Homeಕರ್ನಾಟಕಮತ್ತೆ ಮತ್ತೆ ಗುನುಗುವಂತೆ ಮಾಡುವ ಅಪ್ಪು ಕಂಠಸಿರಿಯಲ್ಲಿ ಮೂಡಿದ ಹಾಡುಗಳಿವು

ಮತ್ತೆ ಮತ್ತೆ ಗುನುಗುವಂತೆ ಮಾಡುವ ಅಪ್ಪು ಕಂಠಸಿರಿಯಲ್ಲಿ ಮೂಡಿದ ಹಾಡುಗಳಿವು

- Advertisement -
- Advertisement -

ನಮ್ಮನ್ನಗಲಿದ ಪವರ್‌ ಸ್ಟಾರ್‌ ಪುನೀತ್ ರಾಜ್‌ಕುಮಾರ್‌ ಕನ್ನಡಿಗರಿಗೆ ಅಪ್ಪು ಎಂದೇ ಚಿರಪರಿಚಿತರು. ಅವರು ಗಾಯಕರಾಗಿಯೂ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದರು. ನಟರಾಗಿ, ನಿರ್ಮಾಪಕರಾಗಿ, ಗಾಯಕರಾಗಿ ಚಿತ್ರರಂಗಕ್ಕೆ ಅಪಾರ ಕೊಡುಗೆ ನೀಡಿದ್ದಾರೆ.

  1. ಚಲಿಸುವ ಮೋಡಗಳು:  ಪುನೀತ್ ರಾಜ್‌ಕುಮಾರ್‌ ಹಾಡು ಎಂದ ತಕ್ಷಣ ನೆನಪಾಗುವುದು ‘ಕಾಣದಂತೆ ಮಾಯವಾದನೋ ಹಾಡು‘. ಹೌದು ಡಾ.ರಾಜ್‌ಕುಮಾರ್‌ ಅಭಿನಯದ ಚಲಿಸುವ ಮೋಡಗಳು ಚಿತ್ರದ ಈ ಹಾಡು ಪುಟ್ಟ ಮಕ್ಕಳಿಂದ ಹಿಡಿದು ದೊಡ್ಡವರಿಗೂ ಈ ಹಾಡು ಅಚ್ಚುಮೆಚ್ಚು.

 

2. ಯಾರಿವನು: ಚಿತ್ರದ ‘ಕಣ್ಣಿಗೆ ಕಾಣುವ ದೇವರು ಎಂದರೆ ಅಮ್ಮನು ತಾನೆ’ ಎಂಬ ಹಾಡು ಕೂಡ ಅಷ್ಟೇ ಪ್ರಸಿದ್ಧಿ. ಅಮ್ಮ-ಮಕ್ಕಳ ನೆಚ್ಚಿನ ಗೀತೆಯಾಗಿ ಇಂದಿಗೂ ಗುನುಗಿಸಿಕೊಳ್ಳುತ್ತದೆ.

3. ಭಾಗ್ಯವಂತ ಚಿತ್ರದ ‘ಬಾನ ದಾರಿಯಲ್ಲಿ ಸೂರ್ಯ ಜಾರಿಹೋದ’ ಹಾಡು ಕೂಡ ಮಕ್ಕಳ ಹಾಡಾಗಿ ಮನೆ ಮಾತಾಗಿದೆ. ಜೋಗುಳದ ಹಾಡಾಗಿ ಇಂದಿಗೂ ಮನೆಗಳಲ್ಲಿ ಗುನುಗಲಾಗುತ್ತದೆ.

4. ಬೆಟ್ಟದ ಹೂ ಚಿತ್ರದ ’ಬಿಸಿಲೇ ಇರಲಿ ಮಳೆಯೇ ಬರಲಿ ಕಾಡಲ್ಲಿ ಮೇಡಲ್ಲಿ ಅಲೆವೆ’ ಹಾಡನ್ನು ಎಸ್‌.ಪಿ.ಬಿ ಜೊತೆಗೆ ಹಾಡಿದ್ದರು ಅಪ್ಪು. ಈ ಹಾಡು ಕೂಡ ಬಹಳ ಜನಪ್ರಿಯವಾಗಿದೆ. ಈ ಚಿತ್ರದ ನಟನೆಗಾಗಿ ಪುನೀತ್‌ ರಾಜ್‌ಕುಮಾರ್‌ಗೆ ರಾಷ್ಟ್ರ ಪ್ರಶಸ್ತಿ ಕೂಡ ದೊರೆತಿದೆ.

