Homeಚಳವಳಿಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಎಚ್‌.ಎಸ್‌.ವಿ ಮತ್ತು ಕಸಾಪ ಅಧ್ಯಕ್ಷ ಮನು ಬಳಿಗಾರ್‌ ವಿರುದ್ಧ ಹೆಚ್ಚಿದ...

ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಎಚ್‌.ಎಸ್‌.ವಿ ಮತ್ತು ಕಸಾಪ ಅಧ್ಯಕ್ಷ ಮನು ಬಳಿಗಾರ್‌ ವಿರುದ್ಧ ಹೆಚ್ಚಿದ ಆಕ್ರೋಶ..

ಹಿಂದೆ ಯಾವ ಸಮ್ಮೇಳನದಲ್ಲಿಯೂ ಈ ರೀತಿಯ ಘಟನೆಗಳು ಜರುಗಿದ ಉದಾಹರಣೆಗಳಿಲ್ಲ. ಆದರೆ ಈ ಬಾರಿಯ ಸಮ್ಮೇಳನದಲ್ಲಿ ಸಮ್ಮೇಳನಾಧ್ಯಕ್ಷ ಮತ್ತು ಕಸಾಪ ಅಧ್ಯಕ್ಷರ ವಿರುದ್ಧ ಟೀಕೆಗಳು ಕೇಳಿ ಬಂದಿವೆ.

- Advertisement -
- Advertisement -

ಕಲಬುರಗಿಯಲ್ಲಿ ನಿನ್ನೆಯಿಂದ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆರಂಭಗೊಂಡಿದೆ. ಸಾವಿರಾರು ಕನ್ನಡಾಭಿಮಾನಿಗಳು, ಸಾಹಿತ್ಯಾಸಕ್ತರು, ಜನಸಾಮಾನ್ಯರು ಅತಿ ಉತ್ಸಾಹದಿಂದ ಸಮ್ಮೇಳನದಲ್ಲಿ ಭಾಗವಹಿಸುತ್ತಿದ್ದಾರೆ. ಆದರೆ ಇದೇ ಸಂದರ್ಭದಲ್ಲಿ ಸಮ್ಮೇಳನಾಧ್ಯಕ್ಷ ಎಚ್‌.ಎಸ್‌. ವೆಂಕಟೇಶ ಮೂರ್ತಿ ಮತ್ತು ಕಸಾಪ ಅಧ್ಯಕ್ಷ ಮನು ಬಳಿಗಾರ್‌ ವಿರುದ್ಧ ಅಪಸ್ವರ ಕೇಳಿಬಂದಿದೆ.

ಎಚ್‌. ಎಸ್‌ ವೆಂಕಟೇಶ ಮೂರ್ತಿ

ಮೊದಲಿಗೆ ಸರ್ವಾಧ್ಯಕ್ಷರ ನುಡಿಗಳನ್ನಾಡಿದ ಎಚ್‌.ಎಸ್‌. ವೆಂಕಟೇಶ ಮೂರ್ತಿಯವರು “ಒಕ್ಕೂಟ ವ್ಯವಸ್ಥೆಗೆ ಸಂಸ್ಕೃತ ಇಲ್ಲವೇ ಪ್ರಕೃತ ಭಾಷೆ ಅಗತ್ಯವಾಗಿದೆ. ಸಂಸ್ಕೃತಿ ರಾಷ್ಟ್ರಭಾಷೆಯಾಗಲಿ, ಭಾರತದ ಎಲ್ಲಾ ಭಾಷೆಗಳೂ ನಮ್ಮ ಮಾತೃಭಾಷೆಗಳೇ” ಎಂಬ ಭಾಷಣಕ್ಕೆ ಬಹಳಷ್ಟು ಜನ ಸಾಮಾಜಿಕ ಜಾಲತಾಣಗಳಲ್ಲಿ ವಿರೋಧ ವ್ಯಕ್ತಪಡಿಸಿದ್ದಾರೆ.

“ಹಿಂದೊಮ್ಮೆ ಶಿಕ್ಷಣದಲ್ಲಿ ಸಂಸ್ಕೃತದ ಹೇರಿಕೆಯನ್ನು ಇಡೀ ಕನ್ನಡ ನಾಡು ಅಣ್ಣಾವ್ರ ನೇತೃತ್ವದಲ್ಲಿ ವೀರೋಧಿಸಿ ತನ್ನ ಒಗ್ಗಟ್ಟು ತೋರಿಸಿತ್ತು.

