Homeಮುಖಪುಟಬ್ರಿಟನ್ ಕವಿ ಬ್ರಯಾನ್ ಪ್ಯಾಟನ್ ಅವರ ಹತ್ತು ಪದ್ಯಗಳು

ಬ್ರಿಟನ್ ಕವಿ ಬ್ರಯಾನ್ ಪ್ಯಾಟನ್ ಅವರ ಹತ್ತು ಪದ್ಯಗಳು

- Advertisement -
- Advertisement -

1.ಬೆಳಕಿನವತಾರ

ನನ್ನ ಕನ್ನಡಿಯೊಳಗೆ ನಡೆದು ಬಂದವಳು
ಪ್ರೀತಿ ಮತ್ತು ಅದರ ಇತರ ಉತ್ಪನ್ನಗಳ ಬಗ್ಗೆ
ಚಕಾರ ಎತ್ತುವುದಿಲ್ಲ,
ಸುಮ್ಮನೇ ನಿಂತಿರುತ್ತಾಳೆ,
ತನ್ನ ಮೌನವನ್ನು ತಾನೇ ಸುಖಿಸುತ್ತಾಳೆ,
ನನಗೆ ಗೊತ್ತಿರುವ ಎಲ್ಲ ಋತುಗಳೂ
ತಾನೇ ಎಂಬಂತೆ ಉಟ್ಟು ಮೆರೆಯುತ್ತಾಳೆ,
ಒಂದು ಮೊಲೆಯಲ್ಲಿ ಕಾಡು
ಇನ್ನೊಂದರಲ್ಲಿ ಸಮುದ್ರ ಧರಿಸಿಕೊಂಡಿದ್ದಾಳೆ.

ಯಾವುದೇ ಬೇಡಿಕೆಯಿಲ್ಲ ಅವಳಲ್ಲಿ
ಒಮ್ಮೆ ನೋಡಿದರೆ ಸಾಕು.
ಎಷ್ಟೆಲ್ಲಾ ಬೇಡಿಕೆ.

ಮಾಟ ಎಲ್ಲರ ಹಾಗೇ
ಪ್ರೇಮಕ್ಕೆ ಬೇಕಾದಷ್ಟು, ಸಾಕಾದಷ್ಟು,
ನನ್ನ ಕಟ್ಟಿ ಹಾಕಿರುವುದು ಅದಲ್ಲ,
ಅದರಾಚೆಗಿನ ಬೆಳಗು.

ಒಮ್ಮೊಮ್ಮೆ ನನಗನಿಸುತ್ತದೆ
ನಾನೂ ಹಾಗೇ
ಬೆಳಕಿನವತಾರ.

