Homeಚಳವಳಿಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಎಚ್‌.ಎಸ್‌.ವಿ ಮತ್ತು ಕಸಾಪ ಅಧ್ಯಕ್ಷ ಮನು ಬಳಿಗಾರ್‌ ವಿರುದ್ಧ ಹೆಚ್ಚಿದ...

ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಎಚ್‌.ಎಸ್‌.ವಿ ಮತ್ತು ಕಸಾಪ ಅಧ್ಯಕ್ಷ ಮನು ಬಳಿಗಾರ್‌ ವಿರುದ್ಧ ಹೆಚ್ಚಿದ ಆಕ್ರೋಶ..

ಹಿಂದೆ ಯಾವ ಸಮ್ಮೇಳನದಲ್ಲಿಯೂ ಈ ರೀತಿಯ ಘಟನೆಗಳು ಜರುಗಿದ ಉದಾಹರಣೆಗಳಿಲ್ಲ. ಆದರೆ ಈ ಬಾರಿಯ ಸಮ್ಮೇಳನದಲ್ಲಿ ಸಮ್ಮೇಳನಾಧ್ಯಕ್ಷ ಮತ್ತು ಕಸಾಪ ಅಧ್ಯಕ್ಷರ ವಿರುದ್ಧ ಟೀಕೆಗಳು ಕೇಳಿ ಬಂದಿವೆ.

- Advertisement -
- Advertisement -

ಕಲಬುರಗಿಯಲ್ಲಿ ನಿನ್ನೆಯಿಂದ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆರಂಭಗೊಂಡಿದೆ. ಸಾವಿರಾರು ಕನ್ನಡಾಭಿಮಾನಿಗಳು, ಸಾಹಿತ್ಯಾಸಕ್ತರು, ಜನಸಾಮಾನ್ಯರು ಅತಿ ಉತ್ಸಾಹದಿಂದ ಸಮ್ಮೇಳನದಲ್ಲಿ ಭಾಗವಹಿಸುತ್ತಿದ್ದಾರೆ. ಆದರೆ ಇದೇ ಸಂದರ್ಭದಲ್ಲಿ ಸಮ್ಮೇಳನಾಧ್ಯಕ್ಷ ಎಚ್‌.ಎಸ್‌. ವೆಂಕಟೇಶ ಮೂರ್ತಿ ಮತ್ತು ಕಸಾಪ ಅಧ್ಯಕ್ಷ ಮನು ಬಳಿಗಾರ್‌ ವಿರುದ್ಧ ಅಪಸ್ವರ ಕೇಳಿಬಂದಿದೆ.

ಎಚ್‌. ಎಸ್‌ ವೆಂಕಟೇಶ ಮೂರ್ತಿ

ಮೊದಲಿಗೆ ಸರ್ವಾಧ್ಯಕ್ಷರ ನುಡಿಗಳನ್ನಾಡಿದ ಎಚ್‌.ಎಸ್‌. ವೆಂಕಟೇಶ ಮೂರ್ತಿಯವರು “ಒಕ್ಕೂಟ ವ್ಯವಸ್ಥೆಗೆ ಸಂಸ್ಕೃತ ಇಲ್ಲವೇ ಪ್ರಕೃತ ಭಾಷೆ ಅಗತ್ಯವಾಗಿದೆ. ಸಂಸ್ಕೃತಿ ರಾಷ್ಟ್ರಭಾಷೆಯಾಗಲಿ, ಭಾರತದ ಎಲ್ಲಾ ಭಾಷೆಗಳೂ ನಮ್ಮ ಮಾತೃಭಾಷೆಗಳೇ” ಎಂಬ ಭಾಷಣಕ್ಕೆ ಬಹಳಷ್ಟು ಜನ ಸಾಮಾಜಿಕ ಜಾಲತಾಣಗಳಲ್ಲಿ ವಿರೋಧ ವ್ಯಕ್ತಪಡಿಸಿದ್ದಾರೆ.

“ಹಿಂದೊಮ್ಮೆ ಶಿಕ್ಷಣದಲ್ಲಿ ಸಂಸ್ಕೃತದ ಹೇರಿಕೆಯನ್ನು ಇಡೀ ಕನ್ನಡ ನಾಡು ಅಣ್ಣಾವ್ರ ನೇತೃತ್ವದಲ್ಲಿ ವೀರೋಧಿಸಿ ತನ್ನ ಒಗ್ಗಟ್ಟು ತೋರಿಸಿತ್ತು.

