Homeಚಳವಳಿಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಎಚ್‌.ಎಸ್‌.ವಿ ಮತ್ತು ಕಸಾಪ ಅಧ್ಯಕ್ಷ ಮನು ಬಳಿಗಾರ್‌ ವಿರುದ್ಧ ಹೆಚ್ಚಿದ...

ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಎಚ್‌.ಎಸ್‌.ವಿ ಮತ್ತು ಕಸಾಪ ಅಧ್ಯಕ್ಷ ಮನು ಬಳಿಗಾರ್‌ ವಿರುದ್ಧ ಹೆಚ್ಚಿದ ಆಕ್ರೋಶ..

ಹಿಂದೆ ಯಾವ ಸಮ್ಮೇಳನದಲ್ಲಿಯೂ ಈ ರೀತಿಯ ಘಟನೆಗಳು ಜರುಗಿದ ಉದಾಹರಣೆಗಳಿಲ್ಲ. ಆದರೆ ಈ ಬಾರಿಯ ಸಮ್ಮೇಳನದಲ್ಲಿ ಸಮ್ಮೇಳನಾಧ್ಯಕ್ಷ ಮತ್ತು ಕಸಾಪ ಅಧ್ಯಕ್ಷರ ವಿರುದ್ಧ ಟೀಕೆಗಳು ಕೇಳಿ ಬಂದಿವೆ.

- Advertisement -
- Advertisement -

ಕಲಬುರಗಿಯಲ್ಲಿ ನಿನ್ನೆಯಿಂದ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆರಂಭಗೊಂಡಿದೆ. ಸಾವಿರಾರು ಕನ್ನಡಾಭಿಮಾನಿಗಳು, ಸಾಹಿತ್ಯಾಸಕ್ತರು, ಜನಸಾಮಾನ್ಯರು ಅತಿ ಉತ್ಸಾಹದಿಂದ ಸಮ್ಮೇಳನದಲ್ಲಿ ಭಾಗವಹಿಸುತ್ತಿದ್ದಾರೆ. ಆದರೆ ಇದೇ ಸಂದರ್ಭದಲ್ಲಿ ಸಮ್ಮೇಳನಾಧ್ಯಕ್ಷ ಎಚ್‌.ಎಸ್‌. ವೆಂಕಟೇಶ ಮೂರ್ತಿ ಮತ್ತು ಕಸಾಪ ಅಧ್ಯಕ್ಷ ಮನು ಬಳಿಗಾರ್‌ ವಿರುದ್ಧ ಅಪಸ್ವರ ಕೇಳಿಬಂದಿದೆ.

ಎಚ್‌. ಎಸ್‌ ವೆಂಕಟೇಶ ಮೂರ್ತಿ

ಮೊದಲಿಗೆ ಸರ್ವಾಧ್ಯಕ್ಷರ ನುಡಿಗಳನ್ನಾಡಿದ ಎಚ್‌.ಎಸ್‌. ವೆಂಕಟೇಶ ಮೂರ್ತಿಯವರು “ಒಕ್ಕೂಟ ವ್ಯವಸ್ಥೆಗೆ ಸಂಸ್ಕೃತ ಇಲ್ಲವೇ ಪ್ರಕೃತ ಭಾಷೆ ಅಗತ್ಯವಾಗಿದೆ. ಸಂಸ್ಕೃತಿ ರಾಷ್ಟ್ರಭಾಷೆಯಾಗಲಿ, ಭಾರತದ ಎಲ್ಲಾ ಭಾಷೆಗಳೂ ನಮ್ಮ ಮಾತೃಭಾಷೆಗಳೇ” ಎಂಬ ಭಾಷಣಕ್ಕೆ ಬಹಳಷ್ಟು ಜನ ಸಾಮಾಜಿಕ ಜಾಲತಾಣಗಳಲ್ಲಿ ವಿರೋಧ ವ್ಯಕ್ತಪಡಿಸಿದ್ದಾರೆ.

“ಹಿಂದೊಮ್ಮೆ ಶಿಕ್ಷಣದಲ್ಲಿ ಸಂಸ್ಕೃತದ ಹೇರಿಕೆಯನ್ನು ಇಡೀ ಕನ್ನಡ ನಾಡು ಅಣ್ಣಾವ್ರ ನೇತೃತ್ವದಲ್ಲಿ ವೀರೋಧಿಸಿ ತನ್ನ ಒಗ್ಗಟ್ಟು ತೋರಿಸಿತ್ತು.

