Homeಕರ್ನಾಟಕಮತ್ತೆ ಮತ್ತೆ ಗುನುಗುವಂತೆ ಮಾಡುವ ಅಪ್ಪು ಕಂಠಸಿರಿಯಲ್ಲಿ ಮೂಡಿದ ಹಾಡುಗಳಿವು

ಮತ್ತೆ ಮತ್ತೆ ಗುನುಗುವಂತೆ ಮಾಡುವ ಅಪ್ಪು ಕಂಠಸಿರಿಯಲ್ಲಿ ಮೂಡಿದ ಹಾಡುಗಳಿವು

- Advertisement -
- Advertisement -

ನಮ್ಮನ್ನಗಲಿದ ಪವರ್‌ ಸ್ಟಾರ್‌ ಪುನೀತ್ ರಾಜ್‌ಕುಮಾರ್‌ ಕನ್ನಡಿಗರಿಗೆ ಅಪ್ಪು ಎಂದೇ ಚಿರಪರಿಚಿತರು. ಅವರು ಗಾಯಕರಾಗಿಯೂ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದರು. ನಟರಾಗಿ, ನಿರ್ಮಾಪಕರಾಗಿ, ಗಾಯಕರಾಗಿ ಚಿತ್ರರಂಗಕ್ಕೆ ಅಪಾರ ಕೊಡುಗೆ ನೀಡಿದ್ದಾರೆ.

  1. ಚಲಿಸುವ ಮೋಡಗಳು:  ಪುನೀತ್ ರಾಜ್‌ಕುಮಾರ್‌ ಹಾಡು ಎಂದ ತಕ್ಷಣ ನೆನಪಾಗುವುದು ‘ಕಾಣದಂತೆ ಮಾಯವಾದನೋ ಹಾಡು‘. ಹೌದು ಡಾ.ರಾಜ್‌ಕುಮಾರ್‌ ಅಭಿನಯದ ಚಲಿಸುವ ಮೋಡಗಳು ಚಿತ್ರದ ಈ ಹಾಡು ಪುಟ್ಟ ಮಕ್ಕಳಿಂದ ಹಿಡಿದು ದೊಡ್ಡವರಿಗೂ ಈ ಹಾಡು ಅಚ್ಚುಮೆಚ್ಚು.

 

2. ಯಾರಿವನು: ಚಿತ್ರದ ‘ಕಣ್ಣಿಗೆ ಕಾಣುವ ದೇವರು ಎಂದರೆ ಅಮ್ಮನು ತಾನೆ’ ಎಂಬ ಹಾಡು ಕೂಡ ಅಷ್ಟೇ ಪ್ರಸಿದ್ಧಿ. ಅಮ್ಮ-ಮಕ್ಕಳ ನೆಚ್ಚಿನ ಗೀತೆಯಾಗಿ ಇಂದಿಗೂ ಗುನುಗಿಸಿಕೊಳ್ಳುತ್ತದೆ.

3. ಭಾಗ್ಯವಂತ ಚಿತ್ರದ ‘ಬಾನ ದಾರಿಯಲ್ಲಿ ಸೂರ್ಯ ಜಾರಿಹೋದ’ ಹಾಡು ಕೂಡ ಮಕ್ಕಳ ಹಾಡಾಗಿ ಮನೆ ಮಾತಾಗಿದೆ. ಜೋಗುಳದ ಹಾಡಾಗಿ ಇಂದಿಗೂ ಮನೆಗಳಲ್ಲಿ ಗುನುಗಲಾಗುತ್ತದೆ.

4. ಬೆಟ್ಟದ ಹೂ ಚಿತ್ರದ ’ಬಿಸಿಲೇ ಇರಲಿ ಮಳೆಯೇ ಬರಲಿ ಕಾಡಲ್ಲಿ ಮೇಡಲ್ಲಿ ಅಲೆವೆ’ ಹಾಡನ್ನು ಎಸ್‌.ಪಿ.ಬಿ ಜೊತೆಗೆ ಹಾಡಿದ್ದರು ಅಪ್ಪು. ಈ ಹಾಡು ಕೂಡ ಬಹಳ ಜನಪ್ರಿಯವಾಗಿದೆ. ಈ ಚಿತ್ರದ ನಟನೆಗಾಗಿ ಪುನೀತ್‌ ರಾಜ್‌ಕುಮಾರ್‌ಗೆ ರಾಷ್ಟ್ರ ಪ್ರಶಸ್ತಿ ಕೂಡ ದೊರೆತಿದೆ.

