Homeಚಳವಳಿಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಎಚ್‌.ಎಸ್‌.ವಿ ಮತ್ತು ಕಸಾಪ ಅಧ್ಯಕ್ಷ ಮನು ಬಳಿಗಾರ್‌ ವಿರುದ್ಧ ಹೆಚ್ಚಿದ...

ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಎಚ್‌.ಎಸ್‌.ವಿ ಮತ್ತು ಕಸಾಪ ಅಧ್ಯಕ್ಷ ಮನು ಬಳಿಗಾರ್‌ ವಿರುದ್ಧ ಹೆಚ್ಚಿದ ಆಕ್ರೋಶ..

ಹಿಂದೆ ಯಾವ ಸಮ್ಮೇಳನದಲ್ಲಿಯೂ ಈ ರೀತಿಯ ಘಟನೆಗಳು ಜರುಗಿದ ಉದಾಹರಣೆಗಳಿಲ್ಲ. ಆದರೆ ಈ ಬಾರಿಯ ಸಮ್ಮೇಳನದಲ್ಲಿ ಸಮ್ಮೇಳನಾಧ್ಯಕ್ಷ ಮತ್ತು ಕಸಾಪ ಅಧ್ಯಕ್ಷರ ವಿರುದ್ಧ ಟೀಕೆಗಳು ಕೇಳಿ ಬಂದಿವೆ.

- Advertisement -
- Advertisement -

ಕಲಬುರಗಿಯಲ್ಲಿ ನಿನ್ನೆಯಿಂದ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆರಂಭಗೊಂಡಿದೆ. ಸಾವಿರಾರು ಕನ್ನಡಾಭಿಮಾನಿಗಳು, ಸಾಹಿತ್ಯಾಸಕ್ತರು, ಜನಸಾಮಾನ್ಯರು ಅತಿ ಉತ್ಸಾಹದಿಂದ ಸಮ್ಮೇಳನದಲ್ಲಿ ಭಾಗವಹಿಸುತ್ತಿದ್ದಾರೆ. ಆದರೆ ಇದೇ ಸಂದರ್ಭದಲ್ಲಿ ಸಮ್ಮೇಳನಾಧ್ಯಕ್ಷ ಎಚ್‌.ಎಸ್‌. ವೆಂಕಟೇಶ ಮೂರ್ತಿ ಮತ್ತು ಕಸಾಪ ಅಧ್ಯಕ್ಷ ಮನು ಬಳಿಗಾರ್‌ ವಿರುದ್ಧ ಅಪಸ್ವರ ಕೇಳಿಬಂದಿದೆ.

ಎಚ್‌. ಎಸ್‌ ವೆಂಕಟೇಶ ಮೂರ್ತಿ

ಮೊದಲಿಗೆ ಸರ್ವಾಧ್ಯಕ್ಷರ ನುಡಿಗಳನ್ನಾಡಿದ ಎಚ್‌.ಎಸ್‌. ವೆಂಕಟೇಶ ಮೂರ್ತಿಯವರು “ಒಕ್ಕೂಟ ವ್ಯವಸ್ಥೆಗೆ ಸಂಸ್ಕೃತ ಇಲ್ಲವೇ ಪ್ರಕೃತ ಭಾಷೆ ಅಗತ್ಯವಾಗಿದೆ. ಸಂಸ್ಕೃತಿ ರಾಷ್ಟ್ರಭಾಷೆಯಾಗಲಿ, ಭಾರತದ ಎಲ್ಲಾ ಭಾಷೆಗಳೂ ನಮ್ಮ ಮಾತೃಭಾಷೆಗಳೇ” ಎಂಬ ಭಾಷಣಕ್ಕೆ ಬಹಳಷ್ಟು ಜನ ಸಾಮಾಜಿಕ ಜಾಲತಾಣಗಳಲ್ಲಿ ವಿರೋಧ ವ್ಯಕ್ತಪಡಿಸಿದ್ದಾರೆ.

“ಹಿಂದೊಮ್ಮೆ ಶಿಕ್ಷಣದಲ್ಲಿ ಸಂಸ್ಕೃತದ ಹೇರಿಕೆಯನ್ನು ಇಡೀ ಕನ್ನಡ ನಾಡು ಅಣ್ಣಾವ್ರ ನೇತೃತ್ವದಲ್ಲಿ ವೀರೋಧಿಸಿ ತನ್ನ ಒಗ್ಗಟ್ಟು ತೋರಿಸಿತ್ತು.