ಈಗ ಸಂಸ್ಕೃತವನ್ನ ದೇಶದ ಸಂಪರ್ಕ ಭಾಷೆಯಾಗಿ ಅಭಿವೃದ್ಧಿಪಡಿಸಬೇಕು ಎನ್ನುವ ತಮ್ಮ ಮಾತನ್ನ ಸಮ್ಮೇಳನಾಧ್ಯಕ್ಷರು ಹಿಂದೆ ಪಡೆಯಬೇಕು. ಹೀಗೆ ಮಾತಾಡುವುದು ಕುವೆಂಪು, ಶಂಬಾ, ರಾಜ್ ಕುಮಾರ್ ಮುಂತಾದ ಹಿರಿಯ ಕನ್ನಡ ಮನಸ್ಸುಗಳನ್ನ ಅಪಮಾನ ಮಾಡಿದಂತೆ ಎಂದು ಕನ್ನಡಿಗರು ಭಾವಿಸಬೇಕು.

ಸನ್ಮಾನ್ಯ ಮುಖ್ಯಮಂತ್ರಿ ಯಡಿಯೂರಪ್ಪನವರೇ, ಹಿಂದೆ ಗೋಕಾಕ್ ಚಳುವಳಿ ಕಾರಣವಾಗಿ, ಗುಂಡೂರಾಯರು ಅಧಿಕಾರ ಕಳೆದುಕೊಂಡರು. ಈಗ ಕನ್ನಡದ ಅಗ್ರಮಾನ್ಯತೆಯನ್ನ ಎತ್ತಿ ಹಿಡಿಯುವ ಸರದಿ ನಿಮ್ಮದು. ಸಮ್ಮೇಳನಾಧ್ಯಕ್ಷರ ಹೇಳಿಕೆಯನ್ನ ವಿರೋಧಿಸಿ ನಿಮ್ಮ ಕನ್ನಡತನವನ್ನ ಮೆರೆಯಿರಿ” ಎಂದು ಕವಿ ಚಿದಂಬರ ನರೇಂದ್ರರವರು ಒತ್ತಾಯಿಸಿದ್ದಾರೆ.

ಮನು ಬಳಿಗಾರ್‌

ಸಂಸ್ಕೃತ ಕೇಳಿದರೆನೆ ಕರ್ಣದಲ್ಲಿ ಕಾದ ಸೀಸ ಉಯ್ದ ಸಂಗತಿಗಳು ಇರುವಾಗ ಅದೇಗೆ ರಾಷ್ಟ್ರಭಾಷೆಯಾಗಬೇಕೆಂದು ಪ್ರತಿಪಾದಿಸುತ್ತಿದ್ದಾರೊ ತಿಳಿಯದೊ? ಎಂದು ಈಹತಾ ಎಂಬುವವರು ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.

ಎಚ್ ಎಸ್ ವೆಂಕಟೇಶ ಮೂರ್ತಿಯವರು ಸಂಸ್ಕೃತ ಸಾಹಿತ್ಯ ಸಮ್ಮೇಳನ ಅಂತ ಏನಾದರೂ ಇದ್ರೆ, ಅವರು ಅದರ ಅಧ್ಯಕ್ಷತೆ ವಹಿಸಲಿ, ಅಲ್ಲಿ ಏನಾದರೂ ಹೇಳಲಿ! ಅವರ ಹೇಳಿಕೆಗೆ ನಮ್ಮ‌ ಸಮ್ಮೇಳನ ವೇದಿಕೆಯಲ್ಲ! ಎಂದು ವಿನಯ ಎಂಬುವವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮನು ಬಳಿಗಾರ್‌ ರಾಜೀನಾಮೆಗೆ ವೇದಿಕೆಯಲ್ಲಿ ಹೆಚ್ಚಿದ ಒತ್ತಡ!

ಇನ್ನು ಕಸಾಪ ಅಧ್ಯಕ್ಷ ಮನು ಬಳಿಗಾರ್‌ ರಾಜೀನಾಮೆ ನೀಡಬೇಕೆಂಬ ಆಗ್ರಹ ಸಾಹಿತ್ಯ ಸಮ್ಮೇಳನದ ವೇದಿಕೆಯಿಂದಲೇ ಹೆಚ್ಚಾಗುತ್ತಿದೆ. ಚಿಂತಕಿ ಕೆ.ನೀಲಾ ಮತ್ತು ಹಿರಿಯ ಸಾಹಿತಿ, ಬರಹಗಾರ ಆರ್‌.ಕೆ ಹುಡಗಿ ಮನು ಬಳಿಗಾರ್‌ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಲು ಅರ್ಹರಲ್ಲ, ಅವರು ರಾಜೀನಾಮೆ ನಿಡಬೇಕೆಂದು ಒತ್ತಾಯಿಸಿದ್ದಾರೆ.