*****

2. Reading between Graffiti

ಟಾಯ್ಲೆಟ್‌ನ ಗೋಡೆಯ ಮೇಲೆ
ಮಸುಕು ಮಸುಕಾದ ಗೀಚು ಬರಹ,
‘FUCK THE STRANGER TONIGHT’
ಕಳೆದ ವಾರ ಕಣ್ಣಿಗೆ ಬಿದ್ದಿರಲಿಲ್ಲ.
ಬಾಕಿ ಎಲ್ಲ ಲವ್ ಸಿಂಬಲ್‌ಗಳು,
ಕಾಮ ಪ್ರಲಾಪಗಳು, ಉತ್ಕಟ ಹಳಹಳಿಕೆಗಳು
ಈ ಅನಾಮಿಕನ ಸಲಹೆಯ ಮುಂದೆ
ಸಪ್ಪೆ, ಸಪ್ಪೆ ಎನಿಸುವಂತಿದ್ದವು.
ಕಳೆದುಕೊಂಡವರು, ಸಾಯದ ಆದರೆ ದಿನದಿನಕ್ಕೂ
ಬಾತುಕೊಳ್ಳುತ್ತಲೇ ಸಣ್ಣಗಾಗುವವರು,
ಅನುಕಂಪಕ್ಕಾಗಿ ತುಡಿಯುವ ಆದರೆ
ಟಾಯ್ಲೆಟ್‌ನ ಗೋಡೆಗಳ ಮುಂದೆ ದಿಢೀರನೇ ದಾರ್ಶನಿಕರಾಗುವವರು,
ಹೀಗೆ ಗೋಡೆ ಬರಹಗಳು
ಆಯಾ ಗುಂಪಿನ ಮನಸ್ಥಿತಿಯನ್ನು ಹಾಡುತ್ತವೆ.
ಅದೇನೇ ಇರಲಿ
ಈ ಬರಹ ಬರೆದವನಿಗೆ
ಒಂದಿಷ್ಟು ಕ್ರೆಡಿಟ್ ಕೊಡಲೇಬೇಕು,
ಕೊನೆ ಪಕ್ಷ ತಿಳಿದುಕೊಳ್ಳಲಿಕ್ಕಾದರೂ
’ಯಾಕೆ? ರಾತ್ರಿ, ಹೀಗೆ ಒಳಗೆ ಇಳಿದು
ತನ್ನ ಉನ್ಮತ್ತ ದಾಸರಿಂದ
ತಪ್ಪುತಪ್ಪಾಗಿ ಬರೆಸುತ್ತದೆ
ಸತ್ಯ ವಚನ’

*****

3. ದುರಂತ

ನಿನ್ನೆ
ನಡು ಮನೆಯಲ್ಲಿರುವ
ಬೆಂಕಿಗೂಡಿನ ಹಿಂದೆ
ಪೆನ್ಸಿಲ್‌ನಲ್ಲಿ ಬರೆದಿರುವ ಒಂದು ಚೀಟಿ ಸಿಕ್ಕಿತು.
ಎಷ್ಟು ಹಳೆಯದೋ ಗೊತ್ತಿಲ್ಲ
ದಿನದ ಗೋಜಲುಗಳ ನಡುವೆ
ತನ್ನ ಪಾಳಿಗಾಗಿ ಕಾತುರದಿಂದ ಕಾಯುವಂತಿತ್ತು.

’ಬಾಸ್ಟರ್ಡ್’ ಹೀಗೆ ಶುರುವಾಗಿತ್ತು
’ಮತ್ತೆಂದೂ ವಾಪಸ್ ಆಗಲಾರೆ
ಇದೇ ಕೊನೆಯ ರಾತ್ರಿ
ಶಾಶ್ವತವಾಗಿ ಬಿಟ್ಟು ಹೋಗುತ್ತಿದ್ದೇನೆ’

ಕೆಳಗೆ ಬರೆದಿರುವ ಹೆಸರನ್ನ
ನನಗೆ ಗುರುತಿಸಲಾಗಲಿಲ್ಲ
ಆ ಸಹಿಯನ್ನ ಮಸಿ ನುಂಗಿ ಹಾಕಿತ್ತು.

ಅದು, ನನಗೇ ಬರೆದಿರುವ ಚೀಟಿ
ಎನ್ನುವ ಗ್ಯಾರಂಟಿ ಕೂಡ ನನಗಿರಲಿಲ್ಲ.
ಬಹುಶಃ ಇರಬಹುದು
ಬಹುಶಃ ಇರಲಿಕ್ಕೂ ಇಲ್ಲ.
ನನಗೆ ಅದು ಗೊತ್ತಾಗಲೂ ಇಲ್ಲ
ನಾನು ಕಾಳಜಿ ಕೂಡ ಮಾಡಲಿಲ್ಲ.

