Homeಕರ್ನಾಟಕಮತ್ತೆ ಮತ್ತೆ ಗುನುಗುವಂತೆ ಮಾಡುವ ಅಪ್ಪು ಕಂಠಸಿರಿಯಲ್ಲಿ ಮೂಡಿದ ಹಾಡುಗಳಿವು

ಮತ್ತೆ ಮತ್ತೆ ಗುನುಗುವಂತೆ ಮಾಡುವ ಅಪ್ಪು ಕಂಠಸಿರಿಯಲ್ಲಿ ಮೂಡಿದ ಹಾಡುಗಳಿವು

- Advertisement -
- Advertisement -

ನಮ್ಮನ್ನಗಲಿದ ಪವರ್‌ ಸ್ಟಾರ್‌ ಪುನೀತ್ ರಾಜ್‌ಕುಮಾರ್‌ ಕನ್ನಡಿಗರಿಗೆ ಅಪ್ಪು ಎಂದೇ ಚಿರಪರಿಚಿತರು. ಅವರು ಗಾಯಕರಾಗಿಯೂ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದರು. ನಟರಾಗಿ, ನಿರ್ಮಾಪಕರಾಗಿ, ಗಾಯಕರಾಗಿ ಚಿತ್ರರಂಗಕ್ಕೆ ಅಪಾರ ಕೊಡುಗೆ ನೀಡಿದ್ದಾರೆ.

  1. ಚಲಿಸುವ ಮೋಡಗಳು:  ಪುನೀತ್ ರಾಜ್‌ಕುಮಾರ್‌ ಹಾಡು ಎಂದ ತಕ್ಷಣ ನೆನಪಾಗುವುದು ‘ಕಾಣದಂತೆ ಮಾಯವಾದನೋ ಹಾಡು‘. ಹೌದು ಡಾ.ರಾಜ್‌ಕುಮಾರ್‌ ಅಭಿನಯದ ಚಲಿಸುವ ಮೋಡಗಳು ಚಿತ್ರದ ಈ ಹಾಡು ಪುಟ್ಟ ಮಕ್ಕಳಿಂದ ಹಿಡಿದು ದೊಡ್ಡವರಿಗೂ ಈ ಹಾಡು ಅಚ್ಚುಮೆಚ್ಚು.

 

2. ಯಾರಿವನು: ಚಿತ್ರದ ‘ಕಣ್ಣಿಗೆ ಕಾಣುವ ದೇವರು ಎಂದರೆ ಅಮ್ಮನು ತಾನೆ’ ಎಂಬ ಹಾಡು ಕೂಡ ಅಷ್ಟೇ ಪ್ರಸಿದ್ಧಿ. ಅಮ್ಮ-ಮಕ್ಕಳ ನೆಚ್ಚಿನ ಗೀತೆಯಾಗಿ ಇಂದಿಗೂ ಗುನುಗಿಸಿಕೊಳ್ಳುತ್ತದೆ.

3. ಭಾಗ್ಯವಂತ ಚಿತ್ರದ ‘ಬಾನ ದಾರಿಯಲ್ಲಿ ಸೂರ್ಯ ಜಾರಿಹೋದ’ ಹಾಡು ಕೂಡ ಮಕ್ಕಳ ಹಾಡಾಗಿ ಮನೆ ಮಾತಾಗಿದೆ. ಜೋಗುಳದ ಹಾಡಾಗಿ ಇಂದಿಗೂ ಮನೆಗಳಲ್ಲಿ ಗುನುಗಲಾಗುತ್ತದೆ.

4. ಬೆಟ್ಟದ ಹೂ ಚಿತ್ರದ ’ಬಿಸಿಲೇ ಇರಲಿ ಮಳೆಯೇ ಬರಲಿ ಕಾಡಲ್ಲಿ ಮೇಡಲ್ಲಿ ಅಲೆವೆ’ ಹಾಡನ್ನು ಎಸ್‌.ಪಿ.ಬಿ ಜೊತೆಗೆ ಹಾಡಿದ್ದರು ಅಪ್ಪು. ಈ ಹಾಡು ಕೂಡ ಬಹಳ ಜನಪ್ರಿಯವಾಗಿದೆ. ಈ ಚಿತ್ರದ ನಟನೆಗಾಗಿ ಪುನೀತ್‌ ರಾಜ್‌ಕುಮಾರ್‌ಗೆ ರಾಷ್ಟ್ರ ಪ್ರಶಸ್ತಿ ಕೂಡ ದೊರೆತಿದೆ.

