Homeಚಳವಳಿಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಎಚ್‌.ಎಸ್‌.ವಿ ಮತ್ತು ಕಸಾಪ ಅಧ್ಯಕ್ಷ ಮನು ಬಳಿಗಾರ್‌ ವಿರುದ್ಧ ಹೆಚ್ಚಿದ...

ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಎಚ್‌.ಎಸ್‌.ವಿ ಮತ್ತು ಕಸಾಪ ಅಧ್ಯಕ್ಷ ಮನು ಬಳಿಗಾರ್‌ ವಿರುದ್ಧ ಹೆಚ್ಚಿದ ಆಕ್ರೋಶ..

ಹಿಂದೆ ಯಾವ ಸಮ್ಮೇಳನದಲ್ಲಿಯೂ ಈ ರೀತಿಯ ಘಟನೆಗಳು ಜರುಗಿದ ಉದಾಹರಣೆಗಳಿಲ್ಲ. ಆದರೆ ಈ ಬಾರಿಯ ಸಮ್ಮೇಳನದಲ್ಲಿ ಸಮ್ಮೇಳನಾಧ್ಯಕ್ಷ ಮತ್ತು ಕಸಾಪ ಅಧ್ಯಕ್ಷರ ವಿರುದ್ಧ ಟೀಕೆಗಳು ಕೇಳಿ ಬಂದಿವೆ.

- Advertisement -
- Advertisement -

ಕಲಬುರಗಿಯಲ್ಲಿ ನಿನ್ನೆಯಿಂದ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆರಂಭಗೊಂಡಿದೆ. ಸಾವಿರಾರು ಕನ್ನಡಾಭಿಮಾನಿಗಳು, ಸಾಹಿತ್ಯಾಸಕ್ತರು, ಜನಸಾಮಾನ್ಯರು ಅತಿ ಉತ್ಸಾಹದಿಂದ ಸಮ್ಮೇಳನದಲ್ಲಿ ಭಾಗವಹಿಸುತ್ತಿದ್ದಾರೆ. ಆದರೆ ಇದೇ ಸಂದರ್ಭದಲ್ಲಿ ಸಮ್ಮೇಳನಾಧ್ಯಕ್ಷ ಎಚ್‌.ಎಸ್‌. ವೆಂಕಟೇಶ ಮೂರ್ತಿ ಮತ್ತು ಕಸಾಪ ಅಧ್ಯಕ್ಷ ಮನು ಬಳಿಗಾರ್‌ ವಿರುದ್ಧ ಅಪಸ್ವರ ಕೇಳಿಬಂದಿದೆ.

ಎಚ್‌. ಎಸ್‌ ವೆಂಕಟೇಶ ಮೂರ್ತಿ

ಮೊದಲಿಗೆ ಸರ್ವಾಧ್ಯಕ್ಷರ ನುಡಿಗಳನ್ನಾಡಿದ ಎಚ್‌.ಎಸ್‌. ವೆಂಕಟೇಶ ಮೂರ್ತಿಯವರು “ಒಕ್ಕೂಟ ವ್ಯವಸ್ಥೆಗೆ ಸಂಸ್ಕೃತ ಇಲ್ಲವೇ ಪ್ರಕೃತ ಭಾಷೆ ಅಗತ್ಯವಾಗಿದೆ. ಸಂಸ್ಕೃತಿ ರಾಷ್ಟ್ರಭಾಷೆಯಾಗಲಿ, ಭಾರತದ ಎಲ್ಲಾ ಭಾಷೆಗಳೂ ನಮ್ಮ ಮಾತೃಭಾಷೆಗಳೇ” ಎಂಬ ಭಾಷಣಕ್ಕೆ ಬಹಳಷ್ಟು ಜನ ಸಾಮಾಜಿಕ ಜಾಲತಾಣಗಳಲ್ಲಿ ವಿರೋಧ ವ್ಯಕ್ತಪಡಿಸಿದ್ದಾರೆ.

“ಹಿಂದೊಮ್ಮೆ ಶಿಕ್ಷಣದಲ್ಲಿ ಸಂಸ್ಕೃತದ ಹೇರಿಕೆಯನ್ನು ಇಡೀ ಕನ್ನಡ ನಾಡು ಅಣ್ಣಾವ್ರ ನೇತೃತ್ವದಲ್ಲಿ ವೀರೋಧಿಸಿ ತನ್ನ ಒಗ್ಗಟ್ಟು ತೋರಿಸಿತ್ತು.

