Homeಚಳವಳಿಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಎಚ್‌.ಎಸ್‌.ವಿ ಮತ್ತು ಕಸಾಪ ಅಧ್ಯಕ್ಷ ಮನು ಬಳಿಗಾರ್‌ ವಿರುದ್ಧ ಹೆಚ್ಚಿದ...

ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಎಚ್‌.ಎಸ್‌.ವಿ ಮತ್ತು ಕಸಾಪ ಅಧ್ಯಕ್ಷ ಮನು ಬಳಿಗಾರ್‌ ವಿರುದ್ಧ ಹೆಚ್ಚಿದ ಆಕ್ರೋಶ..

ಹಿಂದೆ ಯಾವ ಸಮ್ಮೇಳನದಲ್ಲಿಯೂ ಈ ರೀತಿಯ ಘಟನೆಗಳು ಜರುಗಿದ ಉದಾಹರಣೆಗಳಿಲ್ಲ. ಆದರೆ ಈ ಬಾರಿಯ ಸಮ್ಮೇಳನದಲ್ಲಿ ಸಮ್ಮೇಳನಾಧ್ಯಕ್ಷ ಮತ್ತು ಕಸಾಪ ಅಧ್ಯಕ್ಷರ ವಿರುದ್ಧ ಟೀಕೆಗಳು ಕೇಳಿ ಬಂದಿವೆ.

- Advertisement -
- Advertisement -

ಕಲಬುರಗಿಯಲ್ಲಿ ನಿನ್ನೆಯಿಂದ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆರಂಭಗೊಂಡಿದೆ. ಸಾವಿರಾರು ಕನ್ನಡಾಭಿಮಾನಿಗಳು, ಸಾಹಿತ್ಯಾಸಕ್ತರು, ಜನಸಾಮಾನ್ಯರು ಅತಿ ಉತ್ಸಾಹದಿಂದ ಸಮ್ಮೇಳನದಲ್ಲಿ ಭಾಗವಹಿಸುತ್ತಿದ್ದಾರೆ. ಆದರೆ ಇದೇ ಸಂದರ್ಭದಲ್ಲಿ ಸಮ್ಮೇಳನಾಧ್ಯಕ್ಷ ಎಚ್‌.ಎಸ್‌. ವೆಂಕಟೇಶ ಮೂರ್ತಿ ಮತ್ತು ಕಸಾಪ ಅಧ್ಯಕ್ಷ ಮನು ಬಳಿಗಾರ್‌ ವಿರುದ್ಧ ಅಪಸ್ವರ ಕೇಳಿಬಂದಿದೆ.

ಎಚ್‌. ಎಸ್‌ ವೆಂಕಟೇಶ ಮೂರ್ತಿ

ಮೊದಲಿಗೆ ಸರ್ವಾಧ್ಯಕ್ಷರ ನುಡಿಗಳನ್ನಾಡಿದ ಎಚ್‌.ಎಸ್‌. ವೆಂಕಟೇಶ ಮೂರ್ತಿಯವರು “ಒಕ್ಕೂಟ ವ್ಯವಸ್ಥೆಗೆ ಸಂಸ್ಕೃತ ಇಲ್ಲವೇ ಪ್ರಕೃತ ಭಾಷೆ ಅಗತ್ಯವಾಗಿದೆ. ಸಂಸ್ಕೃತಿ ರಾಷ್ಟ್ರಭಾಷೆಯಾಗಲಿ, ಭಾರತದ ಎಲ್ಲಾ ಭಾಷೆಗಳೂ ನಮ್ಮ ಮಾತೃಭಾಷೆಗಳೇ” ಎಂಬ ಭಾಷಣಕ್ಕೆ ಬಹಳಷ್ಟು ಜನ ಸಾಮಾಜಿಕ ಜಾಲತಾಣಗಳಲ್ಲಿ ವಿರೋಧ ವ್ಯಕ್ತಪಡಿಸಿದ್ದಾರೆ.

“ಹಿಂದೊಮ್ಮೆ ಶಿಕ್ಷಣದಲ್ಲಿ ಸಂಸ್ಕೃತದ ಹೇರಿಕೆಯನ್ನು ಇಡೀ ಕನ್ನಡ ನಾಡು ಅಣ್ಣಾವ್ರ ನೇತೃತ್ವದಲ್ಲಿ ವೀರೋಧಿಸಿ ತನ್ನ ಒಗ್ಗಟ್ಟು ತೋರಿಸಿತ್ತು.

