನಲೆಯಲ್ಲಿ 09.03.2025 ರವಿವಾರ 10.30 ಕ್ಕೆ ಅಕ್ಕಮಹಾದೇವಿ ಸಭಾಂಗಣ, ಕನ್ನಡ ಸಾಹಿತ್ಯ ಪರಿಷತ್ ನಲ್ಲಿ ನಡೆಸಲುದ್ದೇಶಿಸಿದ್ದ “ಸೌಜನ್ಯ ಸಮಾಲೋಚನಾ ಸಭೆ”ಯನ್ನು ಮುಂದೂಡಲಾಗಿದೆ” ಎಂದು ಆಯೋಜಕರು ಅಧಿಕೃತವಾಗಿ ಘೋಷಿಸಿದ್ದಾರೆ.

ನಾನುಗೌರಿ.ಕಾಮ್ ಜೊತೆಗೆ ಮಾತನಾಡಿದ ಕರ್ನಾಟಕ ರಣಧೀರ ಪಡೆ ಅಧ್ಯಕ್ಷ, ಸೌಜನ್ಯ ಸಮಾಲೋಚನಾ ಸಭೆ ಆಯೋಜಕರಲ್ಲಿ ಒಬ್ಬರಾದ ಹರೀಶ್‌ ಕುಮಾರ್, “ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಿಗೆ ನಿನ್ನೆ ತಡರಾತ್ರಿ ವೀರೇಂದ್ರ ಹೆಗಡೆ ಪರ ವಕೀಲರು ಮತ್ತು ವಿ.ವಿ. ಪುರಂ ಪೊಲೀಸರು ನೋಟಿಸ್ ನೀಡಿದ್ದಾರೆ. ವಿವಾದ ಇರುವದರಿಂದ ಅನುಮತಿ ನಿರಾಕರಿಸಿದ್ದೇವೆ ಎಂದು ಖುದ್ದು ಮಹೇಶ್ ಜೋಶಿ ಅವರೇ ನೇರವಾಗಿ ನನಗೆ ವಾಟ್ಸಾಪ್ ಸಂದೇಶ ಕಳಿಸಿದ್ದಾರೆ” ಎಂದು ಮಾಹಿತಿ ನೀಡಿದರು.

“ಸಮಾಲೋಚನಾ ಸಭೆ ರದ್ದುಗೊಳಿಸಿದ್ದೇವೆ ಎಂಬ ಕಾರಣಕ್ಕೆ ಖುಷಿ ಪಡುವ ಅಗತ್ಯ ಇಲ್ಲ, ತುಳಿದಷ್ಟೇ ವೇಗವಾಗಿ ನಾವು ಮೇಲೆದ್ದು ಬರುತ್ತೇವೆ; ಇಂದು ಸಮಾನ ಮನಸ್ಕರೊಂದಿಗೆ ಸಭೆ ನಡೆಸಿ, ಶೀಘ್ರದಲ್ಲೇ ಪರಿಣಾಮಕಾರಿಯಾಗಿ ಕಾರ್ಯಕ್ರಮ ಆಯೋಜಿಸುತ್ತೇವೆ” ಎಂದು ಹೇಳಿದರು.

ಕಲಬುರಗಿ| ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಚಪಾತಿ ವಿವಾದ; ಉತ್ತರ-ದಕ್ಷಿಣ ಭಾರತದ ವಿದ್ಯಾರ್ಥಿಗಳ ನಡುವೆ ಘರ್ಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...