ಇದನ್ನೂ ಓದಿ: ಕನ್ನಡಿಗರ ರಾಜಕುಮಾರ, ಪ್ರೀತಿಯ ’ಅಪ್ಪು’ ನಡೆದು ಬಂದ ಹಾದಿ

5. ಅಪ್ಪು ಪುನೀತ್ ರಾಜ್‌ಕುಮಾರ್‌ ನಾಯಕನಟನಾಗಿ ಕಾಣಿಸಿಕೊಂಡ ಮೊದಲ ಚಿತ್ರ. ಈ ಚಿತ್ರದ ’ತಾಲಿಬಾನ್ ಅಲ್ಲ ಅಲ್ಲ’ ಹಾಡನ್ನು ಪುನೀತ್ ರಾಜ್‌ಕುಮಾರ್‌ ಹಾಡಿದ್ದರು. ಕಾಲೇಜ್ ಹುಡುಗರಲ್ಲಿ ಹೊಸ ಕ್ರೇಜ್ ಹುಟ್ಟುಹಾಕಿತ್ತು. ನಾಯಕಿಯಾಗಿ ರಕ್ಷಿತಾ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಚಿತ್ರ.

6. ಮೈಲಾರಿ: ನಟ ಶಿವರಾಜ್‌ಕುಮಾರ್‌ ಅಭಿನಯದ ಮೈಲಾರಿ ಚಿತ್ರದ ‘ಊರಿಂದ ಓಡಿಬಂದ ಜೋಗಿನಾ ಅಲ್ಲರಿ..ಮೈಲಾಪುರ ಮೈಲಾರಿ’ ಹಾಡನ್ನು ಅಪ್ಪು ಹಾಡಿದ್ದರು.

7. ರನ್ ಆ್ಯಂಟನಿ: ರಾಘವೇಂದ್ರ ರಾಜ್‌ಕುಮಾರ್‌ ಪುತ್ರ ವಿನಯ್ ರಾಜ್‌ಕುಮಾರ್‌ ಅಭಿನಯದ ರನ್ ಆ್ಯಂಟನಿ ಚಿತ್ರದ ’ಜನಕ್ ಜನಕ್ ಮನ ಡೋಲೆ’ ಹಾಡಿಗೆ ಅಪ್ಪು ದನಿಯಾಗಿದ್ದರು.

8. ವಂಶಿ ಚಿತ್ರದ ’ಜೊತೆ ಜೊತೆಯಲಿ ಪ್ರೀತಿ ಜೊತೆಯಲಿ’ ಹಾಡಿಗೆ ಶ್ರೇಯಾ ಗೋಶಾಲ್‌ ಜೊತೆಗೆ ದನಿಯಾಗಿದ್ದಾರೆ. ಚಿತ್ರದಲ್ಲಿ ನಿಖಿತಾ ನಾಯಕಿಯಾಗಿದ್ದರು.

9. ರಾಮ್ ಚಿತ್ರದ ’ಹೊಸ ಗಾನ ಬಜಾನಾ’ ಹಾಡು ಹೊಸ ಟ್ರೆಂಡ್ ಸೃಷ್ಟಿ ಮಾಡಿತ್ತು ಅಂದ್ರೆ ತಪ್ಪಾಗಲ್ಲ. ಪ್ರಿಯಾಮಣಿ, ರಂಗಾಯಣ ರಘು, ಶ್ರೀನಾಥ್ ಸೇರಿದಂತೆ ದೊಡ್ಡ ತಾರಾಬಳಗ ಈ ಚಿತ್ರದಲ್ಲಿತ್ತು.

10. ಅಕಿರಾ ಚಿತ್ರದ ’ಕಣ್ಣ ಸನ್ನೆಯಿಂದಲೇನೆ ನನ್ನ ಸಂದೇಶಕೆ ಸಹಿ ಹಾಕು ನಲ್ಲೆ’ ಎಂಬ ರೋಮ್ಯಾಂಟಿಕ್ ಹಾಡನಲ್ಲೂ ಅಪ್ಪು ಮ್ಯಾಜಿಕ್ ಮಾಡಿದ್ದರು.

ಇದನ್ನೂ ಓದಿ: ಕನ್ನಡದ ಪ್ರತಿಭಾವಂತ ನಟ ಪುನೀತ್ ರಾಜ್‌ಕುಮಾರ್‌ ಇನ್ನಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...