Homeಕರ್ನಾಟಕಮತ್ತೆ ಮತ್ತೆ ಗುನುಗುವಂತೆ ಮಾಡುವ ಅಪ್ಪು ಕಂಠಸಿರಿಯಲ್ಲಿ ಮೂಡಿದ ಹಾಡುಗಳಿವು

ಮತ್ತೆ ಮತ್ತೆ ಗುನುಗುವಂತೆ ಮಾಡುವ ಅಪ್ಪು ಕಂಠಸಿರಿಯಲ್ಲಿ ಮೂಡಿದ ಹಾಡುಗಳಿವು

- Advertisement -
- Advertisement -

ನಮ್ಮನ್ನಗಲಿದ ಪವರ್‌ ಸ್ಟಾರ್‌ ಪುನೀತ್ ರಾಜ್‌ಕುಮಾರ್‌ ಕನ್ನಡಿಗರಿಗೆ ಅಪ್ಪು ಎಂದೇ ಚಿರಪರಿಚಿತರು. ಅವರು ಗಾಯಕರಾಗಿಯೂ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದರು. ನಟರಾಗಿ, ನಿರ್ಮಾಪಕರಾಗಿ, ಗಾಯಕರಾಗಿ ಚಿತ್ರರಂಗಕ್ಕೆ ಅಪಾರ ಕೊಡುಗೆ ನೀಡಿದ್ದಾರೆ.

  1. ಚಲಿಸುವ ಮೋಡಗಳು:  ಪುನೀತ್ ರಾಜ್‌ಕುಮಾರ್‌ ಹಾಡು ಎಂದ ತಕ್ಷಣ ನೆನಪಾಗುವುದು ‘ಕಾಣದಂತೆ ಮಾಯವಾದನೋ ಹಾಡು‘. ಹೌದು ಡಾ.ರಾಜ್‌ಕುಮಾರ್‌ ಅಭಿನಯದ ಚಲಿಸುವ ಮೋಡಗಳು ಚಿತ್ರದ ಈ ಹಾಡು ಪುಟ್ಟ ಮಕ್ಕಳಿಂದ ಹಿಡಿದು ದೊಡ್ಡವರಿಗೂ ಈ ಹಾಡು ಅಚ್ಚುಮೆಚ್ಚು.

 

2. ಯಾರಿವನು: ಚಿತ್ರದ ‘ಕಣ್ಣಿಗೆ ಕಾಣುವ ದೇವರು ಎಂದರೆ ಅಮ್ಮನು ತಾನೆ’ ಎಂಬ ಹಾಡು ಕೂಡ ಅಷ್ಟೇ ಪ್ರಸಿದ್ಧಿ. ಅಮ್ಮ-ಮಕ್ಕಳ ನೆಚ್ಚಿನ ಗೀತೆಯಾಗಿ ಇಂದಿಗೂ ಗುನುಗಿಸಿಕೊಳ್ಳುತ್ತದೆ.

3. ಭಾಗ್ಯವಂತ ಚಿತ್ರದ ‘ಬಾನ ದಾರಿಯಲ್ಲಿ ಸೂರ್ಯ ಜಾರಿಹೋದ’ ಹಾಡು ಕೂಡ ಮಕ್ಕಳ ಹಾಡಾಗಿ ಮನೆ ಮಾತಾಗಿದೆ. ಜೋಗುಳದ ಹಾಡಾಗಿ ಇಂದಿಗೂ ಮನೆಗಳಲ್ಲಿ ಗುನುಗಲಾಗುತ್ತದೆ.

4. ಬೆಟ್ಟದ ಹೂ ಚಿತ್ರದ ’ಬಿಸಿಲೇ ಇರಲಿ ಮಳೆಯೇ ಬರಲಿ ಕಾಡಲ್ಲಿ ಮೇಡಲ್ಲಿ ಅಲೆವೆ’ ಹಾಡನ್ನು ಎಸ್‌.ಪಿ.ಬಿ ಜೊತೆಗೆ ಹಾಡಿದ್ದರು ಅಪ್ಪು. ಈ ಹಾಡು ಕೂಡ ಬಹಳ ಜನಪ್ರಿಯವಾಗಿದೆ. ಈ ಚಿತ್ರದ ನಟನೆಗಾಗಿ ಪುನೀತ್‌ ರಾಜ್‌ಕುಮಾರ್‌ಗೆ ರಾಷ್ಟ್ರ ಪ್ರಶಸ್ತಿ ಕೂಡ ದೊರೆತಿದೆ.