ಇದನ್ನೂ ಓದಿ: ಕನ್ನಡಿಗರ ರಾಜಕುಮಾರ, ಪ್ರೀತಿಯ ’ಅಪ್ಪು’ ನಡೆದು ಬಂದ ಹಾದಿ

5. ಅಪ್ಪು ಪುನೀತ್ ರಾಜ್‌ಕುಮಾರ್‌ ನಾಯಕನಟನಾಗಿ ಕಾಣಿಸಿಕೊಂಡ ಮೊದಲ ಚಿತ್ರ. ಈ ಚಿತ್ರದ ’ತಾಲಿಬಾನ್ ಅಲ್ಲ ಅಲ್ಲ’ ಹಾಡನ್ನು ಪುನೀತ್ ರಾಜ್‌ಕುಮಾರ್‌ ಹಾಡಿದ್ದರು. ಕಾಲೇಜ್ ಹುಡುಗರಲ್ಲಿ ಹೊಸ ಕ್ರೇಜ್ ಹುಟ್ಟುಹಾಕಿತ್ತು. ನಾಯಕಿಯಾಗಿ ರಕ್ಷಿತಾ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಚಿತ್ರ.

6. ಮೈಲಾರಿ: ನಟ ಶಿವರಾಜ್‌ಕುಮಾರ್‌ ಅಭಿನಯದ ಮೈಲಾರಿ ಚಿತ್ರದ ‘ಊರಿಂದ ಓಡಿಬಂದ ಜೋಗಿನಾ ಅಲ್ಲರಿ..ಮೈಲಾಪುರ ಮೈಲಾರಿ’ ಹಾಡನ್ನು ಅಪ್ಪು ಹಾಡಿದ್ದರು.

7. ರನ್ ಆ್ಯಂಟನಿ: ರಾಘವೇಂದ್ರ ರಾಜ್‌ಕುಮಾರ್‌ ಪುತ್ರ ವಿನಯ್ ರಾಜ್‌ಕುಮಾರ್‌ ಅಭಿನಯದ ರನ್ ಆ್ಯಂಟನಿ ಚಿತ್ರದ ’ಜನಕ್ ಜನಕ್ ಮನ ಡೋಲೆ’ ಹಾಡಿಗೆ ಅಪ್ಪು ದನಿಯಾಗಿದ್ದರು.

8. ವಂಶಿ ಚಿತ್ರದ ’ಜೊತೆ ಜೊತೆಯಲಿ ಪ್ರೀತಿ ಜೊತೆಯಲಿ’ ಹಾಡಿಗೆ ಶ್ರೇಯಾ ಗೋಶಾಲ್‌ ಜೊತೆಗೆ ದನಿಯಾಗಿದ್ದಾರೆ. ಚಿತ್ರದಲ್ಲಿ ನಿಖಿತಾ ನಾಯಕಿಯಾಗಿದ್ದರು.

9. ರಾಮ್ ಚಿತ್ರದ ’ಹೊಸ ಗಾನ ಬಜಾನಾ’ ಹಾಡು ಹೊಸ ಟ್ರೆಂಡ್ ಸೃಷ್ಟಿ ಮಾಡಿತ್ತು ಅಂದ್ರೆ ತಪ್ಪಾಗಲ್ಲ. ಪ್ರಿಯಾಮಣಿ, ರಂಗಾಯಣ ರಘು, ಶ್ರೀನಾಥ್ ಸೇರಿದಂತೆ ದೊಡ್ಡ ತಾರಾಬಳಗ ಈ ಚಿತ್ರದಲ್ಲಿತ್ತು.

10. ಅಕಿರಾ ಚಿತ್ರದ ’ಕಣ್ಣ ಸನ್ನೆಯಿಂದಲೇನೆ ನನ್ನ ಸಂದೇಶಕೆ ಸಹಿ ಹಾಕು ನಲ್ಲೆ’ ಎಂಬ ರೋಮ್ಯಾಂಟಿಕ್ ಹಾಡನಲ್ಲೂ ಅಪ್ಪು ಮ್ಯಾಜಿಕ್ ಮಾಡಿದ್ದರು.

ಇದನ್ನೂ ಓದಿ: ಕನ್ನಡದ ಪ್ರತಿಭಾವಂತ ನಟ ಪುನೀತ್ ರಾಜ್‌ಕುಮಾರ್‌ ಇನ್ನಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...