ಈಗ ಸಂಸ್ಕೃತವನ್ನ ದೇಶದ ಸಂಪರ್ಕ ಭಾಷೆಯಾಗಿ ಅಭಿವೃದ್ಧಿಪಡಿಸಬೇಕು ಎನ್ನುವ ತಮ್ಮ ಮಾತನ್ನ ಸಮ್ಮೇಳನಾಧ್ಯಕ್ಷರು ಹಿಂದೆ ಪಡೆಯಬೇಕು. ಹೀಗೆ ಮಾತಾಡುವುದು ಕುವೆಂಪು, ಶಂಬಾ, ರಾಜ್ ಕುಮಾರ್ ಮುಂತಾದ ಹಿರಿಯ ಕನ್ನಡ ಮನಸ್ಸುಗಳನ್ನ ಅಪಮಾನ ಮಾಡಿದಂತೆ ಎಂದು ಕನ್ನಡಿಗರು ಭಾವಿಸಬೇಕು.

ಸನ್ಮಾನ್ಯ ಮುಖ್ಯಮಂತ್ರಿ ಯಡಿಯೂರಪ್ಪನವರೇ, ಹಿಂದೆ ಗೋಕಾಕ್ ಚಳುವಳಿ ಕಾರಣವಾಗಿ, ಗುಂಡೂರಾಯರು ಅಧಿಕಾರ ಕಳೆದುಕೊಂಡರು. ಈಗ ಕನ್ನಡದ ಅಗ್ರಮಾನ್ಯತೆಯನ್ನ ಎತ್ತಿ ಹಿಡಿಯುವ ಸರದಿ ನಿಮ್ಮದು. ಸಮ್ಮೇಳನಾಧ್ಯಕ್ಷರ ಹೇಳಿಕೆಯನ್ನ ವಿರೋಧಿಸಿ ನಿಮ್ಮ ಕನ್ನಡತನವನ್ನ ಮೆರೆಯಿರಿ” ಎಂದು ಕವಿ ಚಿದಂಬರ ನರೇಂದ್ರರವರು ಒತ್ತಾಯಿಸಿದ್ದಾರೆ.

ಮನು ಬಳಿಗಾರ್‌

ಸಂಸ್ಕೃತ ಕೇಳಿದರೆನೆ ಕರ್ಣದಲ್ಲಿ ಕಾದ ಸೀಸ ಉಯ್ದ ಸಂಗತಿಗಳು ಇರುವಾಗ ಅದೇಗೆ ರಾಷ್ಟ್ರಭಾಷೆಯಾಗಬೇಕೆಂದು ಪ್ರತಿಪಾದಿಸುತ್ತಿದ್ದಾರೊ ತಿಳಿಯದೊ? ಎಂದು ಈಹತಾ ಎಂಬುವವರು ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.

ಎಚ್ ಎಸ್ ವೆಂಕಟೇಶ ಮೂರ್ತಿಯವರು ಸಂಸ್ಕೃತ ಸಾಹಿತ್ಯ ಸಮ್ಮೇಳನ ಅಂತ ಏನಾದರೂ ಇದ್ರೆ, ಅವರು ಅದರ ಅಧ್ಯಕ್ಷತೆ ವಹಿಸಲಿ, ಅಲ್ಲಿ ಏನಾದರೂ ಹೇಳಲಿ! ಅವರ ಹೇಳಿಕೆಗೆ ನಮ್ಮ‌ ಸಮ್ಮೇಳನ ವೇದಿಕೆಯಲ್ಲ! ಎಂದು ವಿನಯ ಎಂಬುವವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮನು ಬಳಿಗಾರ್‌ ರಾಜೀನಾಮೆಗೆ ವೇದಿಕೆಯಲ್ಲಿ ಹೆಚ್ಚಿದ ಒತ್ತಡ!

ಇನ್ನು ಕಸಾಪ ಅಧ್ಯಕ್ಷ ಮನು ಬಳಿಗಾರ್‌ ರಾಜೀನಾಮೆ ನೀಡಬೇಕೆಂಬ ಆಗ್ರಹ ಸಾಹಿತ್ಯ ಸಮ್ಮೇಳನದ ವೇದಿಕೆಯಿಂದಲೇ ಹೆಚ್ಚಾಗುತ್ತಿದೆ. ಚಿಂತಕಿ ಕೆ.ನೀಲಾ ಮತ್ತು ಹಿರಿಯ ಸಾಹಿತಿ, ಬರಹಗಾರ ಆರ್‌.ಕೆ ಹುಡಗಿ ಮನು ಬಳಿಗಾರ್‌ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಲು ಅರ್ಹರಲ್ಲ, ಅವರು ರಾಜೀನಾಮೆ ನಿಡಬೇಕೆಂದು ಒತ್ತಾಯಿಸಿದ್ದಾರೆ.