ಇಂದು ಕಲಬುರಗಿ ಜಿಲ್ಲಾ ದರ್ಶನ ಗೋಷ್ಠಿಯ ಅಧ್ಯಕ್ಷೀಯ ನುಡಿಗಳನ್ನಾಡಿದ ಆರ್‌.ಕೆ ಹುಡಗಿಯವರು “ಕಸಾಪ ಒಂದು ಸ್ವಾಯುತ್ತ ಸಂಸ್ಥೆಯಾಗಿದೆ. ಇಂತಹ ಸಂದರ್ಭದಲ್ಲಿ ಚಿಕ್ಕಮಗಳೂರಿನಲ್ಲಿ ನಡೆದ ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕೆ ಆಳುವ ಸರ್ಕಾರ ಮಿತಿಮೀರಿ ಮಧ್ಯ ಪ್ರವೇಶ ಮಾಡಿತ್ತು. ಕನ್ನಡ ಸಂಸ್ಕೃತಿ ಸಚಿವರೆ ಅನುದಾನ ನೀಡದೇ ಸತಾಯಿಸಿದರು ಮಾತ್ರವಲ್ಲ ಸಮ್ಮೇಳನ ಎರಡನೇ ದಿನ ನಡೆದರೆ ಪೆಟ್ರೋಲ್‌ ಬಾಂಬ್‌ ಹಾಕುತ್ತೇವೆ ಎಂದು ಬೆದರಿಸಿದರು. ಆದರೂ ಅಧ್ಯಕ್ಷ ಮನು ಬಳಿಗಾರ್‌ ಸುಮ್ಮನಿದ್ದರು. ಇಂದಿನ ಸಮ್ಮೇಳನ ಅಧ್ಯಕ್ಷರಾಗಿರುವ ಎಚ್‌.ಎಸ್‌ ವೆಂಕಟೇಶ ಮೂರ್ತಿಯವರು ಸಹ ಆಗ ದನಿ ಎತ್ತಲಿಲ್ಲ” ಎಂದು ಅಸಮಾನಧಾನ ವ್ಯಕ್ತಪಡಿಸಿದ್ದಾರೆ.

ಸಾಹಿತ್ಯ ಸಮ್ಮೇಳನಕ್ಕೆ ಅನುದಾನ ನೀಡುವ ವಿಚಾರಕ್ಕೆ ಸಚಿವರು ಅನುದಾನ ನಿಮ್ಮಪ್ಪನ ಮನೆಯದ್ದಲ್ಲೆ ಎಂಬ ದರ್ಪದ ಮಾತುಗಳನ್ನಾಡಿದ್ದಾರೆ. ಅನುದಾನ ಜನಸಾಮಾನ್ಯರು ಕಟ್ಟುವ ತೆರಿಗೆಯಿಂದ ಬಂದಿದ್ದು ಎಂಬುದನ್ನು ಅವರು ಮರೆಯಬಾರದು ಎಂದು ತಿರುಗೇಟು ನೀಡಿದ್ದಾರೆ.

ಕೆ.ನೀಲಾ

ಇನ್ನು ನಿನ್ನೆಯ ಸಮ್ಮೇಳನದಲ್ಲಿ ಕಲಬುರಗಿಯ ಮಹಿಳಾ ಹೋರಾಟಗಾರ್ತಿ ಮತ್ತು ಚಿಂತಕಿ ಕೆ.ನೀಲಾ ಮಾತನಾಡಿ “ಕಸಾಪ ಈಗ ಕನ್ನಡಿಗರ ಸಂಸ್ಥೆಯಾಗಿಲ್ಲ ಬದಲಿಗೆ ಆಳುವವರ ಕೊಂಪೆಯಾಗಿದೆ. ಇದಕ್ಕೆ ಕಾರಣಕರ್ತರಾದ ಅಧ್ಯಕ್ಷ ಮನು ಬಳಿಗಾರ್‌ ರಾಜೀನಾಮೆ ನೀಡಬೇಕೆಂದು” ಒತ್ತಾಯಿಸಿದ್ದರು.

ಹಿಂದೆ ಯಾವ ಸಮ್ಮೇಳನದಲ್ಲಿಯೂ ಈ ರೀತಿಯ ಘಟನೆಗಳು ಜರುಗಿದ ಉದಾಹರಣೆಗಳಿಲ್ಲ. ಆದರೆ ಈ ಬಾರಿಯ ಸಮ್ಮೇಳನದಲ್ಲಿ ಸಮ್ಮೇಳನಾಧ್ಯಕ್ಷ ಮತ್ತು ಕಸಾಪ ಅಧ್ಯಕ್ಷರ ವಿರುದ್ಧ ಟೀಕೆಗಳು ಕೇಳಿ ಬಂದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...