ಈಗ ಸಂಸ್ಕೃತವನ್ನ ದೇಶದ ಸಂಪರ್ಕ ಭಾಷೆಯಾಗಿ ಅಭಿವೃದ್ಧಿಪಡಿಸಬೇಕು ಎನ್ನುವ ತಮ್ಮ ಮಾತನ್ನ ಸಮ್ಮೇಳನಾಧ್ಯಕ್ಷರು ಹಿಂದೆ ಪಡೆಯಬೇಕು. ಹೀಗೆ ಮಾತಾಡುವುದು ಕುವೆಂಪು, ಶಂಬಾ, ರಾಜ್ ಕುಮಾರ್ ಮುಂತಾದ ಹಿರಿಯ ಕನ್ನಡ ಮನಸ್ಸುಗಳನ್ನ ಅಪಮಾನ ಮಾಡಿದಂತೆ ಎಂದು ಕನ್ನಡಿಗರು ಭಾವಿಸಬೇಕು.

ಸನ್ಮಾನ್ಯ ಮುಖ್ಯಮಂತ್ರಿ ಯಡಿಯೂರಪ್ಪನವರೇ, ಹಿಂದೆ ಗೋಕಾಕ್ ಚಳುವಳಿ ಕಾರಣವಾಗಿ, ಗುಂಡೂರಾಯರು ಅಧಿಕಾರ ಕಳೆದುಕೊಂಡರು. ಈಗ ಕನ್ನಡದ ಅಗ್ರಮಾನ್ಯತೆಯನ್ನ ಎತ್ತಿ ಹಿಡಿಯುವ ಸರದಿ ನಿಮ್ಮದು. ಸಮ್ಮೇಳನಾಧ್ಯಕ್ಷರ ಹೇಳಿಕೆಯನ್ನ ವಿರೋಧಿಸಿ ನಿಮ್ಮ ಕನ್ನಡತನವನ್ನ ಮೆರೆಯಿರಿ” ಎಂದು ಕವಿ ಚಿದಂಬರ ನರೇಂದ್ರರವರು ಒತ್ತಾಯಿಸಿದ್ದಾರೆ.

ಮನು ಬಳಿಗಾರ್‌

ಸಂಸ್ಕೃತ ಕೇಳಿದರೆನೆ ಕರ್ಣದಲ್ಲಿ ಕಾದ ಸೀಸ ಉಯ್ದ ಸಂಗತಿಗಳು ಇರುವಾಗ ಅದೇಗೆ ರಾಷ್ಟ್ರಭಾಷೆಯಾಗಬೇಕೆಂದು ಪ್ರತಿಪಾದಿಸುತ್ತಿದ್ದಾರೊ ತಿಳಿಯದೊ? ಎಂದು ಈಹತಾ ಎಂಬುವವರು ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.

ಎಚ್ ಎಸ್ ವೆಂಕಟೇಶ ಮೂರ್ತಿಯವರು ಸಂಸ್ಕೃತ ಸಾಹಿತ್ಯ ಸಮ್ಮೇಳನ ಅಂತ ಏನಾದರೂ ಇದ್ರೆ, ಅವರು ಅದರ ಅಧ್ಯಕ್ಷತೆ ವಹಿಸಲಿ, ಅಲ್ಲಿ ಏನಾದರೂ ಹೇಳಲಿ! ಅವರ ಹೇಳಿಕೆಗೆ ನಮ್ಮ‌ ಸಮ್ಮೇಳನ ವೇದಿಕೆಯಲ್ಲ! ಎಂದು ವಿನಯ ಎಂಬುವವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮನು ಬಳಿಗಾರ್‌ ರಾಜೀನಾಮೆಗೆ ವೇದಿಕೆಯಲ್ಲಿ ಹೆಚ್ಚಿದ ಒತ್ತಡ!

ಇನ್ನು ಕಸಾಪ ಅಧ್ಯಕ್ಷ ಮನು ಬಳಿಗಾರ್‌ ರಾಜೀನಾಮೆ ನೀಡಬೇಕೆಂಬ ಆಗ್ರಹ ಸಾಹಿತ್ಯ ಸಮ್ಮೇಳನದ ವೇದಿಕೆಯಿಂದಲೇ ಹೆಚ್ಚಾಗುತ್ತಿದೆ. ಚಿಂತಕಿ ಕೆ.ನೀಲಾ ಮತ್ತು ಹಿರಿಯ ಸಾಹಿತಿ, ಬರಹಗಾರ ಆರ್‌.ಕೆ ಹುಡಗಿ ಮನು ಬಳಿಗಾರ್‌ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಲು ಅರ್ಹರಲ್ಲ, ಅವರು ರಾಜೀನಾಮೆ ನಿಡಬೇಕೆಂದು ಒತ್ತಾಯಿಸಿದ್ದಾರೆ.

