Homeಚಳವಳಿಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಎಚ್‌.ಎಸ್‌.ವಿ ಮತ್ತು ಕಸಾಪ ಅಧ್ಯಕ್ಷ ಮನು ಬಳಿಗಾರ್‌ ವಿರುದ್ಧ ಹೆಚ್ಚಿದ...

ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಎಚ್‌.ಎಸ್‌.ವಿ ಮತ್ತು ಕಸಾಪ ಅಧ್ಯಕ್ಷ ಮನು ಬಳಿಗಾರ್‌ ವಿರುದ್ಧ ಹೆಚ್ಚಿದ ಆಕ್ರೋಶ..

ಹಿಂದೆ ಯಾವ ಸಮ್ಮೇಳನದಲ್ಲಿಯೂ ಈ ರೀತಿಯ ಘಟನೆಗಳು ಜರುಗಿದ ಉದಾಹರಣೆಗಳಿಲ್ಲ. ಆದರೆ ಈ ಬಾರಿಯ ಸಮ್ಮೇಳನದಲ್ಲಿ ಸಮ್ಮೇಳನಾಧ್ಯಕ್ಷ ಮತ್ತು ಕಸಾಪ ಅಧ್ಯಕ್ಷರ ವಿರುದ್ಧ ಟೀಕೆಗಳು ಕೇಳಿ ಬಂದಿವೆ.

- Advertisement -
- Advertisement -

ಕಲಬುರಗಿಯಲ್ಲಿ ನಿನ್ನೆಯಿಂದ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆರಂಭಗೊಂಡಿದೆ. ಸಾವಿರಾರು ಕನ್ನಡಾಭಿಮಾನಿಗಳು, ಸಾಹಿತ್ಯಾಸಕ್ತರು, ಜನಸಾಮಾನ್ಯರು ಅತಿ ಉತ್ಸಾಹದಿಂದ ಸಮ್ಮೇಳನದಲ್ಲಿ ಭಾಗವಹಿಸುತ್ತಿದ್ದಾರೆ. ಆದರೆ ಇದೇ ಸಂದರ್ಭದಲ್ಲಿ ಸಮ್ಮೇಳನಾಧ್ಯಕ್ಷ ಎಚ್‌.ಎಸ್‌. ವೆಂಕಟೇಶ ಮೂರ್ತಿ ಮತ್ತು ಕಸಾಪ ಅಧ್ಯಕ್ಷ ಮನು ಬಳಿಗಾರ್‌ ವಿರುದ್ಧ ಅಪಸ್ವರ ಕೇಳಿಬಂದಿದೆ.

ಎಚ್‌. ಎಸ್‌ ವೆಂಕಟೇಶ ಮೂರ್ತಿ

ಮೊದಲಿಗೆ ಸರ್ವಾಧ್ಯಕ್ಷರ ನುಡಿಗಳನ್ನಾಡಿದ ಎಚ್‌.ಎಸ್‌. ವೆಂಕಟೇಶ ಮೂರ್ತಿಯವರು “ಒಕ್ಕೂಟ ವ್ಯವಸ್ಥೆಗೆ ಸಂಸ್ಕೃತ ಇಲ್ಲವೇ ಪ್ರಕೃತ ಭಾಷೆ ಅಗತ್ಯವಾಗಿದೆ. ಸಂಸ್ಕೃತಿ ರಾಷ್ಟ್ರಭಾಷೆಯಾಗಲಿ, ಭಾರತದ ಎಲ್ಲಾ ಭಾಷೆಗಳೂ ನಮ್ಮ ಮಾತೃಭಾಷೆಗಳೇ” ಎಂಬ ಭಾಷಣಕ್ಕೆ ಬಹಳಷ್ಟು ಜನ ಸಾಮಾಜಿಕ ಜಾಲತಾಣಗಳಲ್ಲಿ ವಿರೋಧ ವ್ಯಕ್ತಪಡಿಸಿದ್ದಾರೆ.

“ಹಿಂದೊಮ್ಮೆ ಶಿಕ್ಷಣದಲ್ಲಿ ಸಂಸ್ಕೃತದ ಹೇರಿಕೆಯನ್ನು ಇಡೀ ಕನ್ನಡ ನಾಡು ಅಣ್ಣಾವ್ರ ನೇತೃತ್ವದಲ್ಲಿ ವೀರೋಧಿಸಿ ತನ್ನ ಒಗ್ಗಟ್ಟು ತೋರಿಸಿತ್ತು.

