Homeಚಳವಳಿಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಎಚ್‌.ಎಸ್‌.ವಿ ಮತ್ತು ಕಸಾಪ ಅಧ್ಯಕ್ಷ ಮನು ಬಳಿಗಾರ್‌ ವಿರುದ್ಧ ಹೆಚ್ಚಿದ...

ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಎಚ್‌.ಎಸ್‌.ವಿ ಮತ್ತು ಕಸಾಪ ಅಧ್ಯಕ್ಷ ಮನು ಬಳಿಗಾರ್‌ ವಿರುದ್ಧ ಹೆಚ್ಚಿದ ಆಕ್ರೋಶ..

ಹಿಂದೆ ಯಾವ ಸಮ್ಮೇಳನದಲ್ಲಿಯೂ ಈ ರೀತಿಯ ಘಟನೆಗಳು ಜರುಗಿದ ಉದಾಹರಣೆಗಳಿಲ್ಲ. ಆದರೆ ಈ ಬಾರಿಯ ಸಮ್ಮೇಳನದಲ್ಲಿ ಸಮ್ಮೇಳನಾಧ್ಯಕ್ಷ ಮತ್ತು ಕಸಾಪ ಅಧ್ಯಕ್ಷರ ವಿರುದ್ಧ ಟೀಕೆಗಳು ಕೇಳಿ ಬಂದಿವೆ.

- Advertisement -
- Advertisement -

ಕಲಬುರಗಿಯಲ್ಲಿ ನಿನ್ನೆಯಿಂದ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆರಂಭಗೊಂಡಿದೆ. ಸಾವಿರಾರು ಕನ್ನಡಾಭಿಮಾನಿಗಳು, ಸಾಹಿತ್ಯಾಸಕ್ತರು, ಜನಸಾಮಾನ್ಯರು ಅತಿ ಉತ್ಸಾಹದಿಂದ ಸಮ್ಮೇಳನದಲ್ಲಿ ಭಾಗವಹಿಸುತ್ತಿದ್ದಾರೆ. ಆದರೆ ಇದೇ ಸಂದರ್ಭದಲ್ಲಿ ಸಮ್ಮೇಳನಾಧ್ಯಕ್ಷ ಎಚ್‌.ಎಸ್‌. ವೆಂಕಟೇಶ ಮೂರ್ತಿ ಮತ್ತು ಕಸಾಪ ಅಧ್ಯಕ್ಷ ಮನು ಬಳಿಗಾರ್‌ ವಿರುದ್ಧ ಅಪಸ್ವರ ಕೇಳಿಬಂದಿದೆ.

ಎಚ್‌. ಎಸ್‌ ವೆಂಕಟೇಶ ಮೂರ್ತಿ

ಮೊದಲಿಗೆ ಸರ್ವಾಧ್ಯಕ್ಷರ ನುಡಿಗಳನ್ನಾಡಿದ ಎಚ್‌.ಎಸ್‌. ವೆಂಕಟೇಶ ಮೂರ್ತಿಯವರು “ಒಕ್ಕೂಟ ವ್ಯವಸ್ಥೆಗೆ ಸಂಸ್ಕೃತ ಇಲ್ಲವೇ ಪ್ರಕೃತ ಭಾಷೆ ಅಗತ್ಯವಾಗಿದೆ. ಸಂಸ್ಕೃತಿ ರಾಷ್ಟ್ರಭಾಷೆಯಾಗಲಿ, ಭಾರತದ ಎಲ್ಲಾ ಭಾಷೆಗಳೂ ನಮ್ಮ ಮಾತೃಭಾಷೆಗಳೇ” ಎಂಬ ಭಾಷಣಕ್ಕೆ ಬಹಳಷ್ಟು ಜನ ಸಾಮಾಜಿಕ ಜಾಲತಾಣಗಳಲ್ಲಿ ವಿರೋಧ ವ್ಯಕ್ತಪಡಿಸಿದ್ದಾರೆ.

“ಹಿಂದೊಮ್ಮೆ ಶಿಕ್ಷಣದಲ್ಲಿ ಸಂಸ್ಕೃತದ ಹೇರಿಕೆಯನ್ನು ಇಡೀ ಕನ್ನಡ ನಾಡು ಅಣ್ಣಾವ್ರ ನೇತೃತ್ವದಲ್ಲಿ ವೀರೋಧಿಸಿ ತನ್ನ ಒಗ್ಗಟ್ಟು ತೋರಿಸಿತ್ತು.