ತಮಾಷೆ ಎಂದರೆ ಒಮ್ಮೊಮ್ಮೆ
ದುರಂತ ಹೀಗೂ ನಡೆದುಹೋಗುತ್ತದೆ
ನಗಿಸದೇ ಅಳಿಸದೆ.
(The tragedy)

*****

4. ಹುಲ್ಲಿನ ಗರಿ

ನಿನ್ನ ಫರ್ಮಾಯಿಶ್ ಕವಿತೆಯಾಗಿತ್ತು,
ನಾನು ಹುಲ್ಲಿನ ಗರಿ ಕೊಟ್ಟೆ.
ಉಹೂಂ,
ಕವಿತೆಯೇ ಬೇಕು ನಿನ್ನ ಹಟ,
ಹುಲ್ಲಿನ ಗರಿ ಸಾಕು ನನ್ನ ವಾದ.

ಮಂಜಿನಲ್ಲಿ ಮಿಂದ ಗರಿ ಎಲ್ಲಕ್ಕಿಂತ ಹೊಸದು
ನನ್ನ ಯಾವ ರೂಪಕಕ್ಕಿಂತಲೂ
ನನ್ನ ಸಮಜಾಯಿಷಿ,
ಆದರೂ ಅದು ಕವಿತೆಯಲ್ಲ…..
ಮುಂದುವರಿದಿದೆ ನಿನ್ನ ಹಟ.

ನಿನಗೆ ಸಿಟ್ಟು
ಹುಲ್ಲಿನ ಗರಿ ಸುಲಭ ಎಂಬ ನಂಬಿಕೆ
ಯಾರೂ ಕೊಡಬಲ್ಲರು ಎಂಬ ತಿಳಿವಳಿಕೆ.

ನಿನ್ನ ಫರ್ಮಾಯಿಶ್ ಕವಿತೆಯಾಗಿತ್ತು
ಹುಲ್ಲಿನ ಗರಿಯನ್ನು
ನಿನಗೆ ಒಪ್ಪಿಸಲಾಗದ ನನ್ನ ಅಸಹಾಯಕತೆಯ ಕುರಿತು
ನಾನೊಂದು ದುರಂತ ಕವಿತೆ ಬರೆದೆ
ಅದರಲ್ಲೊಂದು ಸಾಲಿತ್ತು
ನಿನ್ನ ಬಗ್ಗೆ
ವಯಸ್ಸಾಗುತ್ತಾ ಹೋದಂತೆ
ಹುಲ್ಲಿನ ಗರಿಯನ್ನು
ಒಪ್ಪಿಕೊಳ್ಳದ ನಿನ್ನ ಜಿದ್ದಿನ ಬಗ್ಗೆ.
(Blade of grass)

*****

5. What I need for the present

ಥ್ಯಾಂಕ್ಸ್, ಆದರೆ
ವಾಪಸ್ ತೆಗೆದುಕೊಂಡುಬಿಡು
ಈ ಉಂಗುರ ಮತ್ತು ಅದರ ಬಾಕ್ಸ್,
ಚಿಟ್ಟೆಯ ರೆಕ್ಕೆ ಮತ್ತು ಗಾಜಿನ ಮಣಿಗಳಿಂದ
ಅಲಂಕೃತವಾದ ಈ ಬಣ್ಣದ ಚಿತ್ರ
ಬೇಡ ನನಗೀಗ ಇವೆಲ್ಲ.
ದಯವಿಟ್ಟು, ಈ ಪುಸ್ತಕಗಳು,
ಪೋಸ್ಟ್ ಕಾರ್ಡುಗಳು,
ಜೇನು ಮೇಣದ ಕ್ಯಾಂಡಲ್‌ಗಳು,
ಹೂವಿನ ಕುಂಡಗಳು, ಪೇಂಟಿಂಗ್‌ಗಳು,
ಮತ್ತು ಈ ದುಬಾರಿ ಪೆನ್
ಎಲ್ಲವನ್ನೂ ವಾಪಸ್ ತೆಗೆದುಕೊಂಡುಬಿಡು.

