Homeಕರ್ನಾಟಕಮತ್ತೆ ಮತ್ತೆ ಗುನುಗುವಂತೆ ಮಾಡುವ ಅಪ್ಪು ಕಂಠಸಿರಿಯಲ್ಲಿ ಮೂಡಿದ ಹಾಡುಗಳಿವು

ಮತ್ತೆ ಮತ್ತೆ ಗುನುಗುವಂತೆ ಮಾಡುವ ಅಪ್ಪು ಕಂಠಸಿರಿಯಲ್ಲಿ ಮೂಡಿದ ಹಾಡುಗಳಿವು

- Advertisement -
- Advertisement -

ನಮ್ಮನ್ನಗಲಿದ ಪವರ್‌ ಸ್ಟಾರ್‌ ಪುನೀತ್ ರಾಜ್‌ಕುಮಾರ್‌ ಕನ್ನಡಿಗರಿಗೆ ಅಪ್ಪು ಎಂದೇ ಚಿರಪರಿಚಿತರು. ಅವರು ಗಾಯಕರಾಗಿಯೂ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದರು. ನಟರಾಗಿ, ನಿರ್ಮಾಪಕರಾಗಿ, ಗಾಯಕರಾಗಿ ಚಿತ್ರರಂಗಕ್ಕೆ ಅಪಾರ ಕೊಡುಗೆ ನೀಡಿದ್ದಾರೆ.

  1. ಚಲಿಸುವ ಮೋಡಗಳು:  ಪುನೀತ್ ರಾಜ್‌ಕುಮಾರ್‌ ಹಾಡು ಎಂದ ತಕ್ಷಣ ನೆನಪಾಗುವುದು ‘ಕಾಣದಂತೆ ಮಾಯವಾದನೋ ಹಾಡು‘. ಹೌದು ಡಾ.ರಾಜ್‌ಕುಮಾರ್‌ ಅಭಿನಯದ ಚಲಿಸುವ ಮೋಡಗಳು ಚಿತ್ರದ ಈ ಹಾಡು ಪುಟ್ಟ ಮಕ್ಕಳಿಂದ ಹಿಡಿದು ದೊಡ್ಡವರಿಗೂ ಈ ಹಾಡು ಅಚ್ಚುಮೆಚ್ಚು.

 

2. ಯಾರಿವನು: ಚಿತ್ರದ ‘ಕಣ್ಣಿಗೆ ಕಾಣುವ ದೇವರು ಎಂದರೆ ಅಮ್ಮನು ತಾನೆ’ ಎಂಬ ಹಾಡು ಕೂಡ ಅಷ್ಟೇ ಪ್ರಸಿದ್ಧಿ. ಅಮ್ಮ-ಮಕ್ಕಳ ನೆಚ್ಚಿನ ಗೀತೆಯಾಗಿ ಇಂದಿಗೂ ಗುನುಗಿಸಿಕೊಳ್ಳುತ್ತದೆ.

3. ಭಾಗ್ಯವಂತ ಚಿತ್ರದ ‘ಬಾನ ದಾರಿಯಲ್ಲಿ ಸೂರ್ಯ ಜಾರಿಹೋದ’ ಹಾಡು ಕೂಡ ಮಕ್ಕಳ ಹಾಡಾಗಿ ಮನೆ ಮಾತಾಗಿದೆ. ಜೋಗುಳದ ಹಾಡಾಗಿ ಇಂದಿಗೂ ಮನೆಗಳಲ್ಲಿ ಗುನುಗಲಾಗುತ್ತದೆ.

4. ಬೆಟ್ಟದ ಹೂ ಚಿತ್ರದ ’ಬಿಸಿಲೇ ಇರಲಿ ಮಳೆಯೇ ಬರಲಿ ಕಾಡಲ್ಲಿ ಮೇಡಲ್ಲಿ ಅಲೆವೆ’ ಹಾಡನ್ನು ಎಸ್‌.ಪಿ.ಬಿ ಜೊತೆಗೆ ಹಾಡಿದ್ದರು ಅಪ್ಪು. ಈ ಹಾಡು ಕೂಡ ಬಹಳ ಜನಪ್ರಿಯವಾಗಿದೆ. ಈ ಚಿತ್ರದ ನಟನೆಗಾಗಿ ಪುನೀತ್‌ ರಾಜ್‌ಕುಮಾರ್‌ಗೆ ರಾಷ್ಟ್ರ ಪ್ರಶಸ್ತಿ ಕೂಡ ದೊರೆತಿದೆ.