ಈಗ ಸಂಸ್ಕೃತವನ್ನ ದೇಶದ ಸಂಪರ್ಕ ಭಾಷೆಯಾಗಿ ಅಭಿವೃದ್ಧಿಪಡಿಸಬೇಕು ಎನ್ನುವ ತಮ್ಮ ಮಾತನ್ನ ಸಮ್ಮೇಳನಾಧ್ಯಕ್ಷರು ಹಿಂದೆ ಪಡೆಯಬೇಕು. ಹೀಗೆ ಮಾತಾಡುವುದು ಕುವೆಂಪು, ಶಂಬಾ, ರಾಜ್ ಕುಮಾರ್ ಮುಂತಾದ ಹಿರಿಯ ಕನ್ನಡ ಮನಸ್ಸುಗಳನ್ನ ಅಪಮಾನ ಮಾಡಿದಂತೆ ಎಂದು ಕನ್ನಡಿಗರು ಭಾವಿಸಬೇಕು.

ಸನ್ಮಾನ್ಯ ಮುಖ್ಯಮಂತ್ರಿ ಯಡಿಯೂರಪ್ಪನವರೇ, ಹಿಂದೆ ಗೋಕಾಕ್ ಚಳುವಳಿ ಕಾರಣವಾಗಿ, ಗುಂಡೂರಾಯರು ಅಧಿಕಾರ ಕಳೆದುಕೊಂಡರು. ಈಗ ಕನ್ನಡದ ಅಗ್ರಮಾನ್ಯತೆಯನ್ನ ಎತ್ತಿ ಹಿಡಿಯುವ ಸರದಿ ನಿಮ್ಮದು. ಸಮ್ಮೇಳನಾಧ್ಯಕ್ಷರ ಹೇಳಿಕೆಯನ್ನ ವಿರೋಧಿಸಿ ನಿಮ್ಮ ಕನ್ನಡತನವನ್ನ ಮೆರೆಯಿರಿ” ಎಂದು ಕವಿ ಚಿದಂಬರ ನರೇಂದ್ರರವರು ಒತ್ತಾಯಿಸಿದ್ದಾರೆ.

ಮನು ಬಳಿಗಾರ್‌

ಸಂಸ್ಕೃತ ಕೇಳಿದರೆನೆ ಕರ್ಣದಲ್ಲಿ ಕಾದ ಸೀಸ ಉಯ್ದ ಸಂಗತಿಗಳು ಇರುವಾಗ ಅದೇಗೆ ರಾಷ್ಟ್ರಭಾಷೆಯಾಗಬೇಕೆಂದು ಪ್ರತಿಪಾದಿಸುತ್ತಿದ್ದಾರೊ ತಿಳಿಯದೊ? ಎಂದು ಈಹತಾ ಎಂಬುವವರು ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.

ಎಚ್ ಎಸ್ ವೆಂಕಟೇಶ ಮೂರ್ತಿಯವರು ಸಂಸ್ಕೃತ ಸಾಹಿತ್ಯ ಸಮ್ಮೇಳನ ಅಂತ ಏನಾದರೂ ಇದ್ರೆ, ಅವರು ಅದರ ಅಧ್ಯಕ್ಷತೆ ವಹಿಸಲಿ, ಅಲ್ಲಿ ಏನಾದರೂ ಹೇಳಲಿ! ಅವರ ಹೇಳಿಕೆಗೆ ನಮ್ಮ‌ ಸಮ್ಮೇಳನ ವೇದಿಕೆಯಲ್ಲ! ಎಂದು ವಿನಯ ಎಂಬುವವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮನು ಬಳಿಗಾರ್‌ ರಾಜೀನಾಮೆಗೆ ವೇದಿಕೆಯಲ್ಲಿ ಹೆಚ್ಚಿದ ಒತ್ತಡ!

ಇನ್ನು ಕಸಾಪ ಅಧ್ಯಕ್ಷ ಮನು ಬಳಿಗಾರ್‌ ರಾಜೀನಾಮೆ ನೀಡಬೇಕೆಂಬ ಆಗ್ರಹ ಸಾಹಿತ್ಯ ಸಮ್ಮೇಳನದ ವೇದಿಕೆಯಿಂದಲೇ ಹೆಚ್ಚಾಗುತ್ತಿದೆ. ಚಿಂತಕಿ ಕೆ.ನೀಲಾ ಮತ್ತು ಹಿರಿಯ ಸಾಹಿತಿ, ಬರಹಗಾರ ಆರ್‌.ಕೆ ಹುಡಗಿ ಮನು ಬಳಿಗಾರ್‌ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಲು ಅರ್ಹರಲ್ಲ, ಅವರು ರಾಜೀನಾಮೆ ನಿಡಬೇಕೆಂದು ಒತ್ತಾಯಿಸಿದ್ದಾರೆ.