ಹೀಗೆ ಹೇಳುವುದು ಸೌಜನ್ಯ ಅಲ್ಲ ನಿಜ, ಆದರೆ
ಯಾವುದನ್ನು ಕೊಡಲಾಗುವುದಿಲ್ಲವೋ
ಅದರ ಬದಲಿಗೆ ಕೊಡಲಾಗಿದೆ
ಎಂಬಂತಿವೆ ಈ ಉಡುಗೊರೆಗಳು.

ಹೀಗೆ ಹೇಳುವುದು ಸೌಜನ್ಯ ಅಲ್ಲ ನಿಜ, ಆದರೆ
ಈ ಕೋಣೆಯಲ್ಲಿ ಓಡಾಡುವಾಗಲೆಲ್ಲ
ಕಣ್ಣಿಗೆ ಬೀಳುವುದು ಈ ಉಡುಗೊರೆಗಳಲ್ಲ
ಅವುಗಳ ಮೇಲೆ ಧೂಳಿನಂತೆ ಕುಳಿತಿರುವ
ನಿನ್ನ ಗೈರು ಹಾಜರಿ ಮಾತ್ರ.

ದಯವಿಟ್ಟು ಕ್ಷಮಿಸು

ನೀನೇನೊ ಪ್ರೀತಿಯಿಂದಲೇ ಕೊಟ್ಟಿರಬಹುದು, ಆದರೆ
ಸದ್ಯ ಈ ಬೇಡಿಗಳ ತುರ್ತು ನನಗಿಲ್ಲ.

******

ಬ್ರಯಾನ್ ಪ್ಯಾಟನ್

6. She complicates her life

ಅದೇನೋ ಅವಳು
ಎಲ್ಲವನ್ನು ಸುಮ್ಮನೆ ಕಾಂಪ್ಲಿಕೇಟ್ ಮಾಡಿಕೊಳ್ಳುತ್ತಾಳೆ.
ಕೆಲ ಭೂತಗಳು ಅವಳ ದಿನಗಳನ್ನು
ಹಿಡಿದು ಅಲ್ಲಾಡಿಸುತ್ತಿವೆ.

ಪ್ರೇಮ ತಾನಾಗಿಯೇ ಬಂದು, ಕೈಹಿಡಿದು
’ನಿಲ್ಲು’ ಎಂದರೆ
’ಹೋಗು’ ಎಂದು ಕೇಳಿಸಿಕೊಂಡು
ಬೆನ್ನು ತಿರುವಿ ಹೊರಟುಬಿಡುತ್ತಾಳೆ.

ಎಲ್ಲ ಬಾಗಿಲುಗಳನ್ನ ಮುಚ್ಚಿಕೊಂಡಿದ್ದಾಳೆ
ನೋವು ಹೆಚ್ಚಾದಾಗಲೆಲ್ಲ ಹಿಮವಾಗಿಬಿಡುತ್ತಾಳೆ.

*****

7. ತುಂಬಿಕೊಂಡವಳು

ಮೊನ್ನೆ ನಿನ್ನ
ಕಿಟಕಿಯಲ್ಲಿ ನೋಡಿದೆ.
ಅದೇ ಚೆಲುವು, ಅದೇ ಹೊಂಗೂದಲಿನ ಜಡೆ
ಅವೇ ಅಲೌಕಿಕ ನೀಳ ಕಾಲುಗಳು.
ಓಡಿ ಬೀದಿಗೆ ಬಂದವನೇ
ನಿನ್ನ ಹೆಸರಿಟ್ಟು ಕೂಗಿದೆ.
ನೀನು ಹಿಂತಿರುಗಿ ನೋಡಿ
ನನ್ನ ಆತುರಕ್ಕೆ
’ಛೀ’ ಎಂದೆ.
ಹೌದು obviously ಆಕೆ ನೀನಾಗಿರಲಿಲ್ಲ