ಈಗ ಸಂಸ್ಕೃತವನ್ನ ದೇಶದ ಸಂಪರ್ಕ ಭಾಷೆಯಾಗಿ ಅಭಿವೃದ್ಧಿಪಡಿಸಬೇಕು ಎನ್ನುವ ತಮ್ಮ ಮಾತನ್ನ ಸಮ್ಮೇಳನಾಧ್ಯಕ್ಷರು ಹಿಂದೆ ಪಡೆಯಬೇಕು. ಹೀಗೆ ಮಾತಾಡುವುದು ಕುವೆಂಪು, ಶಂಬಾ, ರಾಜ್ ಕುಮಾರ್ ಮುಂತಾದ ಹಿರಿಯ ಕನ್ನಡ ಮನಸ್ಸುಗಳನ್ನ ಅಪಮಾನ ಮಾಡಿದಂತೆ ಎಂದು ಕನ್ನಡಿಗರು ಭಾವಿಸಬೇಕು.

ಸನ್ಮಾನ್ಯ ಮುಖ್ಯಮಂತ್ರಿ ಯಡಿಯೂರಪ್ಪನವರೇ, ಹಿಂದೆ ಗೋಕಾಕ್ ಚಳುವಳಿ ಕಾರಣವಾಗಿ, ಗುಂಡೂರಾಯರು ಅಧಿಕಾರ ಕಳೆದುಕೊಂಡರು. ಈಗ ಕನ್ನಡದ ಅಗ್ರಮಾನ್ಯತೆಯನ್ನ ಎತ್ತಿ ಹಿಡಿಯುವ ಸರದಿ ನಿಮ್ಮದು. ಸಮ್ಮೇಳನಾಧ್ಯಕ್ಷರ ಹೇಳಿಕೆಯನ್ನ ವಿರೋಧಿಸಿ ನಿಮ್ಮ ಕನ್ನಡತನವನ್ನ ಮೆರೆಯಿರಿ” ಎಂದು ಕವಿ ಚಿದಂಬರ ನರೇಂದ್ರರವರು ಒತ್ತಾಯಿಸಿದ್ದಾರೆ.

ಮನು ಬಳಿಗಾರ್‌

ಸಂಸ್ಕೃತ ಕೇಳಿದರೆನೆ ಕರ್ಣದಲ್ಲಿ ಕಾದ ಸೀಸ ಉಯ್ದ ಸಂಗತಿಗಳು ಇರುವಾಗ ಅದೇಗೆ ರಾಷ್ಟ್ರಭಾಷೆಯಾಗಬೇಕೆಂದು ಪ್ರತಿಪಾದಿಸುತ್ತಿದ್ದಾರೊ ತಿಳಿಯದೊ? ಎಂದು ಈಹತಾ ಎಂಬುವವರು ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.

ಎಚ್ ಎಸ್ ವೆಂಕಟೇಶ ಮೂರ್ತಿಯವರು ಸಂಸ್ಕೃತ ಸಾಹಿತ್ಯ ಸಮ್ಮೇಳನ ಅಂತ ಏನಾದರೂ ಇದ್ರೆ, ಅವರು ಅದರ ಅಧ್ಯಕ್ಷತೆ ವಹಿಸಲಿ, ಅಲ್ಲಿ ಏನಾದರೂ ಹೇಳಲಿ! ಅವರ ಹೇಳಿಕೆಗೆ ನಮ್ಮ‌ ಸಮ್ಮೇಳನ ವೇದಿಕೆಯಲ್ಲ! ಎಂದು ವಿನಯ ಎಂಬುವವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮನು ಬಳಿಗಾರ್‌ ರಾಜೀನಾಮೆಗೆ ವೇದಿಕೆಯಲ್ಲಿ ಹೆಚ್ಚಿದ ಒತ್ತಡ!

ಇನ್ನು ಕಸಾಪ ಅಧ್ಯಕ್ಷ ಮನು ಬಳಿಗಾರ್‌ ರಾಜೀನಾಮೆ ನೀಡಬೇಕೆಂಬ ಆಗ್ರಹ ಸಾಹಿತ್ಯ ಸಮ್ಮೇಳನದ ವೇದಿಕೆಯಿಂದಲೇ ಹೆಚ್ಚಾಗುತ್ತಿದೆ. ಚಿಂತಕಿ ಕೆ.ನೀಲಾ ಮತ್ತು ಹಿರಿಯ ಸಾಹಿತಿ, ಬರಹಗಾರ ಆರ್‌.ಕೆ ಹುಡಗಿ ಮನು ಬಳಿಗಾರ್‌ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಲು ಅರ್ಹರಲ್ಲ, ಅವರು ರಾಜೀನಾಮೆ ನಿಡಬೇಕೆಂದು ಒತ್ತಾಯಿಸಿದ್ದಾರೆ.