ಇಂದು ಕಲಬುರಗಿ ಜಿಲ್ಲಾ ದರ್ಶನ ಗೋಷ್ಠಿಯ ಅಧ್ಯಕ್ಷೀಯ ನುಡಿಗಳನ್ನಾಡಿದ ಆರ್‌.ಕೆ ಹುಡಗಿಯವರು “ಕಸಾಪ ಒಂದು ಸ್ವಾಯುತ್ತ ಸಂಸ್ಥೆಯಾಗಿದೆ. ಇಂತಹ ಸಂದರ್ಭದಲ್ಲಿ ಚಿಕ್ಕಮಗಳೂರಿನಲ್ಲಿ ನಡೆದ ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕೆ ಆಳುವ ಸರ್ಕಾರ ಮಿತಿಮೀರಿ ಮಧ್ಯ ಪ್ರವೇಶ ಮಾಡಿತ್ತು. ಕನ್ನಡ ಸಂಸ್ಕೃತಿ ಸಚಿವರೆ ಅನುದಾನ ನೀಡದೇ ಸತಾಯಿಸಿದರು ಮಾತ್ರವಲ್ಲ ಸಮ್ಮೇಳನ ಎರಡನೇ ದಿನ ನಡೆದರೆ ಪೆಟ್ರೋಲ್‌ ಬಾಂಬ್‌ ಹಾಕುತ್ತೇವೆ ಎಂದು ಬೆದರಿಸಿದರು. ಆದರೂ ಅಧ್ಯಕ್ಷ ಮನು ಬಳಿಗಾರ್‌ ಸುಮ್ಮನಿದ್ದರು. ಇಂದಿನ ಸಮ್ಮೇಳನ ಅಧ್ಯಕ್ಷರಾಗಿರುವ ಎಚ್‌.ಎಸ್‌ ವೆಂಕಟೇಶ ಮೂರ್ತಿಯವರು ಸಹ ಆಗ ದನಿ ಎತ್ತಲಿಲ್ಲ” ಎಂದು ಅಸಮಾನಧಾನ ವ್ಯಕ್ತಪಡಿಸಿದ್ದಾರೆ.

ಸಾಹಿತ್ಯ ಸಮ್ಮೇಳನಕ್ಕೆ ಅನುದಾನ ನೀಡುವ ವಿಚಾರಕ್ಕೆ ಸಚಿವರು ಅನುದಾನ ನಿಮ್ಮಪ್ಪನ ಮನೆಯದ್ದಲ್ಲೆ ಎಂಬ ದರ್ಪದ ಮಾತುಗಳನ್ನಾಡಿದ್ದಾರೆ. ಅನುದಾನ ಜನಸಾಮಾನ್ಯರು ಕಟ್ಟುವ ತೆರಿಗೆಯಿಂದ ಬಂದಿದ್ದು ಎಂಬುದನ್ನು ಅವರು ಮರೆಯಬಾರದು ಎಂದು ತಿರುಗೇಟು ನೀಡಿದ್ದಾರೆ.

ಕೆ.ನೀಲಾ

ಇನ್ನು ನಿನ್ನೆಯ ಸಮ್ಮೇಳನದಲ್ಲಿ ಕಲಬುರಗಿಯ ಮಹಿಳಾ ಹೋರಾಟಗಾರ್ತಿ ಮತ್ತು ಚಿಂತಕಿ ಕೆ.ನೀಲಾ ಮಾತನಾಡಿ “ಕಸಾಪ ಈಗ ಕನ್ನಡಿಗರ ಸಂಸ್ಥೆಯಾಗಿಲ್ಲ ಬದಲಿಗೆ ಆಳುವವರ ಕೊಂಪೆಯಾಗಿದೆ. ಇದಕ್ಕೆ ಕಾರಣಕರ್ತರಾದ ಅಧ್ಯಕ್ಷ ಮನು ಬಳಿಗಾರ್‌ ರಾಜೀನಾಮೆ ನೀಡಬೇಕೆಂದು” ಒತ್ತಾಯಿಸಿದ್ದರು.

ಹಿಂದೆ ಯಾವ ಸಮ್ಮೇಳನದಲ್ಲಿಯೂ ಈ ರೀತಿಯ ಘಟನೆಗಳು ಜರುಗಿದ ಉದಾಹರಣೆಗಳಿಲ್ಲ. ಆದರೆ ಈ ಬಾರಿಯ ಸಮ್ಮೇಳನದಲ್ಲಿ ಸಮ್ಮೇಳನಾಧ್ಯಕ್ಷ ಮತ್ತು ಕಸಾಪ ಅಧ್ಯಕ್ಷರ ವಿರುದ್ಧ ಟೀಕೆಗಳು ಕೇಳಿ ಬಂದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...