ಈಗ ಸಂಸ್ಕೃತವನ್ನ ದೇಶದ ಸಂಪರ್ಕ ಭಾಷೆಯಾಗಿ ಅಭಿವೃದ್ಧಿಪಡಿಸಬೇಕು ಎನ್ನುವ ತಮ್ಮ ಮಾತನ್ನ ಸಮ್ಮೇಳನಾಧ್ಯಕ್ಷರು ಹಿಂದೆ ಪಡೆಯಬೇಕು. ಹೀಗೆ ಮಾತಾಡುವುದು ಕುವೆಂಪು, ಶಂಬಾ, ರಾಜ್ ಕುಮಾರ್ ಮುಂತಾದ ಹಿರಿಯ ಕನ್ನಡ ಮನಸ್ಸುಗಳನ್ನ ಅಪಮಾನ ಮಾಡಿದಂತೆ ಎಂದು ಕನ್ನಡಿಗರು ಭಾವಿಸಬೇಕು.

ಸನ್ಮಾನ್ಯ ಮುಖ್ಯಮಂತ್ರಿ ಯಡಿಯೂರಪ್ಪನವರೇ, ಹಿಂದೆ ಗೋಕಾಕ್ ಚಳುವಳಿ ಕಾರಣವಾಗಿ, ಗುಂಡೂರಾಯರು ಅಧಿಕಾರ ಕಳೆದುಕೊಂಡರು. ಈಗ ಕನ್ನಡದ ಅಗ್ರಮಾನ್ಯತೆಯನ್ನ ಎತ್ತಿ ಹಿಡಿಯುವ ಸರದಿ ನಿಮ್ಮದು. ಸಮ್ಮೇಳನಾಧ್ಯಕ್ಷರ ಹೇಳಿಕೆಯನ್ನ ವಿರೋಧಿಸಿ ನಿಮ್ಮ ಕನ್ನಡತನವನ್ನ ಮೆರೆಯಿರಿ” ಎಂದು ಕವಿ ಚಿದಂಬರ ನರೇಂದ್ರರವರು ಒತ್ತಾಯಿಸಿದ್ದಾರೆ.

ಮನು ಬಳಿಗಾರ್‌

ಸಂಸ್ಕೃತ ಕೇಳಿದರೆನೆ ಕರ್ಣದಲ್ಲಿ ಕಾದ ಸೀಸ ಉಯ್ದ ಸಂಗತಿಗಳು ಇರುವಾಗ ಅದೇಗೆ ರಾಷ್ಟ್ರಭಾಷೆಯಾಗಬೇಕೆಂದು ಪ್ರತಿಪಾದಿಸುತ್ತಿದ್ದಾರೊ ತಿಳಿಯದೊ? ಎಂದು ಈಹತಾ ಎಂಬುವವರು ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.

ಎಚ್ ಎಸ್ ವೆಂಕಟೇಶ ಮೂರ್ತಿಯವರು ಸಂಸ್ಕೃತ ಸಾಹಿತ್ಯ ಸಮ್ಮೇಳನ ಅಂತ ಏನಾದರೂ ಇದ್ರೆ, ಅವರು ಅದರ ಅಧ್ಯಕ್ಷತೆ ವಹಿಸಲಿ, ಅಲ್ಲಿ ಏನಾದರೂ ಹೇಳಲಿ! ಅವರ ಹೇಳಿಕೆಗೆ ನಮ್ಮ‌ ಸಮ್ಮೇಳನ ವೇದಿಕೆಯಲ್ಲ! ಎಂದು ವಿನಯ ಎಂಬುವವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮನು ಬಳಿಗಾರ್‌ ರಾಜೀನಾಮೆಗೆ ವೇದಿಕೆಯಲ್ಲಿ ಹೆಚ್ಚಿದ ಒತ್ತಡ!

ಇನ್ನು ಕಸಾಪ ಅಧ್ಯಕ್ಷ ಮನು ಬಳಿಗಾರ್‌ ರಾಜೀನಾಮೆ ನೀಡಬೇಕೆಂಬ ಆಗ್ರಹ ಸಾಹಿತ್ಯ ಸಮ್ಮೇಳನದ ವೇದಿಕೆಯಿಂದಲೇ ಹೆಚ್ಚಾಗುತ್ತಿದೆ. ಚಿಂತಕಿ ಕೆ.ನೀಲಾ ಮತ್ತು ಹಿರಿಯ ಸಾಹಿತಿ, ಬರಹಗಾರ ಆರ್‌.ಕೆ ಹುಡಗಿ ಮನು ಬಳಿಗಾರ್‌ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಲು ಅರ್ಹರಲ್ಲ, ಅವರು ರಾಜೀನಾಮೆ ನಿಡಬೇಕೆಂದು ಒತ್ತಾಯಿಸಿದ್ದಾರೆ.