ಈಗ ಸಂಸ್ಕೃತವನ್ನ ದೇಶದ ಸಂಪರ್ಕ ಭಾಷೆಯಾಗಿ ಅಭಿವೃದ್ಧಿಪಡಿಸಬೇಕು ಎನ್ನುವ ತಮ್ಮ ಮಾತನ್ನ ಸಮ್ಮೇಳನಾಧ್ಯಕ್ಷರು ಹಿಂದೆ ಪಡೆಯಬೇಕು. ಹೀಗೆ ಮಾತಾಡುವುದು ಕುವೆಂಪು, ಶಂಬಾ, ರಾಜ್ ಕುಮಾರ್ ಮುಂತಾದ ಹಿರಿಯ ಕನ್ನಡ ಮನಸ್ಸುಗಳನ್ನ ಅಪಮಾನ ಮಾಡಿದಂತೆ ಎಂದು ಕನ್ನಡಿಗರು ಭಾವಿಸಬೇಕು.

ಸನ್ಮಾನ್ಯ ಮುಖ್ಯಮಂತ್ರಿ ಯಡಿಯೂರಪ್ಪನವರೇ, ಹಿಂದೆ ಗೋಕಾಕ್ ಚಳುವಳಿ ಕಾರಣವಾಗಿ, ಗುಂಡೂರಾಯರು ಅಧಿಕಾರ ಕಳೆದುಕೊಂಡರು. ಈಗ ಕನ್ನಡದ ಅಗ್ರಮಾನ್ಯತೆಯನ್ನ ಎತ್ತಿ ಹಿಡಿಯುವ ಸರದಿ ನಿಮ್ಮದು. ಸಮ್ಮೇಳನಾಧ್ಯಕ್ಷರ ಹೇಳಿಕೆಯನ್ನ ವಿರೋಧಿಸಿ ನಿಮ್ಮ ಕನ್ನಡತನವನ್ನ ಮೆರೆಯಿರಿ” ಎಂದು ಕವಿ ಚಿದಂಬರ ನರೇಂದ್ರರವರು ಒತ್ತಾಯಿಸಿದ್ದಾರೆ.

ಮನು ಬಳಿಗಾರ್‌

ಸಂಸ್ಕೃತ ಕೇಳಿದರೆನೆ ಕರ್ಣದಲ್ಲಿ ಕಾದ ಸೀಸ ಉಯ್ದ ಸಂಗತಿಗಳು ಇರುವಾಗ ಅದೇಗೆ ರಾಷ್ಟ್ರಭಾಷೆಯಾಗಬೇಕೆಂದು ಪ್ರತಿಪಾದಿಸುತ್ತಿದ್ದಾರೊ ತಿಳಿಯದೊ? ಎಂದು ಈಹತಾ ಎಂಬುವವರು ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.

ಎಚ್ ಎಸ್ ವೆಂಕಟೇಶ ಮೂರ್ತಿಯವರು ಸಂಸ್ಕೃತ ಸಾಹಿತ್ಯ ಸಮ್ಮೇಳನ ಅಂತ ಏನಾದರೂ ಇದ್ರೆ, ಅವರು ಅದರ ಅಧ್ಯಕ್ಷತೆ ವಹಿಸಲಿ, ಅಲ್ಲಿ ಏನಾದರೂ ಹೇಳಲಿ! ಅವರ ಹೇಳಿಕೆಗೆ ನಮ್ಮ‌ ಸಮ್ಮೇಳನ ವೇದಿಕೆಯಲ್ಲ! ಎಂದು ವಿನಯ ಎಂಬುವವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮನು ಬಳಿಗಾರ್‌ ರಾಜೀನಾಮೆಗೆ ವೇದಿಕೆಯಲ್ಲಿ ಹೆಚ್ಚಿದ ಒತ್ತಡ!

ಇನ್ನು ಕಸಾಪ ಅಧ್ಯಕ್ಷ ಮನು ಬಳಿಗಾರ್‌ ರಾಜೀನಾಮೆ ನೀಡಬೇಕೆಂಬ ಆಗ್ರಹ ಸಾಹಿತ್ಯ ಸಮ್ಮೇಳನದ ವೇದಿಕೆಯಿಂದಲೇ ಹೆಚ್ಚಾಗುತ್ತಿದೆ. ಚಿಂತಕಿ ಕೆ.ನೀಲಾ ಮತ್ತು ಹಿರಿಯ ಸಾಹಿತಿ, ಬರಹಗಾರ ಆರ್‌.ಕೆ ಹುಡಗಿ ಮನು ಬಳಿಗಾರ್‌ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಲು ಅರ್ಹರಲ್ಲ, ಅವರು ರಾಜೀನಾಮೆ ನಿಡಬೇಕೆಂದು ಒತ್ತಾಯಿಸಿದ್ದಾರೆ.