ಮೂವತ್ತು ವರ್ಷ ಹೇಗೆ ಕಳೆದುಹೋಯಿತೆಂಬುದನ್ನ

ನಾನೂ ಮರೆತುಬಿಟ್ಟಿದ್ದೆ.
ಕ್ಷಮೆ ಕೇಳಿದೆ

“ಸಾರಿ, ಬೇರೆ ಯಾರೋ ಅಂದುಕೊಂಡಿದ್ದೆ” ತೊದಲಿದೆ.
ಆದರೆ ಇದರಲ್ಲಿ ನನ್ನದೇನೂ ಅಂಥ ತಪ್ಪಿಲ್ಲ.
ನಾನು ನೋಡಿದ್ದು,
ನನ್ನೊಳಗೆ ಅಂದು ತುಂಬಿಕೊಂಡಿದ್ದ ನಿನ್ನನ್ನು
ಈ ಹೊತ್ತಿಗೂ.

*****

8. ಪ್ರೇಮ ಪಾಠ

ಹಠಾತ್ ಆಗಿ ಪ್ರೇಮ
ತನ್ನ ಎಲ್ಲ ಹತಾಶೆಗಳಿಂದ ವಾಪಸ್ಸಾಗಿ
ನಿಮ್ಮ ತೋಳಲ್ಲಿ ಹುದುಗಿ, ಮುಲುಕುತ್ತ

“ಇನ್ನು ಎಲ್ಲೂ ಹೋಗಲಾರೆ,
ಬೇರೆ ದೇಹಗಳೆಲ್ಲ ಬಹುತೇಕ ರಾಜಿ ಮಾತ್ರ”

ಎಂದರೆ ಆ ಸುಳ್ಳನ್ನ
ಥಟ್ ಅಂತ ಒಪ್ಪಿಕೊಂಡುಬಿಡುತ್ತೀರಿ ನೀವು
ಅಕಸ್ಮಾತ್ ಜಾಣರಾಗಿದ್ದರೆ.
(Love lesson)

*****

9. ಸಿನಿಕನ ಪ್ರೇಮಗೀತೆ

ಪ್ರೇಮದ ಕೆಲಸವೇ
ಬರೋದು, ಹೋಗೋದು
ಮತ್ತು
ಆಗಾಗ ನಿಲ್ಲೋದು
ಆದರೆ

ಮತ್ತೆ ವಾಪಸ್ ಬರೋದು ಮಾತ್ರ
ಆದ ಅನಾಹುತದ ಪರಿಶೀಲನೆಗೆ

*****

10. ವ್ಯಾಲಂಟೈನ್

ಒಬ್ಬರು ಇನ್ನೊಬ್ಬರ ಜೊತೆ
ಹೀಗೇ ಸದಾ
ಯಾವದೇ ಸಂಶಯ ಇಲ್ಲದೆ
ಇದ್ದುಬಿಡುವ ಆಸೆ ಉಳ್ಳವರು,
(ಮುಂದೆ ಆಗಬಹುದಾದ ದಣಿವಿನ ಬಗ್ಗೆ ಯಾವ ಕಳವಳವೂ ಇಲ್ಲದೆ)

ನನ್ನ ನಿನ್ನ ಹಾಗೆ ಇರುವವರೇ,

ರಾತ್ರಿ ಇಡೀ ಪಿಸುಮಾತಿನಲ್ಲಿ
ಲೋಕದ ಉಸಿರನ್ನು ಜೀವಂತವಾಗಿಟ್ಟವರು,

ಶಾಶ್ವತದ ಮಿತಿಗೆ ಗಾಬರಿಯಾಗಿ
ನೆಲಕ್ಕೆ ಅಂಗುಷ್ಟವ ಒತ್ತಿದವರು,

ಎರಡು ಉಸಿರುಗಳ ನಡುವಿನ ಅಂತರದ ವಿರುದ್ಧ
ಕೋರ್ಟಿನಲ್ಲಿ ಸಾಕ್ಷಿ ಹೇಳಿದವರು.
( A Valentine)

ಕನ್ನಡಕ್ಕೆ: ಚಿದಂಬರ ನರೇಂದ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...