ಇಂದು ಕಲಬುರಗಿ ಜಿಲ್ಲಾ ದರ್ಶನ ಗೋಷ್ಠಿಯ ಅಧ್ಯಕ್ಷೀಯ ನುಡಿಗಳನ್ನಾಡಿದ ಆರ್‌.ಕೆ ಹುಡಗಿಯವರು “ಕಸಾಪ ಒಂದು ಸ್ವಾಯುತ್ತ ಸಂಸ್ಥೆಯಾಗಿದೆ. ಇಂತಹ ಸಂದರ್ಭದಲ್ಲಿ ಚಿಕ್ಕಮಗಳೂರಿನಲ್ಲಿ ನಡೆದ ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕೆ ಆಳುವ ಸರ್ಕಾರ ಮಿತಿಮೀರಿ ಮಧ್ಯ ಪ್ರವೇಶ ಮಾಡಿತ್ತು. ಕನ್ನಡ ಸಂಸ್ಕೃತಿ ಸಚಿವರೆ ಅನುದಾನ ನೀಡದೇ ಸತಾಯಿಸಿದರು ಮಾತ್ರವಲ್ಲ ಸಮ್ಮೇಳನ ಎರಡನೇ ದಿನ ನಡೆದರೆ ಪೆಟ್ರೋಲ್‌ ಬಾಂಬ್‌ ಹಾಕುತ್ತೇವೆ ಎಂದು ಬೆದರಿಸಿದರು. ಆದರೂ ಅಧ್ಯಕ್ಷ ಮನು ಬಳಿಗಾರ್‌ ಸುಮ್ಮನಿದ್ದರು. ಇಂದಿನ ಸಮ್ಮೇಳನ ಅಧ್ಯಕ್ಷರಾಗಿರುವ ಎಚ್‌.ಎಸ್‌ ವೆಂಕಟೇಶ ಮೂರ್ತಿಯವರು ಸಹ ಆಗ ದನಿ ಎತ್ತಲಿಲ್ಲ” ಎಂದು ಅಸಮಾನಧಾನ ವ್ಯಕ್ತಪಡಿಸಿದ್ದಾರೆ.

ಸಾಹಿತ್ಯ ಸಮ್ಮೇಳನಕ್ಕೆ ಅನುದಾನ ನೀಡುವ ವಿಚಾರಕ್ಕೆ ಸಚಿವರು ಅನುದಾನ ನಿಮ್ಮಪ್ಪನ ಮನೆಯದ್ದಲ್ಲೆ ಎಂಬ ದರ್ಪದ ಮಾತುಗಳನ್ನಾಡಿದ್ದಾರೆ. ಅನುದಾನ ಜನಸಾಮಾನ್ಯರು ಕಟ್ಟುವ ತೆರಿಗೆಯಿಂದ ಬಂದಿದ್ದು ಎಂಬುದನ್ನು ಅವರು ಮರೆಯಬಾರದು ಎಂದು ತಿರುಗೇಟು ನೀಡಿದ್ದಾರೆ.

ಕೆ.ನೀಲಾ

ಇನ್ನು ನಿನ್ನೆಯ ಸಮ್ಮೇಳನದಲ್ಲಿ ಕಲಬುರಗಿಯ ಮಹಿಳಾ ಹೋರಾಟಗಾರ್ತಿ ಮತ್ತು ಚಿಂತಕಿ ಕೆ.ನೀಲಾ ಮಾತನಾಡಿ “ಕಸಾಪ ಈಗ ಕನ್ನಡಿಗರ ಸಂಸ್ಥೆಯಾಗಿಲ್ಲ ಬದಲಿಗೆ ಆಳುವವರ ಕೊಂಪೆಯಾಗಿದೆ. ಇದಕ್ಕೆ ಕಾರಣಕರ್ತರಾದ ಅಧ್ಯಕ್ಷ ಮನು ಬಳಿಗಾರ್‌ ರಾಜೀನಾಮೆ ನೀಡಬೇಕೆಂದು” ಒತ್ತಾಯಿಸಿದ್ದರು.

ಹಿಂದೆ ಯಾವ ಸಮ್ಮೇಳನದಲ್ಲಿಯೂ ಈ ರೀತಿಯ ಘಟನೆಗಳು ಜರುಗಿದ ಉದಾಹರಣೆಗಳಿಲ್ಲ. ಆದರೆ ಈ ಬಾರಿಯ ಸಮ್ಮೇಳನದಲ್ಲಿ ಸಮ್ಮೇಳನಾಧ್ಯಕ್ಷ ಮತ್ತು ಕಸಾಪ ಅಧ್ಯಕ್ಷರ ವಿರುದ್ಧ ಟೀಕೆಗಳು ಕೇಳಿ ಬಂದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...