ಇಂದು ಕಲಬುರಗಿ ಜಿಲ್ಲಾ ದರ್ಶನ ಗೋಷ್ಠಿಯ ಅಧ್ಯಕ್ಷೀಯ ನುಡಿಗಳನ್ನಾಡಿದ ಆರ್‌.ಕೆ ಹುಡಗಿಯವರು “ಕಸಾಪ ಒಂದು ಸ್ವಾಯುತ್ತ ಸಂಸ್ಥೆಯಾಗಿದೆ. ಇಂತಹ ಸಂದರ್ಭದಲ್ಲಿ ಚಿಕ್ಕಮಗಳೂರಿನಲ್ಲಿ ನಡೆದ ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕೆ ಆಳುವ ಸರ್ಕಾರ ಮಿತಿಮೀರಿ ಮಧ್ಯ ಪ್ರವೇಶ ಮಾಡಿತ್ತು. ಕನ್ನಡ ಸಂಸ್ಕೃತಿ ಸಚಿವರೆ ಅನುದಾನ ನೀಡದೇ ಸತಾಯಿಸಿದರು ಮಾತ್ರವಲ್ಲ ಸಮ್ಮೇಳನ ಎರಡನೇ ದಿನ ನಡೆದರೆ ಪೆಟ್ರೋಲ್‌ ಬಾಂಬ್‌ ಹಾಕುತ್ತೇವೆ ಎಂದು ಬೆದರಿಸಿದರು. ಆದರೂ ಅಧ್ಯಕ್ಷ ಮನು ಬಳಿಗಾರ್‌ ಸುಮ್ಮನಿದ್ದರು. ಇಂದಿನ ಸಮ್ಮೇಳನ ಅಧ್ಯಕ್ಷರಾಗಿರುವ ಎಚ್‌.ಎಸ್‌ ವೆಂಕಟೇಶ ಮೂರ್ತಿಯವರು ಸಹ ಆಗ ದನಿ ಎತ್ತಲಿಲ್ಲ” ಎಂದು ಅಸಮಾನಧಾನ ವ್ಯಕ್ತಪಡಿಸಿದ್ದಾರೆ.

ಸಾಹಿತ್ಯ ಸಮ್ಮೇಳನಕ್ಕೆ ಅನುದಾನ ನೀಡುವ ವಿಚಾರಕ್ಕೆ ಸಚಿವರು ಅನುದಾನ ನಿಮ್ಮಪ್ಪನ ಮನೆಯದ್ದಲ್ಲೆ ಎಂಬ ದರ್ಪದ ಮಾತುಗಳನ್ನಾಡಿದ್ದಾರೆ. ಅನುದಾನ ಜನಸಾಮಾನ್ಯರು ಕಟ್ಟುವ ತೆರಿಗೆಯಿಂದ ಬಂದಿದ್ದು ಎಂಬುದನ್ನು ಅವರು ಮರೆಯಬಾರದು ಎಂದು ತಿರುಗೇಟು ನೀಡಿದ್ದಾರೆ.

ಕೆ.ನೀಲಾ

ಇನ್ನು ನಿನ್ನೆಯ ಸಮ್ಮೇಳನದಲ್ಲಿ ಕಲಬುರಗಿಯ ಮಹಿಳಾ ಹೋರಾಟಗಾರ್ತಿ ಮತ್ತು ಚಿಂತಕಿ ಕೆ.ನೀಲಾ ಮಾತನಾಡಿ “ಕಸಾಪ ಈಗ ಕನ್ನಡಿಗರ ಸಂಸ್ಥೆಯಾಗಿಲ್ಲ ಬದಲಿಗೆ ಆಳುವವರ ಕೊಂಪೆಯಾಗಿದೆ. ಇದಕ್ಕೆ ಕಾರಣಕರ್ತರಾದ ಅಧ್ಯಕ್ಷ ಮನು ಬಳಿಗಾರ್‌ ರಾಜೀನಾಮೆ ನೀಡಬೇಕೆಂದು” ಒತ್ತಾಯಿಸಿದ್ದರು.

ಹಿಂದೆ ಯಾವ ಸಮ್ಮೇಳನದಲ್ಲಿಯೂ ಈ ರೀತಿಯ ಘಟನೆಗಳು ಜರುಗಿದ ಉದಾಹರಣೆಗಳಿಲ್ಲ. ಆದರೆ ಈ ಬಾರಿಯ ಸಮ್ಮೇಳನದಲ್ಲಿ ಸಮ್ಮೇಳನಾಧ್ಯಕ್ಷ ಮತ್ತು ಕಸಾಪ ಅಧ್ಯಕ್ಷರ ವಿರುದ್ಧ ಟೀಕೆಗಳು ಕೇಳಿ ಬಂದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...