ಇಂದು ಕಲಬುರಗಿ ಜಿಲ್ಲಾ ದರ್ಶನ ಗೋಷ್ಠಿಯ ಅಧ್ಯಕ್ಷೀಯ ನುಡಿಗಳನ್ನಾಡಿದ ಆರ್‌.ಕೆ ಹುಡಗಿಯವರು “ಕಸಾಪ ಒಂದು ಸ್ವಾಯುತ್ತ ಸಂಸ್ಥೆಯಾಗಿದೆ. ಇಂತಹ ಸಂದರ್ಭದಲ್ಲಿ ಚಿಕ್ಕಮಗಳೂರಿನಲ್ಲಿ ನಡೆದ ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕೆ ಆಳುವ ಸರ್ಕಾರ ಮಿತಿಮೀರಿ ಮಧ್ಯ ಪ್ರವೇಶ ಮಾಡಿತ್ತು. ಕನ್ನಡ ಸಂಸ್ಕೃತಿ ಸಚಿವರೆ ಅನುದಾನ ನೀಡದೇ ಸತಾಯಿಸಿದರು ಮಾತ್ರವಲ್ಲ ಸಮ್ಮೇಳನ ಎರಡನೇ ದಿನ ನಡೆದರೆ ಪೆಟ್ರೋಲ್‌ ಬಾಂಬ್‌ ಹಾಕುತ್ತೇವೆ ಎಂದು ಬೆದರಿಸಿದರು. ಆದರೂ ಅಧ್ಯಕ್ಷ ಮನು ಬಳಿಗಾರ್‌ ಸುಮ್ಮನಿದ್ದರು. ಇಂದಿನ ಸಮ್ಮೇಳನ ಅಧ್ಯಕ್ಷರಾಗಿರುವ ಎಚ್‌.ಎಸ್‌ ವೆಂಕಟೇಶ ಮೂರ್ತಿಯವರು ಸಹ ಆಗ ದನಿ ಎತ್ತಲಿಲ್ಲ” ಎಂದು ಅಸಮಾನಧಾನ ವ್ಯಕ್ತಪಡಿಸಿದ್ದಾರೆ.

ಸಾಹಿತ್ಯ ಸಮ್ಮೇಳನಕ್ಕೆ ಅನುದಾನ ನೀಡುವ ವಿಚಾರಕ್ಕೆ ಸಚಿವರು ಅನುದಾನ ನಿಮ್ಮಪ್ಪನ ಮನೆಯದ್ದಲ್ಲೆ ಎಂಬ ದರ್ಪದ ಮಾತುಗಳನ್ನಾಡಿದ್ದಾರೆ. ಅನುದಾನ ಜನಸಾಮಾನ್ಯರು ಕಟ್ಟುವ ತೆರಿಗೆಯಿಂದ ಬಂದಿದ್ದು ಎಂಬುದನ್ನು ಅವರು ಮರೆಯಬಾರದು ಎಂದು ತಿರುಗೇಟು ನೀಡಿದ್ದಾರೆ.

ಕೆ.ನೀಲಾ

ಇನ್ನು ನಿನ್ನೆಯ ಸಮ್ಮೇಳನದಲ್ಲಿ ಕಲಬುರಗಿಯ ಮಹಿಳಾ ಹೋರಾಟಗಾರ್ತಿ ಮತ್ತು ಚಿಂತಕಿ ಕೆ.ನೀಲಾ ಮಾತನಾಡಿ “ಕಸಾಪ ಈಗ ಕನ್ನಡಿಗರ ಸಂಸ್ಥೆಯಾಗಿಲ್ಲ ಬದಲಿಗೆ ಆಳುವವರ ಕೊಂಪೆಯಾಗಿದೆ. ಇದಕ್ಕೆ ಕಾರಣಕರ್ತರಾದ ಅಧ್ಯಕ್ಷ ಮನು ಬಳಿಗಾರ್‌ ರಾಜೀನಾಮೆ ನೀಡಬೇಕೆಂದು” ಒತ್ತಾಯಿಸಿದ್ದರು.

ಹಿಂದೆ ಯಾವ ಸಮ್ಮೇಳನದಲ್ಲಿಯೂ ಈ ರೀತಿಯ ಘಟನೆಗಳು ಜರುಗಿದ ಉದಾಹರಣೆಗಳಿಲ್ಲ. ಆದರೆ ಈ ಬಾರಿಯ ಸಮ್ಮೇಳನದಲ್ಲಿ ಸಮ್ಮೇಳನಾಧ್ಯಕ್ಷ ಮತ್ತು ಕಸಾಪ ಅಧ್ಯಕ್ಷರ ವಿರುದ್ಧ ಟೀಕೆಗಳು ಕೇಳಿ ಬಂದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...