ಇಂದು ಕಲಬುರಗಿ ಜಿಲ್ಲಾ ದರ್ಶನ ಗೋಷ್ಠಿಯ ಅಧ್ಯಕ್ಷೀಯ ನುಡಿಗಳನ್ನಾಡಿದ ಆರ್‌.ಕೆ ಹುಡಗಿಯವರು “ಕಸಾಪ ಒಂದು ಸ್ವಾಯುತ್ತ ಸಂಸ್ಥೆಯಾಗಿದೆ. ಇಂತಹ ಸಂದರ್ಭದಲ್ಲಿ ಚಿಕ್ಕಮಗಳೂರಿನಲ್ಲಿ ನಡೆದ ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕೆ ಆಳುವ ಸರ್ಕಾರ ಮಿತಿಮೀರಿ ಮಧ್ಯ ಪ್ರವೇಶ ಮಾಡಿತ್ತು. ಕನ್ನಡ ಸಂಸ್ಕೃತಿ ಸಚಿವರೆ ಅನುದಾನ ನೀಡದೇ ಸತಾಯಿಸಿದರು ಮಾತ್ರವಲ್ಲ ಸಮ್ಮೇಳನ ಎರಡನೇ ದಿನ ನಡೆದರೆ ಪೆಟ್ರೋಲ್‌ ಬಾಂಬ್‌ ಹಾಕುತ್ತೇವೆ ಎಂದು ಬೆದರಿಸಿದರು. ಆದರೂ ಅಧ್ಯಕ್ಷ ಮನು ಬಳಿಗಾರ್‌ ಸುಮ್ಮನಿದ್ದರು. ಇಂದಿನ ಸಮ್ಮೇಳನ ಅಧ್ಯಕ್ಷರಾಗಿರುವ ಎಚ್‌.ಎಸ್‌ ವೆಂಕಟೇಶ ಮೂರ್ತಿಯವರು ಸಹ ಆಗ ದನಿ ಎತ್ತಲಿಲ್ಲ” ಎಂದು ಅಸಮಾನಧಾನ ವ್ಯಕ್ತಪಡಿಸಿದ್ದಾರೆ.

ಸಾಹಿತ್ಯ ಸಮ್ಮೇಳನಕ್ಕೆ ಅನುದಾನ ನೀಡುವ ವಿಚಾರಕ್ಕೆ ಸಚಿವರು ಅನುದಾನ ನಿಮ್ಮಪ್ಪನ ಮನೆಯದ್ದಲ್ಲೆ ಎಂಬ ದರ್ಪದ ಮಾತುಗಳನ್ನಾಡಿದ್ದಾರೆ. ಅನುದಾನ ಜನಸಾಮಾನ್ಯರು ಕಟ್ಟುವ ತೆರಿಗೆಯಿಂದ ಬಂದಿದ್ದು ಎಂಬುದನ್ನು ಅವರು ಮರೆಯಬಾರದು ಎಂದು ತಿರುಗೇಟು ನೀಡಿದ್ದಾರೆ.

ಕೆ.ನೀಲಾ

ಇನ್ನು ನಿನ್ನೆಯ ಸಮ್ಮೇಳನದಲ್ಲಿ ಕಲಬುರಗಿಯ ಮಹಿಳಾ ಹೋರಾಟಗಾರ್ತಿ ಮತ್ತು ಚಿಂತಕಿ ಕೆ.ನೀಲಾ ಮಾತನಾಡಿ “ಕಸಾಪ ಈಗ ಕನ್ನಡಿಗರ ಸಂಸ್ಥೆಯಾಗಿಲ್ಲ ಬದಲಿಗೆ ಆಳುವವರ ಕೊಂಪೆಯಾಗಿದೆ. ಇದಕ್ಕೆ ಕಾರಣಕರ್ತರಾದ ಅಧ್ಯಕ್ಷ ಮನು ಬಳಿಗಾರ್‌ ರಾಜೀನಾಮೆ ನೀಡಬೇಕೆಂದು” ಒತ್ತಾಯಿಸಿದ್ದರು.

ಹಿಂದೆ ಯಾವ ಸಮ್ಮೇಳನದಲ್ಲಿಯೂ ಈ ರೀತಿಯ ಘಟನೆಗಳು ಜರುಗಿದ ಉದಾಹರಣೆಗಳಿಲ್ಲ. ಆದರೆ ಈ ಬಾರಿಯ ಸಮ್ಮೇಳನದಲ್ಲಿ ಸಮ್ಮೇಳನಾಧ್ಯಕ್ಷ ಮತ್ತು ಕಸಾಪ ಅಧ್ಯಕ್ಷರ ವಿರುದ್ಧ ಟೀಕೆಗಳು ಕೇಳಿ ಬಂದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...