ಇದನ್ನೂ ಓದಿ: ಕನ್ನಡಿಗರ ರಾಜಕುಮಾರ, ಪ್ರೀತಿಯ ’ಅಪ್ಪು’ ನಡೆದು ಬಂದ ಹಾದಿ

5. ಅಪ್ಪು ಪುನೀತ್ ರಾಜ್‌ಕುಮಾರ್‌ ನಾಯಕನಟನಾಗಿ ಕಾಣಿಸಿಕೊಂಡ ಮೊದಲ ಚಿತ್ರ. ಈ ಚಿತ್ರದ ’ತಾಲಿಬಾನ್ ಅಲ್ಲ ಅಲ್ಲ’ ಹಾಡನ್ನು ಪುನೀತ್ ರಾಜ್‌ಕುಮಾರ್‌ ಹಾಡಿದ್ದರು. ಕಾಲೇಜ್ ಹುಡುಗರಲ್ಲಿ ಹೊಸ ಕ್ರೇಜ್ ಹುಟ್ಟುಹಾಕಿತ್ತು. ನಾಯಕಿಯಾಗಿ ರಕ್ಷಿತಾ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಚಿತ್ರ.

6. ಮೈಲಾರಿ: ನಟ ಶಿವರಾಜ್‌ಕುಮಾರ್‌ ಅಭಿನಯದ ಮೈಲಾರಿ ಚಿತ್ರದ ‘ಊರಿಂದ ಓಡಿಬಂದ ಜೋಗಿನಾ ಅಲ್ಲರಿ..ಮೈಲಾಪುರ ಮೈಲಾರಿ’ ಹಾಡನ್ನು ಅಪ್ಪು ಹಾಡಿದ್ದರು.

7. ರನ್ ಆ್ಯಂಟನಿ: ರಾಘವೇಂದ್ರ ರಾಜ್‌ಕುಮಾರ್‌ ಪುತ್ರ ವಿನಯ್ ರಾಜ್‌ಕುಮಾರ್‌ ಅಭಿನಯದ ರನ್ ಆ್ಯಂಟನಿ ಚಿತ್ರದ ’ಜನಕ್ ಜನಕ್ ಮನ ಡೋಲೆ’ ಹಾಡಿಗೆ ಅಪ್ಪು ದನಿಯಾಗಿದ್ದರು.

8. ವಂಶಿ ಚಿತ್ರದ ’ಜೊತೆ ಜೊತೆಯಲಿ ಪ್ರೀತಿ ಜೊತೆಯಲಿ’ ಹಾಡಿಗೆ ಶ್ರೇಯಾ ಗೋಶಾಲ್‌ ಜೊತೆಗೆ ದನಿಯಾಗಿದ್ದಾರೆ. ಚಿತ್ರದಲ್ಲಿ ನಿಖಿತಾ ನಾಯಕಿಯಾಗಿದ್ದರು.

9. ರಾಮ್ ಚಿತ್ರದ ’ಹೊಸ ಗಾನ ಬಜಾನಾ’ ಹಾಡು ಹೊಸ ಟ್ರೆಂಡ್ ಸೃಷ್ಟಿ ಮಾಡಿತ್ತು ಅಂದ್ರೆ ತಪ್ಪಾಗಲ್ಲ. ಪ್ರಿಯಾಮಣಿ, ರಂಗಾಯಣ ರಘು, ಶ್ರೀನಾಥ್ ಸೇರಿದಂತೆ ದೊಡ್ಡ ತಾರಾಬಳಗ ಈ ಚಿತ್ರದಲ್ಲಿತ್ತು.

10. ಅಕಿರಾ ಚಿತ್ರದ ’ಕಣ್ಣ ಸನ್ನೆಯಿಂದಲೇನೆ ನನ್ನ ಸಂದೇಶಕೆ ಸಹಿ ಹಾಕು ನಲ್ಲೆ’ ಎಂಬ ರೋಮ್ಯಾಂಟಿಕ್ ಹಾಡನಲ್ಲೂ ಅಪ್ಪು ಮ್ಯಾಜಿಕ್ ಮಾಡಿದ್ದರು.

ಇದನ್ನೂ ಓದಿ: ಕನ್ನಡದ ಪ್ರತಿಭಾವಂತ ನಟ ಪುನೀತ್ ರಾಜ್‌ಕುಮಾರ್‌ ಇನ್ನಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...