ಈಗ ಸಂಸ್ಕೃತವನ್ನ ದೇಶದ ಸಂಪರ್ಕ ಭಾಷೆಯಾಗಿ ಅಭಿವೃದ್ಧಿಪಡಿಸಬೇಕು ಎನ್ನುವ ತಮ್ಮ ಮಾತನ್ನ ಸಮ್ಮೇಳನಾಧ್ಯಕ್ಷರು ಹಿಂದೆ ಪಡೆಯಬೇಕು. ಹೀಗೆ ಮಾತಾಡುವುದು ಕುವೆಂಪು, ಶಂಬಾ, ರಾಜ್ ಕುಮಾರ್ ಮುಂತಾದ ಹಿರಿಯ ಕನ್ನಡ ಮನಸ್ಸುಗಳನ್ನ ಅಪಮಾನ ಮಾಡಿದಂತೆ ಎಂದು ಕನ್ನಡಿಗರು ಭಾವಿಸಬೇಕು.

ಸನ್ಮಾನ್ಯ ಮುಖ್ಯಮಂತ್ರಿ ಯಡಿಯೂರಪ್ಪನವರೇ, ಹಿಂದೆ ಗೋಕಾಕ್ ಚಳುವಳಿ ಕಾರಣವಾಗಿ, ಗುಂಡೂರಾಯರು ಅಧಿಕಾರ ಕಳೆದುಕೊಂಡರು. ಈಗ ಕನ್ನಡದ ಅಗ್ರಮಾನ್ಯತೆಯನ್ನ ಎತ್ತಿ ಹಿಡಿಯುವ ಸರದಿ ನಿಮ್ಮದು. ಸಮ್ಮೇಳನಾಧ್ಯಕ್ಷರ ಹೇಳಿಕೆಯನ್ನ ವಿರೋಧಿಸಿ ನಿಮ್ಮ ಕನ್ನಡತನವನ್ನ ಮೆರೆಯಿರಿ” ಎಂದು ಕವಿ ಚಿದಂಬರ ನರೇಂದ್ರರವರು ಒತ್ತಾಯಿಸಿದ್ದಾರೆ.

ಮನು ಬಳಿಗಾರ್‌

ಸಂಸ್ಕೃತ ಕೇಳಿದರೆನೆ ಕರ್ಣದಲ್ಲಿ ಕಾದ ಸೀಸ ಉಯ್ದ ಸಂಗತಿಗಳು ಇರುವಾಗ ಅದೇಗೆ ರಾಷ್ಟ್ರಭಾಷೆಯಾಗಬೇಕೆಂದು ಪ್ರತಿಪಾದಿಸುತ್ತಿದ್ದಾರೊ ತಿಳಿಯದೊ? ಎಂದು ಈಹತಾ ಎಂಬುವವರು ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.

ಎಚ್ ಎಸ್ ವೆಂಕಟೇಶ ಮೂರ್ತಿಯವರು ಸಂಸ್ಕೃತ ಸಾಹಿತ್ಯ ಸಮ್ಮೇಳನ ಅಂತ ಏನಾದರೂ ಇದ್ರೆ, ಅವರು ಅದರ ಅಧ್ಯಕ್ಷತೆ ವಹಿಸಲಿ, ಅಲ್ಲಿ ಏನಾದರೂ ಹೇಳಲಿ! ಅವರ ಹೇಳಿಕೆಗೆ ನಮ್ಮ‌ ಸಮ್ಮೇಳನ ವೇದಿಕೆಯಲ್ಲ! ಎಂದು ವಿನಯ ಎಂಬುವವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮನು ಬಳಿಗಾರ್‌ ರಾಜೀನಾಮೆಗೆ ವೇದಿಕೆಯಲ್ಲಿ ಹೆಚ್ಚಿದ ಒತ್ತಡ!

ಇನ್ನು ಕಸಾಪ ಅಧ್ಯಕ್ಷ ಮನು ಬಳಿಗಾರ್‌ ರಾಜೀನಾಮೆ ನೀಡಬೇಕೆಂಬ ಆಗ್ರಹ ಸಾಹಿತ್ಯ ಸಮ್ಮೇಳನದ ವೇದಿಕೆಯಿಂದಲೇ ಹೆಚ್ಚಾಗುತ್ತಿದೆ. ಚಿಂತಕಿ ಕೆ.ನೀಲಾ ಮತ್ತು ಹಿರಿಯ ಸಾಹಿತಿ, ಬರಹಗಾರ ಆರ್‌.ಕೆ ಹುಡಗಿ ಮನು ಬಳಿಗಾರ್‌ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಲು ಅರ್ಹರಲ್ಲ, ಅವರು ರಾಜೀನಾಮೆ ನಿಡಬೇಕೆಂದು ಒತ್ತಾಯಿಸಿದ್ದಾರೆ.