ಇದನ್ನೂ ಓದಿ: ಕನ್ನಡಿಗರ ರಾಜಕುಮಾರ, ಪ್ರೀತಿಯ ’ಅಪ್ಪು’ ನಡೆದು ಬಂದ ಹಾದಿ

5. ಅಪ್ಪು ಪುನೀತ್ ರಾಜ್‌ಕುಮಾರ್‌ ನಾಯಕನಟನಾಗಿ ಕಾಣಿಸಿಕೊಂಡ ಮೊದಲ ಚಿತ್ರ. ಈ ಚಿತ್ರದ ’ತಾಲಿಬಾನ್ ಅಲ್ಲ ಅಲ್ಲ’ ಹಾಡನ್ನು ಪುನೀತ್ ರಾಜ್‌ಕುಮಾರ್‌ ಹಾಡಿದ್ದರು. ಕಾಲೇಜ್ ಹುಡುಗರಲ್ಲಿ ಹೊಸ ಕ್ರೇಜ್ ಹುಟ್ಟುಹಾಕಿತ್ತು. ನಾಯಕಿಯಾಗಿ ರಕ್ಷಿತಾ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಚಿತ್ರ.

6. ಮೈಲಾರಿ: ನಟ ಶಿವರಾಜ್‌ಕುಮಾರ್‌ ಅಭಿನಯದ ಮೈಲಾರಿ ಚಿತ್ರದ ‘ಊರಿಂದ ಓಡಿಬಂದ ಜೋಗಿನಾ ಅಲ್ಲರಿ..ಮೈಲಾಪುರ ಮೈಲಾರಿ’ ಹಾಡನ್ನು ಅಪ್ಪು ಹಾಡಿದ್ದರು.

7. ರನ್ ಆ್ಯಂಟನಿ: ರಾಘವೇಂದ್ರ ರಾಜ್‌ಕುಮಾರ್‌ ಪುತ್ರ ವಿನಯ್ ರಾಜ್‌ಕುಮಾರ್‌ ಅಭಿನಯದ ರನ್ ಆ್ಯಂಟನಿ ಚಿತ್ರದ ’ಜನಕ್ ಜನಕ್ ಮನ ಡೋಲೆ’ ಹಾಡಿಗೆ ಅಪ್ಪು ದನಿಯಾಗಿದ್ದರು.

8. ವಂಶಿ ಚಿತ್ರದ ’ಜೊತೆ ಜೊತೆಯಲಿ ಪ್ರೀತಿ ಜೊತೆಯಲಿ’ ಹಾಡಿಗೆ ಶ್ರೇಯಾ ಗೋಶಾಲ್‌ ಜೊತೆಗೆ ದನಿಯಾಗಿದ್ದಾರೆ. ಚಿತ್ರದಲ್ಲಿ ನಿಖಿತಾ ನಾಯಕಿಯಾಗಿದ್ದರು.

9. ರಾಮ್ ಚಿತ್ರದ ’ಹೊಸ ಗಾನ ಬಜಾನಾ’ ಹಾಡು ಹೊಸ ಟ್ರೆಂಡ್ ಸೃಷ್ಟಿ ಮಾಡಿತ್ತು ಅಂದ್ರೆ ತಪ್ಪಾಗಲ್ಲ. ಪ್ರಿಯಾಮಣಿ, ರಂಗಾಯಣ ರಘು, ಶ್ರೀನಾಥ್ ಸೇರಿದಂತೆ ದೊಡ್ಡ ತಾರಾಬಳಗ ಈ ಚಿತ್ರದಲ್ಲಿತ್ತು.

10. ಅಕಿರಾ ಚಿತ್ರದ ’ಕಣ್ಣ ಸನ್ನೆಯಿಂದಲೇನೆ ನನ್ನ ಸಂದೇಶಕೆ ಸಹಿ ಹಾಕು ನಲ್ಲೆ’ ಎಂಬ ರೋಮ್ಯಾಂಟಿಕ್ ಹಾಡನಲ್ಲೂ ಅಪ್ಪು ಮ್ಯಾಜಿಕ್ ಮಾಡಿದ್ದರು.

ಇದನ್ನೂ ಓದಿ: ಕನ್ನಡದ ಪ್ರತಿಭಾವಂತ ನಟ ಪುನೀತ್ ರಾಜ್‌ಕುಮಾರ್‌ ಇನ್ನಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...