ಇಂದು ಕಲಬುರಗಿ ಜಿಲ್ಲಾ ದರ್ಶನ ಗೋಷ್ಠಿಯ ಅಧ್ಯಕ್ಷೀಯ ನುಡಿಗಳನ್ನಾಡಿದ ಆರ್‌.ಕೆ ಹುಡಗಿಯವರು “ಕಸಾಪ ಒಂದು ಸ್ವಾಯುತ್ತ ಸಂಸ್ಥೆಯಾಗಿದೆ. ಇಂತಹ ಸಂದರ್ಭದಲ್ಲಿ ಚಿಕ್ಕಮಗಳೂರಿನಲ್ಲಿ ನಡೆದ ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕೆ ಆಳುವ ಸರ್ಕಾರ ಮಿತಿಮೀರಿ ಮಧ್ಯ ಪ್ರವೇಶ ಮಾಡಿತ್ತು. ಕನ್ನಡ ಸಂಸ್ಕೃತಿ ಸಚಿವರೆ ಅನುದಾನ ನೀಡದೇ ಸತಾಯಿಸಿದರು ಮಾತ್ರವಲ್ಲ ಸಮ್ಮೇಳನ ಎರಡನೇ ದಿನ ನಡೆದರೆ ಪೆಟ್ರೋಲ್‌ ಬಾಂಬ್‌ ಹಾಕುತ್ತೇವೆ ಎಂದು ಬೆದರಿಸಿದರು. ಆದರೂ ಅಧ್ಯಕ್ಷ ಮನು ಬಳಿಗಾರ್‌ ಸುಮ್ಮನಿದ್ದರು. ಇಂದಿನ ಸಮ್ಮೇಳನ ಅಧ್ಯಕ್ಷರಾಗಿರುವ ಎಚ್‌.ಎಸ್‌ ವೆಂಕಟೇಶ ಮೂರ್ತಿಯವರು ಸಹ ಆಗ ದನಿ ಎತ್ತಲಿಲ್ಲ” ಎಂದು ಅಸಮಾನಧಾನ ವ್ಯಕ್ತಪಡಿಸಿದ್ದಾರೆ.

ಸಾಹಿತ್ಯ ಸಮ್ಮೇಳನಕ್ಕೆ ಅನುದಾನ ನೀಡುವ ವಿಚಾರಕ್ಕೆ ಸಚಿವರು ಅನುದಾನ ನಿಮ್ಮಪ್ಪನ ಮನೆಯದ್ದಲ್ಲೆ ಎಂಬ ದರ್ಪದ ಮಾತುಗಳನ್ನಾಡಿದ್ದಾರೆ. ಅನುದಾನ ಜನಸಾಮಾನ್ಯರು ಕಟ್ಟುವ ತೆರಿಗೆಯಿಂದ ಬಂದಿದ್ದು ಎಂಬುದನ್ನು ಅವರು ಮರೆಯಬಾರದು ಎಂದು ತಿರುಗೇಟು ನೀಡಿದ್ದಾರೆ.

ಕೆ.ನೀಲಾ

ಇನ್ನು ನಿನ್ನೆಯ ಸಮ್ಮೇಳನದಲ್ಲಿ ಕಲಬುರಗಿಯ ಮಹಿಳಾ ಹೋರಾಟಗಾರ್ತಿ ಮತ್ತು ಚಿಂತಕಿ ಕೆ.ನೀಲಾ ಮಾತನಾಡಿ “ಕಸಾಪ ಈಗ ಕನ್ನಡಿಗರ ಸಂಸ್ಥೆಯಾಗಿಲ್ಲ ಬದಲಿಗೆ ಆಳುವವರ ಕೊಂಪೆಯಾಗಿದೆ. ಇದಕ್ಕೆ ಕಾರಣಕರ್ತರಾದ ಅಧ್ಯಕ್ಷ ಮನು ಬಳಿಗಾರ್‌ ರಾಜೀನಾಮೆ ನೀಡಬೇಕೆಂದು” ಒತ್ತಾಯಿಸಿದ್ದರು.

ಹಿಂದೆ ಯಾವ ಸಮ್ಮೇಳನದಲ್ಲಿಯೂ ಈ ರೀತಿಯ ಘಟನೆಗಳು ಜರುಗಿದ ಉದಾಹರಣೆಗಳಿಲ್ಲ. ಆದರೆ ಈ ಬಾರಿಯ ಸಮ್ಮೇಳನದಲ್ಲಿ ಸಮ್ಮೇಳನಾಧ್ಯಕ್ಷ ಮತ್ತು ಕಸಾಪ ಅಧ್ಯಕ್ಷರ ವಿರುದ್ಧ ಟೀಕೆಗಳು ಕೇಳಿ ಬಂದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...