ಇಂದು ಕಲಬುರಗಿ ಜಿಲ್ಲಾ ದರ್ಶನ ಗೋಷ್ಠಿಯ ಅಧ್ಯಕ್ಷೀಯ ನುಡಿಗಳನ್ನಾಡಿದ ಆರ್‌.ಕೆ ಹುಡಗಿಯವರು “ಕಸಾಪ ಒಂದು ಸ್ವಾಯುತ್ತ ಸಂಸ್ಥೆಯಾಗಿದೆ. ಇಂತಹ ಸಂದರ್ಭದಲ್ಲಿ ಚಿಕ್ಕಮಗಳೂರಿನಲ್ಲಿ ನಡೆದ ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕೆ ಆಳುವ ಸರ್ಕಾರ ಮಿತಿಮೀರಿ ಮಧ್ಯ ಪ್ರವೇಶ ಮಾಡಿತ್ತು. ಕನ್ನಡ ಸಂಸ್ಕೃತಿ ಸಚಿವರೆ ಅನುದಾನ ನೀಡದೇ ಸತಾಯಿಸಿದರು ಮಾತ್ರವಲ್ಲ ಸಮ್ಮೇಳನ ಎರಡನೇ ದಿನ ನಡೆದರೆ ಪೆಟ್ರೋಲ್‌ ಬಾಂಬ್‌ ಹಾಕುತ್ತೇವೆ ಎಂದು ಬೆದರಿಸಿದರು. ಆದರೂ ಅಧ್ಯಕ್ಷ ಮನು ಬಳಿಗಾರ್‌ ಸುಮ್ಮನಿದ್ದರು. ಇಂದಿನ ಸಮ್ಮೇಳನ ಅಧ್ಯಕ್ಷರಾಗಿರುವ ಎಚ್‌.ಎಸ್‌ ವೆಂಕಟೇಶ ಮೂರ್ತಿಯವರು ಸಹ ಆಗ ದನಿ ಎತ್ತಲಿಲ್ಲ” ಎಂದು ಅಸಮಾನಧಾನ ವ್ಯಕ್ತಪಡಿಸಿದ್ದಾರೆ.

ಸಾಹಿತ್ಯ ಸಮ್ಮೇಳನಕ್ಕೆ ಅನುದಾನ ನೀಡುವ ವಿಚಾರಕ್ಕೆ ಸಚಿವರು ಅನುದಾನ ನಿಮ್ಮಪ್ಪನ ಮನೆಯದ್ದಲ್ಲೆ ಎಂಬ ದರ್ಪದ ಮಾತುಗಳನ್ನಾಡಿದ್ದಾರೆ. ಅನುದಾನ ಜನಸಾಮಾನ್ಯರು ಕಟ್ಟುವ ತೆರಿಗೆಯಿಂದ ಬಂದಿದ್ದು ಎಂಬುದನ್ನು ಅವರು ಮರೆಯಬಾರದು ಎಂದು ತಿರುಗೇಟು ನೀಡಿದ್ದಾರೆ.

ಕೆ.ನೀಲಾ

ಇನ್ನು ನಿನ್ನೆಯ ಸಮ್ಮೇಳನದಲ್ಲಿ ಕಲಬುರಗಿಯ ಮಹಿಳಾ ಹೋರಾಟಗಾರ್ತಿ ಮತ್ತು ಚಿಂತಕಿ ಕೆ.ನೀಲಾ ಮಾತನಾಡಿ “ಕಸಾಪ ಈಗ ಕನ್ನಡಿಗರ ಸಂಸ್ಥೆಯಾಗಿಲ್ಲ ಬದಲಿಗೆ ಆಳುವವರ ಕೊಂಪೆಯಾಗಿದೆ. ಇದಕ್ಕೆ ಕಾರಣಕರ್ತರಾದ ಅಧ್ಯಕ್ಷ ಮನು ಬಳಿಗಾರ್‌ ರಾಜೀನಾಮೆ ನೀಡಬೇಕೆಂದು” ಒತ್ತಾಯಿಸಿದ್ದರು.

ಹಿಂದೆ ಯಾವ ಸಮ್ಮೇಳನದಲ್ಲಿಯೂ ಈ ರೀತಿಯ ಘಟನೆಗಳು ಜರುಗಿದ ಉದಾಹರಣೆಗಳಿಲ್ಲ. ಆದರೆ ಈ ಬಾರಿಯ ಸಮ್ಮೇಳನದಲ್ಲಿ ಸಮ್ಮೇಳನಾಧ್ಯಕ್ಷ ಮತ್ತು ಕಸಾಪ ಅಧ್ಯಕ್ಷರ ವಿರುದ್ಧ ಟೀಕೆಗಳು ಕೇಳಿ ಬಂದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...