ಇದನ್ನೂ ಓದಿ: ಕನ್ನಡಿಗರ ರಾಜಕುಮಾರ, ಪ್ರೀತಿಯ ’ಅಪ್ಪು’ ನಡೆದು ಬಂದ ಹಾದಿ

5. ಅಪ್ಪು ಪುನೀತ್ ರಾಜ್‌ಕುಮಾರ್‌ ನಾಯಕನಟನಾಗಿ ಕಾಣಿಸಿಕೊಂಡ ಮೊದಲ ಚಿತ್ರ. ಈ ಚಿತ್ರದ ’ತಾಲಿಬಾನ್ ಅಲ್ಲ ಅಲ್ಲ’ ಹಾಡನ್ನು ಪುನೀತ್ ರಾಜ್‌ಕುಮಾರ್‌ ಹಾಡಿದ್ದರು. ಕಾಲೇಜ್ ಹುಡುಗರಲ್ಲಿ ಹೊಸ ಕ್ರೇಜ್ ಹುಟ್ಟುಹಾಕಿತ್ತು. ನಾಯಕಿಯಾಗಿ ರಕ್ಷಿತಾ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಚಿತ್ರ.

6. ಮೈಲಾರಿ: ನಟ ಶಿವರಾಜ್‌ಕುಮಾರ್‌ ಅಭಿನಯದ ಮೈಲಾರಿ ಚಿತ್ರದ ‘ಊರಿಂದ ಓಡಿಬಂದ ಜೋಗಿನಾ ಅಲ್ಲರಿ..ಮೈಲಾಪುರ ಮೈಲಾರಿ’ ಹಾಡನ್ನು ಅಪ್ಪು ಹಾಡಿದ್ದರು.

7. ರನ್ ಆ್ಯಂಟನಿ: ರಾಘವೇಂದ್ರ ರಾಜ್‌ಕುಮಾರ್‌ ಪುತ್ರ ವಿನಯ್ ರಾಜ್‌ಕುಮಾರ್‌ ಅಭಿನಯದ ರನ್ ಆ್ಯಂಟನಿ ಚಿತ್ರದ ’ಜನಕ್ ಜನಕ್ ಮನ ಡೋಲೆ’ ಹಾಡಿಗೆ ಅಪ್ಪು ದನಿಯಾಗಿದ್ದರು.

8. ವಂಶಿ ಚಿತ್ರದ ’ಜೊತೆ ಜೊತೆಯಲಿ ಪ್ರೀತಿ ಜೊತೆಯಲಿ’ ಹಾಡಿಗೆ ಶ್ರೇಯಾ ಗೋಶಾಲ್‌ ಜೊತೆಗೆ ದನಿಯಾಗಿದ್ದಾರೆ. ಚಿತ್ರದಲ್ಲಿ ನಿಖಿತಾ ನಾಯಕಿಯಾಗಿದ್ದರು.

9. ರಾಮ್ ಚಿತ್ರದ ’ಹೊಸ ಗಾನ ಬಜಾನಾ’ ಹಾಡು ಹೊಸ ಟ್ರೆಂಡ್ ಸೃಷ್ಟಿ ಮಾಡಿತ್ತು ಅಂದ್ರೆ ತಪ್ಪಾಗಲ್ಲ. ಪ್ರಿಯಾಮಣಿ, ರಂಗಾಯಣ ರಘು, ಶ್ರೀನಾಥ್ ಸೇರಿದಂತೆ ದೊಡ್ಡ ತಾರಾಬಳಗ ಈ ಚಿತ್ರದಲ್ಲಿತ್ತು.

10. ಅಕಿರಾ ಚಿತ್ರದ ’ಕಣ್ಣ ಸನ್ನೆಯಿಂದಲೇನೆ ನನ್ನ ಸಂದೇಶಕೆ ಸಹಿ ಹಾಕು ನಲ್ಲೆ’ ಎಂಬ ರೋಮ್ಯಾಂಟಿಕ್ ಹಾಡನಲ್ಲೂ ಅಪ್ಪು ಮ್ಯಾಜಿಕ್ ಮಾಡಿದ್ದರು.

ಇದನ್ನೂ ಓದಿ: ಕನ್ನಡದ ಪ್ರತಿಭಾವಂತ ನಟ ಪುನೀತ್ ರಾಜ್‌ಕುಮಾರ್‌ ಇನ್ನಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...